Homeಫ್ಯಾಕ್ಟ್‌ಚೆಕ್‘ಮದುರೈ ಏಮ್ಸ್ 95% ಕಾಮಗಾರಿ ಮುಗಿದಿದೆ’: ತಮಿಳುನಾಡಿಗೆ ತೆರಳಿ ಹಸಿಹಸಿ ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ...

‘ಮದುರೈ ಏಮ್ಸ್ 95% ಕಾಮಗಾರಿ ಮುಗಿದಿದೆ’: ತಮಿಳುನಾಡಿಗೆ ತೆರಳಿ ಹಸಿಹಸಿ ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ

ಆಸ್ಪತ್ರೆ ಕಟ್ಟಡದ ಕಾಮಗಾರಿ ಇನ್ನೂ ಆರಂಭವೇ ಆಗಿಲ್ಲ ಎಂದು ಪ್ರತಿಪಕ್ಷಗಳು ವಿಡಿಯೊ ಹಾಗೂ ಚಿತ್ರ ಸಮೇತ ಬಹಿರಂಗಪಡಿಸಿದೆ

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಮಿಳುನಾಡಿನ ಮದುರೈಯಲ್ಲಿ ನಿರ್ಮಿಸಲಾಗುತ್ತಿರುವ ಏಮ್ಸ್ (AIIMS) ಯೋಜನೆ ಕಾಮಗಾರಿಯ ಬಗ್ಗೆ ಇತ್ತೀಚೆಗೆ ಮಾಹಿತಿ ಹಂಚಿಕೊಂಡು, ಏಮ್ಸ್‌ನ 95% ಕಾಮಗಾರಿಗಳು ಪೂರ್ಣಗೊಂಡಿದೆ ಎಂದು ಹೇಳಿಕೆ ನೀಡಿದ್ದರು.

ಅವರು ಸೆಪ್ಟೆಂಬರ್ 22ರ ಗುರುವಾರದಂದು ಮದುರೈ ಮತ್ತು ಶಿವಗಂಗಾಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ  ಮಧುರೈನಲ್ಲಿ ಕೈಗಾರಿಕೋದ್ಯಮಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡುತ್ತಾ, “ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ 95% ರಷ್ಟು ಕೆಲಸ ಪೂರ್ಣಗೊಂಡಿದೆ. ಶೀಘ್ರದಲ್ಲಿಯೇ ಇದನ್ನು ಪ್ರಧಾನಿಯವರು ಜನರಿಗೆ ಅರ್ಪಿಸಲಿದ್ದಾರೆ” ಎಂದು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆ.ಪಿ ನಡ್ಡ ಅವರು ಹೇಳಿಕೆಯನ್ನು ಬಿಜೆಪಿ ನಾಯಕರು ಹಾಗೆಯೆ ವೈರಲ್ ಕೂಡಾ ಮಾಡಿದ್ದರು. AIIMS ನ ಈ ಕಾಮಗಾರಿಯು ಮದುರೈ ಬಳಿಯ ತೋಪ್ಪೂರ್‌ನಲ್ಲಿ ನಡೆಯಬೇಕಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಈ ಸುದ್ದಿಯು ವೈರಲ್ ಆಗುತ್ತಿದ್ದಂತೆ ವಿರೋಧ ಪಕ್ಷಗಳು ಜೆಪಿ ನಡ್ಡಾ ಅವರು ಹೇಳಿರುವ ಪ್ರದೇಶಕ್ಕೆ ತೆರಳಿ ನಿಜಾಂಶವೇನು ಎಂಬುವುದನ್ನು ಹೊರಗೆಡವಿದ್ದಾರೆ.

ಇದನ್ನೂಓದಿ: ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

ಜೆ.ಪಿ.ನಡ್ಡಾ ಹೇಳಿಕೆ ಎಷ್ಟು ಸತ್ಯ, ಎಷ್ಟು ಸುಳ್ಳು ಎಂದು ವಾಸ್ತವವನ್ನು ಪರಿಶೀಲಿಸೋಣ
ಫ್ಯಾಕ್ಟ್‌ಚೆಕ್ :

ಮದುರೈನ ಏಮ್ಸ್‌ನ 95% ಕಾಮಗಾರಿ ಪೂರ್ಣಗೊಂಡಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ  ಹೇಳಿಕೆ ಬೆನ್ನಲ್ಲೆ ಕಾಂಗ್ರೆಸ್ ಸಂಸದ ಮಣಿಕ್ಕಂ ಠಾಗೋರ್ ಕಾಮಗಾರಿ ಸ್ಥಳಕ್ಕೆ ತೆರಳಿ ವಿವರಗಳನ್ನು ಸಂಗ್ರಹಿಸಿ, ವಿಡಿಯೋ ಚಿತ್ರಗಳನ್ನೂ ಟ್ವೀಟ್ ಮಾಡಿದ್ದಾರೆ. ಆದರೆ ಅಲ್ಲಿ ಆಸ್ಪತ್ರೆ ಕಟ್ಟಡ ಕಾಮಗಾರಿ ಇನ್ನೂ ಆರಂಭವಾಗಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ-ಎಂ ಮತ್ತು ಕಾಂಗ್ರೆಸ್‌ನ ನಾಯಕರು ಜೆಪಿ ನಡ್ಡಾ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮದುರೈ ಕ್ಷೇತ್ರದ ಸಂಸದ ಸು ವೆಂಕಟೇಶನ್ ಮತ್ತು ವಿರುದುನಗರ ಸಂಸದ, ಕಾಂಗ್ರೆಸ್ ನಾಯಕ ಬಿ. ಮಾಣಿಕಂ ಟ್ಯಾಗೋರ್ ಅವರು ಏಮ್ಸ್ ನಿರ್ಮಾಣವಾಗಬೇಕಿರುವ ಜಾಗದ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿಗೆ ಭೇಟಿ ನೀಡಿದ್ದ ನಡ್ಡಾ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸುತ್ತಾ,“ಏಮ್ಸ್ ಯೋಜನೆಗೆ 1,264 ಕೋಟಿ ರೂ.ಗಳು ಮಂಜೂರಾಗಿದೆ ಎಂದು ಹೇಳಲು ಹರ್ಷಪಡುತ್ತೇನೆ. ಇಂದು 95%ದಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರವೇ ಪ್ರಧಾನಿ ಅದನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ”

