Homeಚಳವಳಿಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

ಜೀವ ಬಿಟ್ಟೆವು ಭೂಮಿ ಕೊಡೆವು: KHB ಭೂಸ್ವಾಧೀನ ವಿರೋಧಿಸಿ ದಲಿತರ ಪ್ರತಿಭಟನೆ

"ನಾವು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಪಾಲಿನ ತುಂಡು ಭೂಮಿ ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ"

- Advertisement -
- Advertisement -

ಜೀವ ಬಿಟ್ಟರೂ ಸರಿಯೆ, ನಮ್ಮ ಪಾಲಿನ ತುಂಡು ಭೂಮಿ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಮಂಡ್ಯ ಜಿಲ್ಲೆಯ ಎಲೆಚಾಕನಹಳ್ಳಿ ಗ್ರಾಮದ ದಲಿತರು ಕರ್ನಾಟಕ ಗೃಹ ಮಂಡಳಿಯ ಭೂಸ್ವಾಧೀನ ವಿರುದ್ಧ ಸತತ ಮೂರು ದಿನದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕರ್ನಾಟಕ ಗೃಹ ಮಂಡಳಿಯು ಮಂಡ್ಯ ತಾಲ್ಲೂಕಿನ ತೂಬಿನಗೆರೆ ಗ್ರಾ.ಪಂ.ವ್ಯಾಪ್ತಿಯ ಎಲೆಚಾಕನಹಳ್ಳಿ ಗ್ರಾಮದ ಸಮೀಪ ಹೊಸ ಬಡಾವಣೆ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಸಮುದಾಯದವರಿಗೆ ಸೇರಿದ 21 ಎಕರೆ ತೋಟಿ ಇನಾಂ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿರುವುದನ್ನು ಕೈಬಿಡಬೇಕೆಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಡಾ.ಬಾಬೂಜಿ ಮತ್ತು ಡಾ.ಭೀಮ್ ರಾವ್ ಯುವಕರ ಸಂಘದ ನೇತೃತ್ವದಲ್ಲಿ ನೂರಾರು ದಲಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ದಲಿತರನ್ನು ಮತ್ತೆ ಗುಲಾಮಗಿರಿಗೆ ದೂಡುವ ಹುನ್ನಾರ – ಸ್ವಾಮಿ ವೈ.ಜೆ

ಗ್ರಾಮದ ಯುವ ದಲಿತ ಮುಖಂಡ ವೈ.ಜೆ ಸ್ವಾಮಿ ಮಾತನಾಡಿ, “200 ವರ್ಷಗಳಿಂದ ನಮ್ಮ ಹಿರೀಕರು ದುಡಿದ ಪರಿಣಾಮ ನಮ್ಮ 20 ದಲಿತ ಕುಟುಂಬಗಳಿಗೆ 21 ಎಕರೆ ತೋಟಿ ಇನಾಂ ಭೂಮಿ ಸಿಕ್ಕಿದೆ. ಆ ಭೂಮಿಯನ್ನು ನಂಬಿಕೊಂಡು ನಾವು ಕೃಷಿ-ಹೈನುಗಾರಿಕೆ ಮಾಡಿಕೊಂಡು ಸ್ವಾವಲಂಬಿಗಳಾಗಿ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಆದರೆ ನಮ್ಮ ಈ ತುಂಡು ಭೂಮಿಯನ್ನು ಸಹ ಕಿತ್ತುಕೊಂಡು ಮತ್ತೆ ದಲಿತರನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಲಿತರು ಸಾಕು ಆಡು-ಕುರಿಗಳು, ಹಸು-ದನಗಳು ಅಪ್ಪಿ ತಪ್ಪಿ ಸವರ್ಣಿಯರ ಹೊಲ- ಗದ್ದೆಗೆ ಹೋಗಿಬಿಟ್ಟರೆ ಆಕಾಶವೇ ಉರುಳಿಹೋದ ಹಾಗೆ ಆಡುತ್ತಾರೆ. ದಲಿತರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಇದು ತಪ್ಪಬೇಕು, ನಮ್ಮ ಭೂಮಿಯಲ್ಲಿ ನಾವು ಬದುಕಬೇಕು ಎಂಬುದು ನಮ್ಮ ಆಶಯ. ಆದರೆ ನಮ್ಮ ಭೂಮಿಯನ್ನು ಚಿಲ್ಲರೆ ಕಾಸು ಕೊಟ್ಟು ಕಿತ್ತುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಒಂದು ವೇಕೆ ಕೆಎಚ್‌ಬಿ ಭೂಸ್ವಾಧೀನ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಗ್ರಾಮದ ಹಿರಿಯರು  ಮಾತನಾಡಿ, “ನಮಗೆ ಈ ಭೂಮಿಯೇ ಗತಿ. ನಮ್ಮ ಮಕ್ಕಳ ಭವಿಷ್ಯಕ್ಕೆ ಇರುವುದು ಈ ಭೂಮಿ ಮಾತ್ರ. ಹಾಗಾಗಿ ನೀವು ಏನು ಮಾಡಿದರೂ ಸಹ ಈ ಭೂಮಿ ಬಿಟ್ಟುಕೊಡುವುದಿಲ್ಲ. ಎಷ್ಟು ದುಡ್ಡು ಕೊಟ್ಟರೂ ನಾವು ಭೂಮಿ ಬಿಡುವುದಿಲ್ಲ. ಬಡವರಿಗೆ ದಯವಿಟ್ಟು ಮೋಸ ಮಾಡಬೇಡಿ” ಎಂದು ಅಳಲು ತೋಡಿಕೊಂಡರು.

