Homeಫ್ಯಾಕ್ಟ್‌ಚೆಕ್ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

- Advertisement -
- Advertisement -

ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಮರಳಿ ಪಡೆಯಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಐತಿಹಾಸಿಕ ‘ಭಾರತ್‌ ಜೋಡೋ ಯಾತ್ರೆ’ಗೆ ಜನಸ್ಪಂದನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸಾಲುಸಾಲು ಸುಳ್ಳು ಸುದ್ದಿಗಳನ್ನು ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್ ಗಾಂಧಿಯವರಿಗೆ ಸಂಬಂಧ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಗುತ್ತಿದೆ.

ಈಗ ಹರಡಲಾಗಿರುವ ಅನೇಕ ಸುದ್ದಿಗಳು ಬಿಜೆಪಿ ನಾಯಕರು ಹಾಗೂ ಬಿಜೆಪಿ ಅನುಯಾಯಿಗಳ ಖಾತೆಗಳಿಂದ ಹಂಚಿಕೆಯಾಗುತ್ತಿರುವುದು ವಿಶೇಷ. ಈ ಸುಳ್ಳುಸುದ್ದಿಗಳನ್ನು ಕನ್ನಡದ ‘ಏನ್‌ಸುದ್ದಿ.ಕಾಂ’ ಸೇರಿದಂತೆ ಅನೇಕ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ಗಳು ನಿರಂತರವಾಗಿ ಬಯಲು ಮಾಡುತ್ತಲೇ ಇವೆ.

‘ಏನ್‌ಸುದ್ದಿ.ಕಾಂ’ ಮಾಡಿದ ಕೆಲವು ವರದಿಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ವರದಿ ಒಂದು: ರಾಹುಲ್ ಗಾಂಧಿ ತನ್ನ ಸೊಸೆಯೊಂದಿಗೆ ಕುಳಿತಿದ್ದ ಫೋಟೋವನ್ನು ಕೆಟ್ಟದಾಗಿ ಬಿಂಬಿಸಿದ BJP ನಾಯಕ

“ಪಪ್ಪು ಮೆಹೆಂದಿ ಹಾಕಿಕೊಂಡು ಮಕ್ಕಳೊಂದಿಗೆ ಆಟವಾಡುತ್ತಿದ್ದಾನೆ. ಯಾತ್ರೆಗೆ ಕರೆದೊಯ್ಯುತ್ತಿರುವ 10 ಸದಸ್ಯರ ಬಗ್ಗೆ ಬೇಸರವಾಗಿದೆ” ಎಂಬ ಹೇಳಿಕೆಯನ್ನು ಬಿಜೆಪಿ ತಮಿಳುನಾಡು ಐಟಿ ಸೆಲ್ ಮುಖ್ಯಸ್ಥ ನಿರ್ಮಲ್ ಕುಮಾರ್ ಟ್ವೀಟ್ ಮಾಡಿದ್ದರು.

ತಮಿಳುನಾಡಿನ BJP ಐಟಿ ಸೆಲ್ ಮುಖ್ಯಸ್ಥ ನಿರ್ಮಲ್ ಕುಮಾರ್ ಹಂಚಿಕೊಂಡಿದ್ದ ರಾಹುಲ್ ಗಾಂಧಿ ಯುವತಿಯೊಂದಿಗೆ ಕುಳಿತ್ತಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಮೂಲಕ ಸರ್ಚ್ ಮಾಡಿದಾಗ,  ಗೆಟ್ಟಿ ಇಮೇಜಸ್‌ನಲ್ಲಿ ಅಪ್‌ಲೋಡ್ ಮಾಡಲಾದ ಹಲವಾರು ಚಿತ್ರಗಳು ಲಭ್ಯವಾಗಿವೆ.

