Homeಮುಖಪುಟಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

- Advertisement -
- Advertisement -

ಒಂದು ವಾರದೊಳಗಡೆ ಎರಡು ಸುತ್ತಿನ ರಾಷ್ಟ್ರವ್ಯಾಪಿ ದಾಳಿಗಳು ನಡೆದು, 240 ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿದ ನಂತರ, ಒಕ್ಕೂಟ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು “ಕಾನೂನುಬಾಹಿರ ಸಂಘ” ಎಂದು ಘೋಷಿಸಲಾಗಿದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ.

ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI), ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (JMB) ಮತ್ತು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನೊಂದಿಗೆ ಸಂಘಟನೆಯು ಸಂಪರ್ಕ ಇಟ್ಟುಕೊಂಡಿದೆ ಎಂದು ಸರ್ಕಾರ ಉಲ್ಲೇಖಿಸಿದ್ದು, ಹಲವಾರು ಕ್ರಿಮಿನಲ್ ಮತ್ತು ಭಯೋತ್ಪಾದನೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ, ಇದು ‘ದೇಶದ ಸಮಗ್ರತೆ, ಸಾರ್ವಭೌಮತ್ವ ಮತ್ತು ಭದ್ರತೆ’ಗೆ ಧಕ್ಕೆ ತರುತ್ತದೆ. ಅಲ್ಲದೆ ಸಂಘಟನೆಯು ಸಾರ್ವಜನಿಕ ಶಾಂತಿ ಮತ್ತು ಕೋಮು ಸೌಹಾರ್ದ ಕದಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದೆ.

ಇದನ್ನೂ ಓದಿ: ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು ವಶಕ್ಕೆ

ಸಮಾಜದ ಒಂದು ನಿರ್ದಿಷ್ಟ ವರ್ಗವನ್ನು ತೀವ್ರಗಾಮಿಯನ್ನಾಗಿಸಲು PFI ರಹಸ್ಯ ಕಾರ್ಯಸೂಚಿಯನ್ನು ಅನುಸರಿಸುತ್ತಿದೆ. ಅಲ್ಲದೆ ದೇಶದ ಸಾಂವಿಧಾನಿಕ ಅಧಿಕಾರದ ಕಡೆಗೆ ಸಂಪೂರ್ಣ ಅಗೌರವವನ್ನು ತೋರಿಸುತ್ತದೆ ಎಂದು ಸರ್ಕಾರ ಹೇಳಿದೆ.

“ಹೊರಗಿನ ನಿಧಿ ಮತ್ತು ಸೈದ್ಧಾಂತಿಕ ಬೆಂಬಲದೊಂದಿಗೆ, ಇದು ದೇಶದ ಆಂತರಿಕ ಭದ್ರತೆಗೆ ದೊಡ್ಡ ಬೆದರಿಕೆಯಾಗಿದೆ” ಎಂದು ಅಧಿಸೂಚನೆಯಲ್ಲಿ ಸರ್ಕಾರ ಹೇಳಿದೆ.

ಸಾರ್ವಜನಿಕ ಮನಸ್ಸಿನಲ್ಲಿ ಭಯೋತ್ಪಾದನೆಯ ಆಳ್ವಿಕೆಯನ್ನು ಸೃಷ್ಟಿಸಲು ಪಿಎಫ್‌ಐ ಸದಸ್ಯರು ಈ ಹಿಂದೆ ಹಲವಾರು ಅಪರಾಧ ಚಟುವಟಿಕೆಗಳು ಮತ್ತು ಕ್ರೂರ ಕೊಲೆಗಳನ್ನು ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕರ್ನಾಟಕ, ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಸಂಘಟನೆಯನ್ನು ನಿಷೇಧಿಸಲು ಶಿಫಾರಸು ಮಾಡಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಭಾರತದ ರಾಷ್ಟ್ರಪತಿ ‘ಸೆರಗು’ ಧರಿಸುತ್ತಾರೆ, ಅದು ಪಿಎಫ್‌ಐನ ಪಿತೂರಿಯೇ?: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

15 ರಾಜ್ಯಗಳಾದ್ಯಂತ ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸಂಪರ್ಕ ಹೊಂದಿದ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಜ್ಯ ಪೊಲೀಸರ ಸಂಘಟಿತ ಕ್ರಮದಲ್ಲಿ ಸೆಪ್ಟೆಂಬರ್ 22 ರಂದು ಮೊದಲ ಬಾರಿಗೆ ದಾಳಿ ನಡೆಸಿ 100 ಕ್ಕೂ ಹೆಚ್ಚು ಜನರನ್‌ಉ ಬಂಧಿಸಲಾಗಿತ್ತು.

ಇದರ ನಂತರ ಸಂಘಟನೆಯ ವಿರುದ್ಧ ರಾಷ್ಟ್ರವ್ಯಾಪಿ ಎರಡನೇ ಸುತ್ತಿನ ಕಾರ್ಯಾಚರಣೆಯನ್ನು ನಿನ್ನೆ ನಡೆಸಲಾಗಿತ್ತು. ಈವರೆಗೆ ಒಟ್ಟು 247 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿಎಫ್‌ಐ ಜೊತೆಗೆ, ಅದರ ಸಹವರ್ತಿ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್(NWF), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್-ಕೇರಳ ಸಂಘಟನೆಗಳನ್ನು ಕೂಡಾ ನಿಷೇಧಿಸಲಾಗಿದೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

ಬಿಜೆಪಿ ಸರ್ಕಾರ ತಮ್ಮ ವಿರೋಧಿಗಳನ್ನು ಹಣಿಯುವುದಕ್ಕೆ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್ ಹೇಳಿದ್ದಾರೆ.

“ಈ ಹಿಂದೆ ಇಂದಿರಾ ಗಾಂಧಿ ಕೂಡಾ ಹೀಗೆಯೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದರು. ಕಾಂಗ್ರೆಸ್ ಕೂಡಾ ಮಾಡಿತ್ತು, ಅದನ್ನೇ ಬಿಜೆಪಿ ಕೂಡಾ ಮಾಡುತ್ತಿದೆ. ನಿಷೇಧವನ್ನು ಖಂಡಿಸಿ ಪಕ್ಷದ ವತಿಯಿಂದ ನಡೆಸಿದ ಶಾಂತಿಯುತ ಪ್ರತಿಭಟನೆಗೂ ಸರ್ಕಾರ ಅವಕಾಶ ನೀಡದೆ ನಮ್ಮ ನಾಯಕರನ್ನು ಬಂಧಿಸುತ್ತಿದ್ದಾರೆ. ಇದು ಅಘೋಷಿತ ತುರ್ತ ಪರಿಸ್ಥಿತಿಯ ಮತ್ತೊಂದು ರೂಪ” ಎಂದು ಭಾಸ್ಕರ್‌ ಪ್ರಸಾದ್ ಅವರು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...