Homeಫ್ಯಾಕ್ಟ್‌ಚೆಕ್ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

- Advertisement -
- Advertisement -

ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಮರಳಿ ಪಡೆಯಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಐತಿಹಾಸಿಕ ‘ಭಾರತ್‌ ಜೋಡೋ ಯಾತ್ರೆ’ಗೆ ಜನಸ್ಪಂದನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸಾಲುಸಾಲು ಸುಳ್ಳು ಸುದ್ದಿಗಳನ್ನು ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್ ಗಾಂಧಿಯವರಿಗೆ ಸಂಬಂಧ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಗುತ್ತಿದೆ.

ಈಗ ಹರಡಲಾಗಿರುವ ಅನೇಕ ಸುದ್ದಿಗಳು ಬಿಜೆಪಿ ನಾಯಕರು ಹಾಗೂ ಬಿಜೆಪಿ ಅನುಯಾಯಿಗಳ ಖಾತೆಗಳಿಂದ ಹಂಚಿಕೆಯಾಗುತ್ತಿರುವುದು ವಿಶೇಷ. ಈ ಸುಳ್ಳುಸುದ್ದಿಗಳನ್ನು ಕನ್ನಡದ ‘ಏನ್‌ಸುದ್ದಿ.ಕಾಂ’ ಸೇರಿದಂತೆ ಅನೇಕ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ಗಳು ನಿರಂತರವಾಗಿ ಬಯಲು ಮಾಡುತ್ತಲೇ ಇವೆ.

‘ಏನ್‌ಸುದ್ದಿ.ಕಾಂ’ ಮಾಡಿದ ಕೆಲವು ವರದಿಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ವರದಿ ಒಂದು: ರಾಹುಲ್ ಗಾಂಧಿ ತನ್ನ ಸೊಸೆಯೊಂದಿಗೆ ಕುಳಿತಿದ್ದ ಫೋಟೋವನ್ನು ಕೆಟ್ಟದಾಗಿ ಬಿಂಬಿಸಿದ BJP ನಾಯಕ

“ಪಪ್ಪು ಮೆಹೆಂದಿ ಹಾಕಿಕೊಂಡು ಮಕ್ಕಳೊಂದಿಗೆ ಆಟವಾಡುತ್ತಿದ್ದಾನೆ. ಯಾತ್ರೆಗೆ ಕರೆದೊಯ್ಯುತ್ತಿರುವ 10 ಸದಸ್ಯರ ಬಗ್ಗೆ ಬೇಸರವಾಗಿದೆ” ಎಂಬ ಹೇಳಿಕೆಯನ್ನು ಬಿಜೆಪಿ ತಮಿಳುನಾಡು ಐಟಿ ಸೆಲ್ ಮುಖ್ಯಸ್ಥ ನಿರ್ಮಲ್ ಕುಮಾರ್ ಟ್ವೀಟ್ ಮಾಡಿದ್ದರು.

ತಮಿಳುನಾಡಿನ BJP ಐಟಿ ಸೆಲ್ ಮುಖ್ಯಸ್ಥ ನಿರ್ಮಲ್ ಕುಮಾರ್ ಹಂಚಿಕೊಂಡಿದ್ದ ರಾಹುಲ್ ಗಾಂಧಿ ಯುವತಿಯೊಂದಿಗೆ ಕುಳಿತ್ತಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಮೂಲಕ ಸರ್ಚ್ ಮಾಡಿದಾಗ,  ಗೆಟ್ಟಿ ಇಮೇಜಸ್‌ನಲ್ಲಿ ಅಪ್‌ಲೋಡ್ ಮಾಡಲಾದ ಹಲವಾರು ಚಿತ್ರಗಳು ಲಭ್ಯವಾಗಿವೆ.

