Homeಮುಖಪುಟಉತ್ತರಖಾಂಡ್‌: ಯುವತಿ ಕೊಲೆ ಪ್ರಕರಣದ ಆರೋಪಿಯ ರೆಸಾರ್ಟ್ ಕೆಡವುತ್ತಿರುವುದೇಕೆ? ಸಾಕ್ಷಿನಾಶಕ್ಕೆ ಮುಂದಾಯಿತೆ ಬಿಜೆಪಿ ಸರ್ಕಾರ?

ಉತ್ತರಖಾಂಡ್‌: ಯುವತಿ ಕೊಲೆ ಪ್ರಕರಣದ ಆರೋಪಿಯ ರೆಸಾರ್ಟ್ ಕೆಡವುತ್ತಿರುವುದೇಕೆ? ಸಾಕ್ಷಿನಾಶಕ್ಕೆ ಮುಂದಾಯಿತೆ ಬಿಜೆಪಿ ಸರ್ಕಾರ?

ಉತ್ತರಖಾಂಡ್‌‌ ರಾಜ್ಯದ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

- Advertisement -
- Advertisement -

ಉತ್ತರಖಾಂಡ್‌‌ ರಾಜ್ಯದ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಇದಾದ ನಂತರ ಆತನ ಒಡೆತನದ ರೆಸಾರ್ಟ್ ಮೇಲೆ ಪೊಲೀಸರು ಬುಲ್ಡೋಜರ್ ದಾಳಿ ನಡೆಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಆದೇಶಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದಳು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದನು. ಯುವತಿ ಕಾಣೆಯಾಗಿದ್ದಾಳೆ ಎಂದು ತಿಳಿಸಿದ್ದನು. ಆದರೆ 5 ದಿನದ ನಂತರ ಪ್ರಕರಣಕ್ಕೆ ತಿರುವು ಸಿಕ್ಕಿತ್ತು.

ಪುಲ್ಕಿತ್ ಆರ್ಯ ತನ್ನ ಇಬ್ಬರು ಸಿಬ್ಬಂದಿಯೊಡನೆ ಸೇರಿ ಯುವತಿಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ. ಈಗ ರೆಸಾರ್ಟ್ ಮೇಲೆ ಬುಲ್ಡೋಜರ್‌ ಹತ್ತಿಸಿ ಸಾಕ್ಷಿ ನಾಶಕ್ಕೆ ಸರ್ಕಾರ ಅವಕಾಶ ನೀಡಿದೆ ಎಂಬ ಆರೋಪವನ್ನು ಯುವತಿಯ ಕುಟುಂಬ ಆರೋಪಿಸಿದೆ. ಈ ರೆಸಾರ್ಟ್‌ನಲ್ಲಿ ಕಾನೂನು ಬಾಹಿರ ಕೃತ್ಯಗಳು ನಡೆದಿರುವ ಅನುಮಾನಗಳು ವ್ಯಕ್ತವಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆಯಾದ ಯುವತಿಯ ಅಂತ್ಯಸಂಸ್ಕಾರ ಮಾಡಲು ಕುಟುಂಬ ನಿರಾಕರಿಸಿದೆ. ಸ್ಥಳೀಯರು ಹಾಗೂ ಯುವತಿಯ ಸಂಬಂಧಿಕರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಯುವತಿಯು ಕೆಲಸ ಮಾಡುತ್ತಿದ್ದ ರೆಸಾರ್ಟ್ ಅನ್ನು ಕೆಡವಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ಪ್ರಶ್ನಿಸಿರುವ ಯುವತಿಯ ಕುಟುಂಬ, “ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರ ಪ್ರಮುಖ ಆರೋಪಿಯಾಗಿರುವ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಲು ಈ ಕ್ರಮ ಜರುಗಿಸಲಾಗಿದೆ” ಎಂದು ಆತಂಕ ವ್ಯಕ್ತಪಡಿಸಿದೆ.

ಅಂತಿಮ ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೆ ಶವವನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದೂ ಕುಟುಂಬ ಹೇಳಿದೆ. ಯುವತಿಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಅವರ ದೇಹದ ಮೇಲೆ ಗಾಯದ ಗುರುತುಗಳಿವೆ ಎಂದು ತಾತ್ಕಾಲಿಕ ವರದಿ ಹೇಳಿದೆ. ಪೊಲೀಸರ ಹೇಳಿಕೆಗಳನ್ನು ಕುಟುಂಬ ನಿರಾಕರಿಸಿದೆ. ಯುವತಿಯ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ಇಂದು ಶ್ರೀನಗರ-ಕೇದಾರನಾಥ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿದ್ದಾರೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಆದೇಶದ ಮೇರೆಗೆ ನಡೆದ ಬುಲ್ಡೋಜರ್‌ ಕಾರ್ಯಚರಣೆ ಕುರಿತು ಪ್ರತಿಪಕ್ಷವೂ ಪ್ರಶ್ನೆಗಳನ್ನು ಎತ್ತಿದೆ. “ಇದೊಂದು ಯೋಜಿತ ಕೊಲೆಯಾಗಿದೆ. ಸಾಕ್ಷ್ಯ ನಾಶಪಡಿಸಲು ರೆಸಾರ್ಟ್ ನೆಲಸಮ ಕಾರ್ಯಾಚರಣೆ ನಡೆಸಲಾಗಿದೆ ಎಂದು ಜನರು ಶಂಕಿಸಿದ್ದಾರೆ” ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಆರೋಪಿಗಳಿಗೆ ಆಡಳಿತ ಪಕ್ಷದೊಂದಿಗೆ ನಂಟು ಇರುವುದರಿಂದ ಪೊಲೀಸರ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಎಫ್‌ಐಆರ್ ದಾಖಲು ಮಾಡಿಕೊಳ್ಳಲು ವಿಳಂಬ ನೀತಿ ಅನುಸರಿಸಿದ್ದನ್ನು ಪ್ರಶ್ನಿಸಿವೆ.

