Homeಕರ್ನಾಟಕಯಾದಗರಿ: ದಬ್ಬಾಳಿಕೆ ನಡೆಸುವ ವಾರ್ಡನ್‌ ಅಮಾನತಿಗೆ ದಲಿತ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ಯಾದಗರಿ: ದಬ್ಬಾಳಿಕೆ ನಡೆಸುವ ವಾರ್ಡನ್‌ ಅಮಾನತಿಗೆ ದಲಿತ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

- Advertisement -
- Advertisement -

ಯಾದಗಿರಿಯ ಸರಕಾರಿ ಮೆಟ್ರಿಕ್ ನಂತರದ (ವೃತಿಪರ) ಬಾಲಕಿಯರ ವಸತಿ ನಿಲಯದಲ್ಲಿ, ದಲಿತ ಬಾಲಕಿರ ಮೇಲೆ ಹಾಸ್ಟೆಲ್ ವಾರ್ಡನ್‌‌‌ ನಡೆಸುತ್ತಿರುವ ದಬ್ಬಾಳಿಕೆ ವಿರುದ್ಧ ನೂರಾರು ವಿದ್ಯಾರ್ಥಿನಿಯರು ಶನಿವಾರ ಪ್ರತಿಭಟನೆ ನಡೆಸಿದ್ದು, ವಾರ್ಡನ್‌‌‌‌‌ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಹಾಸ್ಟೆಲ್ ವಾರ್ಡನ್‌ ಶಾಂತಾಬಾಯಿ ಅವರು ವಿಧ್ಯಾರ್ಥಿನಿಯರ ಮೇಲೆ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಅವರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ವಸತಿ ನಿಲಯದ ವಿಧ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಾಸ್ಟೆಲ್‌‌ನಲ್ಲಿ ಬಾಲಕಿಯರಿಗೆ ಸರಿಯಾದ ಸೌಲಭ್ಯ ನೀಡದೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಸರಿಯಾದ ರೀತಿಯ ಬೆಳಗಿನ ಉಪಹಾರ, ಊಟ, ಕಂಪ್ಯೂಟರ್, ಪುಸ್ತಕ, ಶೌಚಾಲಯ, ಫ್ಯಾನು, ಹಾಸಿಗೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಇಲ್ಲದೆ ಬಾಲಕಿಯರು ಕಾಲ ಕಳೆಯುತ್ತಿದ್ದಾರೆ” ಎಂದು ಜೈ ಭೀಮ್ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾ ಅಧ್ಯಕ್ಷರಾಗಿರುವ ರಾಹುಲ್ ಕೊಲ್ಲೂರ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ವಾರ್ಡನ್‌‌ ಅನ್ನು ತಕ್ಷಣವೆ ಅಮಾನತು ಮಾಡಬೇಕು ಎಂದು ವಿದ್ಯಾರ್ಥಿನಿಯರು ಶನಿವಾರ ಬೆಳಿಗ್ಗೆ ಯಾದಗಿರಿ ಜಿಲ್ಲಾ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾಗಾರ ವಿದ್ಯಾರ್ಥಿನಿಯರೊಂದಿಗೆ ಜಿಲ್ಲಾಧಿಕಾರಿ ಅವರು ಸಂಜೆ ಆರು ಗಂಟೆಗೆ ಹಾಸ್ಟೆಲ್‌ಗೆ ಬಂದು ಭೇಟಿಯಾಗುವುದಾಗಿ ಹೇಳಿದ್ದರು. ಅವರ ಮಾತಿನಂತೆ ವಿದ್ಯಾರ್ಥಿನಿಯರು ಪ್ರತಿಭಟನೆ ಕೈಬಿಟ್ಟು ತೆರಳಿದ್ದರು.

ಆದರೆ ಸಂಜೆ ವೇಳೆ ಜಿಲ್ಲಾಧಿಕಾರಿ ಹಾಸ್ಟೆಲ್‌ಗೆ ಬರದೆ ಇರುವುದರಿಂದ ವಿದ್ಯಾರ್ಥಿನಿರು ತಹಶೀಲ್ದಾರ್‌ ಕಚೇರಿ ಮುಂದೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ ನಂತರ ರಾತ್ರಿ 8:45ಕ್ಕೆ ವಸತಿ ನಿಲಯಕ್ಕೆ ತೆರಳಿ ಬಾಲಕಿಯರ ಬೇಡಿಕೆ ಈಡೇರಿಸುವುದಾಗಿ ಹೇಳಿ ವಾರ್ಡನ್ ಅವರನ್ನು ಅಮಾನತು ಮಾಡುವುದಾಗಿ ಭರವಸೆ ನೀಡಿದ್ದಾರೆ.

“ತಮ್ಮ ವಸತಿ ನಿಲಯದಲ್ಲಿನ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿನಿಯರು ಈ ಹಿಂದೆಯೆ ‘ತಾಲೂಕಿನ ಸಮಾಜ ಕಲ್ಯಾಣ ಇಲಾಖೆ’ ತೆರಳಿ ಮನವಿಯನ್ನು ನೀಡಿದ್ದರು. ಆದರೆ ಅಧಿಕಾರಿಗಳು ಅವರ ಮನವಿ ಪತ್ರವನ್ನು ವಿದ್ಯಾರ್ಥಿಗಳ ಮುಂದೆಯೇ ಹರಿದು ಹಾಕಿ ದರ್ಪ ಮರೆದಿದ್ದರು ಎಂದು ವಿಧ್ಯಾರ್ಥಿಗಳು ತಿಳಿಸಿದ್ದಾಗಿ” ರಾಹುಲ್ ಕೊಲ್ಲೂರ್‌ ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಹಾಸ್ಟೆಲ್ ವಾರ್ಡನ್‌ ಅಮಾನತಿನ ಬಗ್ಗೆ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರು ಮಾತನಾಡಿ, “ಜಿಲ್ಲಾಧಿಕಾರಿ ಅವರು ವಾರ್ಡನ್ ಅವರನ್ನು ಅಮಾನತು ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈ ವರೆಗೆ ಅಧೀಕೃತ ಆದೇಶ ಪತ್ರ ಹೊರಡಿಸಿಲ್ಲ” ಎಂದು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್. ಆರ್ ಅವರಿಗೆ ಕರೆ ಮಾಡಿತ್ತಾದರೂ ಅವರು ಕರೆಯನ್ನು ಸ್ವೀಕರಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...