ಗೆಟ್ಟಿ ಇಮೇಜಸ್‌ನಲ್ಲಿ ಲಭ್ಯವಾದ ಫೋಟೋಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಫೋಟೋಗಳು ಒಂದೇ ಆಗಿದ್ದು, ರಾಹುಲ್ ಗಾಂಧಿ ಅವರ ಪಕ್ಕದಲ್ಲಿ ಕೂತು ಮಾತನಾಡುತ್ತಿರುವ ಹೆಣ್ಣು ಮಗಳು ತನ್ನ ಸೋದರ ಸೊಸೆ ಮಿರಯಾ ವಾದ್ರಾ ಎಂದು ಉಲ್ಲೇಖಿಸಲಾಗಿದೆ. ಅಂದರೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಬರ್ಟ್ ವಾದ್ರಾ ಅವರ ಪುತ್ರಿ ಮಿರಯಾ ವಾದ್ರಾ ಎಂದು ತಿಳಿದು ಬಂದಿದೆ. ಅಂದರೆ ರಾಹುಲ್ ಗಾಂಧಿಯ ಅಕ್ಕನ ಮಗಳು ಸಂಬಂಧದಲ್ಲಿ ರಾಹುಲ್‌ಗೆ ಸೊಸೆ ಆಗುತ್ತಾರೆ.

“ಆಗಸ್ಟ್ 20, 2015ರಂದು ನವದೆಹಲಿಯ ವೀರ್ ಭೂಮಿಯಲ್ಲಿ ಮಾಜಿ ಭಾರತದ ಪ್ರಧಾನಿ ರಾಜೀವ್ ಗಾಂಧಿಯವರ 71 ನೇ ಜನ್ಮದಿನದ ಸಮಾರಂಭದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಸೋದರ ಸೊಸೆ ಮೀರಾಯಾ ವಾದ್ರಾ ಅವರೊಂದಿಗೆ ಮಾತನಾಡುತ್ತಿರುವ ದೃಶ್ಯಗಳು ಇದಾಗಿದೆ.”

ವರದಿ ಎರಡು: ರಾಹುಲ್‌ ಗಾಂಧಿ ಕೇರಳದಲ್ಲಿ ಬೀಫ್‌ ತಿಂದರು

ಭಾರತ್‌ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಬೀಫ್ ಸೇವಿಸುತ್ತಿದ್ದಾರೆ ಎಂದು ಹೇಳಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋವೊಂದನ್ನು ಹಂಚಿಕೊಳ್ಳಲಾಗಿದೆ. ಬೀಫ್‌ ತಿನ್ನುವುದು ಮಹಾಪರಾಧ ಎಂಬಂತೆ ಬಿಂಬಿಸಲು ಯತ್ನಿಸಲಾಗಿದೆ.

“ರಾಹುಲ್ ಬೀಫ್ ತಿಂದರೆ ಏನು ಸಮಸ್ಯೆ?  ಕೇರಳದ ಕಾಂಗ್ರೆಸ್ಸಿಗರು ಕರುವನ್ನು ಕೊಂದು ಮಾದರಿಯಾಗಿದ್ದಾರೆ. ಇದು ಬೀಫ್ ಫೆಸ್ಟ್ ನಡೆಸಿದ ಕಮ್ಯುನಿಸ್ಟರ ಕೇರಳ. ಗೋಮಾಂಸ ಹೇಗಿದೆ?  ಅತ್ಯುತ್ತಮ, ಸೂಪರ್ ಆಗಿದೆಯೇ? ಇದನ್ನು ಸಹೋದರ ರಾಹುಲ್ (ಚೆಟ್ಟನ್) ಹೇಳಲಿ” ಎಂದು ಮಲೆಯಾಳಂನಲ್ಲಿ ಬರೆದು ಪೋಸ್ಟ್ ಮಾಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ರಾಹುಲ್ ಗಾಂಧಿ ಗೋಮಾಂಸ ಸೇವಿಸಿದ್ದಾರೆ ಎನ್ನಲಾದ ಪೋಟೋವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಸೆಪ್ಟೆಂಬರ್ 17, 2022 ರಂದು ಮನೋರಮಾ ಲೇಖನದಲ್ಲಿ ಪ್ರಕಟವಾದ ಮೂಲ ಫೋಟೋ ಲಭ್ಯವಾಗಿದೆ.

“ರಾಹುಲ್ ಗಾಂಧಿ ವಲ್ಲಿಕೆಝುನಲ್ಲಿ ಚಹಾ ಅಂಗಡಿಗೆ ಪ್ರವೇಶಿಸಿದಾಗ… ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಕೋಡಿಕುನ್ವಿಲ್ ಸುರೇಶ್ ಎಂಪಿ, ಸಂಸದ, ಕೆಸಿ ವೇಣುಗೋಪಾಲ್  ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಜೊತೆಯಾಗಿದ್ದಾರೆ” ಎಂದು ಮನೋರಮಾ ವರದಿ ಮಾಡಿದೆ.

