Homeಮುಖಪುಟ‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ...’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ…’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

ಬಿಜೆಪಿಯ ಸಿದ್ಧಾಂತದ ನಿಜರೂಪ ಇದುವೆ ಆಗಿದ್ದು, ಅವರು ಅಧಿಕಾರವನ್ನು ಹೊರತುಪಡಿಸಿ ಏನನ್ನೂ ಗೌರವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಉತ್ತರಾಖಂಡದಲ್ಲಿ ನಡೆದ 19 ವರ್ಷದ ಅಂಕಿತಾ ಭಂಡಾರಿ ಹತ್ಯೆಯನ್ನು ಉಲ್ಲೇಖಿಸಿ ಬಿಜೆಪಿ ಮತ್ತು ಆರೆಸ್ಸೆಸ್‌‌ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, “ಘಟನೆಯು ದೇಶಾದ್ಯಂತ ಆಘಾತ ಮತ್ತು ಆಕ್ರೋಶವನ್ನು ಉಂಟುಮಾಡಿದೆ” ಎಂದು ಹೇಳಿದ್ದಾರೆ. ಅವರು ಮಹಿಳೆಯರನ್ನು ‘ವಸ್ತು’ ಮತ್ತು ‘ಎರಡನೇ ದರ್ಜೆಯ ನಾಗರಿಕರು’ ಎಂದು ಪರಿಗಣಿಸುತ್ತಾರೆ ಎಂಬುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿಯ ಸಿದ್ಧಾಂತದ ನಿಜರೂಪ ಇದುವೆ ಆಗಿದ್ದು, ಅವರು ಅಧಿಕಾರವನ್ನು ಹೊರತುಪಡಿಸಿ ಏನನ್ನೂ ಗೌರವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೆಸಾರ್ಟ್‌‌ಗೆ ಬರುವ ಗ್ರಾಹಕರಿಗೆ ‘ವಿಶೇಷ ಸೇವೆಗಳನ್ನು’ ನೀಡಲು ನಿರಾಕರಿಸಿದ್ದಕ್ಕಾಗಿ ಅಲ್ಲಿ ರಿಷಪ್ಷನಿಷ್ಟ್‌ ಆಗಿ ಕೆಲಸದಲ್ಲಿದ್ದ ಅಂಕಿತಾ ಭಂಡಾರಿ ಅವರನ್ನು ಬಿಜೆಪಿ-ಆರೆಸ್ಸೆಸ್‌ನ ನಾಯಕನ ಪುತ್ರ ಪುಲ್ಕಿತ್ ಆರ್ಯ ಮತ್ತು ಅವರ ಇಬ್ಬರು ಸಹಚರರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ‘ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿದೆ’: ಕೊಲೆಗೀಡಾದ ಉತ್ತರಾಖಂಡದ ಯುವತಿಯ ವಾಟ್ಸಾಪ್ ಚಾಟ್‌‌

ಹತ್ಯೆಯ ನಂತರ ಅವರ ದೇಹವನ್ನು ರಿಷಿಕೇಶ ಬಳಿಯ ಚಿಲ್ಲಾ ಕಾಲುವೆಗೆ ಎಸೆಯಲಾಗಿತ್ತು. ಪೊಲೀಸರು ಸೆಪ್ಟೆಂಬರ್ 24 ರಂದು ಮೃತದೇಹವನ್ನು ಪತ್ತೆ ಹೆಚ್ಚು ಅಲ್ಲಿಂದ ಹೊರತೆಗೆದಿದ್ದರು.

