Homeಮುಖಪುಟರಂಜನೆ, ಚಿಂತನೆ ಹದಬೆರೆತ ‘ಗುರು ಶಿಷ್ಯರು’

ರಂಜನೆ, ಚಿಂತನೆ ಹದಬೆರೆತ ‘ಗುರು ಶಿಷ್ಯರು’

- Advertisement -
- Advertisement -

‘ಖೋ ಖೋ’ ಆಟವನ್ನೇ ಉಸಿರಾಡುತ್ತಾ, ತನ್ನ ಗುರು ದತ್ತಣ್ಣ ಹೇಳಿದ ಮಾರ್ಗದಲ್ಲಿ ಹೆಜ್ಜೆ ಇಟ್ಟು ರಾಷ್ಟ್ರಮಟ್ಟದಲ್ಲೂ ಆಟಗಾರನಾಗಿದ್ದ ಮನೋಹರ್‌ (ಶರಣ್‌) ಎಂಬ ಯುವಕ ಕೊನೆಗೆ ಕೆಲಸವೂ ಇಲ್ಲದೆ ಪರಿತಪಿಸುತ್ತಾನೆ. ಖೋಖೋ ಆಟಕ್ಕೆ ಮಾನ್ಯತೆ ಇಲ್ಲವಾಗಿ, ಅದನ್ನೇ ನಂಬಿದ್ದ ಆಟಗಾರರು ಬೀದಿಪಾಲಾಗುತ್ತಾರೆ. ಓದಿನಲ್ಲಿ ಮುಂದಿದ್ದ ಶಿಷ್ಯನನ್ನು ಆಟದತ್ತ ಎಳೆತಂದು ದಿಕ್ಕು ತಪ್ಪಿಸಿದೆ ಎಂಬ ಕೊರಗಿನಲ್ಲಿರುವ ಪಿ.ಟಿ.ಮಾಸ್ಟರ್‌ ದತ್ತಣ್ಣ, ಮನೋಹರ್‌ಗಾಗಿ ಒಂದು ಕೆಲಸ ಹುಡುಕಿಕೊಡಲು ಪರದಾಡುತ್ತಿದ್ದಾರೆ. ಕೊನೆಗೆ ‘ಬೆಟ್ಟದಪುರ’ ಎಂಬ ಕುಗ್ರಾಮದ ಹಿಂದುಳಿದ ಶಾಲೆಯೊಂದರಲ್ಲಿ ಕೆಲಸ ಕೊಡಿಸುತ್ತಾರೆ. ಆಲಸ್ಯ, ಉದಾಸೀನತೆ ಬೆಳೆಸಿಕೊಂಡಿದ್ದ ಮನೋಹರ್‌ ಬೆಟ್ಟದಪುರಕ್ಕೆ ಪಿ.ಟಿ.ಮಾಸ್ಟರ್‌ ಆಗಿ ಬಂದ ಮೇಲೆ ಏನಾಯಿತು?- ಎಂಬುದೇ ‘ಗುರು ಶಿಷ್ಯರು’ ಸಿನಿಮಾ.

ಹಳೆಯ ಫಾರ್ಮುಲಾಗಳಿಂದಲೇ ಜಡ್ಡುಗಟ್ಟಿದ ವ್ಯವಸ್ಥೆಯೊಳಗೆ ಕಾಲಕಾಲಕ್ಕೆ ಹೊಸ ನೀರು ಹರಿಯಬೇಕು. ಹೊಸ ಪ್ರತಿಭೆಗಳು ಅನಾವರಣವಾಗಬೇಕು. ಆಗ ಮಾತ್ರ ಒಂದು ವ್ಯವಸ್ಥೆಯೊಳಗೆ ಚಲನೆಶೀಲತೆ ಬರುತ್ತದೆ. ‘ಜಂಟಲ್‌ ಮ್ಯಾನ್‌’ ಎಂಬ ಸದಭಿರುಚಿಯ ಸಿನಿಮಾ ನೀಡಿದ ನಿರ್ದೇಶಕ ಜಡೇಶ ಕೆ. ಹಂಪಿಯವರು ‘ಗುರು ಶಿಷ್ಯರು’ ಮೂಲಕ ಮತ್ತೊಮ್ಮೆ ತಮ್ಮ ಪ್ರತಿಭೆಯನ್ನು ವಿಸ್ತರಣೆ ಮಾಡಿದ್ದಾರೆ. ಮೂರರಲ್ಲಿ ಮತ್ತೊಂದು ಆಗದಂತಹ ಕ್ರೀಡಾ ಕಥೆಯನ್ನು ನೀಡಿದ್ದಾರೆ.

