Homeಕರ್ನಾಟಕ🛑 Alert| ರಾಜ್ಯದಲ್ಲಿ ಅಂಬುಲೆನ್ಸ್‌ ಸೇವೆ ಅಸ್ತವ್ಯಸ್ತ; ಆತಂಕದಲ್ಲಿ ಜನತೆ

🛑 Alert| ರಾಜ್ಯದಲ್ಲಿ ಅಂಬುಲೆನ್ಸ್‌ ಸೇವೆ ಅಸ್ತವ್ಯಸ್ತ; ಆತಂಕದಲ್ಲಿ ಜನತೆ

- Advertisement -
- Advertisement -

ಶನಿವಾರ ಸಂಜೆಯಿಂದ ರಾಜ್ಯದಲ್ಲಿ ಅಂಬುಲೆನ್ಸ್ ಸೇವೆಯಲ್ಲಿ ಸಮಸ್ಯೆಯಾಗಿದ್ದು, ರಾಜ್ಯದ ಜನರು ಆತಂಕಪಡುವಂತಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್ ಮಾಡಿದ್ದು, “ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಅಪಘಾತ ಪ್ರಕರಣಗಳು, ವಿಷಕುಡಿದ ಪ್ರಕರಣಗಳು, ಹಾವು ಕಚ್ಚಿದ ಪ್ರಕರಗಳು, ಹೆರಿಗೆ ಪ್ರಕರಣಗಳು ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಅಂಬುಲೆನ್ಸ್ ಸೇವೆ ಅಗತ್ಯವಿದೆ. 108 ಅಂಬುಲೆನ್ಸ್ ಸೇವೆಯನ್ನು ಜಿವಿಕೆ ಸಂಸ್ಥೆ ನಡೆಸುತ್ತಾ ಇದ್ದು, ಶನಿವಾರ ಸಂಜೆಯಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಾದ್ಯಂತ ದಿನಕ್ಕೆ ಸುಮಾರು 8 ಸಾವಿರ ಕರೆಗಳು 108ಗೆ ಹೋಗುತ್ತವೆ. 8 ಸಾವಿರ ಕರೆಗಳಲ್ಲಿ 2 ಸಾವಿರ ಪ್ರಕರಣಗಳು ಗಂಭೀರ ಆಗಿರುತ್ತವೆ. ಆದರೆ ಈ ಅಂಬುಲೆನ್ಸ್ ಸೇವೆ ಸಿಗದೇ ಇದ್ದರೆ 2 ಸಾವಿರ ಗಂಭೀರ ಪ್ರಕರಣಗಳಲ್ಲಿ ಸಾವು ನೋವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಶನಿವಾರ ಸಂಜೆಯಿಂದ ಅಂಬುಲೆನ್ಸ್ ಸೇವೆ ಇಲ್ಲದ ಕಾರಣ ಜನರಿಗೆ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಲಭ್ಯವಾಗುತ್ತಿಲ್ಲ ಎಂದು ಜನರು ದೂರುತ್ತಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವ ಸುಧಾಕರ್‌, “ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಆಂಬ್ಯುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.

“ಸ್ವಯಂಚಾಲಿತ ಕಾಲ್ ಸೆಂಟರ್ ವ್ಯವಸ್ಥೆ ಮೂಲಕ ಕರೆಗಳ ವಿತರಣೆಗೆ ಪರ್ಯಾಯವಾಗಿ ಮ್ಯಾನುವಲ್ ಐಡಿಗಳನ್ನು ಸೃಷ್ಟಿಸಿ ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗುತ್ತಿದ್ದು, ಇದರೊಂದಿಗೆ 104 ಕಾಲ್ ಸೆಂಟರ್ ನಲ್ಲಿ 108 ಆಂಬ್ಯುಲೆನ್ಸ್ ಸೇವೆಗೆ ಓವರ್ ಫ್ಲೋ ಕಾಲ್ ಸೆಂಟರ್ ಸ್ಥಾಪಿಸಲು ಸಹ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಚೀನಾದಲ್ಲಿ ದಂಗೆ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪದಚ್ಯುತಿ ವದಂತಿ!

“108 ಹಾಗೂ 112 ಕಾಲ್ ಸೆಂಟರ್ ಗಳಲ್ಲಿ ಅಧಿಕ ಕರೆ ಸ್ವೀಕರಿಸಲು ಅನುಕೂಲವಾಗುವಂತೆ ಪ್ರಸ್ತುತ ಇರುವ ಸಿಬ್ಬಂದಿಗಳ ಜೊತೆಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಂಬ್ಯುಲೆನ್ಸ್ ಡ್ರೈವರ್‌‌ಗಳಿಗೆ ತಮ್ಮ ಮೊಬೈಲ್ ಮೂಲಕ ಆಸ್ಪತ್ರೆಗಳಿಂದ ನೇರವಾಗಿ ಕರೆಗಳನ್ನು ಸ್ವೀಕರಿಸಲು ಸಹ ಸೂಚನೆ ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಸಮರೋಪಾದಿಯಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆಗಳ ಮೂಲಕ ಸೇವೆಯಲ್ಲಿ ಉಂಟಾಗಿರುವ ತಾತ್ಕಾಲಿಕ ವ್ಯತ್ಯಯವನ್ನು ಕನಿಷ್ಠ ಮಟ್ಟದಲ್ಲಿಡಲು ಪ್ರಯತ್ನಿಸಲಾಗುತ್ತಿದೆ” ಎಂದಿದ್ದಾರೆ.

ಅಂಬುಲೆನ್ಸ್ ಬಾರದೆ ಮಹಿಳೆ ನಿಧನ

ತಾಂತ್ರಿಕ ಸಮಸ್ಯೆಯಿಂದ ‘108 ಅಂಬುಲೆನ್ಸ್’ ಸೇವೆ ಸ್ಥಗಿತಗೊಂಡಿದೆ. ಸಕಾಲಕ್ಕೆ ಅಂಬುಲೆನ್ಸ್​ ಸಿಗದೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿಯ ಜಯಮ್ಮ(65) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಲವು ಬಾರಿ ಅಂಬುಲೆನ್ಸ್ ಕರೆ ಮಾಡಲಾಗಿದೆ. ಆದ್ರೆ ಅಂಬುಲೆನ್ಸ್ ಬರದ ಕಾರಣ ಜಯಮ್ಮ ಮನೆಯಲ್ಲೇ ಪ್ರಾಣ ಬಿಟ್ಟಿದ್ದಾರೆ.

“108ಕ್ಕೆ ಕರೆ ಮಾಡಿ 1 ಗಂಟೆ ಕಳೆದರೂ ಅಂಬುಲೆನ್ಸ್‌ ಮನೆ ಬಳಿ ಬಂದಿಲ್ಲ. ಜಯಮ್ಮ ಕುಟುಂಬಸ್ಥರು ಮಧುಗಿರಿ ಟಿಹೆಚ್​ಒಗೆ ಕರೆ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ. ಟಿಹೆಚ್​ಒಗೆ ಕರೆ ಮಾಡಿದ ನಂತರ ಐಡಿಹಳ್ಳಿಗೆ ಅಂಬುಲೆನ್ಸ್​ ಬಂದಿದೆ. ಆದ್ರೆ 108 ಅಂಬುಲೆನ್ಸ್​ ಬರುವಷ್ಟರಲ್ಲಿ ಜಯಮ್ಮ ಮೃತಪಟ್ಟಿದ್ದರು. ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್​ ಬಂದಿದ್ದರೆ ಪ್ರಾಣ ಉಳಿಯುತ್ತಿತ್ತು” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...