ಗೆಟ್ಟಿ ಇಮೇಜಸ್‌ನಲ್ಲಿ ಲಭ್ಯವಾದ ಫೋಟೋಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಫೋಟೋಗಳು ಒಂದೇ ಆಗಿದ್ದು, ರಾಹುಲ್ ಗಾಂಧಿ ಅವರ ಪಕ್ಕದಲ್ಲಿ ಕೂತು ಮಾತನಾಡುತ್ತಿರುವ ಹೆಣ್ಣು ಮಗಳು ತನ್ನ ಸೋದರ ಸೊಸೆ ಮಿರಯಾ ವಾದ್ರಾ ಎಂದು ಉಲ್ಲೇಖಿಸಲಾಗಿದೆ. ಅಂದರೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಬರ್ಟ್ ವಾದ್ರಾ ಅವರ ಪುತ್ರಿ ಮಿರಯಾ ವಾದ್ರಾ ಎಂದು ತಿಳಿದು ಬಂದಿದೆ. ಅಂದರೆ ರಾಹುಲ್ ಗಾಂಧಿಯ ಅಕ್ಕನ ಮಗಳು ಸಂಬಂಧದಲ್ಲಿ ರಾಹುಲ್‌ಗೆ ಸೊಸೆ ಆಗುತ್ತಾರೆ.

“ಆಗಸ್ಟ್ 20, 2015ರಂದು ನವದೆಹಲಿಯ ವೀರ್ ಭೂಮಿಯಲ್ಲಿ ಮಾಜಿ ಭಾರತದ ಪ್ರಧಾನಿ ರಾಜೀವ್ ಗಾಂಧಿಯವರ 71 ನೇ ಜನ್ಮದಿನದ ಸಮಾರಂಭದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಸೋದರ ಸೊಸೆ ಮೀರಾಯಾ ವಾದ್ರಾ ಅವರೊಂದಿಗೆ ಮಾತನಾಡುತ್ತಿರುವ ದೃಶ್ಯಗಳು ಇದಾಗಿದೆ.”

ವರದಿ ಎರಡು: ರಾಹುಲ್‌ ಗಾಂಧಿ ಕೇರಳದಲ್ಲಿ ಬೀಫ್‌ ತಿಂದರು

ಭಾರತ್‌ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಬೀಫ್ ಸೇವಿಸುತ್ತಿದ್ದಾರೆ ಎಂದು ಹೇಳಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋವೊಂದನ್ನು ಹಂಚಿಕೊಳ್ಳಲಾಗಿದೆ. ಬೀಫ್‌ ತಿನ್ನುವುದು ಮಹಾಪರಾಧ ಎಂಬಂತೆ ಬಿಂಬಿಸಲು ಯತ್ನಿಸಲಾಗಿದೆ.

“ರಾಹುಲ್ ಬೀಫ್ ತಿಂದರೆ ಏನು ಸಮಸ್ಯೆ?  ಕೇರಳದ ಕಾಂಗ್ರೆಸ್ಸಿಗರು ಕರುವನ್ನು ಕೊಂದು ಮಾದರಿಯಾಗಿದ್ದಾರೆ. ಇದು ಬೀಫ್ ಫೆಸ್ಟ್ ನಡೆಸಿದ ಕಮ್ಯುನಿಸ್ಟರ ಕೇರಳ. ಗೋಮಾಂಸ ಹೇಗಿದೆ?  ಅತ್ಯುತ್ತಮ, ಸೂಪರ್ ಆಗಿದೆಯೇ? ಇದನ್ನು ಸಹೋದರ ರಾಹುಲ್ (ಚೆಟ್ಟನ್) ಹೇಳಲಿ” ಎಂದು ಮಲೆಯಾಳಂನಲ್ಲಿ ಬರೆದು ಪೋಸ್ಟ್ ಮಾಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ರಾಹುಲ್ ಗಾಂಧಿ ಗೋಮಾಂಸ ಸೇವಿಸಿದ್ದಾರೆ ಎನ್ನಲಾದ ಪೋಟೋವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಸೆಪ್ಟೆಂಬರ್ 17, 2022 ರಂದು ಮನೋರಮಾ ಲೇಖನದಲ್ಲಿ ಪ್ರಕಟವಾದ ಮೂಲ ಫೋಟೋ ಲಭ್ಯವಾಗಿದೆ.

“ರಾಹುಲ್ ಗಾಂಧಿ ವಲ್ಲಿಕೆಝುನಲ್ಲಿ ಚಹಾ ಅಂಗಡಿಗೆ ಪ್ರವೇಶಿಸಿದಾಗ… ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಕೋಡಿಕುನ್ವಿಲ್ ಸುರೇಶ್ ಎಂಪಿ, ಸಂಸದ, ಕೆಸಿ ವೇಣುಗೋಪಾಲ್  ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಜೊತೆಯಾಗಿದ್ದಾರೆ” ಎಂದು ಮನೋರಮಾ ವರದಿ ಮಾಡಿದೆ.