ತನ್ನನ್ನು ವೇಶ್ಯಾವಾಟಿಕೆಗೆ ತಳ್ಳುವ ಹೋಟೆಲ್ ಮ್ಯಾನೇಜರ್ ಮತ್ತು ಆತನ ಸಹಾಯಕರ ಪ್ರಯತ್ನವನ್ನು ಸಂತ್ರಸ್ತ ಯುವತಿ ವಿರೋಧಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇದನ್ನು ಊಹಿಸಿ…ಬಿಜೆಪಿಯ ನಾಯಕರೊಬ್ಬರು ಹೋಟೆಲ್ ಹೊಂದಿದ್ದಾರೆ ಮತ್ತು ಅವರ ಮಗ ಒಬ್ಬ ಹುಡುಗಿಯನ್ನು ವೇಶ್ಯೆಯಾಗಲು ಒತ್ತಾಯಿಸುತ್ತಿದ್ದಾನೆ… ಆದರೆ ಅವರು ವೇಶ್ಯೆಯಾಗಲು ನಿರಾಕರಿಸಿದಾಗ, ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ” ಎಂದು ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೇರಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

ಈ ದೇಶದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದು ಅತ್ಯಂತ ಅಸಹ್ಯಕರ, ಅತ್ಯಂತ ನಾಚಿಕೆಗೇಡಿನ ಉದಾಹರಣೆಯಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತವು ಮಹಿಳೆಯರನ್ನು ವಸ್ತು ಮತ್ತು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುತ್ತದೆ. ಈ ಸಿದ್ಧಾಂತದಿಂದ ಭಾರತ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ತನ್ನ ಮಹಿಳೆಯರನ್ನು ಗೌರವಿಸಲು ಕಲಿಯದೆ ಅಥವಾ ಅವರನ್ನು ಸಬಲೀಕರಣಗೊಳಿಸಲು ಕಲಿಯದೆ, ದೇಶವು ಎಂದಿಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ… ತನ್ನ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುವ ದೇಶವು ವಿಫಲಗೊಂಡು ಅವನತಿ ಹೊಂದುತ್ತದೆ” ಎಂದು ಅವರು ಹೇಳಿದ್ದಾರೆ.

‘ಹೆಣ್ಣು ಮಗುವನ್ನು ಉಳಿಸಿ’ ಎಂಬ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನೂ ರಾಹುಲ್ ಗಾಂಧಿ ಗುರಿಯಾಗಿಸಿದ್ದಾರೆ.

“ಹೆಣ್ಣು ಮಗುವನ್ನು ಉಳಿಸಿ ಎಂದು ಪ್ರಧಾನಿ ಘೋಷಣೆ ಮಾಡುತ್ತಾರೆ. ಆದರೆ ಬಿಜೆಪಿ ಅತ್ಯಾಚಾರಿಯನ್ನು ಉಳಿಸುವ ಕೆಲಸ ಮಾಡುತ್ತದೆ. ಅವರಯ ಕೇವಲ ಭಾಷಣಗಳು, ಸುಳ್ಳು ಮತ್ತು ಪೊಳ್ಳು ಭಾಷಣಗಳನ್ನು ಮಾಡಿದ ಭಾರತದ ಮೊದಲ ಪ್ರಧಾನಿಯಾಗಿದ್ದಾರೆ. ಅವರ ಆಡಳಿತವು ಅಪರಾಧಿಗಳಿಗೆ ಮೀಸಲಾಗಿದೆ. ಆದರೆ ಈಗ ಭಾರತವು ಮೌನವಾಗಿ ಕುಳಿತುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ರಾಹುಲ್ ಗಾಂಧಿ ಅವರು ಈ ಹಿಂದೆಯೂ ಉತ್ತರಾಖಂಡ್ ಹತ್ಯೆಯ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

“ಅಪರಾಧ ಮತ್ತು ದುರಹಂಕಾರ ಬಿಜೆಪಿಗೆ ಸಮಾನಾರ್ಥಕ ಪದವಾಗಿದೆ. ಘಟೆನೆಯ ಬಗ್ಗೆ ಯಾವುದೇ ಮುಜುಗರವಿಲ್ಲ, ಯಾವುದೇ ಪದಗಳಿಲ್ಲ, ಕೇವಲ ಮೌನ ಮಾತ್ರ. ‘ಮಹಿಳೆಯರು ನನ್ನಿಂದ ಏನನ್ನೂ ನಿರೀಕ್ಷಿಸಬಾರದು’ ಎಂಬುವುದು ​​ಪ್ರಧಾನಿಯ ಈ ಸಂದೇಶ ಸ್ಪಷ್ಟವಾಗಿದೆ” ಎಂದು ಅವರು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...