Homeಕರ್ನಾಟಕಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಚಾಮುಂಡಿ ಬೆಟ್ಟದಲ್ಲಿ ಇರುವ ಮಹಿಷಾ ಪ್ರತಿಮೆಗೆ ಬಟ್ಟೆಗಳಿಂದ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮೂರ್ತಿಯ ಸುತ್ತ ಬ್ಯಾರಿಕೇಟ್ ಇಟ್ಟು ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ

- Advertisement -
- Advertisement -

ಚಾಮುಂಡಿ ಬೆಟ್ಟದಲ್ಲಿ ಕಳೆದ ಎಂಟು ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಮಹಿಷಾ ದಸರಾಗೆ ಜಿಲ್ಲಾಡಳಿತ ಅನುಮತಿ ನಿಕರಿಸಿದ ಹಿನ್ನಲೆ, ಮೈಸೂರಿನ ಅಶೋಕಪುರಂನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಮಹಿಷಾಸುರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಭಾನುವಾರ ಸಾಂಕೀತಿಕ ಮಹಿಷ ದಸರಾವನ್ನು ಆಚರಿಸಲಾಗಿದೆ.

ಜಿಲ್ಲಾಡಳಿತವು ಮಹಿಷಾ ದಸರಾಗೆ ಅನುಮತಿ ನಿರಾಕರಿಸಿರುವುದರಿಂದ ಚಾಮುಂಡಿ ಬೆಟ್ಟದಲ್ಲಿ ಇರುವ ಮಹಿಷಾ ಪ್ರತಿಮೆಗೆ ಬಟ್ಟೆಗಳಿಂದ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮೂರ್ತಿಯ ಸುತ್ತ ಬ್ಯಾರಿಕೇಟ್ ಇಟ್ಟು ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಇದರ ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಿಷಾ ದಸರಾ ಆಯೋಜನಾ ಸಮಿತಿಯು ಕಳೆದ ಎಂಟು ವರ್ಷದಿಂದ ಮಹಿಷಾ ದಸರಾವನ್ನು ಆಚರಿಸುತ್ತಿದೆ. ಪೌರಾಣಿಕ ಕಥೆಗಳ ಪ್ರಕಾರ ರಾಕ್ಷಸನೆಂದು ಪರಿಗಣಿಸಲ್ಪಟ್ಟ ಮಹಿಷಾಸುರನನ್ನು ಚಾಮುಂಡೇಶ್ವರಿ ದೇವಿಯು ವಧೆ ಮಾಡುತ್ತಾಳೆ. ಆದರೆ ಮಹಿಷಾ ದಸರಾ ಆಯೋಜನಾ ಸಮಿತಿಯು ಮಹಿಷಾಸುರ ರಾಕ್ಷಸನಲ್ಲ, ಆತ ರಕ್ಷಕನಾಗಿದ್ದು, ಮಹಿಷಾ ಮಂಡಲದ ಶ್ರೇಷ್ಠ ದೊರೆ ಎಂದು ಪ್ರತಿಪಾದಿಸುತ್ತದೆ. ಹತ್ತು ದಿನಗಳ ಕಾಲ ನಡೆಯುವ ವಾರ್ಷಿಕ ದಸರಾ ಉತ್ಸವ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಮಹಿಷ ದಸರಾವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮಹಿಷಾಸುರ ಯಾರು? ಕೋಣನ ಬಲಿಯ ಮೇಲೆ ಮಹಿಷ ಮರ್ಧನ ಪುರಾಣದ ಹೇರಿಕೆಯೇ?

ಮಹಿಷ ದಸರಾ ಆಯೋಜನಾ ಸಮಿತಿಯ ಮುಖ್ಯಸ್ಥರಾದ ಮಾಜಿ ಮೇಯರ್ ಪುರುಷೋತ್ತಮ್, ಉರಿಳಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ಖ್ಯಾತ ಸಾಹಿತಿ ಕೆ.ಎಸ್. ಭಗವಾನ್, ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಪಿ.ವಿ. ನಂಜರಾಜ್ ಅರಸ್ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಮಹಿಷಾಸುರನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಹಿಷ ದಸರಾವನ್ನು ಆಚರಿಸಲಾಗಿದೆ.

“ಮಹಿಷಾಸುರ ದಯಾಪರ ಆಡಳಿತಗಾರನಾಗಿದ್ದು, ಮಾನವತಾವಾದಿಯಾಗಿದ್ದನು” ಎಂದು ಮೈಸೂರಿನ ಮಾಜಿ ಮೇಯರ್ ಪುರುಷೋತ್ತಮ್‌ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಮ್ಮ ಇಚ್ಛೆಯ ದೇವರನ್ನು ಪೂಜಿಸುವ ಸಾಂವಿಧಾನಿಕ ಹಕ್ಕಿನಿಂದ ನಾವು ವಂಚಿತರಾಗಿದ್ದೇವೆ ಎಂದು ಅವರು ವಿಷಾದಿಸಿದ್ದಾರೆ.

