Homeಚಳವಳಿಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

ಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

"ನಾವು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಪಾಲಿನ ತುಂಡು ಭೂಮಿ ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ"

- Advertisement -
- Advertisement -

ಜೀವ ಬಿಟ್ಟರೂ ಸರಿಯೆ, ನಮ್ಮ ಪಾಲಿನ ತುಂಡು ಭೂಮಿ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಮಂಡ್ಯ ಜಿಲ್ಲೆಯ ಎಲೆಚಾಕನಹಳ್ಳಿ ಗ್ರಾಮದ ದಲಿತರು ಕರ್ನಾಟಕ ಗೃಹ ಮಂಡಳಿಯ ಭೂಸ್ವಾಧೀನ ವಿರುದ್ಧ ಸತತ ಮೂರು ದಿನದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕರ್ನಾಟಕ ಗೃಹ ಮಂಡಳಿಯು ಮಂಡ್ಯ ತಾಲ್ಲೂಕಿನ ತೂಬಿನಗೆರೆ ಗ್ರಾ.ಪಂ.ವ್ಯಾಪ್ತಿಯ ಎಲೆಚಾಕನಹಳ್ಳಿ ಗ್ರಾಮದ ಸಮೀಪ ಹೊಸ ಬಡಾವಣೆ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸೇರಿದ 21 ಎಕರೆ ತೋಟಿ ಇನಾಂ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿರುವುದನ್ನು ಕೈಬಿಡಬೇಕೆಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಡಾ.ಬಾಬೂಜಿ ಮತ್ತು ಡಾ.ಭೀಮ್ ರಾವ್ ಯುವಕರ ಸಂಘದ ನೇತೃತ್ವದಲ್ಲಿ ನೂರಾರು ದಲಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ದಲಿತರನ್ನು ಮತ್ತೆ ಗುಲಾಮಗಿರಿಗೆ ದೂಡುವ ಹುನ್ನಾರ – ಸ್ವಾಮಿ ವೈ.ಜೆ

ಗ್ರಾಮದ ಯುವ ದಲಿತ ಮುಖಂಡ ವೈ.ಜೆ ಸ್ವಾಮಿ ಮಾತನಾಡಿ, “200 ವರ್ಷಗಳಿಂದ ನಮ್ಮ ಹಿರೀಕರು ದುಡಿದ ಪರಿಣಾಮ ನಮ್ಮ 20 ದಲಿತ ಕುಟುಂಬಗಳಿಗೆ 21 ಎಕರೆ ತೋಟಿ ಇನಾಂ ಭೂಮಿ ಸಿಕ್ಕಿದೆ. ಆ ಭೂಮಿಯನ್ನು ನಂಬಿಕೊಂಡು ನಾವು ಕೃಷಿ-ಹೈನುಗಾರಿಕೆ ಮಾಡಿಕೊಂಡು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಈ ತುಂಡು ಭೂಮಿಯನ್ನು ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಲಿತರು ಸಾಕು ಆಡು-ಕುರಿಗಳು, ಹಸು-ದನಗಳು ಅಪ್ಪಿ ತಪ್ಪಿ ಸವರ್ಣಿಯರ ಹೊಲ- ಗದ್ದೆಗೆ ಹೋಗಿಬಿಟ್ಟರೆ ಆಕಾಶವೇ ಉರುಳಿಹೋದ ಹಾಗೆ ಆಡುತ್ತಾರೆ. ದಲಿತರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಇದು ತಪ್ಪಬೇಕು, ನಮ್ಮ ಭೂಮಿಯಲ್ಲಿ ನಾವು ಬದುಕಬೇಕು ಎಂಬುದು ನಮ್ಮ ಆಶಯ. ಆದರೆ ನಮ್ಮ ಭೂಮಿಯನ್ನು ಚಿಲ್ಲರೆ ಕಾಸು ಕೊಟ್ಟು ಕಿತ್ತುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಒಂದು ವೇಕೆ ಕೆಎಚ್‌ಬಿ ಭೂಸ್ವಾಧೀನ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಗ್ರಾಮದ ಹಿರಿಯರು  ಮಾತನಾಡಿ, “ನಮಗೆ ಈ ಭೂಮಿಯೇ ಗತಿ. ನಮ್ಮ ಮಕ್ಕಳ ಭವಿಷ್ಯಕ್ಕೆ ಇರುವುದು ಈ ಭೂಮಿ ಮಾತ್ರ. ಹಾಗಾಗಿ ನೀವು ಏನು ಮಾಡಿದರೂ ಸಹ ಈ ಭೂಮಿ ಬಿಟ್ಟುಕೊಡುವುದಿಲ್ಲ. ಎಷ್ಟು ದುಡ್ಡು ಕೊಟ್ಟರೂ ನಾವು ಭೂಮಿ ಬಿಡುವುದಿಲ್ಲ. ಬಡವರಿಗೆ ದಯವಿಟ್ಟು ಮೋಸ ಮಾಡಬೇಡಿ” ಎಂದು ಅಳಲು ತೋಡಿಕೊಂಡರು.

