Homeಚಳವಳಿಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

ಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

80 ವರ್ಷದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಜನಸಾಮಾನ್ಯರ ಪರ ಮಾಡಿರುವ ವಕೀಲಿಕೆ ಅಗಾಧವಾದದ್ದು

- Advertisement -
- Advertisement -

ನಿನ್ನೆ ಇಂದಿರಾ ಜೈಸಿಂಗ್ ಮತ್ತು ಅವರ ಪತಿ ಆನಂದ್ ಗ್ರೋವರ್ ಅವರ ಸ್ವಯಂ ಸೇವಾ ಸಂಸ್ಥೆಯ (ಲಾಯರ್ಸ್ ಕಲೆಕ್ಟಿವ್) ಕಚೇರಿಗಳ ಮೇಲೆ ಸಿಬಿಐ ದಾಳಿ ಮಾಡಿದ್ದು, ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ, 2010ರ ಅಡಿಯಲ್ಲಿ ಹಲವು ಆರೋಪಗಳನ್ನು ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದಿರಾ ಜೈಸಿಂಗ್ ಯಾರು, ಯಾತಕ್ಕಾಗಿ ಸಿಬಿಐ ದಾಳಿ ಮತ್ತಿತರರ ವಿಚಾರಗಳನ್ನು ಚರ್ಚಿಸಬೇಕಾಗಿದೆ.

ಇಂದಿರಾ ಜೈಸಿಂಗ್ ಯಾರು?

ಮಾನವ ಹಕ್ಕುಗಳ ರಕ್ಷಣೆಯ ಹೋರಾಟದಲ್ಲಿ ಇಂದಿರಾ ಜೈಸಿಂಗ್ ರವರ ಹೆಸರು ಐತಿಹಾಸಿಕವಾದುದ್ದು. ಹಲವು ಕಾನೂನು ಹೋರಾಟಗಳಲ್ಲಿ ಬಹಿರಂಗ ಮತ್ತು ಧೈರ್ಯವಂತಿಕೆಯ ಮಧ್ಯಪ್ರವೇಶ ಮತ್ತು ಕೆಲಸಕ್ಕೆ ಹೆಸರುವಾಸಿಯಾದ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಹ ದೊರಕಿದೆ. 1986 ರಲ್ಲಿ, ಬಾಂಬೆಯ ಹೈಕೋರ್ಟ್ ಹಿರಿಯ ವಕೀಲರಾಗಿ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಇವರು 2009 ರಲ್ಲಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು.

ಇಂದಿರಾ ಜೈಸಿಂಗ್ ಹಲವಾರು ಮಹತ್ವದ ಕಾನೂನು ಹೋರಾಟಗಳನ್ನು ಗೆದ್ದಿದ್ದಾರೆ, ಅದರಲ್ಲೂ ವಿಶೇಷವಾಗಿ ಕ್ರಿಶ್ಚಿಯನ್ ಮಹಿಳೆಯರ ಆಸ್ತಿಯನ್ನು ಆನುವಂಶಿಕವಾಗಿ ಪಡೆಯುವ ಹಕ್ಕು, ಮಕ್ಕಳ ಪಾಲನೆ ಪ್ರಕರಣಗಳಲ್ಲಿ ನೈಸರ್ಗಿಕ ರಕ್ಷಕರಾಗಿ ತಾಯಿಯ ಹಕ್ಕು ಮುಖ್ಯವಾದವು. ಜೊತೆಗೆ 1984 ರ ಡಿಸೆಂಬರ್‌ನಲ್ಲಿ ಭೋಪಾಲ್ ಅನಿಲ ದುರಂತದಿಂದ ಬಲಿಯಾದವರಿಗೆ ಮತ್ತು ಬದುಕುಳಿದವರಿಗೆ ನ್ಯಾಯ ಮತ್ತು ಪರಿಹಾರಕ್ಕಾಗಿ ಅವರು ಯೂನಿಯನ್ ಕಾರ್ಬೈಡ್ ನಿಗಮದ ವಿರುದ್ಧ ಹೋರಾಡಿದವರು.