ಮೂಲ ಫೋಟೋದಲ್ಲಿ ರಾಹುಲ್ ಗಾಂಧಿ ಮುಂದಿರುವ ಟೇಬಲಲ್‌ನಲ್ಲಿ ಗೋಮಾಂಸವಿರುವ ಪ್ಲೇಟ್ ಕಾಣುತ್ತಿಲ್ಲ. ವೈರಲ್ ಚಿತ್ರ ಮತ್ತು ಮೂಲ ಛಾಯಾಚಿತ್ರದ ನಡುವಿನ ಹೋಲಿಕೆಯನ್ನು ಇಲ್ಲಿ ನೋಡಬಹುದು.

ವರದಿ ಮೂರು: ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರು ಮದ್ಯ ಸೇವಿಸಿದ್ದಾರೆ ಎಂದು ಸುಳ್ಳು ಹಂಚಿಕೆ

“ಯಾತ್ರೆಯ ಸಂದರ್ಭದಲ್ಲಿ ಕೇರಳದ ಸ್ಥಳೀಯ ಬಾರ್‌ನಿಂದ ಸಂಪೂರ್ಣವಾಗಿ ಕುಡಿದು ಹೊರಬರುತ್ತಿರುವ ರಾಹುಲ್ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರು”  ಎಂಬ ಹೇಳಿಕೆಯೊಂದಿಗೆ ಫೇಸ್‌ಬುಕ್, ವಾಟ್ಸಾಪ್ ಮತ್ತು ಟ್ವಿಟರ್‌ಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದು, ರಾಹುಲ್ ಗಾಂಧಿ ಸೇರಿದಂತೆ ಎಲ್ಲರೂ ಮದ್ಯಪಾನ ಮಾಡಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವನ್ನು ವೈರಲ್ ಮಾಡಲಾಗಿದೆ.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕೇರಳದ ಕೊಲ್ಲಂ ಜಿಲ್ಲೆಯ ಓಚಿರಾದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಬೆಳಗಿನ ಉಪಾಹಾರ (ತಿಂಡಿ) ಮುಗಿಸಿ, ರೆಸ್ಟೋರೆಂಟ್‌ನಿಂದ ಹೊರ ಬರುವಾಗ ಕೇರಳದ ಹಿರಿಯ ಕಾಂಗ್ರೆಸ್ ನಾಯಕರು ತಡವರಿಸಿದಂತೆ ವಿಡಿಯೋವನ್ನು ಎಡಿಟ್ ಮಾಡಲಾಗಿದೆ. ಆ ಮೂಲಕ ಭಾರತ್ ಜೋಡೋ ಯಾತ್ರೆಯಲ್ಲಿ ಕುಡಿದು ಕಾಂಗ್ರೆಸ್ ನಾಯಕರು ಬಾರ್ ಜೋಡೋ ಯಾತ್ರೆಯನ್ನು ಚೆನ್ನಾಗಿ ಮಾಡುತ್ತಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ದೃಶ್ಯಗಳಿಗಾಗಿ ಕೀವರ್ಡ್‌ಗಳೊಂದಿಗೆ ಸರ್ಚ್ ಮಾಡಿದಾಗ ಕಾಂಗ್ರೆಸ್ ನಾಯಕ ಡಾ. ಶಾಮಾ ಮೊಹಮ್ಮದ್ ಅವರು ಸೆಪ್ಟೆಂಬರ್ 17, 2022ರಲ್ಲಿ ಹಂಚಿಕೊಂಡಿರುವ ಫೇಸ್‌ಬುಕ್ ಪೋಸ್ಟ್ ಕಂಡುಬಂದಿದೆ.

