Homeಕರ್ನಾಟಕಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಚಾಮುಂಡಿ ಬೆಟ್ಟದಲ್ಲಿ ಇರುವ ಮಹಿಷಾ ಪ್ರತಿಮೆಗೆ ಬಟ್ಟೆಗಳಿಂದ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮೂರ್ತಿಯ ಸುತ್ತ ಬ್ಯಾರಿಕೇಟ್ ಇಟ್ಟು ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ

- Advertisement -
- Advertisement -

ಚಾಮುಂಡಿ ಬೆಟ್ಟದಲ್ಲಿ ಕಳೆದ ಎಂಟು ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಮಹಿಷಾ ದಸರಾಗೆ ಜಿಲ್ಲಾಡಳಿತ ಅನುಮತಿ ನಿಕರಿಸಿದ ಹಿನ್ನಲೆ, ಮೈಸೂರಿನ ಅಶೋಕಪುರಂನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಮಹಿಷಾಸುರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಭಾನುವಾರ ಸಾಂಕೀತಿಕ ಮಹಿಷ ದಸರಾವನ್ನು ಆಚರಿಸಲಾಗಿದೆ.

ಜಿಲ್ಲಾಡಳಿತವು ಮಹಿಷಾ ದಸರಾಗೆ ಅನುಮತಿ ನಿರಾಕರಿಸಿರುವುದರಿಂದ ಚಾಮುಂಡಿ ಬೆಟ್ಟದಲ್ಲಿ ಇರುವ ಮಹಿಷಾ ಪ್ರತಿಮೆಗೆ ಬಟ್ಟೆಗಳಿಂದ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಮೂರ್ತಿಯ ಸುತ್ತ ಬ್ಯಾರಿಕೇಟ್ ಇಟ್ಟು ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಇದರ ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಿಷಾ ದಸರಾ ಆಯೋಜನಾ ಸಮಿತಿಯು ಕಳೆದ ಎಂಟು ವರ್ಷದಿಂದ ಮಹಿಷಾ ದಸರಾವನ್ನು ಆಚರಿಸುತ್ತಿದೆ. ಪೌರಾಣಿಕ ಕಥೆಗಳ ಪ್ರಕಾರ ರಾಕ್ಷಸನೆಂದು ಪರಿಗಣಿಸಲ್ಪಟ್ಟ ಮಹಿಷಾಸುರನನ್ನು ಚಾಮುಂಡೇಶ್ವರಿ ದೇವಿಯು ವಧೆ ಮಾಡುತ್ತಾಳೆ. ಆದರೆ ಮಹಿಷಾ ದಸರಾ ಆಯೋಜನಾ ಸಮಿತಿಯು ಮಹಿಷಾಸುರ ರಾಕ್ಷಸನಲ್ಲ, ಆತ ರಕ್ಷಕನಾಗಿದ್ದು, ಮಹಿಷಾ ಮಂಡಲದ ಶ್ರೇಷ್ಠ ದೊರೆ ಎಂದು ಪ್ರತಿಪಾದಿಸುತ್ತದೆ. ಹತ್ತು ದಿನಗಳ ಕಾಲ ನಡೆಯುವ ವಾರ್ಷಿಕ ದಸರಾ ಉತ್ಸವ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಮಹಿಷ ದಸರಾವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮಹಿಷಾಸುರ ಯಾರು? ಕೋಣನ ಬಲಿಯ ಮೇಲೆ ಮಹಿಷ ಮರ್ಧನ ಪುರಾಣದ ಹೇರಿಕೆಯೇ?

ಮಹಿಷ ದಸರಾ ಆಯೋಜನಾ ಸಮಿತಿಯ ಮುಖ್ಯಸ್ಥರಾದ ಮಾಜಿ ಮೇಯರ್ ಪುರುಷೋತ್ತಮ್, ಉರಿಳಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ಖ್ಯಾತ ಸಾಹಿತಿ ಕೆ.ಎಸ್. ಭಗವಾನ್, ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಪಿ.ವಿ. ನಂಜರಾಜ್ ಅರಸ್ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಮಹಿಷಾಸುರನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಹಿಷ ದಸರಾವನ್ನು ಆಚರಿಸಲಾಗಿದೆ.

“ಮಹಿಷಾಸುರ ದಯಾಪರ ಆಡಳಿತಗಾರನಾಗಿದ್ದು, ಮಾನವತಾವಾದಿಯಾಗಿದ್ದನು” ಎಂದು ಮೈಸೂರಿನ ಮಾಜಿ ಮೇಯರ್ ಪುರುಷೋತ್ತಮ್‌ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಮ್ಮ ಇಚ್ಛೆಯ ದೇವರನ್ನು ಪೂಜಿಸುವ ಸಾಂವಿಧಾನಿಕ ಹಕ್ಕಿನಿಂದ ನಾವು ವಂಚಿತರಾಗಿದ್ದೇವೆ ಎಂದು ಅವರು ವಿಷಾದಿಸಿದ್ದಾರೆ.