1980 ರ ಅವಧಿಯಲ್ಲಿ ಬಾಂಬೆಯ ಪಾದಚಾರಿ ನಿವಾಸಿಗಳ ಹಕ್ಕುಗಳ ಪರವಾಗಿ ಮತ್ತು  ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳ ಪ್ರದೇಶವನ್ನು ಗಣಿಗಾರಿಕೆಯಿಂದ ರಕ್ಷಿಸುವ ಸಲುವಾಗಿ ಇವರು ಮಾಡಿರುವ ಕೆಲಸಗಳು ಮಾನವ ಹಕ್ಕುಗಳು ಮತ್ತು ಪರಿಸರ ಕಾರ್ಯಗಳಲ್ಲಿ ಪ್ರಮುಖವಾದವುಗಳಾಗಿವೆ.

ಜೀವ ಉಳಿಸುವ ಕ್ಯಾನ್ಸರ್ ಔಷಧ ಗ್ಲಿವೆಕ್‌ ಎಲ್ಲಾರಿಗೂ ಸಿಗಬೇಕೆಂದು ನೊವಾರ್ಟಿಸ್ ಪೇಟೆಂಟ್ ಅನ್ನು ವಿರೋಧಿಸುವ ಹೋರಾಟದಲ್ಲಿ ಇಂದಿರಾ ಜೈಸಿಂಗ್ ನೇತೃತ್ವದ ಲಾಯರ್ಸ್ ಕಲೆಕ್ಟಿವ್ ಸಾಕಷ್ಟು ಕೆಲಸ ಮಾಡೆದೆ. ತದ ನಂತರವಷ್ಟೇ  ಏಪ್ರಿಲ್ 01, 2013 ರಂದು, ನೊವಾರ್ಟಿಸ್ ಅವರ ಪೇಟೆಂಟ್ ಅನ್ನು ಭಾರತದ ಸುಪ್ರೀಂ ಕೋರ್ಟ್ ತಿರಸ್ಕರಿಸಿತು. ಉದ್ಯೋಗ, ಆರೋಗ್ಯ ಮತ್ತು ಶಿಕ್ಷಣದಲ್ಲಿ ಎಚ್‌ಐವಿ ವ್ಯಕ್ತಿ ಗಳಿಗೆ ತಾರತಮ್ಯದ ಮಸೂದೆಯ ವಿರುದ್ಧವೂ ಜೈಸಿಂಗ್ ಕೆಲಸ ಮಾಡಿದ್ದಾರೆ.

ಇಂದಿರಾ ಜೈಸಿಂಗ್ ರವರ ಲಾಯರ್ಸ್ ಕಲೆಕ್ಟಿವ್ ಮೇಲೆ ಸಿಬಿಐ ದಾಳಿ ಏಕೆ?

ಎಫ್‌ಸಿಆರ್‌ಎ (ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ, 2010) ಉಲ್ಲಂಘನೆ ಆರೋಪದ ಮೇಲೆ ಗೃಹ ಸಚಿವಾಲಯದ ಆದೇಶದ ಮೇರೆಗೆ ಆರು ತಿಂಗಳ ಕಾಲ ಲಾಯರ್ಸ್ ಕಲೆಕ್ಟಿವ್ ಪರವಾನಗಿಗಳನ್ನು ರದ್ದುಗೊಳಿಸಿದೆ. ಲಾಯರ್ಸ್ ಕಲೆಕ್ಟಿವ್ ಜೂನ್ 2016 ರಿಂದಲೂ ಮೋದಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ವಿದೇಶಿ ದೇಣಿಗೆಯನ್ನು ರಾಜಕೀಯ ಪ್ರೇರಿತ ರ್ಯಾಲಿ ಮತ್ತು ಧರಣಿಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. 2016 ರಲ್ಲಿ ದೇಶದ ಹಿತಾಸಕ್ತಿಗೆ ಹಾನಿಕಾರಕ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆಂದು ಆರೋಪಿಸಲಾದ 25 ಎನ್‌ಜಿಒಗಳ ಪಟ್ಟಿಯಲ್ಲಿಯೂ ಈ ಸಂಘಟನೆಯನ್ನು ಸೇರಿಸಲಾಗಿದೆ.

