Homeಸಿನಿಮಾಕ್ರೀಡೆಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

ಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

- Advertisement -
- Advertisement -

ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡವು 16 ರನ್‌ಗಳ ಗೆಲುವು ಸಾಧಿಸುವ ಮೂಲಕ 3-0 ಅಂತರದಲ್ಲಿ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಆ ಮೂಲಕ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿರಿಯ ಆಟಗಾರ್ತಿ ಜೂಲನ್ ಗೋಸ್ವಾಮಿಯವರಿಗೆ ಅರ್ಥಪೂರ್ಣ ವಿದಾಯ ಹೇಳಲಾಯ್ತು. ಈ ಐತಿಹಾಸಿಕ ಸಾಧನೆಗೆ ಕಾರಣವಾದ ಪಂದ್ಯವು ಹಲವು ಹೊಸತನಗಳಿಗೆ ಸಾಕ್ಷಿಯಾಯಿತು.

ವಿವಾದಕ್ಕೆ ಕಾರಣವಾದ ಕೊನೆಯ ವಿಕೆಟ್

ಭಾರತ ಮಹಿಳೆಯರ ತಂಡವು ಮೊದಲು ಬ್ಯಾಟ್ ಮಾಡಿ 45.5 ಓವರ್‌ಗಳಲ್ಲಿ 169 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಸಾಧಾರಣ ರನ್ ಗುರಿ ಪಡೆದ ಇಂಗ್ಲೆಂಡ್ ಮಹಿಳಾ ತಂಡವು ಭಾರತದ ಬೌಲಿಂಗ್ ದಾಳಿಗೆ ಬೆದರಿತು. ಒಂದು ಹಂತದಲ್ಲಿ 67 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ಚಾರ್ಲೋಟ್ ಡೀನ್‌ರವರ ತಾಳ್ಮೆಯ ಆಟದಿಂದ ಗೆಲುವಿನ ಸನಿಹಕ್ಕೆ ಬಂದಿತ್ತು. 80 ಎಸೆತಗಳಲ್ಲಿ 47 ರನ್ ಗಳಿಸಿದ್ದ ಡೀನ್ ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿದ್ದಾಗ ಅನಗತ್ಯ ರನ್ ಔಟ್ ಆಗುವ ಮೂಲಕ ಕೊನೆಯ ವಿಕೆಟ್ ಒಪ್ಪಿಸಿ ಸೋಲೊಪ್ಪಿಕೊಂಡರು.

ಆದರೆ ಅವರ ರನ್ ಔಟ್ ಅಥವಾ ಮಕಂಡಿಂಗ್ ಎಂದು ಕರೆಯುವ ಔಟ್‌ ಕುರಿತು ವಿವಾದವೆದ್ದಿದೆ. ಕೆಲವರು ಅದನ್ನು ಕಾನೂನುಬದ್ಧ ಔಟ್ ಎಂದರೆ ಮತ್ತೆ ಕೆಲವರು ಇದು ನಿಜವಾದ ಕ್ರೀಡಾ ಸ್ಪೂರ್ತಿಯಲ್ಲ ಎಂದು ಕರೆದಿದ್ದಾರೆ.

ನಡೆದುದ್ದೇನು

ಇಂಗ್ಲೆಂಡ್ ತಂಡ 153 ರನ್ ಗಳಿಸಿ 9 ವಿಕೆಟ್ ಕಳೆದುಕೊಂಡಿತ್ತು. ಕ್ರೀಸ್‌ನಲ್ಲಿದ್ದ ಚಾರ್ಲೋಟ್ ಡೀನ್‌ ಮತ್ತು ಪ್ರೆಯಾ ಡೆವಿಸ್ 35 ರನ್‌ಗಳ ಜೊತೆಯಾಟದೊಂದಿಗೆ ಉತ್ತಮ ಆಟ ಆಡುತ್ತಿದ್ದರು. ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿತ್ತು. ಭಾರತದ ದೀಪ್ತಿ ಶರ್ಮಾ ಬೌಲಿಂಗ್ ಮಾಡುತ್ತಿದ್ದಾಗ ನಾಲ್ಕನೆ ಎಸೆತ ಎಸೆಯುವ ಮುನ್ನವೇ ನಾನ್‌ ಸ್ಟ್ರೈಕರ್‌ ಎಂಡ್‌ನಲ್ಲಿದ್ದ ಚಾರ್ಲೋಟ್ ಡೀನ್‌ ರನ್ ಗಾಗಿ ಕ್ರೀಸ್ ಬಿಟ್ಟು ಓಡಿದ್ದರು. ಆದರೆ ದೀಪ್ತಿ ಶರ್ಮಾ ಬೌಲ್ ಮಾಡುವ ಬದಲು ನಾನ್‌ ಸ್ಟ್ರೈಕರ್‌ ಎಂಡ್‌ನ ಬೆಲ್ಸ್ ಎಗರಿಸಿದರು. ಅಂಪೈರ್ ಡೆಡ್ ಬಾಲ್ ಸೂಚನೆ ಕೊಟ್ಟಿದ್ದರು. ಆದರೆ ಸಮಾಲೋಚಿಸಿ ಮೂರನೇ ಅಂಪೈರ್ ಮೋರೆ ಹೋದಾಗ ಅವರು ಔಟ್ ಎಂದು ಸೂಚಿಸಿದರು. ಇಂಗ್ಲೆಂಡ್ ತಂಡ ಆಲೌಟ್ ಆಯ್ತು. ಭಾರತ 16 ರನ್‌ಗಳ ಜಯ ಸಾಧಿಸಿ ಸರಣಿ ಕ್ಲೀನ್‌ಸ್ವೀಪ್ ಮಾಡಿತು.

ಪರ ವಿರೋಧದ ಚರ್ಚೆ

ಈ ಕೊನೆಯ ಮಂಕಡಿಂಗ್ ಮೂಲಕ ವಿಕೆಟ್ ಪತನಕ್ಕೆ ಇಂಗ್ಲೆಂಡ್‌ನ ಆಟಗಾರರು ಅಸಮ್ಮತಿ ಸೂಚಿಸಿದ್ದಾರೆ. ಇದು ಕ್ರೀಡಾಸ್ಫೂರ್ತಿಯಲ್ಲ ಎಂದಿದ್ದಾರೆ. ಆದರೆ ಅದು ಕ್ರಿಕೆಟ್ ನಿಯಮಗಳಲ್ಲಿದೆ ಮತ್ತು ನಿಯಮಬದ್ದವಾಗಿದೆ ಎಂದು ಭಾರತದ ನಾಯಕಿ ಹರ್ಮನ್‌ ಪ್ರೀತ್‌ ಕೌರ್ ಸಮರ್ಥಿಸಿಕೊಂಡಿದ್ದಾರೆ.

ಭಾರತದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನಿಯಮಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ಅಭಿಮಾನಿಗಳ ಟೀಕೆಗೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...