Homeಕರ್ನಾಟಕಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಚಾಮುಂಡಿ ಬೆಟ್ಟದಲ್ಲಿ ಇರುವ ಮಹಿಷಾ ಪ್ರತಿಮೆಗೆ ಬಟ್ಟೆಗಳಿಂದ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮೂರ್ತಿಯ ಸುತ್ತ ಬ್ಯಾರಿಕೇಟ್ ಇಟ್ಟು ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ

- Advertisement -
- Advertisement -

ಚಾಮುಂಡಿ ಬೆಟ್ಟದಲ್ಲಿ ಕಳೆದ ಎಂಟು ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಮಹಿಷಾ ದಸರಾಗೆ ಜಿಲ್ಲಾಡಳಿತ ಅನುಮತಿ ನಿಕರಿಸಿದ ಹಿನ್ನಲೆ, ಮೈಸೂರಿನ ಅಶೋಕಪುರಂನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಮಹಿಷಾಸುರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಭಾನುವಾರ ಸಾಂಕೀತಿಕ ಮಹಿಷ ದಸರಾವನ್ನು ಆಚರಿಸಲಾಗಿದೆ.

ಜಿಲ್ಲಾಡಳಿತವು ಮಹಿಷಾ ದಸರಾಗೆ ಅನುಮತಿ ನಿರಾಕರಿಸಿರುವುದರಿಂದ ಚಾಮುಂಡಿ ಬೆಟ್ಟದಲ್ಲಿ ಇರುವ ಮಹಿಷಾ ಪ್ರತಿಮೆಗೆ ಬಟ್ಟೆಗಳಿಂದ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮೂರ್ತಿಯ ಸುತ್ತ ಬ್ಯಾರಿಕೇಟ್ ಇಟ್ಟು ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಇದರ ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಿಷಾ ದಸರಾ ಆಯೋಜನಾ ಸಮಿತಿಯು ಕಳೆದ ಎಂಟು ವರ್ಷದಿಂದ ಮಹಿಷಾ ದಸರಾವನ್ನು ಆಚರಿಸುತ್ತಿದೆ. ಪೌರಾಣಿಕ ಕಥೆಗಳ ಪ್ರಕಾರ ರಾಕ್ಷಸನೆಂದು ಪರಿಗಣಿಸಲ್ಪಟ್ಟ ಮಹಿಷಾಸುರನನ್ನು ಚಾಮುಂಡೇಶ್ವರಿ ದೇವಿಯು ವಧೆ ಮಾಡುತ್ತಾಳೆ. ಆದರೆ ಮಹಿಷಾ ದಸರಾ ಆಯೋಜನಾ ಸಮಿತಿಯು ಮಹಿಷಾಸುರ ರಾಕ್ಷಸನಲ್ಲ, ಆತ ರಕ್ಷಕನಾಗಿದ್ದು, ಮಹಿಷಾ ಮಂಡಲದ ಶ್ರೇಷ್ಠ ದೊರೆ ಎಂದು ಪ್ರತಿಪಾದಿಸುತ್ತದೆ. ಹತ್ತು ದಿನಗಳ ಕಾಲ ನಡೆಯುವ ವಾರ್ಷಿಕ ದಸರಾ ಉತ್ಸವ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಮಹಿಷ ದಸರಾವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮಹಿಷಾಸುರ ಯಾರು? ಕೋಣನ ಬಲಿಯ ಮೇಲೆ ಮಹಿಷ ಮರ್ಧನ ಪುರಾಣದ ಹೇರಿಕೆಯೇ?

ಮಹಿಷ ದಸರಾ ಆಯೋಜನಾ ಸಮಿತಿಯ ಮುಖ್ಯಸ್ಥರಾದ ಮಾಜಿ ಮೇಯರ್ ಪುರುಷೋತ್ತಮ್, ಉರಿಳಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ಖ್ಯಾತ ಸಾಹಿತಿ ಕೆ.ಎಸ್. ಭಗವಾನ್, ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಪಿ.ವಿ. ನಂಜರಾಜ್ ಅರಸ್ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಮಹಿಷಾಸುರನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಹಿಷ ದಸರಾವನ್ನು ಆಚರಿಸಲಾಗಿದೆ.

“ಮಹಿಷಾಸುರ ದಯಾಪರ ಆಡಳಿತಗಾರನಾಗಿದ್ದು, ಮಾನವತಾವಾದಿಯಾಗಿದ್ದನು” ಎಂದು ಮೈಸೂರಿನ ಮಾಜಿ ಮೇಯರ್ ಪುರುಷೋತ್ತಮ್‌ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಮ್ಮ ಇಚ್ಛೆಯ ದೇವರನ್ನು ಪೂಜಿಸುವ ಸಾಂವಿಧಾನಿಕ ಹಕ್ಕಿನಿಂದ ನಾವು ವಂಚಿತರಾಗಿದ್ದೇವೆ ಎಂದು ಅವರು ವಿಷಾದಿಸಿದ್ದಾರೆ.