ಇಂದಿರಾ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಲ್ಲೇ 2016 ರಲ್ಲಿಯೇ ದಾಖಲೆಗಳನ್ನು ನೀಡಿ ಸ್ಪಷ್ಟಪಡಿಸಿದ್ದಾರೆ. ಆದರೆ 2019 ರ ಮೇ ತಿಂಗಳಲ್ಲಿ ಬಿಜೆಪಿ ಬೆಂಬಲಿತ ಲಾಯರ್ಸ್ ವಾಯ್ಸ್ ಎಂಬ ಮತ್ತೊಂದು ಎನ್‌ಜಿಒ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿ ಲಾಯರ್ಸ್ ಕಲೆಕ್ಟಿವ್ ಎಫ್‌ಸಿಆರ್‌ಎ ಉಲ್ಲಂಘಿಸಿದೆ ಎಂದು ಆರೋಪಿಸಿತ್ತು. “ರಾಷ್ಟ್ರದ ವಿರುದ್ಧದ ಚಟುವಟಿಕೆಗಳಿಗಾಗಿ” ವಿದೇಶಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಲಾಯರ್ಸ್ ಕಲೆಕ್ಟಿವ್ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲು ಲಾಯರ್ಸ್ ವಾಯ್ಸ್ ಕೋರಿದೆ. ಲಾಯರ್ಸ್ ವಾಯ್ಸ್ ನ ಸಂಯೋಜಕರಾದ ನೀರಜ್ ಅವರು ಬಿಜೆಪಿಯ ಅಖಿಲ ಭಾರತ ಕಾನೂನು ಸೆಲ್ ನ ಸಹ ಸಂಯೋಜಕರು ಆಗಿದ್ದಾರೆ.

ಇಂದಿರಾರವರ ಚಟುವಟಿಕೆಗಳು “ದೇಶದ ಹಿತಾಸಕ್ತಿಗಳಿಗೆ ಹಾನಿಕಾರಕವೆ”?

ಮೇಲ್ನೋಟದಲ್ಲಿಯೇ ಈ ಆರೋಪಗಳು ಸುಳ್ಳೆಂದು ಕಾಣುತ್ತವೆ. ಗೃಹ ಸಚಿವಾಲಯವು ಲಾಯರ್ಸ್ ಕಲೆಕ್ಟಿವ್ 2009, 2011 ಮತ್ತು 2014 ರಲ್ಲಿ ಕರಡು ಮಸೂದೆ ರಚಿಸುವ ಶಾಸನ ಸಭೆಗಳಿಗೆ ಮತ್ತು ಸಂಸದರು ಹಾಗೂ ಮಾಧ್ಯಮದ ಪರವಾಗಿ ವಕಾಲತ್ತು ವಹಿಸಲು, ರ್ಯಾಲಿಗಳು / ಧರಣಿಗಳನ್ನು ಆಯೋಜಿಸಲು ವಿದೇಶಿ ಕೊಡುಗೆಯಿಂದ 13 ಲಕ್ಷ ರೂಪಾಯಿಗಳನ್ನು ಅಕ್ರಮವಾಗಿ ಬಳಸಿದೆ, ಎಂದು ಆರೋಪಿಸಿದೆ.

