Homeಚಳವಳಿಚಿಕಿತ್ಸೆಗೆ ಹೈದರಾಬಾದ್‌‌‌ಗೆ ತೆರಳಿದರೆ ಚಾರ್ಜ್‌ಶೀಟ್‌‌ ರೂಪಿಸುವುದು ವಿಳಂಬವಾಗುತ್ತದೆ: ವರವರ ರಾವ್‌‌ ಅರ್ಜಿ ತಿರಸ್ಕರಿಸಿದ NIA...

ಚಿಕಿತ್ಸೆಗೆ ಹೈದರಾಬಾದ್‌‌‌ಗೆ ತೆರಳಿದರೆ ಚಾರ್ಜ್‌ಶೀಟ್‌‌ ರೂಪಿಸುವುದು ವಿಳಂಬವಾಗುತ್ತದೆ: ವರವರ ರಾವ್‌‌ ಅರ್ಜಿ ತಿರಸ್ಕರಿಸಿದ NIA ಕೋರ್ಟ್

2018ರ ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಹಿಂಸಾಚಾರ ಪ್ರಕರಣ

- Advertisement -
- Advertisement -

ಕಣ್ಣಿನ ಪೊರೆ ಚಿಕಿತ್ಸೆಗೆ ಒಳಗಾಗಲು ಮೂರು ತಿಂಗಳು ಹೈದರಾಬಾದ್‌‌ಗೆ ತೆರಳಿದರೆ 2018ರ ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಹಿಂಸಾಚಾರ ಪ್ರಕರಣದ ಚಾರ್ಜ್‌‌ಶೀಟ್‌ ರೂಪಿಸುವುದು ವಿಳಂಬವಾಗಲಿದೆ ಎಂದು ಹೇಳಿರುವ ವಿಶೇಷ ನ್ಯಾಯಾಲಯವು, ಕ್ರಾಂತಿಕಾರಿ ಕವಿ ವರವರ ರಾವ್ ಅವರ ಅರ್ಜಿಯನ್ನು ತಿರಸ್ಕರಿಸಿದೆ.

ವಿಶೇಷ ನ್ಯಾಯಾಧೀಶ ರಾಜೇಶ್ ಕಟಾರಿಯಾ ಅವರು ವರವರ ರಾವ್ ಅವರಿಗೆ ಜಾಮೀನು ಮಂಜೂರು ಮಾಡಿರುವ ಇತ್ತೀಚಿನ ಸುಪ್ರೀಂಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ, ಇದರಲ್ಲಿ ಮೂರು ತಿಂಗಳೊಳಗೆ ಚಾರ್ಜ್‌ಶೀಟ್‌ ರೂಪಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗೌರವಾನ್ವಿತ ಸುಪ್ರೀಂಕೋರ್ಟ್‌ ಹೊರಡಿಸಿದ ಮೇಲಿನ ಆದೇಶದ ದೃಷ್ಟಿಯಿಂದ, ಈ ನ್ಯಾಯಾಲಯವು ಆರೋಪಿಗಳ ವಿರುದ್ಧ ಆರೋಪಗಳನ್ನು ರೂಪಿಸುವ ಅಗತ್ಯವಿದೆ. ಆದೇಶದ ಪ್ರಕಾರ ಮೂರು ತಿಂಗಳೊಳಗೆ ಏಕಕಾಲದಲ್ಲಿ ಬಾಕಿ ಉಳಿದಿರುವ ಅರ್ಜಿಯನ್ನು ನಿರ್ಧರಿಸುವ ಅಗತ್ಯವಿದೆ. ಹಾಗಾಗಿ ಅರ್ಜಿದಾರರು ಹೈದರಾಬಾದ್‌ನಲ್ಲಿ ಮೂರು ತಿಂಗಳ ಕಾಲ ಹೋಗಿ ಉಳಿಯಲು ಅನುಮತಿಸಿದರೆ, ಚಾರ್ಜ್‌‌ಶೀಟ್‌‌ ರಚನೆಯು ದೀರ್ಘವಾಗಿರುತ್ತದೆ” ಎಂದು ನ್ಯಾಯಾಲಯವು ಹೇಳಿದೆ.

ಇದನ್ನೂ ಓದಿ: ಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

ಆಗಸ್ಟ್ 10 ರಂದು ಸುಪ್ರೀಂಕೋರ್ಟ್ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ನೀಡಿತು. ಮುಂದಿನ ವಾರ ಹೈದರಾಬಾದ್‌ನಲ್ಲಿ ಅವರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ವಿಶೇಷ ಎನ್‌ಐಎ ನ್ಯಾಯಾಲಯವನ್ನು ಸಂಪರ್ಕಿಸಲು ಅವರಿಗೆ ಅನುಮತಿ ನೀಡಿತ್ತು.

