HomeಮುಖಪುಟPFI ಮೇಲಿನ ನಿಷೇಧ: ರಾಜಕೀಯ ನಾಯಕರು ಏನಂತಾರೆ?

PFI ಮೇಲಿನ ನಿಷೇಧ: ರಾಜಕೀಯ ನಾಯಕರು ಏನಂತಾರೆ?

- Advertisement -
- Advertisement -

ಕೇಂದ್ರ ಸರ್ಕಾರವು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಿಎಫ್‌ಐ ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿದೆ. ಈ ಕುರಿತು ಪರ-ವಿರೋಧದ ಪ್ರತಿಕ್ರಿಯಗಳು ಕೇಳಿಬಂದಿವೆ. ರಾಜಕೀಯ ನಾಯಕರು ಏನು ಹೇಳುತ್ತಾರೆ ಎಂಬುದರ ವರದಿ ಇಲ್ಲಿದೆ.

ಮೊದಲು ಆರ್‌ಎಸ್‌ಎಸ್‌ ನಿಷೇಧಿಸಿ: ಲಾಲೂ ಪ್ರಸಾದ್ ಯಾದವ್

ಪಿಎಫ್‌ಐನಂತೆ, ಆರ್‌ಎಸ್‌ಎಸ್ ಸೇರಿದಂತೆ ದ್ವೇಷ ಹರಡುವ ಎಲ್ಲಾ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಮೊದಲನೆಯದಾಗಿ ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು. ಏಕೆಂದರೆ ಅದು ಪಿಎಫ್‌ಐಗಿಂತ ಕೆಟ್ಟ ಸಂಘಟನೆಯಾಗಿದೆ ಎಂದು ಆರ್‌ಜೆಡಿಯ ಹಿರಿಯ ಮುಖಂಡ ಲಾಲೂ ಪ್ರಸಾದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಆರ್‌ಎಸ್‌ಎಸ್ ಅನ್ನು ಈ ಹಿಂದೆ ಎರಡು ಬಾರಿ ನಿಷೇಧಿಸಲಾಗಿದೆ. ನೆನಪಿಡಿ, ಆರ್‌ಎಸ್‌ಎಸ್ ಅನ್ನು ಮೊದಲು ನಿಷೇಧಿಸಿದ್ದು ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಿಎಫ್‌ಐ ನಿಷೇಧವನ್ನು ಬೆಂಬಲಿಸುವುದಿಲ್ಲ- ಅಸಾದುದ್ದೀನ್ ಓವೈಸಿ

ನಾನು ಯಾವಾಗಲೂ ಪಿಎಫ್‌ನ ಕಾರ್ಯವಿಧಾನವನ್ನು ವಿರೋಧಿಸುತ್ತೇನೆ ಮತ್ತು ಪ್ರಜಾತಾಂತ್ರಿಕ ವಿಧಾನದ ನಂಬಿಕೆ ಇಟ್ಟಿದ್ದೇನೆ. ಆದರೆ PFI ಮೇಲಿನ ಈ ನಿಷೇಧವನ್ನು ಬೆಂಬಲಿಸಲಾಗುವುದಿಲ್ಲ ಎಂದು AIMIM ಪಕ್ಷದ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣಾ ತಂತ್ರ – ಸಾಗರೀಕ ಘೋಷ್

ಕಳೆದ 8 ವರ್ಷಗಳಿಂದ PFI ತನ್ನ ಚಟುವಟಿಕೆಗಳನ್ನು ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಮಾತನಾಡಲಿಲ್ಲ. ಈಗ ಗುಜರಾತ್‌ ಮತ್ತು ಕರ್ನಾಟಕದ ಚುನಾವಣೆ ಮುಂದಿರುವಾಗ ಇದ್ದಕ್ಕಿದ್ದಂತೆ PFI ಅನ್ನು ನಿಷೇಧಿಸಲಾಗಿದೆ. ಇದರಿಂದ ಏನು ಬದಲಾಗುತ್ತದೆ ಎಂದು ಪತ್ರಕರ್ತೆ ಸಾಗರೀಕ ಘೋಷ್ ಪ್ರಶ್ನಿಸಿದ್ದಾರೆ.