ಕೃಷಿ ಯೋಗ್ಯ ಭೂಮಿಯ – ಕೆರೆಯ ವಶಕ್ಕೆ ವಿರೋಧ

ಎಲೆಚಾಕನಹಳ್ಳಿ ಗ್ರಾಮದ ಬಳಿ ಸುಮಾರು 200 ಎಕರೆ ಪ್ರದೇಶದಲ್ಲಿ ಗೃಹ ಮಂಡಳಿಯು ಬಡಾವಣೆ ನಿರ್ಮಿಸಲು ಉದ್ದೇಶಿಸಿದ್ದು, ಈ ಪೈಕಿ ಸುಮಾರು 50 ಎಕರೆ ಕೃಷಿ ಯೋಗ್ಯ ಜಮೀನು ಪರಿಶಿಷ್ಟ ಜಾತಿಗೆ ಸೇರಿದ ತೋಟಿ ಇನಾಂ ಭೂಮಿಯಾಗಿದೆ. ಒಂದು ಕೆರೆ ಸಹ ಇದ್ದು ಭಾರೀ ಮಳೆಗೆ ತುಂಬಿದೆ. ಈ ಭೂಮಿಯನ್ನೆ ನಂಬಿಕೊಂಡು ಸುಮಾರು 20 ಪರಿಶಿಷ್ಟ ಜಾತಿಯ ಕುಟುಂಬಗಳು ಜೀವನ ನಡೆಸುತ್ತಿದ್ದು, ಅಲ್ಲಿ ಟಮೋಟ, ಬದನೆಕಾಯಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಈ ಭೂಮಿಯನ್ನು ವಶಪಡಿಸಿಕೊಂಡು ಅಲ್ಲಿ ನಿವೇಶನ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಲೆ ನಿಗದಿಯಲ್ಲಿ ಭಾರಿ ತಾರತಮ್ಯ

ಅಲ್ಲದೆ ದಲಿತರ ಭೂಮಿ ವಶಪಡಿಸಿಕೊಳ್ಳುವಾಗ ಬೆಲೆ ನಿಗಧಿಯಲ್ಲಿಯೂ ಸಹ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಕೆಲವರ ಜಮೀನಿಗೆ ಎಕರೆಯೊಂದಕ್ಕೆ 52 ಲಕ್ಷ ರೂ.ಗಳ ಬೆಲೆ ನಿಗದಿ ಮಾಡಿದರೆ ದಲಿತರ ಭೂಮಿಗೆ ಎಕರೆಯೊಂದಕ್ಕೆ ಕೇವಲ 7 ಲಕ್ಷ ರೂ. ನಿಗದಿ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಿಂದ ಕೇವಲ 500 ಮೀಟರ್ ದೂರದಲ್ಲಿರುವ ಈ ಭೂಮಿಗೆ ಎಕರೆಗೆ ಕೇವಲ 7 ಲಕ್ಷ ರೂಗಳನ್ನು ಯಾವ ಆಧಾರದಲ್ಲಿ ಮಾಡಲಾಗಿದೆ? ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ನೀಡಿ ವಂಚಿಸಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಕೆರೆಯನ್ನು ಮಣ್ಣಿನಿಂದ ಮುಚ್ಚಿ ಅದರ ಮೇಲೆ ಮನೆ ಕಟ್ಟಲು ಹೊರಟಿರುವ ಕೆ.ಎಚ್.ಬಿ!

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಕೆ.ಹೆಚ್.ಬಿ. ಸಹಾಯಕ ಕಾರ್ಯಪಾಲಕ ಅಭಿಯಂತರ ಲಾರೆನ್ಸ್, ಮತ್ತೊಬ್ಬ ಅಧಿಕಾರಿ ವೇಣುಗೋಪಾಲ್ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸ್ವೀಕರಿಸಿದ್ದಾರೆ. ಆದರೆ ಭೂ ಸ್ವಾಧೀನ ಕೈಬಿಡುವುದರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಲದಿಗೆ ಜೆಸಿಬಿ ಯಂತ್ರಗಳನ್ನು ತಂದು ಕಾಮಗಾರಿ ಆರಂಭಿಸಲಾಗುತ್ತಿದೆ. ಆದರೆ ಅದಕ್ಕೆ ನಾವು ಅವಕಾಶ ಕೊಟ್ಟಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಗ್ರಾಮದ ಮುಖಂಡರಾದ ವೈ.ಜೆ ಸ್ವಾಮಿ, ದಿನೇಶ್, ಗವಿ, ಬೋರಯ್ಯ, ಜವರಯ್ಯ, ಸಾಗರ್ ಮತ್ತಿತರರು ಹೋರಾಟದ ನೇತೃತ್ವ ವಹಿಸಿದ್ದಾರೆ.

ಇದನ್ನೂ ಓದಿ; ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...