ಸುಪ್ರೀಂಕೋರ್ಟ್‌ನ ತೀರ್ಪಿನ ಪರಿಣಾಮವಾಗಿ, ವರವರ ರಾವ್ ಅವರು ಮೂರು ತಿಂಗಳ ಕಾಲ ಹೈದರಾಬಾದ್‌ಗೆ ಪ್ರಯಾಣಿಸಲು ಮತ್ತು ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅನುಮತಿ ಕೋರಿ ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಅವರು, ಹೈದರಾಬಾದ್‌ನಲ್ಲಿ ತನಗೆ ಸಿಗುವ ಉಚಿತ ಚಿಕಿತ್ಸೆಗೆ ಹೋಲಿಸಿದ, ಮುಂಬೈನಲ್ಲಿ ದುಭಾರಿ ವೆಚ್ಚವಾಗಲಿದೆ ಎಂದು ಉಲ್ಲೇಖಿಸಿದರು.

ಆದರೆ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಶೆಟ್ಟಿ ಅವರು ಆಗಸ್ಟ್ 8 ರ ಆದೇಶದ ಮೇಲೆ ವಿಧಿಸಲಾದ ಜಾಮೀನು ಷರತ್ತುಗಳನ್ನು ಉಲ್ಲೇಖಿಸಿ,“ಟ್ರಯಲ್ ಕೋರ್ಟ್‌ನಿಂದ ಎಕ್ಸ್‌ಪ್ರೆಸ್ ಅನುಮತಿಯಿಲ್ಲದೆ” ಅವರು ಮುಂಬೈನಿಂದ ಹೊರಹೋಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

“ಹೈದರಾಬಾದ್‌ನಲ್ಲಿ ಚಿಕಿತ್ಸೆ ಪಡೆಯಲು ವರವರ ರಾವ್ ಅವರ ಪ್ರಾಥಮಿಕ ಕಾರಣವೆಂದರೆ ಚಿಕಿತ್ಸಾ ವೆಚ್ಚದಲ್ಲಿನ ವ್ಯತ್ಯಾಸವಾಗಿದೆ. ಅರ್ಜಿದಾರನಿಗೆ ಮುಂಬೈನಲ್ಲಿ ಉತ್ತಮ ಚಿಕಿತ್ಸೆ ಸಿಗುವುದಿಲ್ಲ ಎಂಬುದು ಪ್ರಕರಣವಲ್ಲ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ವರವರ ರಾವ್ ಮತ್ತು ಇತರ 14 ಹೋರಾಟಗಾರರು ನಿಷೇಧಿತ ಸಿಪಿಐ(ಮಾವೋವಾದಿ)ಯ ಅಜೆಂಡಾವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಎನ್‌ಐಎ ಆರೋಪಿಸಿದೆ. ಪ್ರಾಥಮಿಕವಾಗಿ ಅವರ ಎಲೆಕ್ಟ್ರಾನಿಕ್ ಸಾಧನಗಳಿಂದ ವಶಪಡಿಸಿದ ಪತ್ರಗಳು ಮತ್ತು ಇಮೇಲ್‌ಗಳ ಆಧಾರದ ಮೇಲೆ ಅವರ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ-ತಡೆಗಟ್ಟುವಿಕೆ-ಕಾಯಿದೆ’ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2017ರ ಡಿಸೆಂಬರ್ 31 ರಂದು ಪುಣೆಯಲ್ಲಿ ಎಲ್ಗಾರ್ ಪರಿಷತ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕ್ರಿಮಿನಲ್ ಪಿತೂರಿಯ ಭಾಗವಾಗಿ ಆಯೋಜಿಸಲಾಗಿದೆ ಎಂದು ಎನ್‌ಐಎ ಆರೋಪಿಸಿದೆ. ಸಮಾರಂಭದಲ್ಲಿ ಮಾಡಲಾದ ಭಾಷಣವು, ಮರುದಿನ ಭೀಮಾ ಕೋರೆಗಾಂವ್‌ನಲ್ಲಿ ನಡೆದ ಜಾತಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಎನ್‌ಐಎ ಆರೋಪಿಸಿದೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್‌: ಫೆಬ್ರವರಿ 5 ರವರೆಗೆ ಹೋರಾಟಗಾರ ವರವರ ರಾವ್ ಅವರ ಜಾಮೀನು ಅವಧಿ ವಿಸ್ತರಣೆ

ಹೋರಾಟಗಾರರಲ್ಲಿ ಹೆಚ್ಚಿನವರು ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಹಾಗೂ ಎಫ್‌ಐಆರ್‌ನಲ್ಲಿ ತಮ್ಮ ಹೆಸರೂ ಇರಲಿಲ್ಲ ಎಂದು ಹೇಳಿದ್ದಾರೆ. ಆದರೂ ಎಲೆಕ್ಟ್ರಾನಿಕ್ ಪುರಾವೆಗಳನ್ನು ‘ಸೃಷ್ಟಿಸಿ’ ತಮ್ಮ ಬಂಧನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...