Homeಮುಖಪುಟಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

ಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

- Advertisement -
- Advertisement -

ಕಾಜಿರಂಗ ರಾಷ್ಟ್ರೀಯ ಉದ್ಯಾನವನ (ಕೆಎನ್‌ಪಿ) ವ್ಯಾಪ್ತಿಯಲ್ಲಿ ಮುಸ್ಸಂಜೆಯ ನಂತರ ಜೀಪ್ ಸಫಾರಿ ಮಾಡಿ ವನ್ಯಜೀವಿ ಸಂರಕ್ಷಣಾ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಹಳ್ಳಿಗಳಲ್ಲಿ ವಾಸಿಸುವ ಜನರು ಗೋಲಾಘಾಟ್ ಜಿಲ್ಲೆಯ ಬೊಕಾಖಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ವಿಚಾರಣೆ ಆರಂಭಿಸಿದ್ದು, ಕೆಎನ್‌ಪಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ದೂರು ಬಂದಿರುವುದರಿಂದ ಉದ್ಯಾನವನದ ವಿಭಾಗೀಯ ಅರಣ್ಯಾಧಿಕಾರಿಗಳಿಂದ ವರದಿ ಕೇಳಿದ್ದೇವೆ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಬಂಧಪಟ್ಟವರನ್ನು ಸಂಪರ್ಕಿಸಿದಾಗ ಹೆಸರು ಹೇಳಲಿಚ್ಛಿಸದ ಕೆಎನ್‌ಪಿಯ ಅಧಿಕಾರಿಯೊಬ್ಬರು, “ಈ ಹಂತದಲ್ಲಿ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಆಗುವುದಿಲ್ಲ” ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

“ಜನರಿಗೆ ಆರೋಪ ಮಾಡುವ ಹಕ್ಕಿದೆ, ಅದರ ಆಧಾರದ ಮೇಲೆ ತನಿಖೆ ನಡೆಸಲಾಗುವುದು. ಆದರೆ ವಿಷಯವನ್ನು ಪರಿಶೀಲಿಸುವ ಮೊದಲು ನಾವು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾನೂನುಗಳ ಉಲ್ಲಂಘನೆಯ ಆರೋಪ ಬಗ್ಗೆ ಉತ್ತರಿಸಲು ಅಧಿಕಾರಿಯು ನಿರಾಕರಿಸಿದ್ದಾರೆ ಎಂದು ‘ಟೆಲಿಗ್ರಾಫ್’ ವರದಿ ಮಾಡಿದೆ.

“ಇದು ಅಧಿಕೃತ ಕಾರ್ಯಕ್ರಮವಾಗಿತ್ತು. ಕೆಲವೊಮ್ಮೆ, ಅಂತಹ ಕಾರ್ಯಕ್ರಮವು ಸ್ವಲ್ಪ ತಡವಾಗಿ ನಡೆಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಾವು ಇದನ್ನು ಕಾನೂನು ಉಲ್ಲಂಘನೆ ಎಂದು ಕರೆಯಲಾಗದು ಎಂದು ನಾನು ಭಾವಿಸುತ್ತೇನೆ” ಎಂದು ಅಧಿಕಾರಿ ಹೇಳಿದ್ದಾರೆ.

ಮುಸ್ಸಂಜೆಯ ನಂತರ ವಾಹನದ ಹೆಡ್‌ಲೈಟ್ ಆನ್‌ ಮಾಡಿ ಜೀಫ್‌ ಸವಾರಿ ಮಾಡಲಾಗಿದೆ. ಇದು ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ರ ಉಲ್ಲಂಘನೆಯಾಗಿದೆ ಎಂದು ಉದ್ಯಾನದ ಬಳಿಯ ಮೊರೊಂಗಿಯಾಲ್ ಮತ್ತು ಬಲಿಜನ್ ಆದರ್ಶ್ ಮಾದರಿ ಗ್ರಾಮಗಳ ನಿವಾಸಿಗಳಾದ ಸೋನೇಶ್ವರ ನರಹ್, ಪ್ರಬಿನ್ ಪೆಗು ಆರೋಪಿಸಿದ್ದಾರೆ.