“ರೆಸಾರ್ಟ್ ಇರುವ ಪ್ರದೇಶ ಸಾಮಾನ್ಯವಾಗಿ ಪೊಲೀಸರ ವ್ಯಾಪ್ತಿಗೆ ಬರುವುದಿಲ್ಲ” ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. “ಭೂಕಂದಾಯ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸುವ ವ್ಯವಸ್ಥೆ ನಮ್ಮಲ್ಲಿದೆ” ಎಂದು ತಮ್ಮ ವಿಳಂಬಕ್ಕೆ ಸಮರ್ಥನೆ ನೀಡಿದ್ದಾರೆ.

ಇದನ್ನೂ ಓದಿರಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ. “ಇದು ಅತ್ಯಂತ ಘೋರ ಅಪರಾಧ, ಅಪರಾಧಿ ಯಾರೇ ಆಗಿದ್ದರೂ ಬಿಡುವುದಿಲ್ಲ” ಎಂದಿದ್ದಾರೆ.

ಆರೋಪಿಯ ತಂದೆ, ಸಚಿವ ದರ್ಜೆಯ ರಾಜ್ಯ ಮಂಡಳಿಯ ಮಾಜಿ ಅಧ್ಯಕ್ಷ ವಿನೋದ್ ಆರ್ಯ ಮತ್ತು ಆತನ ಸಹೋದರ, ಬಿಜೆಪಿ ಪದಾಧಿಕಾರಿ ಅಂಕಿತ್ ಆರ್ಯ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಪುಲ್ಕಿತ್ ಆರ್ಯ ಅಲ್ಲದೆ, ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಅವರನ್ನು ಬಂಧಿಸಲಾಗಿದೆ. ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆಯಲಾಗಿದ್ದು, ಯುವತಿಯು ಕೊನೆಯದಾಗಿ ಮೂವರು ವ್ಯಕ್ತಿಗಳೊಂದಿಗೆ ಇರುವುದು ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೇಶ್ಯಾವಾಟಿಕೆಗೆ ಒತ್ತಾಯ: ಯುವತಿಯ ವಾಟ್ಸಾಪ್‌ ಚಾಟ್‌ ಬಹಿರಂಗ

ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕನ ಮಗ ನಡೆಸಿರುವ ಉತ್ತರಖಂಡ ಯುವತಿ ಕೊಲೆ ಪ್ರಕರಣದ ಮತ್ತಷ್ಟು ವಿವರಗಳು ಹೊರಬೀಳುತ್ತಿವೆ. ಆರೋಪಿಗಳು ರೆಸಾರ್ಟ್‌ನಲ್ಲಿ ಹದಿಹರೆಯದವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದಾರೆ ಎಂದು ಹತ್ಯೆಗೀಡಾದ ಯುವತಿಯು ತನ್ನ ಸ್ನೇಹಿತೆಗೆ ಮಾಡಿದ್ದ ವಾಟ್ಸಾಪ್ ಸಂದೇಶಗಳ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

“ಅವರು ನನ್ನನ್ನು ವೇಶ್ಯೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಕೊಲೆಗೀಡಾದ ಯುವತಿಯು ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದು ಮತ್ತು ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡಿದ ಅನುಭವವನ್ನು ವಿವರಿಸುತ್ತಿದ್ದ ಬಗ್ಗೆ ವರದಿಗಳು ಬಹಿರಂಗಗೊಂಡಿವೆ.

ಯುವತಿಯು ಕಳುಹಿಸಿರುವ ಸಂದೇಶಗಳ ಸ್ಕ್ರೀನ್‌ಶಾಟ್‌ಗಳು ಹರಿದಾಡುತ್ತಿದೆ. ಅದರಲ್ಲಿ ಅವರು, ರೆಸಾರ್ಟ್‌ಗೆ ಆಗಮಿಸುತ್ತಿದ್ದ ಗ್ರಾಹಕರಿಗೆ 10 ಸಾವಿರ ರೂ.ಗೆ ‘ವಿಶೇಷ ಸೇವೆಗಳನ್ನು’ ಒದಗಿಸಲು ಹೇಗೆ ಒತ್ತಾಯಿಸಲಾಯಿತು ಎಂಬುದನ್ನು ವಿವರಿಸಿದ್ದಾರೆ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಗಳು ಈ ಸಂದೇಶಗಳು ಕೊಲೆಗೀಡಾದ ಯುವತಿಯದ್ದೆ ಎಂದು ಸೂಚಿಸುತ್ತಿವೆ ಎಂದು ಎನ್‌ಡಿಟಿವಿ, ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...