ಮಹಿಷನ ಪ್ರತಿಮೆಗೆ ಬ್ಯಾರಿಕೇಡ್ ಹಾಕಲಾಗಿದ್ದು, ಸಂಪೂರ್ಣವಾಗಿ ಬಟ್ಟೆಯಿಂದ ಮುಚ್ಚಲಾಗಿದೆ. ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರನ್ನು ಒಳಗೆ ಬಿಡುವ ಮುನ್ನ ತಪಾಸಣೆ ನಡೆಸಲಾಗುತ್ತಿದೆ (ಚಿತ್ರಕೃಪೆ: ಸಿಟಿ ಟುಡೆ)

ಮಹಿಷಾ ದಸರಾ ಸಮಾರಂಭದಲ್ಲಿ ಮಾತನಾಡಿದ ಪ್ರೊ.ನಂಜರಾಜ್ ಅರಸ್, “ಮಹಿಷ ದಸರಾಗೆ ಬಿಜೆಪಿ ಸರ್ಕಾರ ಅನುಮತಿ ನಿರಾಕರಿಸಿದೆ. ಗಣೇಶ ಪೆಂಡಾಲ್‌‌ಗಳಲ್ಲಿ ಪೂಜಿಸಲ್ಪಟ್ಟ ಸಾವರ್ಕರ್ ಮತ್ತು ನಾಥೂರಾಂ ಗೋಡ್ಸೆಯವರ ಭಾವಚಿತ್ರಗಳನ್ನು ಮೆರವಣಿಗೆ ಮಾಡಲಾಗಿದೆ. ಅವರಿಗಿಂತ ಮಹಿಷ ಕೆಟ್ಟವನಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ಮಹಿಷನಿಂದ ಮೈಸೂರಿಗೆ ಹೆಸರು ಬಂದಿದೆ ಎಂದು ವಾದಿಸಿದ ಪ್ರೊ. ಅರಸ್‌, “ಜಯಚಾಮಜೇಂದ್ರ ಒಡೆಯರ್ ಸೇರಿದಂತೆ ಮೈಸೂರಿನ ಹಿಂದಿನ ದೊರೆಗಳ ಲೆಟರ್‌ಹೆಡ್‌ಗಳ ಪ್ರತಿಗಳು ತಮ್ಮ ಬಳಿ ಇವೆ. ಮುಂದಿನ ವರ್ಷ ನೂತನ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಷ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವಂತಾಗಲಿ. ಯಾರೂ ಅಧಿಕಾರಕ್ಕೆ ಬರಲಿ. ಬಿಜೆಪಿ ಅಧಿಕಾರಕ್ಕೆ ಬರಬಾರದು” ಎಂದು ಅವರು ಹೇಳಿದ್ದಾರೆ.

ಮಹಿಷಾಸುರನ ಬಗ್ಗೆ ಮತ್ತಷ್ಟು ಓದಿಗೆ:

ಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ
‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌
ವರ್ತಮಾನದಲ್ಲಿ ಪುರಾಣಗಳನ್ನು ಶೋಧಿಸಿ ಮರುಕಟ್ಟುವ ಅಗತ್ಯ
ಬಲಿಯ ಆದರ್ಶ ರಾಜ್ಯ ಮತ್ತು ಅದನ್ನು ಕಸಿದುಕೊಂಡು ಕಟ್ಟಿದ ಪುರಾಣದ ಬಗ್ಗೆ ಜ್ಯೋತಿಬಾ ಫುಲೆ ಬರಹ

ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಹೇಳಿದ ಪೌರಾಣಿಕ ಪಾತ್ರಗಳು ಮಾತ್ರ ದೇವರು. ಇಲ್ಲೂ ವಂಚನೆ ಇವರು ಹೇಳಿದ ದೇವರಿಗೆ ಮಾತ್ರ ಪೂಜೆ ಸಲ್ಲಿಸಬೇಕು! ಅಂಬೇಡ್ಕರ್ ವಾದಿ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ರಾಜ್ಯದಾದ್ಯಂತ ಮಹಿಶ ದಸರಾ ನಡೆಯುವಂತೆ ಯೋಜನೆಯನ್ನು ರೂಪಿಸಿ ಕಾರ್ಯರೂಪಕ್ಕೆ ತರಬೇಕು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...