Homeಕರ್ನಾಟಕಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು...

ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು ವಶಕ್ಕೆ

ಇದು ಪೂರ್ವಾಗ್ರಹ ಪೀಡಿತವಾದ ದಾಳಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ

- Advertisement -
- Advertisement -

ಕರ್ನಾಟಕ ಸೇರಿದಂತೆ ದೇಶದ ಎಂಟು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ದಾಳಿ ನಡೆಸುತ್ತಿದೆ. 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿಚಾರಣೆಯನ್ನು ಆಧರಿಸಿ ಬಂಧಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ, ಪರ್ಭಾನಿ ಜಿಲ್ಲೆಗಳಲ್ಲಿ; ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಜಿಲ್ಲೆಗಳು; ಅಸ್ಸಾಂನ ನಾಗರ್ಬೆರಾ; ಬುಲಂದ್‌ಶಹರ್‌ನ ಕಸ್ಬಾ ಸಯಾನ, ಸರೂರ್‌ಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೀರತ್‌ನ ಲಿಸಾರಿ ಗೇಟ್ ಪ್ರದೇಶ; ಮತ್ತು ದೆಹಲಿಯ ಹಲವಾರು ಸ್ಥಳಗಳಲ್ಲಿ ದಾಳಿಗಳು ನಡೆದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮುಂಜಾನೆಯೇ ದಾಳಿ ಆರಂಭವಾಗಿದ್ದು, ಅದು ಮುಂದುವರಿದಿದೆ. ಕೆಲವು ರಾಜ್ಯಗಳಲ್ಲಿ ತಮ್ಮ ಸೂಚನೆಯ ಮೇರೆಗೆ ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತದ ರಾಷ್ಟ್ರಪತಿ ‘ಸೆರಗು’ ಧರಿಸುತ್ತಾರೆ, ಅದು ಪಿಎಫ್‌ಐನ ಪಿತೂರಿಯೇ?: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ಅಸ್ಸಾಂನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) (ವಿಶೇಷ ಶಾಖೆ) ಹಿರೇನ್ ನಾಥ್ ಅವರು ನಗರ್‌ಬೆರಾ ಪ್ರದೇಶದಿಂದ ಐವರು ಪಿಎಫ್‌ಐ ಸದಸ್ಯರನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಯುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ. ಎನ್‌ಐಎ ಇತ್ತೀಚೆಗೆ ನಡೆಸಿದ ದಾಳಿಯಲ್ಲಿ 11 ಮಂದಿಯನ್ನು ಬಂಧಿಸಲಾಗಿತ್ತು.

ಪಶ್ಚಿಮ ಉತ್ತರ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. “ನಾವು ಅವರನ್ನು  ಪರಿಶೀಲನೆ ಮಾಡುತ್ತಿದ್ದೇವೆ. ಸದ್ಯಕ್ಕೆ ಅವರಲ್ಲಿ ಯಾರೊಬ್ಬರ ವಿರುದ್ಧವೂ ಯಾವುದೇ ಬಂಧನ ಮೆಮೊಗಳನ್ನು ದಾಖಲಿಸಲಾಗಿಲ್ಲ. ಅವರು ಪಿಎಫ್‌ಐ ಸದಸ್ಯರಿದ್ದು, ಈ ಹಿಂದೆ ಬಂಧಿತರಾದ ಪಿಎಫ್‌ಐ ಸದಸ್ಯರನ್ನು ಪ್ರಶ್ನಿಸಿದ ನಂತರ ನಮಗೆ ಹೊಸ ಮಾಹಿತಿ ಸಿಕ್ಕಿತ್ತು. ಹೀಗಾಗಿ ದಾಳಿ ನಡೆಸುತ್ತಿದ್ದೇವೆ” ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ ಮತ್ತು ಪರ್ಭಾನಿ ಜಿಲ್ಲೆಗಳಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಭಾಗದಲ್ಲಿ ದಾಳಿ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಐವರು, ಬಳ್ಳಾರಿಯಲ್ಲಿ ನಾಲ್ವರು, ಹುಬ್ಬಳ್ಳಿಯಲ್ಲಿ ಇಬ್ಬರು, ಕೋಲಾರ ಜಿಲ್ಲೆಯಿಂದ ಆರು ಮಂದಿಯನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲಾಧ್ಯಕ್ಷ ಮತ್ತು ಕಲಬುರಗಿ ಮಾಧ್ಯಮ ಸಂಯೋಜಕನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ, ನಿಜಾಮುದ್ದೀನ್, ರೋಹಿಣಿ, ಜಾಮಿಯಾ ಮತ್ತು ಶಾಹಿನ್ ಬಾಗ್‌ನಲ್ಲಿ ದಾಳಿಗಳು ನಡೆಯುತ್ತಿವೆ. ಬಂಧಿತ ಪಿಎಫ್‌ಐ ಸದಸ್ಯರ ವಿಚಾರಣೆ ವೇಳೆ ಎನ್‌ಐಎಗೆ ಹೊಸ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ವಾರದ ಆರಂಭದಲ್ಲಿ, ಪಿಎಫ್‌ಐನ 106 ಕ್ಕೂ ಹೆಚ್ಚು ಸದಸ್ಯರನ್ನು ಎನ್‌ಐಎ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸೋಮವಾರ ಇಬ್ಬರು ಪಿಎಫ್‌ಐ ಸದಸ್ಯರ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿದೆ. ಸದ್ಯಕ್ಕೆ, ಎನ್‌ಐಎ ಒಟ್ಟು 19 ಪಿಎಫ್‌ಐ ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

