Homeದಲಿತ್ ಫೈಲ್ಸ್ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ...

ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

ಸೆಪ್ಟೆಂಬರ್ 7 ರಂದು ನಡೆದ ಪರೀಕ್ಷೆಯೊಂದರಲ್ಲಿ ತಪ್ಪು ಉತ್ತರ ಬರೆದಿದ್ದಕ್ಕಾಗಿ ಸವರ್ಣೀಯ ಶಿಕ್ಷಕನಿಂದ ಥಳಿತಕ್ಕೊಳಗಾಗಿ 15 ವರ್ಷದ ದಲಿತ ಬಾಲಕ ಮೃತಪಟ್ಟಿದ್ದು ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಸೋಮವಾರ ವರದಿಯಾಗಿತ್ತು. ಥಳಿತಕ್ಕೊಳಗಾದ ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಅವರ ಸಾವಿನ ನಂತರ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದಿದ್ದು, ಎರಡು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಪೊಲೀಸ್‌ ವಾಹನಕ್ಕೆ ಬೆಂಕಿ ಹಚ್ಚಿದ್ದು ಮಾತ್ರವಲ್ಲದೆ, ಇತರ ಎರಡು ವಾಹನಗಳಿಗೂ ಹಾನಿ ಮಾಡಲಾಗಿದೆ. ಉದ್ರಿಕ್ತ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ಕೂಡಾ ನಡೆಸಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಕ ಅಶ್ವಿನಿ ಸಿಂಗ್ ತನ್ನ ಮಗನ ಮೇಲೆ ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿ ಪ್ರಜ್ಞೆ ತಪ್ಪುವವರೆಗೂ ಒದ್ದಿದ್ದಾನೆ ಎಂದು ಬಾಲಕನ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವನಿಗೆ ಪ್ರಜ್ಞೆ ಬಂದಿತ್ತು, ಆದರೆ ಉಸಿರಾಡಲು ಕಷ್ಟವಾಗುತ್ತಿತ್ತು. ಬಾಲಕನಿಗೆ ಆಂತರಿಕ ಗಾಯಗಳಾಗಿವೆ ಎಂದು ವೈದ್ಯರು ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕನನ್ನು ಹೊಡೆದು ಕೊಂದ ಸವರ್ಣೀಯ ಶಿಕ್ಷಕ

ಈ ನಡುವೆ ಬಾಲಕನಿಗೆ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತಾದರೂ, ಚೇತರಿಸಿಕೊಂಡಿರಲಿಲ್ಲ. ಅವರನ್ನು ಸೋಮವಾರ ಸೈಫೈಗೆ ಕರೆದೊಯ್ಯುವಾ ಆಂಬ್ಯುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದರು.

ಸೆಪ್ಟೆಂಬರ್ 7 ರಂದು ಹಲ್ಲೆ ನಡೆಸಿದ್ದ ಅಶ್ವಿನಿ ಸಿಂಗ್ ಬಾಲಕನ ವೈದ್ಯಕೀಯ ಚಿಕಿತ್ಸೆಗೆ ಹಣ ನೀಡುವುದಾಗಿ ಭರವಸೆ ನೀಡಿದ್ದನು. ಒಟ್ಟು ಎರಡು ಕಂತುಗಳಲ್ಲಿ ಕೇವಲ 40,000 ರೂ.ಗಳನ್ನು ನೀಡಿದ್ದನು. ಹೆಚ್ಚಿನ ಹಣ ಬೇಡಿಕೆ ಇಟ್ಟಾಗ ಬೆದರಿಕೆ ಹಾಕಿದ್ದಾಗಿ ಬಾಲಕನ ತಂದೆ ಹೇಳಿದ್ದಾರೆ.

“ನಮ್ಮ ಮಾತುಕತೆಯ ಸಮಯದಲ್ಲಿ ಶಿಕ್ಷಕ ಅಸಭ್ಯವಾಗಿ ಕೂಡಾ ವರ್ತಿಸಿದ್ದು, ಮಾತ್ರವಲ್ಲದೆ ಜಾತಿ ನಿಂದನೆ ಕೂಡಾ ಮಾಡಿದ್ದಾನೆ. ಹೀಗಾಗಿ ನಾವು ನಂತರ ಪೊಲೀಸ್ ಠಾಣೆಗೆ ಹೋಗಿ ಆತನ ವಿರುದ್ಧ ಸೆಪ್ಟೆಂಬರ್ 24 ರಂದು ದೂರು ಸಲ್ಲಿಸಿದ್ದೇವೆ” ಎಂದು ಬಾಲಕನ ತಂದೆ ಆರೋಪಿಸಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

ಶಿಕ್ಷಕ ಅಶ್ವಿನಿ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 308, 323, 504 ಮತ್ತು ಪರಿಶಿಷ್ಟ ಜಾತಿಗಳ ಕೆಲವು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಶಿಕ್ಷಕನನ್ನು ಬಂಧಿಸಲು ಅಧಿಕಾರಿಗಳು ಶಾಲೆಗೆ ಹೋದಾಗ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಾರು ನಿಗಮ್ ಹೇಳಿದ್ದಾರೆ. ಅವರನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...