1981ರಲ್ಲಿ ಎಚ್.ಆರ್‌.ಭಾರ್ಗವ್‌ ಅವರು ನಿರ್ದೇಶಿಸಿದ ‘ಗುರುಶಿಷ್ಯರು’ ಸಿನಿಮಾವನ್ನು ಕನ್ನಡಿಗರು ಮರೆಯಲಾರರು. ಈ ಟೈಟಲ್‌ ಚಿರಪರಿಚಿತ. ಜಡೇಶ ನಿರ್ದೇಶನದ ‘ಗುರುಶಿಷ್ಯರು’ 2022ರ ಸಿನಿಮಾದರೂ ಕಥೆ ನಡೆಯುವುದು 1995ರ ಕಾಲಘಟ್ಟದಲ್ಲಿ. ‘ಜಂಟಲ್‌ಮ್ಯಾನ್‌’ ಸಿನಿಮಾದಂತೆಯೇ ‘ಗುರುಶಿಷ್ಯರು’ ಮೊದಲಾರ್ಧ ಭರಪೂರ ರಂಜನೆಯಾದರೆ, ದ್ವಿತೀಯಾರ್ಥ ಚಿಂತನೆಗೆ ಹೊರಳುತ್ತದೆ.

ಡಬ್ಬಲ್‌ ಮೀನಿಂಗ್‌ಗಳೇ ಹಾಸ್ಯದ ಮುಖವಾಡ ಹೊತ್ತು ರಾರಾಜಿಸುತ್ತಿರುವ ಹೊತ್ತಿನಲ್ಲಿ ಸಹ್ಯವಾದ ಸಂಭಾಷಣೆಯ ಮೂಲಕ ನಗಿಸಬಹುದು ಎಂಬುದನ್ನು ‘ಮಾಸ್ತಿ’ಯವರ ಸಂಭಾಷಣೆ ಸಾಬೀತು ಮಾಡಿದೆ. ಎಲ್ಲಿಯೂ ಅತಿರೇಕವೆನಿಸದ ಹದವಾದ ಸಂಭಾಷಣೆ ಬರೆಯಲಾಗಿದೆ.

ಜಡೇಶ ಅವರು ಕಥೆ ಹಾಗೂ ಚಿತ್ರಕತೆಗೆ ನೀಡಿರುವ ಒತ್ತು ಢಾಳಾಗಿ ಕಾಣುತ್ತದೆ. ಸಂತೆಗೆ ಮೂರು ಮೊಳ ನೇಯ್ಯದಂತೆ ಅಚ್ಚುಕಟ್ಟುತನ ಮೆರೆದಿದ್ದಾರೆ. ಪ್ರತಿಪಾತ್ರಕ್ಕೂ ಮಹತ್ವ ನೀಡಿದ್ದಾರೆ. ಇಂದಿರಾ ಗಾಂಧಿಯವರು ಜಾರಿಗೆ ತಂದ ‘ಉಳುವವನೇ ಭೂಮಿಯ ಒಡೆಯ’ ಕಾನೂನು ಉಂಟು ಮಾಡಿದ ಸಾಮಾಜಿಕ ಪರಿವರ್ತನೆ, ಅದಕ್ಕೆ ಫ್ಯೂಡಲ್‌ ವ್ಯವಸ್ಥೆ ತೋರಿದ ಅಸಹನೆ, ಜೂಜಿನ ಮೋಜು ಇತ್ಯಾದಿ ಅಂಶಗಳನ್ನು ಒಳಗೊಂಡ ಪರಿಸರದಲ್ಲಿ ಕಥೆ ಸಾಗುತ್ತದೆ.

