Homeಅಂತರಾಷ್ಟ್ರೀಯಚೀನಾದಲ್ಲಿ ದಂಗೆ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪದಚ್ಯುತಿ ವದಂತಿ!

ಚೀನಾದಲ್ಲಿ ದಂಗೆ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪದಚ್ಯುತಿ ವದಂತಿ!

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ದಂಗೆ ಉಂಟಾಗಿದ್ದು, ಅವರನ್ನು ಪದಚ್ಯುತಗೊಳಿಸಲಾಗಿದೆ ಎಂಬ ಊಹಾಪೋಹಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಗಿದೆ.

- Advertisement -
- Advertisement -

ತನ್ನ ದೇಶದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿ ಆಡಳಿತ ನಡೆಸುತ್ತಿರುವ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ದಂಗೆ ಉಂಟಾಗಿದ್ದು, ಅವರನ್ನು ಪದಚ್ಯುತಗೊಳಿಸಲಾಗಿದೆ ಎಂಬ ಊಹಾಪೋಹಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶನಿವಾರ ಹರಿಬಿಡಲಾಗಿದೆ.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೃಹಬಂಧನದಲ್ಲಿದ್ದಾರೆ ಎಂದು ವದಂತಿ ಹಬ್ಬಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಲಾದ ಹಲವಾರು ಪೋಸ್ಟ್‌ಗಳ ಪ್ರಕಾರ, “ಕ್ಸಿ ಜಿನ್‌ಪಿಂಗ್ ಅವರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಸಲಾಗಿದ್ದು, ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ” ಎಂದು ಪ್ರತಿಪಾದಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದ ಆಡಳಿತಾರೂಢ ಚೀನೀ ಕಮ್ಯುನಿಸ್ಟ್ ಪಕ್ಷ ಅಥವಾ ಸರ್ಕಾರಿ ಮಾಧ್ಯಮಗಳು ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಯಾವುದೇ ಪ್ರತಿಷ್ಠಿತ ಅಂತರಾಷ್ಟ್ರೀಯ ಸುದ್ದಿವಾಹಿನಿಯು ಈ ಕುರಿತು ಅಧಿಕೃತವಾಗಿ ಸುದ್ದಿ ಮಾಡಿಲ್ಲ. ಆದಾಗ್ಯೂ, ಚೀನಾದ ವಿದೇಶಾಂಗ ಸಚಿವಾಲಯ ಮೌನವಹಿಸಿದೆ.

ಚೀನಾದ ಮಾಧ್ಯಮಗಳಿಂದಲೂ ಈ ವಿಷಯದ ಬಗ್ಗೆ ಯಾವುದೇ ವರದಿಗಳು ಆಗಿಲ್ಲ. ಈ ವದಂತಿಗಳು ಆಧಾರರಹಿತವಾಗಿವೆ. ಅವು ಕ್ಸಿ ಜಿನ್‌ಪಿಂಗ್‌ ವಿರೋಧಿ ಪಿತೂರಿಯ ಭಾಗವಾಗಿದೆ ಎಂದು ಹೇಳಲಾಗಿದೆ.

ಅಕ್ಟೋಬರ್ 16ರಂದು ಚೀನೀ ಕಮ್ಯುನಿಸ್ಟ್ ಪಕ್ಷದ 20 ನೇ ರಾಷ್ಟ್ರೀಯ ಕಾಂಗ್ರೆಸ್‌ ನಡೆಯುವ ಮುಂಚಿತವಾಗಿ ಈ ವದಂತಿಗಳನ್ನು ಹರಡಲಾಗಿದೆ. ಕ್ಸಿ ಅವರು ಐದು ವರ್ಷಗಳ ಅಧಿಕಾರವಧಿಯನ್ನು ಮೂರನೇ ಅವಧಿಗೆ ಮುಂದುವರಿಸುವ ನಿರೀಕ್ಷೆ ಇದೆ.

ಈ ವಾರದ ಆರಂಭದಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ಸಿ ಅವರು ಜರುಗಿಸಿದ ಶಿಸ್ತುಕ್ರಮದ ಭಾಗವಾಗಿ ಇಬ್ಬರು ಮಾಜಿ ಮಂತ್ರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಯಿತು. ಆದರೆ ಶಿಕ್ಷೆಗೊಳಗಾದವರನ್ನು ಕ್ಸಿ ವಿರೋಧಿ ರಾಜಕೀಯ ಬಣದ ಭಾಗವಾಗಿ ಗುರುತಿಸಲಾಗಿದೆ.

ಸೆಪ್ಟೆಂಬರ್ 16 ರಂದು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಮರ್ಕಂಡ್ ಕಾಂಗ್ರೆಸ್ ಕೇಂದ್ರದಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಕೌನ್ಸಿಲ್ ಆಫ್ ಸ್ಟೇಟ್‌ನ 22 ನೇ ಸಭೆಯಲ್ಲಿ ಭಾಗವಹಿಸಿದ್ದರು. ಚೀನಾದ ಅಧ್ಯಕ್ಷರು ಅಧಿಕೃತ ಸಮಾರೋಪ ಸಮಾರಂಭಕ್ಕೂ ಮೊದಲು ಸಮರ್‌ಕಂಡ್‌ನಿಂದ ಹೊರಟು ಸೆಪ್ಟೆಂಬರ್ 16 ರಂದು ಬೀಜಿಂಗ್‌ನಲ್ಲಿ ಇಳಿಯುವಾಗ ಗೃಹಬಂಧನಕ್ಕೆ ಒಳಗಾಗಿದ್ದಾರೆ ಎಂದು ಅನಧಿಕೃತ ಟ್ವಿಟರ್‌ ಖಾತೆಗಳು ಸುದ್ದಿ ಹಬ್ಬಿಸಿವೆ.

ಇದನ್ನೂ ಓದಿರಿ: ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

ಬೀಜಿಂಗ್ ವಿಮಾನ ನಿಲ್ದಾಣವು 6,000 ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳನ್ನು ರದ್ದುಗೊಳಿಸಿದೆ. ಹೈಸ್ಪೀಡ್ ರೈಲು ಮತ್ತು ಹೈಸ್ಪೀಡ್ ರೈಲುಗಳ ಟಿಕೆಟ್ ಮಾರಾಟವನ್ನೂ ನಿಲ್ಲಿಸಲಾಗಿದೆ ಎಂದು ಟ್ವಿಟರ್ ಪೋಸ್ಟ್‌ಗಳು ಸುದ್ದಿ ಹರಡಿವೆ.

ಕ್ಸಿ ಜಿನ್‌ಪಿಂಗ್ ಇತ್ತೀಚೆಗೆ ಉಜ್ಬೇಕಿಸ್ತಾನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹಲವಾರು ಇತರ ರಾಷ್ಟ್ರಗಳ ನಾಯಕರೊಂದಿಗೆ ಮಾತುಕತೆ ನಡೆಸಿದರು. 2020ರಲ್ಲಿ ಗಡಿ ಘರ್ಷಣೆಗಳು ಏರ್ಪಟ್ಟು ಭಾರತ ಮತ್ತು ಚೀನಾ ನಡುವಿನ ಸಂಬಂಧ ಹದಗೆಟ್ಟ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕ್ಸಿ ಮುಖಾಮುಖಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...