Homeಮುಖಪುಟಉತ್ತರ ಪ್ರದೇಶ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ದಾಳಿ ಮಾಡಿದ ಬಿಜೆಪಿ...

ಉತ್ತರ ಪ್ರದೇಶ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ದಾಳಿ ಮಾಡಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಸ್ಥಳೀಯ ಬಿಜೆಪಿ ನಾಯಕರ ನೇತೃತ್ವದ ಗುಂಪು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ನಡೆದಿದೆ. ಘಟನೆಯ ನಂತರ ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಸುಮಾರು 400ರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯು ಸೋಮವಾರ ರಾತ್ರಿ ನಡೆದಿದ್ದು, ಕಾಸ್‌ಗಂಜ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿರುವ ಭೂದೇವ್ ಅವರು ಗ್ರಾಮ ಪ್ರಧಾನ್ ಮೂಲಕ ರೈತರೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಇದನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ (ಸ್ವರಾಜ್) ರೈತ ಸಂಘದ ಕಾರ್ಯಕರ್ತರು ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಕೆಲವು ಹೊರಗಿನ ಜನರು ಅಲ್ಲಿಗೆ ಬಂದಿದ್ದು, ನಂತರ ಘರ್ಷಣೆ ಉಂಟಾಗಿದೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ ದೀಪಕ್ ಕುಮಾರ್ ಮಂಗಳವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದ್ದು, ರೈತರು ರಕ್ತದಲ್ಲಿ ಮುಳುಗಿರುವ ದೃಶ್ಯಗಳು ಮತ್ತು ಚಿತ್ರಗಳು ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ‘ಶ್ರಮಜೀವಿಗಳು, ವೈರಾಗ್ಯ ಮತ್ತು ಮತಧರ್ಮ’: ‘ಜರ್ಮನ್ ರೈತ ಯುದ್ಧ’ ಪುಸ್ತಕದ ಆಯ್ದ ಭಾಗ

“ಆಸ್ಪತ್ರೆಗೆ ಕನಿಷ್ಠ 47 ಗಾಯಗೊಂಡ ಜನರು ದಾಖಲಾಗಿದ್ದಾರೆ” ಎಂದು ಕಾಸ್ಗಂಜ್‌ನ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಎಪಿ ಕಿಶೋರ್ ಹೇಳಿದ್ದಾರೆ. ಗಾಯಗೊಂಡ ಪ್ರಕರಣಗಳ ಸಂಖ್ಯೆ 100 ಕ್ಕಿಂತ ಹೆಚ್ಚು ಎಂದು ರೈತರೊಬ್ಬರು ಹೇಳಿದ್ದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಪಿ. ಸಿಂಗ್ ಮತ್ತು ಪಕ್ಷದ ಕಿಸಾನ್ ಮೋರ್ಚಾ ಜಿಲ್ಲಾ ಮುಖ್ಯಸ್ಥ ದೇವೇಂದ್ರ ಸಿಂಗ್ ಲೋಧಿ ನೇತೃತ್ವದ ಜನರ ಗುಂಪು ಪೊಲೀಸ್ ಠಾಣೆಯೊಳಗೆ ರೈತರ ಮೇಲೆ ಲಾಠಿ ಮತ್ತು ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಬಿಕೆಯು (ಸ್ವರಾಜ್) ರಾಷ್ಟ್ರೀಯ ಅಧ್ಯಕ್ಷ ಕುಲದೀಪ್ ಪಾಂಡೆ ಹೇಳಿದ್ದಾರೆ.

“100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುಮಾರು 40 ರೈತರಿಗೆ ತಲೆಗೆ ಗಾಯಗಳು ಉಂಟಾಗಿವೆ. ಕೆಲವರು ಕಾಸ್ಗಂಜ್‌ನಲ್ಲಿ ಚಿಕಿತ್ಸೆ ಪಡೆದಿದ್ದು, ಇತರರನ್ನು ಅಲಿಗಢಕ್ಕೆ ಕಳುಹಿಸಲಾಗಿದೆ” ಎಂದು ಕುಲದೀಪ್‌ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: MSP ಸಿಗದುದ್ದಕ್ಕೆ ಮೋದಿ ಕಾರಣ ಎಂಬ ಪತ್ರ ಬರೆದಿಟ್ಟು ಸಾವಿಗೆ ಶರಣಾದ ರೈತ

ಒಟ್ಟು ಮೂರು ಎಫ್‌ಐಆರ್‌ಗಳನ್ನು ಪೊಲೀಸರು ದಾಖಲಿಸಿದ್ದಾರೆ. ಇದರಲ್ಲಿ 52 ಜನರನ್ನು ಗುರುತಿಸಲಾಗಿದ್ದು, 150 ಅಪರಿಚಿತ ರೈತರನ್ನು ಹೆಸರಿಸಲಾಗಿದೆ.