2022 ರ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 8.08 ಕ್ಕೆ ಫೇಸ್‌ಬುಕ್ ಲೈವ್ ವೀಡಿಯೊವನ್ನು ಮೊಹಮ್ಮದ್ ಪೋಸ್ಟ್ ಮಾಡಿದ್ದಾರೆ. ಅವರು ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು ಯಾತ್ರೆಯಿಂದ ವಿರಾಮ ತೆಗೆದುಕೊಂಡು ಚಹಾ ಕುಡಿಯಲು ನಿಂತಿದ್ದಾರೆ ಎಂದು ಹೇಳಿದ್ದಾರೆ. ಲೈವ್ ವೀಡಿಯೊದಲ್ಲಿ ರೆಸ್ಟೋರೆಂಟ್‌ನ ಹೆಸರನ್ನು ನೋಡಬಹುದು.

ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ನಂತರ ವೈರಲ್ ವೀಡಿಯೊದಲ್ಲಿ ಕಂಡುಬರುವ ಸ್ಥಳವನ್ನು ಗೂಗಲ್ ಮ್ಯಾಪ್‌ನಲ್ಲಿ ಸರ್ಚ್ ಮಾಡಿದಾಗ ವೈರಲ್ ವಿಡಿಯೋದಲ್ಲಿರುವ ರೆಸ್ಟೋರೆಂಟ್‌ನ ಒಳಭಾಗದ ಫೋಟೋಗಳು ಲಭ್ಯವಾಗಿದ್ದು ಅದನ್ನು ಪರಿಶೀಲಿಸಿದಾಗ ಒಂದಕ್ಕೊಂದು ಹೋಲಿಕೆಯಾಗುತ್ತವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋ ಕುರಿತು ಸ್ಪಷ್ಟನೆ ಪಡೆದುಕೊಳ್ಳಲು ‘ಬೂಮ್ ಫ್ಯಾಕ್ಟ್‌ಚೆಕ್’ ತಂಡ ಹೋಟೆಲ್ ಮಾಲೀಕರನ್ನು ಸಂಪರ್ಕಿಸಿದೆ. ಅನ್ಸಾರ್ ಎ ಮಲಬಾರ್ ಪ್ರತಿಕ್ರಿಯಿಸಿದ್ದು, “ಸೆಪ್ಟೆಂಬರ್ 17, 2022ರಂದು ಭಾರತ್ ಜೋಡೋ ಯಾತ್ರೆ ಪ್ರಾರಂಭವಾದ ನಂತರ, ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು ಬೆಳಿಗ್ಗೆ 8:00 ಗಂಟೆಗೆ ಉಪಹಾರ ಸೇವಿಸಲು ಇಲ್ಲಿಗೆ ಬಂದಿದ್ದರು. 8:30 ರ ವರೆಗೆ ಇಲ್ಲಿಯೇ ಉಪಹಾರ ಸೇವಿಸಿದರು. ಮದ್ಯಪಾನ ಮಾಡಿದ್ದರು ಎಂಬುದೆಲ್ಲ ಸುಳ್ಳು. ಹೋಟೆಲ್‌ನಲ್ಲಿ ಯಾವುದೇ ಮದ್ಯವನ್ನು ಮಾರುವುದಿಲ್ಲ ಮತ್ತು ನೀಡುವುದೂ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯಾವಳಿ ಕೂಡ ಇವೆ. ವೈರಲ್ ವಿಡಿಯೋದಲ್ಲಿ ಮಾಡಿರುವ ಆಪಾದನೆ ಸುಳ್ಳಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮೆಟ್ಟಿಲಂತೆ ಇರುವ ಜಾಗವನ್ನು ಗಮನಿಸದೆ ತಡವರಿಸುವ ಕಾಂಗ್ರೆಸ್ ನಾಯಕರು
ಮೆಟ್ಟಿಲಿರುವ ಜಾಗದಲ್ಲಿ ಗಮನಿಸದೆ ತಡವರಿಸುತ್ತಿರುವ ಕಾಂಗ್ರೆಸ್ಸಿಗರು

ವರದಿ ನಾಲ್ಕು: “ಹಿಂದೂಗಳು ಮತ್ತು ಹಿಂದುತ್ವವಾದಿಗಳನ್ನು ಅಧಿಕಾರದಿಂದ ದೂರವಿಡಬೇಕು” ಎಂದು ರಾಹುಲ್ ಹೇಳಿಲ್ಲ