ಜೀಪ್ ಸಫಾರಿಯಲ್ಲಿ ಪಾಲ್ಗೊಂಡಿದ್ದ ಜಗ್ಗಿ ವಾಸುದೇವ್, ಮುಖ್ಯಮಂತ್ರಿ ಶರ್ಮಾ, ರಾಜ್ಯ ಪ್ರವಾಸೋದ್ಯಮ ಸಚಿವ ಜಯಂತ ಮಲ್ಲ ಬರುವಾ ಮತ್ತು ಇತರರನ್ನು ತಕ್ಷಣವೇ ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಕಾನೂನಿನ ಉಲ್ಲಂಘನೆ ಮಾಡಿರುವ ಕುರಿತು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರವಾಸಿಗರಿಗೆ ನಿಗದಿತ ಸಮಯ ಮುಗಿದ ನಂತರ, ಉದ್ಯಾನವನದೊಳಗೆ ಪ್ರವೇಶಿಸಿ ಹೆಡ್‌ಲೈಟ್‌ಗಳನ್ನು ಹಾಕಿಕೊಂಡು ಜೀಪ್ ಓಡಿಸುತ್ತಿದ್ದ ಜಗ್ಗಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಜಗ್ಗಿ ವಾಸುದೇವ್‌ ಕಾನೂನು ಉಲ್ಲಂಘಿಸಿದ ಇತಿಹಾಸ

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ಅವರು ಈ ಹಿಂದೆಯೂ ಪರಿಸರ ಕಾನೂನು ಉಲ್ಲಂಘನೆ ಮಾಡಿದ ಆರೋಪಗಳನ್ನು ಎದುರಿಸಿದ್ದಾರೆ. ಈ ಕುರಿತು ಬಿಬಿಸಿ ಮಾಧ್ಯಮ ಪ್ರಶ್ನಿಸಿದ್ದಾಗ, ಮೈಕ್ ಕಿತ್ತು ಎಸೆದು ಸಂದರ್ಶನವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ ಘಟನೆ ಕೆಲವು ತಿಂಗಳ ಹಿಂದೆ ನಡೆದಿತ್ತು.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಇಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಈಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

ಇದನ್ನೂ ಓದಿರಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

“ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಬಿಬಿಸಿ ಸಂದರ್ಶನದಲ್ಲಿ ಕೇಳಲಾಗಿತ್ತು. ಇದರಿಂದ ತಾಳ್ಮೆ ಕಳೆದುಕೊಂಡ ಸದ್ಗುರು, ‘ಇದನ್ನು ಎಷ್ಟು ಬಾರಿ ಕೇಳುತ್ತೀರಿ?’ ಎಂದಿದ್ದರು.

ಮಾತು ಮುಂದುವರಿಸಲು ಹೊರಟ ಪತ್ರಕರ್ತನನ್ನು ತಡೆದು, “ನೀವು ಸುದ್ದಿ ನೋಡುತ್ತಿದ್ದೀರಾ, ಸರ್ಕಾರಿ ಇಲಾಖೆ ಹೇಳುವುದನ್ನು, ನ್ಯಾಯಾಲಯ ಹೇಳಿದ್ದನ್ನು ನೋಡಿದ್ದೀರಿ? ಅಥವಾ ನೀವು ಅರೆಬೆಂದ ವ್ಯಕ್ತಿಯ ಮಾತನ್ನು ಕೇಳುತ್ತಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳಿದ್ದರು. ಜೊತೆಗೆ ಸಂದರ್ಶನವನ್ನು ಅರ್ಧಕ್ಕೆ ಮೊಟುಕುಗೊಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...