ಮತ್ತೊಂದು ಎಫ್‌ಐಆರ್ ಅನ್ನು ಬಿಜೆಪಿ ನಾಯಕ ಲೋಧಿ ಅವರು ಯೂನಿಯನ್ ಮುಖಂಡರು ಮತ್ತು 50 ಅಪರಿಚಿತರ ವಿರುದ್ಧ ದಾಖಲಿಸಿದ್ದಾರೆ. ಬಿಜೆಪಿಯ ಕೆ.ಪಿ. ಸಿಂಗ್, ಲೋಧಿ ಮತ್ತು ಇತರ 150 ಜನರ ವಿರುದ್ಧ ಬಿಕೆಯು (ಸ್ವರಾಜ್) ದೂರಿನ ಮೇರೆಗೆ ಕೂಡಾ ಎಫ್‌ಐಆರ್‌ ದಾಖಲಾಗಿದೆ.

ಬಿಕೆಯು (ಸ್ವರಾಜ್ಯ) ಮುಖಂಡ ಸುಜೀತ್ ಸತ್ಯದರ್ಶಿ ಮಾತನಾಡಿ, “ರೈತರ ಮೇಲಿನ ಹಲ್ಲೆ ಪೂರ್ವ ಯೋಜಿತವಾಗಿತ್ತು. ಬೆಳಗ್ಗೆಯಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದೆವು. ಸಂಜೆ ವೇಳೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ನಂತರ ಬಿಜೆಪಿ ಸದಸ್ಯರು ಪೊಲೀಸ್ ಠಾಣೆ ಮತ್ತು ನಮ್ಮ ಮೇಲೆ ದಾಳಿ ನಡೆಸಿದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭರವಸೆಯಲ್ಲೇ ಉಳಿದ ‘ರೈತಮಿತ್ರ’ ನೇಮಕಾತಿ; ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

“ಅಷ್ಟೆಲ್ಲೆ, ಪೊಲೀಸರು ನಮ್ಮ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಲಾಠಿಚಾರ್ಜ್ ಮಾಡಿದರು. ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯ ಪೊಲೀಸರೊಂದಿಗೆ ಸೇರಿ ಪ್ರತಿಭಟನಾ ಸ್ಥಳದ ಬಳಿಯ ರಸ್ತೆಯಲ್ಲಿ ರೈತರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಸುಜೀತ್‌ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಕಾಸ್‌ಗಂಜ್‌‌ ಎಸ್‌ಪಿ ಬಿಬಿಜಿಟಿಎಸ್‌ ಮೂರ್ತಿ,‘‘ರೈತ ಸಂಘಕ್ಕೆ ಸಂಬಂಧಿಸಿದವರು ಪೊಲೀಸ್‌ ಠಾಣೆಯಲ್ಲೇ ಪ್ರತಿಭಟನೆ ನಡೆಸುತ್ತಿದ್ದರು. ಹಲವು ಬಾರಿ ಮನವೊಲಿಸಲು ಯತ್ನಿಸಿದರೂ ಪ್ರತಿಭಟನೆ ಕೈಬಿಡಲಿಲ್ಲ. ಸಂಜೆ ವೇಳೆಗೆ ಅವರು ಸ್ಥಳೀಯ ನಿವಾಸಿಗಳ ಗುಂಪಿನೊಂದಿಗೆ ವಾಗ್ವಾದ ನಡೆಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಪರಸ್ಪರ ಹಲ್ಲೆ ನಡೆಸುತ್ತಿರುವ ಜನರ ಮೇಲೆ ಲಾಠಿ ಚಾರ್ಜ್ ಮಾಡಬೇಕಾಯಿತು. ಸಂಪೂರ್ಣ ವಿಷಯವನ್ನು ವಿವರವಾಗಿ ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ” ಎಂದು ಹೇಳಿದ್ದಾರೆ.

“ಹಿರಿಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 47 ಜನರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಅವರಲ್ಲಿ ಹದಿನಾರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಅಲಿಘರ್‌ನಲ್ಲಿರುವ ಉನ್ನತ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ” ಎಂದು ಸಿಎಂಒ ಕಿಶೋರ್ ತಿಳಿಸಿದ್ದಾರೆ.

ಇದನ್ನೂ ಓದಿ: ನಿರುದ್ಯೋಗದ ವಿರುದ್ಧ ಬೀದಿಗಿಳಿಯುತ್ತಿರುವ ರೈತರು: ದೆಹಲಿಯೆಲ್ಲೆಡೆ ಬಿಗಿ ಬಂದೋಬಸ್ತ್

“ರೈತ ಸಂಘದ ಕುಲದೀಪ್ ಪಾಂಡೆ ಅವರು ನಕಲಿ ರೈತ ಸಂಘವನ್ನು ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರ ವಿರುದ್ಧ ಅವರು ಮಾಡಿರುವ ಆರೋಪಗಳು ತಪ್ಪು” ಎಂದು ಬಿಜೆಪಿ ನಾಯಕ ಕೆ.ಪಿ. ಸಿಂಗ್ ಹೇಳಿದ್ದಾರೆ. “ಕುಲದೀಪ್ ವಿರುದ್ಧ 28 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಅವರು ಸುಲಿಗೆಕೋರರಾಗಿದ್ದು, ರೈತರ ಹಿತಾಸಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಕಾಸ್‌ಗಂಜ್‌ ಶಾಸಕ ದೇವೇಂದ್ರ ಸಿಂಗ್ ರಜಪೂ‌ತ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...