ಮಹಿಷನ ಪ್ರತಿಮೆಗೆ ಬ್ಯಾರಿಕೇಡ್ ಹಾಕಲಾಗಿದ್ದು, ಸಂಪೂರ್ಣವಾಗಿ ಬಟ್ಟೆಯಿಂದ ಮುಚ್ಚಲಾಗಿದೆ. ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರನ್ನು ಒಳಗೆ ಬಿಡುವ ಮುನ್ನ ತಪಾಸಣೆ ನಡೆಸಲಾಗುತ್ತಿದೆ (ಚಿತ್ರಕೃಪೆ: ಸಿಟಿ ಟುಡೆ)

ಮಹಿಷಾ ದಸರಾ ಸಮಾರಂಭದಲ್ಲಿ ಮಾತನಾಡಿದ ಪ್ರೊ.ನಂಜರಾಜ್ ಅರಸ್, “ಮಹಿಷ ದಸರಾಗೆ ಬಿಜೆಪಿ ಸರ್ಕಾರ ಅನುಮತಿ ನಿರಾಕರಿಸಿದೆ. ಗಣೇಶ ಪೆಂಡಾಲ್‌‌ಗಳಲ್ಲಿ ಪೂಜಿಸಲ್ಪಟ್ಟ ಸಾವರ್ಕರ್ ಮತ್ತು ನಾಥೂರಾಂ ಗೋಡ್ಸೆಯವರ ಭಾವಚಿತ್ರಗಳನ್ನು ಮೆರವಣಿಗೆ ಮಾಡಲಾಗಿದೆ. ಅವರಿಗಿಂತ ಮಹಿಷ ಕೆಟ್ಟವನಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಹಿಷಾಸುರ ತೋಡಾ ಬುಡಕಟ್ಟಿನವನೇ? ನಾಗ ಕುಲದವನೇ? ಬೌದ್ಧ ಅರಸನೇ?

ಮಹಿಷನಿಂದ ಮೈಸೂರಿಗೆ ಹೆಸರು ಬಂದಿದೆ ಎಂದು ವಾದಿಸಿದ ಪ್ರೊ. ಅರಸ್‌, “ಜಯಚಾಮಜೇಂದ್ರ ಒಡೆಯರ್ ಸೇರಿದಂತೆ ಮೈಸೂರಿನ ಹಿಂದಿನ ದೊರೆಗಳ ಲೆಟರ್‌ಹೆಡ್‌ಗಳ ಪ್ರತಿಗಳು ತಮ್ಮ ಬಳಿ ಇವೆ. ಮುಂದಿನ ವರ್ಷ ನೂತನ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಷ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವಂತಾಗಲಿ. ಯಾರೂ ಅಧಿಕಾರಕ್ಕೆ ಬರಲಿ. ಬಿಜೆಪಿ ಅಧಿಕಾರಕ್ಕೆ ಬರಬಾರದು” ಎಂದು ಅವರು ಹೇಳಿದ್ದಾರೆ.

ಮಹಿಷಾಸುರನ ಬಗ್ಗೆ ಮತ್ತಷ್ಟು ಓದಿಗೆ:

ಮಹಿಷಾಸುರ ಐತಿಹಾಸಿಕ ವ್ಯಕ್ತಿಯೇ ಹೊರತು ಪುರಾಣವಲ್ಲ: ಡಾ.ಚಮರಂ
‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌
ವರ್ತಮಾನದಲ್ಲಿ ಪುರಾಣಗಳನ್ನು ಶೋಧಿಸಿ ಮರುಕಟ್ಟುವ ಅಗತ್ಯ
ಬಲಿಯ ಆದರ್ಶ ರಾಜ್ಯ ಮತ್ತು ಅದನ್ನು ಕಸಿದುಕೊಂಡು ಕಟ್ಟಿದ ಪುರಾಣದ ಬಗ್ಗೆ ಜ್ಯೋತಿಬಾ ಫುಲೆ ಬರಹ

ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಹೇಳಿದ ಪೌರಾಣಿಕ ಪಾತ್ರಗಳು ಮಾತ್ರ ದೇವರು. ಇಲ್ಲೂ ವಂಚನೆ ಇವರು ಹೇಳಿದ ದೇವರಿಗೆ ಮಾತ್ರ ಪೂಜೆ ಸಲ್ಲಿಸಬೇಕು! ಅಂಬೇಡ್ಕರ್ ವಾದಿ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ರಾಜ್ಯದಾದ್ಯಂತ ಮಹಿಶ ದಸರಾ ನಡೆಯುವಂತೆ ಯೋಜನೆಯನ್ನು ರೂಪಿಸಿ ಕಾರ್ಯರೂಪಕ್ಕೆ ತರಬೇಕು.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....