ಮಹಿಷನ ಪ್ರತಿಮೆಗೆ ಬ್ಯಾರಿಕೇಡ್ ಹಾಕಲಾಗಿದ್ದು, ಸಂಪೂರ್ಣವಾಗಿ ಬಟ್ಟೆಯಿಂದ ಮುಚ್ಚಲಾಗಿದೆ. ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರನ್ನು ಒಳಗೆ ಬಿಡುವ ಮುನ್ನ ತಪಾಸಣೆ ನಡೆಸಲಾಗುತ್ತಿದೆ (ಚಿತ್ರಕೃಪೆ: ಸಿಟಿ ಟುಡೆ)

ಮಹಿಷಾ ದಸರಾ ಸಮಾರಂಭದಲ್ಲಿ ಮಾತನಾಡಿದ ಪ್ರೊ.ನಂಜರಾಜ್ ಅರಸ್, “ಮಹಿಷ ದಸರಾಗೆ ಬಿಜೆಪಿ ಸರ್ಕಾರ ಅನುಮತಿ ನಿರಾಕರಿಸಿದೆ. ಗಣೇಶ ಪೆಂಡಾಲ್‌‌ಗಳಲ್ಲಿ ಪೂಜಿಸಲ್ಪಟ್ಟ ಸಾವರ್ಕರ್ ಮತ್ತು ನಾಥೂರಾಂ ಗೋಡ್ಸೆಯವರ ಭಾವಚಿತ್ರಗಳನ್ನು ಮೆರವಣಿಗೆ ಮಾಡಲಾಗಿದೆ. ಅವರಿಗಿಂತ ಮಹಿಷ ಕೆಟ್ಟವನಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ಮಹಿಷನಿಂದ ಮೈಸೂರಿಗೆ ಹೆಸರು ಬಂದಿದೆ ಎಂದು ವಾದಿಸಿದ ಪ್ರೊ. ಅರಸ್‌, “ಜಯಚಾಮಜೇಂದ್ರ ಒಡೆಯರ್ ಸೇರಿದಂತೆ ಮೈಸೂರಿನ ಹಿಂದಿನ ದೊರೆಗಳ ಲೆಟರ್‌ಹೆಡ್‌ಗಳ ಪ್ರತಿಗಳು ತಮ್ಮ ಬಳಿ ಇವೆ. ಮುಂದಿನ ವರ್ಷ ನೂತನ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಷ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವಂತಾಗಲಿ. ಯಾರೂ ಅಧಿಕಾರಕ್ಕೆ ಬರಲಿ. ಬಿಜೆಪಿ ಅಧಿಕಾರಕ್ಕೆ ಬರಬಾರದು” ಎಂದು ಅವರು ಹೇಳಿದ್ದಾರೆ.

ಮಹಿಷಾಸುರನ ಬಗ್ಗೆ ಮತ್ತಷ್ಟು ಓದಿಗೆ:

ಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ
‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌
ವರ್ತಮಾನದಲ್ಲಿ ಪುರಾಣಗಳನ್ನು ಶೋಧಿಸಿ ಮರುಕಟ್ಟುವ ಅಗತ್ಯ
ಬಲಿಯ ಆದರ್ಶ ರಾಜ್ಯ ಮತ್ತು ಅದನ್ನು ಕಸಿದುಕೊಂಡು ಕಟ್ಟಿದ ಪುರಾಣದ ಬಗ್ಗೆ ಜ್ಯೋತಿಬಾ ಫುಲೆ ಬರಹ

ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಹೇಳಿದ ಪೌರಾಣಿಕ ಪಾತ್ರಗಳು ಮಾತ್ರ ದೇವರು. ಇಲ್ಲೂ ವಂಚನೆ ಇವರು ಹೇಳಿದ ದೇವರಿಗೆ ಮಾತ್ರ ಪೂಜೆ ಸಲ್ಲಿಸಬೇಕು! ಅಂಬೇಡ್ಕರ್ ವಾದಿ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ರಾಜ್ಯದಾದ್ಯಂತ ಮಹಿಶ ದಸರಾ ನಡೆಯುವಂತೆ ಯೋಜನೆಯನ್ನು ರೂಪಿಸಿ ಕಾರ್ಯರೂಪಕ್ಕೆ ತರಬೇಕು.

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...