ಮೂಲ ಫೋಟೋದಲ್ಲಿ ರಾಹುಲ್ ಗಾಂಧಿ ಮುಂದಿರುವ ಟೇಬಲಲ್‌ನಲ್ಲಿ ಗೋಮಾಂಸವಿರುವ ಪ್ಲೇಟ್ ಕಾಣುತ್ತಿಲ್ಲ. ವೈರಲ್ ಚಿತ್ರ ಮತ್ತು ಮೂಲ ಛಾಯಾಚಿತ್ರದ ನಡುವಿನ ಹೋಲಿಕೆಯನ್ನು ಇಲ್ಲಿ ನೋಡಬಹುದು.

ವರದಿ ಮೂರು: ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರು ಮದ್ಯ ಸೇವಿಸಿದ್ದಾರೆ ಎಂದು ಸುಳ್ಳು ಹಂಚಿಕೆ

“ಯಾತ್ರೆಯ ಸಂದರ್ಭದಲ್ಲಿ ಕೇರಳದ ಸ್ಥಳೀಯ ಬಾರ್‌ನಿಂದ ಸಂಪೂರ್ಣವಾಗಿ ಕುಡಿದು ಹೊರಬರುತ್ತಿರುವ ರಾಹುಲ್ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರು”  ಎಂಬ ಹೇಳಿಕೆಯೊಂದಿಗೆ ಫೇಸ್‌ಬುಕ್, ವಾಟ್ಸಾಪ್ ಮತ್ತು ಟ್ವಿಟರ್‌ಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದು, ರಾಹುಲ್ ಗಾಂಧಿ ಸೇರಿದಂತೆ ಎಲ್ಲರೂ ಮದ್ಯಪಾನ ಮಾಡಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವನ್ನು ವೈರಲ್ ಮಾಡಲಾಗಿದೆ.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕೇರಳದ ಕೊಲ್ಲಂ ಜಿಲ್ಲೆಯ ಓಚಿರಾದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಬೆಳಗಿನ ಉಪಾಹಾರ (ತಿಂಡಿ) ಮುಗಿಸಿ, ರೆಸ್ಟೋರೆಂಟ್‌ನಿಂದ ಹೊರ ಬರುವಾಗ ಕೇರಳದ ಹಿರಿಯ ಕಾಂಗ್ರೆಸ್ ನಾಯಕರು ತಡವರಿಸಿದಂತೆ ವಿಡಿಯೋವನ್ನು ಎಡಿಟ್ ಮಾಡಲಾಗಿದೆ. ಆ ಮೂಲಕ ಭಾರತ್ ಜೋಡೋ ಯಾತ್ರೆಯಲ್ಲಿ ಕುಡಿದು ಕಾಂಗ್ರೆಸ್ ನಾಯಕರು ಬಾರ್ ಜೋಡೋ ಯಾತ್ರೆಯನ್ನು ಚೆನ್ನಾಗಿ ಮಾಡುತ್ತಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ದೃಶ್ಯಗಳಿಗಾಗಿ ಕೀವರ್ಡ್‌ಗಳೊಂದಿಗೆ ಸರ್ಚ್ ಮಾಡಿದಾಗ ಕಾಂಗ್ರೆಸ್ ನಾಯಕ ಡಾ. ಶಾಮಾ ಮೊಹಮ್ಮದ್ ಅವರು ಸೆಪ್ಟೆಂಬರ್ 17, 2022ರಲ್ಲಿ ಹಂಚಿಕೊಂಡಿರುವ ಫೇಸ್‌ಬುಕ್ ಪೋಸ್ಟ್ ಕಂಡುಬಂದಿದೆ.