ಜೂಜುಪ್ರಿಯ ಜಮೀನ್ದಾರ (ಅಪೂರ್ವ ಕಾಸರವಳ್ಳಿ) ವಿರುದ್ಧ ಹೋರಾಡುತ್ತಿರುವ ಬೆಟ್ಟದಪುರದ ಜನರು ಖೋ ಖೋ ಆಟದಲ್ಲಿ ಗೆದ್ದು ತಮ್ಮ ಜಮೀನುಗಳನ್ನು ಉಳಿಸುತ್ತೇವೆ ಎಂದು ಸವಾಲು ಹಾಕುವುದು, ತಮ್ಮ ನಂಬಿಕೆಗೆ ಪಿ.ಟಿ. ಮಾಸ್ಟರ್ ಮನೋಹರ್‌ ಮೋಸ ಮಾಡಿದ್ದಾನೆಂದು ಬೇಸರಗೊಂಡ ಊರಿನ ಜನರು ತಮ್ಮ ಮಕ್ಕಳನ್ನು ಖೋ ಖೋ ಆಡಲು ಕಳಿಸದಿರುವಾಗ ಊರ ಹೊರಗೆ ವಾಸಿಸುತ್ತಿರುವ ಹಂದಿ ಜೋಗರ ಹುಡುಗನನ್ನು, ಬಹು ಆಳದ ಕೆರೆಗೆ ಧುಮುಕಿ ಮೀನು ಹಿಡಿಯುವ ಬೆಸ್ತರ ಹುಡುಗನನ್ನು ತಂಡಕ್ಕೆ ಸೇರಿಸಿಕೊಳ್ಳುವುದು, ಊರು ಬಿಟ್ಟು ಹೋದ ಮುಸ್ಲಿಮ್ ಹುಡುಗರು ಮತ್ತೆ ತಂಡಕ್ಕೆ ಬಂದು ಸೇರುವುದು- ಇತ್ಯಾದಿ ದೃಶ್ಯಗಳು ಅಮೀರ್‌ ಖಾನ್‌ ಅಭಿನಯದ ‘ಲಗಾನ್‌’ ಸಿನಿಮಾವನ್ನು ನೆನಪಿಸುತ್ತವೆ.

ಕ್ಷಾಮದಿಂದ ನೊಂದ ಊರಿನ ಜನ ಎಲ್ಲ ಜಾತಿ ಮತವನ್ನು ಮರೆತು, ಒಂದಾಗಿ ಕ್ರಿಕೆಟ್ ಕಲಿತು ನಂತರ ಬ್ರಿಟಿಷರನ್ನು ಸೋಲಿಸಿದ್ದನ್ನು ಲಗಾನ್‌ನಲ್ಲಿ ಕಾಣಬಹುದು. ಜಡೇಶ ಅವರ ಕಥೆಯಲ್ಲೂ ಈ ಸ್ವರೂಪ ಕಂಡು ಬರುತ್ತದೆ. ಜಮೀನ್ದಾರನ ವಿರುದ್ಧ ಪಣ ತೊಟ್ಟು ಊರನ್ನು ಉಳಿಸಲು ಖೋ ಖೋ ಆಡುತ್ತಾರೆ. ಸ್ವಾತಂತ್ರ್ಯ ವೂರ್ವದ ಕಥೆಯಾದ ಲಗಾನ್‌ನಲ್ಲಿ ಅಸ್ಪೃಶ್ಯತೆ ಅಳಿಸಿ ಭಾರತೀಯರು ಒಂದಾಗಿ ಹೋರಾಡಬೇಕಾದ ಎಳೆ ಬರುತ್ತದೆ. ಸ್ವಾತಂತ್ರ್ಯ ನಂತರದ ಕಥೆಯಾದ ಗುರು ಶಿಷ್ಯರಲ್ಲಿ ಹಂದಿಜೋಗರು ಊರ ಹೊರಗೆ ಇರುವಂತೆ ತೋರಿಸಲಾಗಿದೆ. ಹಂದಿಜೋಗರ ಹುಡುಗ ತಂಡಕ್ಕೆ ಬಂದು ಸೇರಿದಾಗಲಾಗಲೀ, ಹಂದಿಯನ್ನು ಓಡಿಸಿಕೊಂಡು ಶಾಲಾ ಅಂಗಳದಲ್ಲಿ ನಿರ್ಭಿಡೆಯಿಂದ ಹಿಡಿಯುವ ವೇಳೆಯಲ್ಲಾಗಲೀ ಅಸ್ಪೃಶ್ಯತೆಯ ಅಂಜಿಕೆ ಪ್ರದರ್ಶನವಾಗಿಲ್ಲ. ಈ ಕುರಿತು ಹೆಚ್ಚಿನ ವಿವರಕ್ಕೆ ಹೋಗದಂತೆ ನಿಭಾಯಿಸಿರುವುದು ಜಡೇಶ್ ಅವರ ಜಾಣ್ಮೆಯೂ ಹೌದು.