ಪಿಎಫ್‌ಐ ಕಚೇರಿಗಳನ್ನು ಮುಚ್ಚಿಸುತ್ತಿದ್ದೇವೆ – ಹಿಮಂತ ಬಿಸ್ವಾ ಶರ್ಮಾ

ಅಸ್ಸಾಂ ಸರ್ಕಾರವು ಈಗಾಗಲೇ ಮುಂದಿನ ಕ್ರಮಗಳನ್ನು ಪ್ರಾರಂಭಿಸಿದೆ. ನಾವು ಕಮ್ರೂಪ್, ಬಕ್ಸಾ ಮತ್ತು ಕರೀಮ್‌ಗಂಜ್‌ನಲ್ಲಿರುವ ಪಿಎಫ್‌ಐ ಮತ್ತು ಸಿಎಫ್‌ಐ ಕಚೇರಿಗಳನ್ನು ಬಂದ್ ಮಾಡಿದ್ದೇವೆ. ಪಿಎಫ್‌ಐ ಮುಖಂಡರನ್ನು ಬಂಧಿಸುತ್ತಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

PFI ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತದೆ – ಏಕನಾಥ್ ಶಿಂಧೆ

ಪಾಕಿಸ್ತಾನ್ ಜಿಂದಾಬಾದ್’ ಎನ್ನುವ ಪಿಎಫ್‌ಐಗೆ ದೇಶದಲ್ಲಿ ಅಂತಹ ಘೋಷಣೆಗಳನ್ನು ಕೂಗುವ ಹಕ್ಕು ಇಲ್ಲ. ಈ ಬಗ್ಗೆ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲಿದೆ. ಕೇಂದ್ರ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಂಡಿದೆ. ಇದು ದೇಶಭಕ್ತರ ದೇಶ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ.

RSS ಅನ್ನೂ ನಿಷೇಧಿಸಲಾಗುವುದೇ? – ಎಂ.ವಿ ಗೋವಿಂದನ್

ಎಲ್ಲಾ ರೀತಿಯ ಕೋಮುವಾದಗಳು ಅಪಾಯಕಾರಿ. ಬಹುಸಂಖ್ಯಾತ ಕೋಮುವಾದ ಮತ್ತು ಅಲ್ಪಸಂಖ್ಯಾತ ಕೋಮುವಾದ ಸಹ ಸಮಾನವಾಗಿ ಅಪಾಯಕಾರಿಯಾಗಿವೆ. ಸಂಘಟನೆಯನ್ನು ನಿಷೇಧಿಸುವುದರಿಂದ ಅದರ ಸಿದ್ಧಾಂತ ಕೊನೆಗೊಳ್ಳುವುದಿಲ್ಲ. ಅವರು ಹೊಸ ಹೆಸರು ಅಥವಾ ಗುರುತಿನೊಂದಿಗೆ ಹಿಂತಿರುಗುತ್ತಾರೆ. ನೀವು ಎಲ್ಲಾ ಕೋಮುವಾದಿ ಸಂಘಟನೆಗಳನ್ನು ನಿಷೇಧಿಸುವ ತರ್ಕವನ್ನು ಅನುಸರಿಸಿದರೆ, RSS ಮೊದಲು ಬರುತ್ತದೆ. ಅದನ್ನೂ ನಿಷೇಧಿಸಲಾಗುವುದೇ?” ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಪ್ರಶ್ನಿಸಿದ್ದಾರೆ.

ಪಿಎಫ್‌ಐ ನಿಷೇಧ ಸ್ವಾಗತಾರ್ಹ – ಬಸವರಾಜ ಬೊಮ್ಮಾಯಿ

ಪಿಎಫ್‌ಐ ಸಂಘಟನೆ ಮೇಲಿನ ನಿಷೇಧವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿದ್ದಾರೆ. “ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಪಿ.ಎಫ್.ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿ.ಎಫ್.ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಹಾಗಾಗಿ ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

RSS ಅನ್ನು ಕೂಡ ನಿಷೇಧಿಸಬೇಕು – ಕೋಡಿಕುನ್ನಿಲ್ ಸುರೇಶ್

ಕೇಂದ್ರ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಘಟನೆಗಳನ್ನು 5 ವರ್ಷ ನಿಷೇಧಿಸಿರುವುದರ ಕುರಿತು ಪ್ರತಿಕ್ರಿಯಿಸಿರುವ ಕೇರಳದ ಮಲಪ್ಪುರಂ ಸಂಸದ ಕೋಡಿಕುನ್ನಿಲ್ ಸುರೇಶ್, RSS ಅನ್ನು ಕೂಡ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಿಎಫ್‌ಐ ಒಂದನ್ನೇ ಬ್ಯಾನ್ ಮಾಡಿದರೆ ಪರಿಹಾರ ಸಿಗುವುದಿಲ್ಲ. ಆರ್‌ಎಸ್‌ಎಸ್‌ ಅನ್ನು ಸಹ ಬ್ಯಾನ್ ಮಾಡಬೇಕು. ಏಕೆಂದರೆ ಆರ್‌ಎಸ್‌ಎಸ್‌ ಸಹ ಇಡೀ ದೇಶಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ. ಆರ್‌ಎಸ್‌ಎಸ್‌ ಮತ್ತು ಪಿಎಫ್‌ಐ ಎರಡೂ ಸಹ ಸಮಾನವಾಗಿದ್ದು ಎರಡನ್ನು ನಿಷೇಧಿಸಬೇಕು, ಆದರೆ ಕೇವಲ ಪಿಎಫ್‌ಐ ಅನ್ನು ನಿಷೇಧಿಸುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...