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

“ಸಾಂಕ್ರಾಮಿಕ ರೋಗಗಳ ವಿಭಾಗಕ್ಕೆ ಹೆಚ್ಚುವರಿ 164 ಕೋಟಿ ರೂ.ಗಳನ್ನು ಮಂಜೂರುಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ 750 ಹಾಸಿಗೆಗಳು ಹಾಗೂ ಇವುಗಳ ಪೈಕಿ 250 ಐಸಿಯು ಬೆಡ್‍ಗಳು ಇರುತ್ತವೆ” ಎಂದೂ ನಡ್ಡಾ ಹೇಳಿದ್ದರು. ಆದರೆ ನಡ್ಡಾ ಮಾತುಗಳನ್ನು ಒಪ್ಪದ ಕಾಂಗ್ರೆಸ್ ಸಂಸದ ಠಾಗೋರ್ ಶುಕ್ರವಾರ ಸರಣಿ ಟ್ವೀಟ್ ಮಾಡಿದ್ದಾರೆ.

‘‘ನಡ್ಡಾ, ಅವರು ‘ತಮಿಳುನಾಡಿನ ಮದುರೆಯ AIIMS ನ ಕೆಲಸ 95% ಮುಗಿದಿದೆ, ಸದ್ಯವೇ ಪ್ರಧಾನಿಯವರು ಅದನ್ನು ಉದ್ಘಾಟಿಸಲಿದ್ದಾರೆ’ ಎಂದು ಘೋಷಿಸಿದರು. ಹೊಸ ಏಮ್ಸ್ ನೋಡಲು ಜನ ಓಡಿದರು. ನೋಡುವುದೇನು 2019 ರಲ್ಲಿ ಮೋದಿ ಸಾಹೇಬರು ಹಾಕಿದ ಅಡಿಗಲ್ಲು ಚಿಗುರಿ ಹೆಮ್ಮರವಾಗಿಯೇ ಇಲ್ಲ. ಅಲ್ಲಿರುವುದು ಅಡಿಗಲ್ಲು ಮಾತ್ರ” ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

“ಪ್ರೀತಿಯ ನಡ್ಡಾಜೀ, ಮದುರೈ ಏಮ್ಸ್ 95% ಕಾಮಗಾರಿ ಪೂರ್ಣಗೊಂಡಿದ್ದಕ್ಕಾಗಿ ಧನ್ಯವಾದಗಳು. ನಾನು ತೊಪ್ಪೂರು ಸೈಟ್‍ನಲ್ಲಿ ಒಂದು ಗಂಟೆ ಹುಡುಕಿದೆ, ಆದರೆ ಏನೂ ದೊರೆಯಲಿಲ್ಲ, ಯಾರೋ ಕಟ್ಟಡವನ್ನು ಕದ್ದಿರಬೇಕು” ಎಂದು ಮಾಣಿಕಂ ಟ್ಯಾಗೋರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

“ನಡ್ಡಾ ಅವರು ಮಧುರೈನಲ್ಲಿ ಮಾತನಾಡಿದ್ದಾರೆ ಹಾಗೂ 95% ದಷ್ಟು ಕಾಮಗಾರಿ ಮುಗಿದಿದೆ ಎಂದಿದ್ದಾರೆ. ಈ ರೀತಿ ಕಾಮಗಾರಿ ಪೂರ್ಣದ ಬಗ್ಗೆ ಸುಳ್ಳು ಹೇಳಿರುವುದು ಅಚ್ಚರಿ ಮೂಡಿಸಿದೆ. ಇದು ಅವರು ತಮಿಳುನಾಡಿನ ಜನರಿಗೆ ವಂಚಿಸುವ ವಿಧಾನವಾಗಿದೆ” ಎಂದು ವೀಡಿಯೋವೊಂದರಲ್ಲಿ ಠಾಗೋರ್ ಹೇಳಿದ್ದಾರೆ.

ಗೂಗಲ್ ಸಹಾಯದಿಂದ ಗೂಗಲ್ ಮ್ಯಾಪ್‌ ಮೂಲಕ ಸ್ಥಳ ಪರಿಶೀಲನೆಯನ್ನು ಮಾಡಿದಾಗ, ನಡ್ಡಾ ಪ್ರಸ್ತಾಪಿಸಿದ ನಿವೇಶನದಲ್ಲಿ ಯಾವುದೇ ಕಟ್ಟಡ ಕಾಮಗಾರಿಗಳು ನಡೆಯುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡಿಗೆ ಭೇಟಿ ನೀಡಿದ್ದ ವೇಳೆ ನಡ್ಡಾ ಮದುರೈಯಲ್ಲಿ ನಿರ್ಮಿಸಲಾಗುತ್ತಿರುವ ಏಮ್ಸ್ (AIIMS) ಯೋಜನೆ ಕಾಮಗಾರಿ 95% ಪೂರ್ಣಗೊಂಡಿದೆ ಎಂದು ಸುಳ್ಳು ಹೇಳಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...