Homeಚಳವಳಿಉಳ್ಳೇರಹಳ್ಳಿ ಚಲೋ ಹೋರಾಟ ಯಶಸ್ವಿ: ಅದೇ ಗುಜ್ಜಕೋಲು ಕಟ್ಟಿ ಪ್ರತಿಭಟನೆ

ಉಳ್ಳೇರಹಳ್ಳಿ ಚಲೋ ಹೋರಾಟ ಯಶಸ್ವಿ: ಅದೇ ಗುಜ್ಜಕೋಲು ಕಟ್ಟಿ ಪ್ರತಿಭಟನೆ

ದೇವಾಲಯ ಪ್ರವೇಶಕ್ಕಾಗಿ ಅಲ್ಲ, ಬದಲಿಗೆ ಘನತೆ ಮತ್ತು ಸ್ವಾಭಿಮಾನಕ್ಕಾಗಿ ನಮ್ಮ ನಡಿಗೆ ಎಂಬ ಘೋಷಣೆಯೊಂದಿಗೆ ನಡೆದ ಹೋರಾಟದಲ್ಲಿ ಜೈಭೀಮ್ ಘೋಷಣೆಗಳು ಮುಗಿಲು ಮುಟ್ಟಿದ್ದವು. 

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿನ ಅಸ್ಪೃಶ್ಯತೆ ಆಚರಣೆ ಖಂಡಿಸಿ ನಡೆದ ಬೃಹತ್ ‘ಉಳ್ಳೇರಹಳ್ಳಿ ಚಲೋ’ ಹೋರಾಟ ಯಶಸ್ವಿಯಾಯಿತು. ಯಾವ ಗುಜ್ಜಕೋಲು ಮುಟ್ಟಿದ್ದಕ್ಕಾಗಿ ದಂಡ ವಿಧಿಸಲಾಗಿತ್ತೊ ಅದೇ ಗುಜ್ಜಕೋಲನ್ನು ತಂದು ದೇವಾಲಯದ ಧ್ವಜಕ್ಕೆ ಕಟ್ಟುವ ಮೂಲಕ ಪ್ರತಿರೋಧ ದಾಖಲಿಸಲಾಗಿದೆ.

ದೇವಾಲಯ ಪ್ರವೇಶಕ್ಕಾಗಿ ಅಲ್ಲ, ಬದಲಿಗೆ ಘನತೆ ಮತ್ತು ಸ್ವಾಭಿಮಾನಕ್ಕಾಗಿ ನಮ್ಮ ನಡಿಗೆ ಎಂಬ ಘೋಷಣೆಯೊಂದಿಗೆ ನಡೆದ ಹೋರಾಟದಲ್ಲಿ ಜೈಭೀಮ್ ಘೋಷಣೆಗಳು ಮುಗಿಲು ಮುಟ್ಟಿದ್ದವು.

ಜಿಲ್ಲೆಯ 5 ಸಾವಿರಕ್ಕೂ ಹೆಚ್ಚು ದಲಿತ ಹೋರಾಟಗಾರರು ಸೇರಿ ಟೇಕಲ್ ರೈಲು ನಿಲ್ದಾಣದಿಂದ ಮೆರವಣಿಗೆ ಆರಂಭಿಸಿ ಉಳ್ಳೇರಹಳ್ಳಿಯ ಸಂತ್ರಸ್ತ ದಲಿತ ಕುಟುಂಬವನ್ನು ಭೇಟಿ ಮಾಡಲಾಯಿತು. ದಾರಿಯುದ್ದಕ್ಕೂ ಜೈ ಭೀಮ್ ಘೋಷಣೆ ಮೊಳಗಿಸಿದ ಕಾರ್ಯಕರ್ತರು ಜಾತಿಪದ್ದತಿ, ಆಸ್ಪೃಶ್ಯತೆ ವಿರುದ್ಧ ಕಿಡಿಕಾರಿದರು. ಆನಂತರ ಭೂತಮ್ಮನ ದೇವಾಲಯ ಎದುರು ಜಮಾವಣೆಗೊಂಡ ಹೋರಾಟಗಾರರು ಘೋಷಣೆ ಮೊಳಗಿಸಿ ಮುತ್ತಿಗೆ ಹಾಕಿದರು.

ಆನಂತರ ದೇವಾಲಯ ಪ್ರವೇಶಿಸಿದ ದಲಿತ ಮುಖಂಡರು ಗುಜ್ಜಕೋಲು ತಂದು ದೇವಾಲಯದ ಧ್ವಜಕ್ಕೆ ಕಟ್ಟಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು.

ಇಂದಿಗೂ ಜಾರಿಯಲ್ಲಿರುವ ಅಸ್ಫೃಶ್ಯತೆ ಮತ್ತು ಜಾತಿಪದ್ದತಿಯನ್ನು ತೊಡೆದುಹಾಕಲು ದೀರ್ಘ ಹೋರಾಟ ಮಾಡಬೇಕಿದೆ. ಅದರೊಟ್ಟಿಗೆ ದಲಿತರೊಳಗೆ ಇರುವ ಜಾತಿಪದ್ದತಿಯನ್ನು ಸಹ ತೊಡೆದುಹಾಕಬೇಕು. ಎಲ್ಲಿಯೇ ಜಾತಿ ದೌರ್ಜನ್ಯ ಅನ್ಯಾಯ ನಡೆದರೂ ಸಹ ದಲಿತರು ಒಗ್ಗಟ್ಟಾಗಿ ಹೋರಾಡಬೇಕು ಎಂದು ಹೋರಾಟಗಾರರು ಕರೆ ನೀಡಿದರು.

ಎಲ್ಲಾ ದೇವಾಲಯಗಳಲ್ಲಿ ಎಲ್ಲಾ ಸಮುದಾಯದ ಜನರಿಗೂ ಪ್ರವೇಶವಿದೆ ಎಂಬು ಬೋರ್ಡ್ ಹಾಕುವುದನ್ನು ಕಡ್ಡಾಯ ಮಾಡಬೇಕು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಸ್ಪೃಶ್ಯತೆಯ ವಿರುದ್ಧ ಅರಿವು ನೀಡುವ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಪ್ರಜಾಪರಿವರ್ತನ ವೇದಿಕೆ, ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇವಾ ಸಮಿತಿ, ದಲಿತ ಹಕ್ಕುಗಳ ಸಮಿತಿ ಸೇರಿದಂತೆ ಹತ್ತಾರು ಸಂಘಟನೆಗಳು ಜೊತೆಗೂಡಿದ್ದವು. ಪಿಚ್ಚಳ್ಳಿ ಶ್ರೀನಿವಾಸ್, ವಿಜಯ್ ಕುಮಾರ್, ಬಿ.ಗೋಪಾಲ್, ಸಂದೇಶ್, ನಾರಾಯಣಸ್ವಾಮಿ, ಡಾ.ಅರಿವು ಶಿವಪ್ಪ, ಆಂಜಿನಪ್ಪ, ಎ.ಕೆ ವೆಂಕಟೇಶ್, ಹೆಬ್ಬಾಲೆ ವೆಂಕಟೇಶ್, ಮುನಿಕೃಷ್ಣಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ; ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...