“2010-2011ರಲ್ಲಿ ಸುಮಾರು 46 ಆರೋಪಿಗಳನ್ನು ಬಂಧಿಸಿ ನಂತರ ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಎನ್ಐಎ ಹೇಳಿದೆ” ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಸುಮಾರು 355 ಪಿಎಫ್‌ಐ ಸದಸ್ಯರ ವಿರುದ್ಧ ಈಗಾಗಲೇ ಎನ್‌ಐಎ ಚಾರ್ಜ್‌ಶೀಟ್ ಮಾಡಿದೆ.

ಪಿಎಫ್‌ಐ ವಿರುದ್ಧ ಎನ್‌ಐಎ ನಡೆಸುತ್ತಿರುವ ದಾಳಿಯು ಪೂರ್ವಾಗ್ರಹ ಪೀಡಿತವಾದದ್ದು ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ದಾಳಿಗೆ ಏನು ಕಾರಣ ಎಂಬ ಬಗ್ಗೆ ಎನ್‌ಐಎ ಏನೂ ಹೇಳುತ್ತಿಲ್ಲ. ಪೂರ್ವಾಗ್ರಹ ಪೀಡಿತರಾಗಿ ದಾಳಿ ನಡೆಸುತ್ತಿದೆ. ಮುನ್ಸೂಚನಾ ಕ್ರಮವಾಗಿ ಶಾಂತಿ ಕದಡುವ ಪ್ರಯತ್ನ ಆಗಬಹುದು ಎಂದು ಐಪಿಸಿ 107 ಅಡಿಯಲ್ಲಿ ಬಂಧಿಸುತ್ತಿದ್ದಾರೆ” ಎಂದು ಹೇಳಿದರು.

“ಆರೆಸ್ಸೆಸ್‌ ಮತ್ತು ಬಜರಂಗದಳ ಇಲ್ಲಿವರೆಗೆ ಬಹಿರಂಗವಾಗಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸುತ್ತಿದೆ. ವಿಜಯದಶಮಿ ದಿನ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಸಾವಿರಾರು ಶಸ್ತ್ರಾಸ್ತ್ರಗಳನ್ನು ಜೋಡಿಸಿಕೊಂಡು ಪೂಜೆ ಮಾಡುತ್ತಾರೆ. ಈ ಶಸ್ತ್ರಾಸ್ತ್ರಗಳ ಲೈಸನ್ಸ್‌ ಯಾರ ಹೆಸರಿನಲ್ಲಿದೆ ಎಂಬುವುದನ್ನು ಎನ್‌ಐಎ ಇಲ್ಲಿವರೆಗೂ ಪ್ರಶ್ನೆ ಮಾಡಿಲ್ಲ” ಎಂದು ಭಾಸ್ಕರ್‌ ಪ್ರಸಾದ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

“ಪಿಎಫ್‌ಐ ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಪೆನ್ನು, ಪೇಪರ್‌, ಕಂಪ್ಯೂಟರ್‌ಗಳು ಬಿಟ್ಟರೆ ಈವರೆಗೂ ಒಂದು ರೇಝರ್‌ ಕೂಡಾ ಎನ್‌ಐಎ‌ಗೆ ಸಿಕ್ಕಿಲ್ಲ. ಆದರೆ ಮಾಧ್ಯಮಗಳು ಮಾತ್ರ ಭಯಂಕರವಾಗಿರುವು ಏನೋ ಸಿಕ್ಕಿದೆ ಎಂದು ಹೇಳುತ್ತಿವೆ. ಆದರೆ ಅದು ಏನು ಎಂದು ಅವುಗಳು ಹೇಳುತ್ತಿಲ್ಲ. ಅಷ್ಟೆ ಅಲ್ಲದೆ, ಎನ್‌ಐಎ ಕೂಡಾ ಒಂದೇ ಒಂದು ಸಣ್ಣ ವಿಚಾರವನ್ನು ಅಧೀಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ ಮಾಧ್ಯಮಗಳು ಮಾತ್ರ ಎನ್‌ಐಎ ಹೇಳದೆ ಇರುವುದನ್ನು ಮಾಧ್ಯಮಗಳು ಹೇಳುತ್ತಿವೆ. ಯಾಕೆಂದರೆ ಈ ಮಾಧ್ಯಮಗಳು ಎಲ್ಲವೂ ಬಿಜೆಪಿ ಸಾಕಿಕೊಂಡಿರುವವುಗಳಾಗಿವೆ” ಎಂದು ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...