“ಹಿಂದೂಗಳು ಮತ್ತು ಹಿಂದುತ್ವವಾದಿಗಳನ್ನು ಅಧಿಕಾರದಿಂದ ದೂರವಿಡಬೇಕು” ಎಂದು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವೇಳೆ ಹೇಳಿದ್ದಾರೆ ಎಂದು ಚಿಕ್ಕ ವಿಡಿಯೊ ತುಣುಕ್ಕೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಸಾಮಾಜಿಕ ಮಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜಸ್ ಮೂಲಕ ಸರ್ಚ್  ಮಾಡಿದಾಗ ವಾಸ್ತವಗಳು ತಿಳಿದುಬಂದಿವೆ. ಈ ದೃಶ್ಯಗಳು  ಡಿಸೆಂಬರ್ 2021 ರಂದು ಜೈಪುರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು ಮಾಡಿದ ಭಾಷಣಕ್ಕೆ ಸಂಬಂಧಿಸಿವೆ.

ರಾಹುಲ್ ಗಾಂಧಿ ತಮ್ಮ ಭಾಷಣದ ವೇಳೆ “2014 ರಿಂದ ಇಲ್ಲಿರುವುದು ಹಿಂದುತ್ವವಾದಿಗಳ ಆಡಳಿತವೇ ಹೊರತು ಹಿಂದೂಗಳದಲ್ಲ. ನಾವು ಮತ್ತೊಮ್ಮೆ ಈ ಹಿಂದುತ್ವವಾದಿಗಳನ್ನು ಹೊರಹಾಕಬೇಕು ಮತ್ತು ಹಿಂದೂಗಳ ಆಡಳಿತವನ್ನು ಮರಳಿ ತರಬೇಕು” ಎಂದು ಹೇಳಿರುವುದನ್ನು ಕಾಣಬಹುದು.

ವರದಿ 5: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ್ದು ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯ ಅಲ್ಲ

ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ‘ಅಮೂಲ್ಯ ಲಿಯೋನ್‌‌’ ಅವರನ್ನು ಭೇಟಿಯಾಗಿದ್ದಾರೆ ಎಂದು ಒಂದು ಫೋಟೋವನ್ನು ಹರಿಬಿಡಲಾಗಿದೆ.

ಈ ವಿಡಿಯೊ ಮತ್ತು ಚಿತ್ರಗಳನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಈ ವಿಡಿಯೊವನ್ನು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದು, “ಗಮನವಿಟ್ಟು ನೋಡಿ, ಇದು ಭಾರತ ಜೋಡಿಸುವುದು ಅಲ್ಲ, ಭಾರತ ಒಡೆಯುವುದು” ಎಂದು ಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯು ಕೇರಳದಲ್ಲಿ ನಡೆಯುತ್ತಿದೆ. ಅಮೂಲ್ಯ ಲಿಯೋನ್‌‌ ಕರ್ನಾಟಕದ ಚಿಕ್ಕಮಗಳೂರಿನವರಾಗಿದ್ದು, ಸಿಎಎ ವಿರೋಧಿ ಹೋರಾಟದ ನಂತರ ಅವರು ಸಾರ್ವಜನಿಕ ಹೋರಾಟಗಳಲ್ಲಿ ಕಾಣಿಸಿಕೊಂಡಿಲ್ಲ. ಈವರೆಗಿನ ವರದಿಯಂತೆ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೂಡಾ ಅಲ್ಲ.

ವಾಸ್ತವದಲ್ಲಿ, ಬಿಜೆಪಿ ಬೆಂಬಲಿಗರು ವೈರಲ್ ಮಾಡುತ್ತಿರುವ ಚಿತ್ರದಲ್ಲಿ ಇರುವ ಯುವತಿಯು ಅಮೂಲ್ಯ ಲಿಯೋನ್‌‌ ಅಲ್ಲ. ರಾಹುಲ್ ಗಾಂಧಿ ಅವರ ಜೊತೆಗೆ ಇರುವ ಯುವತಿಯು ‘ಮಿವಾ ಆಂಡ್ರೆಲಿಯೊ’ ಎಂಬ ಹೆಸರಿನಲ್ಲಿ ಇನ್ಸ್‌ಟಾಗ್ರಾಂನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಕೇರಳದವರಾಗಿದ್ದು, ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ‘ಕೆಎಸ್‌ಯು’ ನಾಯಕಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...