2022 ರ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 8.08 ಕ್ಕೆ ಫೇಸ್‌ಬುಕ್ ಲೈವ್ ವೀಡಿಯೊವನ್ನು ಮೊಹಮ್ಮದ್ ಪೋಸ್ಟ್ ಮಾಡಿದ್ದಾರೆ. ಅವರು ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು ಯಾತ್ರೆಯಿಂದ ವಿರಾಮ ತೆಗೆದುಕೊಂಡು ಚಹಾ ಕುಡಿಯಲು ನಿಂತಿದ್ದಾರೆ ಎಂದು ಹೇಳಿದ್ದಾರೆ. ಲೈವ್ ವೀಡಿಯೊದಲ್ಲಿ ರೆಸ್ಟೋರೆಂಟ್‌ನ ಹೆಸರನ್ನು ನೋಡಬಹುದು.

ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ನಂತರ ವೈರಲ್ ವೀಡಿಯೊದಲ್ಲಿ ಕಂಡುಬರುವ ಸ್ಥಳವನ್ನು ಗೂಗಲ್ ಮ್ಯಾಪ್‌ನಲ್ಲಿ ಸರ್ಚ್ ಮಾಡಿದಾಗ ವೈರಲ್ ವಿಡಿಯೋದಲ್ಲಿರುವ ರೆಸ್ಟೋರೆಂಟ್‌ನ ಒಳಭಾಗದ ಫೋಟೋಗಳು ಲಭ್ಯವಾಗಿದ್ದು ಅದನ್ನು ಪರಿಶೀಲಿಸಿದಾಗ ಒಂದಕ್ಕೊಂದು ಹೋಲಿಕೆಯಾಗುತ್ತವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋ ಕುರಿತು ಸ್ಪಷ್ಟನೆ ಪಡೆದುಕೊಳ್ಳಲು ‘ಬೂಮ್ ಫ್ಯಾಕ್ಟ್‌ಚೆಕ್’ ತಂಡ ಹೋಟೆಲ್ ಮಾಲೀಕರನ್ನು ಸಂಪರ್ಕಿಸಿದೆ. ಅನ್ಸಾರ್ ಎ ಮಲಬಾರ್ ಪ್ರತಿಕ್ರಿಯಿಸಿದ್ದು, “ಸೆಪ್ಟೆಂಬರ್ 17, 2022ರಂದು ಭಾರತ್ ಜೋಡೋ ಯಾತ್ರೆ ಪ್ರಾರಂಭವಾದ ನಂತರ, ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು ಬೆಳಿಗ್ಗೆ 8:00 ಗಂಟೆಗೆ ಉಪಹಾರ ಸೇವಿಸಲು ಇಲ್ಲಿಗೆ ಬಂದಿದ್ದರು. 8:30 ರ ವರೆಗೆ ಇಲ್ಲಿಯೇ ಉಪಹಾರ ಸೇವಿಸಿದರು. ಮದ್ಯಪಾನ ಮಾಡಿದ್ದರು ಎಂಬುದೆಲ್ಲ ಸುಳ್ಳು. ಹೋಟೆಲ್‌ನಲ್ಲಿ ಯಾವುದೇ ಮದ್ಯವನ್ನು ಮಾರುವುದಿಲ್ಲ ಮತ್ತು ನೀಡುವುದೂ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯಾವಳಿ ಕೂಡ ಇವೆ. ವೈರಲ್ ವಿಡಿಯೋದಲ್ಲಿ ಮಾಡಿರುವ ಆಪಾದನೆ ಸುಳ್ಳಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮೆಟ್ಟಿಲಂತೆ ಇರುವ ಜಾಗವನ್ನು ಗಮನಿಸದೆ ತಡವರಿಸುವ ಕಾಂಗ್ರೆಸ್ ನಾಯಕರು
ಮೆಟ್ಟಿಲಿರುವ ಜಾಗದಲ್ಲಿ ಗಮನಿಸದೆ ತಡವರಿಸುತ್ತಿರುವ ಕಾಂಗ್ರೆಸ್ಸಿಗರು

ವರದಿ ನಾಲ್ಕು: “ಹಿಂದೂಗಳು ಮತ್ತು ಹಿಂದುತ್ವವಾದಿಗಳನ್ನು ಅಧಿಕಾರದಿಂದ ದೂರವಿಡಬೇಕು” ಎಂದು ರಾಹುಲ್ ಹೇಳಿಲ್ಲ