ಗಾಂಧಿಯ ಪ್ರತಿಮೆಯ ಎದುರು ನಿಂತು, “ಮಾಡು ಇಲ್ಲವೇ ಮಡಿ” ಎಂದು ಪಣ ತೊಡುವ ಬೆಟ್ಟದಪುರದ ತಂಡ, ಕನ್ನಡ ಭಾವುಟ ಹಿಡಿದು ಬರುವ ಪಿ.ಟಿ.ಮಾಸ್ಟರ್ ಮನೋಹರ್‌- ದೃಶ್ಯಗಳು ನಿರ್ದೇಶಕರ ಅಸ್ಮಿತೆಯ ಗುರುತುಗಳಾಗಿ ಕಾಣುತ್ತವೆ.

ಇದನ್ನೂ ಓದಿರಿ: ‘ಸೀತಾರಾಮಂ’ ಸಿನಿಮಾ ಹಿಂದುತ್ವ ರಾಜಕಾರಣಕ್ಕೆ ಒಳೇಟು ನೀಡಿದ್ದು ಹೀಗೆ…

ಸ್ಪೋರ್ಟ್ಸ್ ಡ್ರಾಮಾ ಸಿನಿಮಾಗಳಲ್ಲಿ ಇರುವ ಸಾಮಾನ್ಯ ರೋಚಕತೆ ಇಲ್ಲಿಯೂ ಇದೆ. ವೈಯಕ್ತಿಕ ಸಾಧನೆಯ ಕಥಾ ಹಂದರವುಳ್ಳ ಸ್ಪೋರ್ಟ್ಸ್ ಡ್ರಾಮಾಗಳಿಗಿಂತ ಸಾಮಾಜಿಕ ವ್ಯವಸ್ಥೆಯೊಂದಿಗೆ ಬರೆತ ಕ್ರೀಡಾ ಕಥನಗಳಿಗೆ ಮಹತ್ವ ಇರುವುದನ್ನು ‘ಗುರು ಶಿಷ್ಯರು’ ಸಿನಿಮಾ ಮನಗಾಣಿಸಿದೆ. ಖೋ ಖೋ ಆಟಕ್ಕೆ ಹಾಗೂ ಖೋ ಖೋ ಆಟಗಾರರಿಗೆ ಹೆಚ್ಚಿನ ಮಹತ್ವವನ್ನು ನೀಡಬೇಕೆಂಬ ಆಶಯವನ್ನು ಈ ಸಿನಿಮಾ ವ್ಯಕ್ತಪಡಿಸಿದೆ. ಅಂದಹಾಗೆ ಶಾಲಾ ಬಾಲಕನ ಲವ್ ಸ್ಟೋರಿಗೆ ನೀಡಿರುವ ಸ್ಪೇಸ್‌ ಸ್ವಲ್ಪ ಹೆಚ್ಚಾಯಿತು ಅನಿಸುತ್ತದೆ.

ಸ್ವಾತಂತ್ರ್ಯ ಹೋರಾಟಗಾರ ಹಾಗೂ ಗಾಂಧಿವಾದಿಯಾಗಿ ಸುರೇಶ್‌ ಹೆಬ್ಳೀಕರ್‌, ಖಳನಾಯಕನಾಗಿ ಅಪೂರ್ವ ಕಾಸರವಳ್ಳಿ, ನಾಯಕಿಯಾಗಿ ನಿಶ್ವಿಕಾ ನಾಯ್ಡು, ಶಿಷ್ಯರ ಪಾತ್ರದಲ್ಲಿ ನಟಿರುವ ಎಲ್ಲ ಮಕ್ಕಳೂ ಇಷ್ಟವಾಗುತ್ತಾರೆ. ಅಜನೀಶ್ ಅವರ ಸಂಗೀತ ಮೆಚ್ಚುಗೆಯಾಗುತ್ತದೆ. ಹಾಡುಗಳು ಇಂಪಾಗಿವೆ. ಛಾಯಾಗ್ರಾಹಕ ಅರೂರ್‌ ಸುಧಾಕರ್‌ ಶೆಟ್ಟಿಯವರು ಹಳ್ಳಿಯ ಪರಿಸರವನ್ನು ಸೊಗಸಾಗಿ ಸೆರೆಹಿಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...