ನಿಜ ಅಂದರೆ ಯಾವುದೇ ಮಸೂದೆ ರಚನೆಯಾಗಬೇಕಾದರೆ ಹಲವಾರು ಕರಡುಗಳು ಮತ್ತು ಸಂಬಂಧಪಟ್ಟವರ ಸಭೆಗಳ ಮೂಲಕ ನಡೆಯಬೇಕು. ಕರಡು ಶಾಸನ ಸಭೆಗಳು, ರ್ಯಾಲಿಗಳನ್ನು ಆಯೋಜಿಸಿದ್ದು ಕೂಡ ತಾನು ಕಾರ್ಯನಿರ್ವಹಿಸುತ್ತಿರುವ ಎಚ್‌ಐವಿ ಸೊಂಕಿತರಿಗೆ ತಾರತಮ್ಯವಾಗಬಾರದು ಎಂಬ ಮಸೂದೆಗಾಗಿ. ಆನಂದ್ ಗ್ರೋವರ್ ಮೇಲೆ ಆರೋಪಿಸಿರುವ ವಿದೇಶಿ ಕೊಡುಗೆಯೊಂದಿಗೆ ಪ್ರಯಾಣವು ನೊವಾರ್ಟಿಸ್ ಪ್ರಕರಣಕ್ಕೆ ಸಂಬಂಧಿಸಿದೆ. ಇವುಗಳಲ್ಲಿ ಯಾವುದಾದರೂ ರಾಷ್ಟ್ರ ವಿರೋಧಿ ಹೇಗೆ ಆಗುತ್ತದೆ?

ಇಂದಿರಾ ಜೈಸಿಂಗ್ ಅವರು ಸರ್ಕಾರಿ ನೌಕರರಾಗಿದ್ದಾಗ ವಿದೇಶಿ ಹಣವನ್ನು ಸ್ವೀಕರಿಸಿದ್ದಾರೆ ಎಂಬ ಆರೋಪವಿದೆ. ಅದು ಲಾಯರ್ಸ್ ಕಲೆಕ್ಟಿವ್ ಅನುದಾನ ಪಡೆದಿರುವುದೇ ವಿನಃ ಲಂಚವಲ್ಲವೆಂದು ಮತ್ತು ಆ ಅವಧಿಯಲ್ಲಿ ಅವರು ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿರುವ ಕಾರಣದಿಂದ ಲಾಯರ್ಸ್ ಕಲೆಕ್ವಿವ್ ಗೆ ಕೆಲಸ ಮಾಡಿಲ್ಲವೆಂದೂ, ಆ ಅವಧಿಯಲ್ಲಿ ಪಡೆದ ಅನುದಾನಕ್ಕೆ ಸರ್ಕಾರದ ಅನುಮತಿ ಸಹ ಇತ್ತು ಎಂದು ಅವರು 2016 ರಲ್ಲಿಯೇ ಸ್ಪಷ್ಟಪಡಿಸಿದ್ದರು. ಇದರಲ್ಲಿ ಅಪರಾಧವೇನಿದೆ?

ಹಾಗಾದರೆ ಇವರ ಮೇಲೆ ಟಾರ್ಗೆಟ್ ಏಕೆ?

ಏಕೆಂದರೆ 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನರೇಂದ್ರ ಮೋದಿಯವರ ನೀತಿಗಳನ್ನು ಈ ದಂಪತಿಗಳು ನಿರ್ಭಯವಾಗಿ ಟೀಕಿಸುತ್ತಿದ್ದರು. ಜೊತೆಗೆ ಭಾರತೀಯ ಜನತಾ ಪಕ್ಷದ ಅವ್ಯವಹಾರ ಮತ್ತು ಸಂವಿಧಾನ ವಿರೋಧಿ ನಡೆಗಳನ್ನು ಪ್ರಶ್ನಿಸಿದ ಸಂಜೀವ್ ಭಟ್, ತಿಸ್ತಾ ಸೆಟ್ಲವಾದ್ ರವರ ಪರವಾದ ಕೇಸುಗಳನ್ನು ಇಂದಿರಾ ಜೈಸಿಂಗ್ ಮತ್ತು ಆನಂದ್ ಗ್ರೋವರ್ ರವರ ಲಾಯರ್ಸ್ ಕಲೆಕ್ವಿವ್ ನಡೆಸುತ್ತಿದೆ. ಈ ರೀತಿಯ ಪ್ರಜಾತಾಂತ್ರಿಕ ಮತ್ತು ಸಂವಿಧಾನಬದ್ಧವಾದ ಕೆಲಸ ಮಾಡುತ್ತಿರುವುದೇ ಮೋದಿ ಮತ್ತು ಅಮಿತ್ ಶಾರಿಗೆ ತಲೆನೋವಾಗಿದೆ. ಆ ಕಾರಣಕ್ಕಾಗಿಯೇ ಇವರ ಮೇಲೆ ದಾಳಿ ನಡೆಸಲಾಗುತ್ತಿದೆ.

