Homeಮುಖಪುಟರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌‌ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ ಪಕ್ಷದ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್, ದಿಗ್ವಿಜಯ ಸಿಂಗ್‌ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

“ಅಶೋಕ್ ಗೆಹ್ಲೋಟ್‌‌ ಅವರು ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದಿದ್ದಾರೆ. ಸೆಪ್ಟೆಂಬರ್ 30 ರ ಮೊದಲು ಇತರ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ ಸಿಂಗ್, ಕೆಸಿ ವೇಣುಗೋಪಾಲ್ ರೇಸ್‌ನಲ್ಲಿದ್ದಾರೆ” ಎಂದು ಕಾಂಗ್ರೆಸ್‌‌ ಮುಖಂಡರೊಬ್ಬರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಶೋಕ್‌ ಗೆಹ್ಲೋಟ್ ನಡೆದುಕೊಂಡ ರೀತಿ ಪಕ್ಷದ ನಾಯಕತ್ವಕ್ಕೆ ಸರಿ ಹೋಗಿಲ್ಲ. ನಾಯಕತ್ವ ಅವರ ಬಗ್ಗೆ ತುಂಬಾ ಅಸಮಾಧಾನ ಹೊಂದಿದೆ” ಎಂದು ಪಕ್ಷದ ಸಿಡಬ್ಲ್ಯೂಸಿ ಸದಸ್ಯರಾಗಿರುವ ಇನ್ನೊಬ್ಬ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

ರಾಷ್ಟ್ರೀಯ ಕಾಂಗ್ರೆಸ್‌‌‌‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಶೋಕ್‌‌‌ ಗೆಹ್ಲೋಟ್‌‌‌ ಅವರು ಘೋಷಿಸಿದ ನಂತರ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಬಿಕ್ಕಟ್ಟು ಎದುರಾಗಿದೆ. ಇದರ ನಂತರ ಸಭೆ ನಡೆಸಿರುವ ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯ ನಾಮನಿರ್ದೇಶನ ಪ್ರಕ್ರಿಯೆ ಮುಗಿಯುವವರೆಗೆ (ಸೆಪ್ಟೆಂಬರ್ 30) ರಾಜ್ಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಚರ್ಚೆ ನಡೆಯುವ ಪಕ್ಷದ ಸಭೆಗೆ ಮುನ್ನ 82 ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ತಮ್ಮ ಪ್ರಯತ್ನವನ್ನು ದೃಢಪಡಿಸಿದ್ದರಿಂದ, ಸಚಿನ್ ಪೈಲಟ್ ಅವರನ್ನು ಮುಂದಿನ ರಾಜಸ್ಥಾನ ಸಿಎಂ ಆಗಿ ನೇಮಿಸಲಾಗುತ್ತದೆ ಎಂಬ ಊಹಾಪೋಹಗಳು ಇದ್ದವು. ಆದರೆ ಅಶೋಕ್ ಗೆಹ್ಲೋಟ್ ನಿಷ್ಠಾವಂತರಿಗೆ ಇದು ಅಸಮಾಧಾನ ತಂದಿದೆ

ಹೀಗಾಗಿ, ಕಾಂಗ್ರೆಸ್ ನಾಯಕತ್ವ ಮತ್ತು ಅಶೋಕ್‌ ಗೆಹ್ಲೋಟ್ ನಿಷ್ಠಾವಂತರ ನಡುವಿನ ಬಿಕ್ಕಟ್ಟಿಗೆ ಕಾರಣವಾಯಿದೆ. ಪಕ್ಷದ ಹೈಕಮಾಂಡ್ ತನ್ನ ಪಕ್ಷದ ವೀಕ್ಷಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಅವರಿಂದ ರಾಜಸ್ಥಾನದ ರಾಜಕೀಯ ಪರಿಸ್ಥಿತಿಯ ಬಗ್ಗೆ ವರದಿಯನ್ನು ಕೇಳಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮುಂದುವರಿಯಬೇಕು ಎಂದ ರಾಜಸ್ಥಾನದ ಕಾಂಗ್ರೆಸ್ ಶಾಸಕರು!

ಈ ಮಧ್ಯೆ, ರಾಜಸ್ಥಾನ ಸಿಎಂ ಹುದ್ದೆಗೆ ಬಿಕ್ಕಟ್ಟು ಭುಗಿಲೆದ್ದಿದ್ದು, ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್‌ನಿಂದ ಹೊರಗುಳಿಯುತ್ತಿದ್ದಾರೆ.

ಬಹಳ ಮುಖ್ಯವಾಗಿ ಕಾಂಗ್ರೆಸ್‌ ಉನ್ನತ ನಾಯಕತ್ವವು ತನ್ನ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನೀತಿಯ ಬಗ್ಗೆ ದೃಢವಾಗಿರುವುದರಿಂದ, ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥರಾದರೆ ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲು ಕಡಿಮೆ ಅವಕಾಶವಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...