“ಹಿಂದೂಗಳು ಮತ್ತು ಹಿಂದುತ್ವವಾದಿಗಳನ್ನು ಅಧಿಕಾರದಿಂದ ದೂರವಿಡಬೇಕು” ಎಂದು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವೇಳೆ ಹೇಳಿದ್ದಾರೆ ಎಂದು ಚಿಕ್ಕ ವಿಡಿಯೊ ತುಣುಕ್ಕೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಸಾಮಾಜಿಕ ಮಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜಸ್ ಮೂಲಕ ಸರ್ಚ್  ಮಾಡಿದಾಗ ವಾಸ್ತವಗಳು ತಿಳಿದುಬಂದಿವೆ. ಈ ದೃಶ್ಯಗಳು  ಡಿಸೆಂಬರ್ 2021 ರಂದು ಜೈಪುರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು ಮಾಡಿದ ಭಾಷಣಕ್ಕೆ ಸಂಬಂಧಿಸಿವೆ.

ರಾಹುಲ್ ಗಾಂಧಿ ತಮ್ಮ ಭಾಷಣದ ವೇಳೆ “2014 ರಿಂದ ಇಲ್ಲಿರುವುದು ಹಿಂದುತ್ವವಾದಿಗಳ ಆಡಳಿತವೇ ಹೊರತು ಹಿಂದೂಗಳದಲ್ಲ. ನಾವು ಮತ್ತೊಮ್ಮೆ ಈ ಹಿಂದುತ್ವವಾದಿಗಳನ್ನು ಹೊರಹಾಕಬೇಕು ಮತ್ತು ಹಿಂದೂಗಳ ಆಡಳಿತವನ್ನು ಮರಳಿ ತರಬೇಕು” ಎಂದು ಹೇಳಿರುವುದನ್ನು ಕಾಣಬಹುದು.

ವರದಿ 5: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ್ದು ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯ ಅಲ್ಲ

ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ‘ಅಮೂಲ್ಯ ಲಿಯೋನ್‌‌’ ಅವರನ್ನು ಭೇಟಿಯಾಗಿದ್ದಾರೆ ಎಂದು ಒಂದು ಫೋಟೋವನ್ನು ಹರಿಬಿಡಲಾಗಿದೆ.

ಈ ವಿಡಿಯೊ ಮತ್ತು ಚಿತ್ರಗಳನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಈ ವಿಡಿಯೊವನ್ನು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದು, “ಗಮನವಿಟ್ಟು ನೋಡಿ, ಇದು ಭಾರತ ಜೋಡಿಸುವುದು ಅಲ್ಲ, ಭಾರತ ಒಡೆಯುವುದು” ಎಂದು ಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯು ಕೇರಳದಲ್ಲಿ ನಡೆಯುತ್ತಿದೆ. ಅಮೂಲ್ಯ ಲಿಯೋನ್‌‌ ಕರ್ನಾಟಕದ ಚಿಕ್ಕಮಗಳೂರಿನವರಾಗಿದ್ದು, ಸಿಎಎ ವಿರೋಧಿ ಹೋರಾಟದ ನಂತರ ಅವರು ಸಾರ್ವಜನಿಕ ಹೋರಾಟಗಳಲ್ಲಿ ಕಾಣಿಸಿಕೊಂಡಿಲ್ಲ. ಈವರೆಗಿನ ವರದಿಯಂತೆ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೂಡಾ ಅಲ್ಲ.

ವಾಸ್ತವದಲ್ಲಿ, ಬಿಜೆಪಿ ಬೆಂಬಲಿಗರು ವೈರಲ್ ಮಾಡುತ್ತಿರುವ ಚಿತ್ರದಲ್ಲಿ ಇರುವ ಯುವತಿಯು ಅಮೂಲ್ಯ ಲಿಯೋನ್‌‌ ಅಲ್ಲ. ರಾಹುಲ್ ಗಾಂಧಿ ಅವರ ಜೊತೆಗೆ ಇರುವ ಯುವತಿಯು ‘ಮಿವಾ ಆಂಡ್ರೆಲಿಯೊ’ ಎಂಬ ಹೆಸರಿನಲ್ಲಿ ಇನ್ಸ್‌ಟಾಗ್ರಾಂನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಕೇರಳದವರಾಗಿದ್ದು, ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ‘ಕೆಎಸ್‌ಯು’ ನಾಯಕಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....