ಭುಗಿಲೆದ್ದ ಪ್ರತಿರೋಧ

ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಆನಂದ್ ಗ್ರೋವರ್ ಅವರ ಮನೆಗಳು ಮತ್ತು ಕಚೇರಿಗಳ ಮೇಲೆ ಸಿಬಿಐ ನಡೆಸಿದ ದಾಳಿಯನ್ನು ಖಂಡಿಸಿ ಸುಮಾರು 200 ಶಿಕ್ಷಣ ತಜ್ಞರು, ಕಾರ್ಯಕರ್ತರು, ಕಲಾವಿದರು ಮತ್ತು ಇತರರು ಹೇಳಿಕೆಗೆ ಸಹಿ ಹಾಕಿದ್ದಾರೆ. ಹಿರಿಯ ವಕೀಲರ ಮೇಲಿನ ದಾಳಿಗಳನ್ನು ಖಂಡಿಸಿ ರಾಜ್ಯಸಭೆಯ ಪ್ರತಿಪಕ್ಷ ಸಂಸದರು ಪಿಎಂ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಈ ದಂಪತಿಗಳ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ನಾಗರಿಕ ಸಮಾಜದ ಪ್ರತಿನಿಧಿಗಳು ಇಂದಿರಾ ಮತ್ತು ಗ್ರೋವರ್ ಮೇಲಿನ ದಾಳಿಯೂ ದೀರ್ಘಕಾಲದಿಂದಲೂ ನಡೆಯುತ್ತಿರುವ ಬೆದರಿಕೆ ಮತ್ತು ಹತ್ತಿಕ್ಕುವಿಕೆಯ ಇತ್ತೀಚೆಗಿನ ಸೇರ್ಪಡೆಗಳಾಗಿವೆ. ಇದು ಅಧಿಕಾರ ದುರಪಯೋಗದ ಹಸಿ ಕ್ರೌರ್ಯವಲ್ಲದೇ ಬೇರೆನಲ್ಲ ಎಂದು ಕಿಡಿಕಾರಿದ್ದಾರೆ.

ಇಂಗ್ಲಿಷ್ ನಲ್ಲಿ ಓದಿ: Who is Indira Jaising and why CBI raid?

 

ಸಹಿ ಮಾಡಿದವರಲ್ಲಿ ಅರ್ಥಶಾಸ್ತ್ರಜ್ಞರಾದ ಅಮಿಯಾ ಕುಮಾರ್ ಬಾಗ್ಚಿ ಮತ್ತು ಜಯತಿ ಘೋಷ್, ಲೇಖಕಿ ಗೀತಾ ಹರಿಹರನ್, ಪತ್ರಕರ್ತರಾದ ನಿತಿನ್ ಸೇಥಿ ಮತ್ತು ಪಮೇಲಾ ಫಿಲಿಪೋಸ್, ಮತ್ತು ಕಲಾವಿದರು ವಿವನ್ ಸುಂದರಂ ಮತ್ತು ಪಾರ್ಥಿವ್ ಷಾ ಪ್ರಮುಖರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...