ಕೃಷಿ ಯೋಗ್ಯ ಭೂಮಿಯ – ಕೆರೆಯ ವಶಕ್ಕೆ ವಿರೋಧ

ಎಲೆಚಾಕನಹಳ್ಳಿ ಗ್ರಾಮದ ಬಳಿ ಸುಮಾರು 200 ಎಕರೆ ಪ್ರದೇಶದಲ್ಲಿ ಗೃಹ ಮಂಡಳಿಯು ಬಡಾವಣೆ ನಿರ್ಮಿಸಲು ಉದ್ದೇಶಿಸಿದ್ದು, ಈ ಪೈಕಿ ಸುಮಾರು 50 ಎಕರೆ ಕೃಷಿ ಯೋಗ್ಯ ಜಮೀನು ಪರಿಶಿಷ್ಟ ಜಾತಿಗೆ ಸೇರಿದ ತೋಟಿ ಇನಾಂ ಭೂಮಿಯಾಗಿದೆ. ಒಂದು ಕೆರೆ ಸಹ ಇದ್ದು ಭಾರೀ ಮಳೆಗೆ ತುಂಬಿದೆ. ಈ ಭೂಮಿಯನ್ನೆ ನಂಬಿಕೊಂಡು ಸುಮಾರು 20 ಪರಿಶಿಷ್ಟ ಜಾತಿಯ ಕುಟುಂಬಗಳು ಜೀವನ ನಡೆಸುತ್ತಿದ್ದು, ಅಲ್ಲಿ ಟಮೋಟ, ಬದನೆಕಾಯಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಈ ಭೂಮಿಯನ್ನು ವಶಪಡಿಸಿಕೊಂಡು ಅಲ್ಲಿ ನಿವೇಶನ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಲೆ ನಿಗದಿಯಲ್ಲಿ ಭಾರಿ ತಾರತಮ್ಯ

ಅಲ್ಲದೆ ದಲಿತರ ಭೂಮಿ ವಶಪಡಿಸಿಕೊಳ್ಳುವಾಗ ಬೆಲೆ ನಿಗಧಿಯಲ್ಲಿಯೂ ಸಹ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಕೆಲವರ ಜಮೀನಿಗೆ ಎಕರೆಯೊಂದಕ್ಕೆ 52 ಲಕ್ಷ ರೂ.ಗಳ ಬೆಲೆ ನಿಗದಿ ಮಾಡಿದರೆ ದಲಿತರ ಭೂಮಿಗೆ ಎಕರೆಯೊಂದಕ್ಕೆ ಕೇವಲ 7 ಲಕ್ಷ ರೂ. ನಿಗದಿ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಿಂದ ಕೇವಲ 500 ಮೀಟರ್ ದೂರದಲ್ಲಿರುವ ಈ ಭೂಮಿಗೆ ಎಕರೆಗೆ ಕೇವಲ 7 ಲಕ್ಷ ರೂಗಳನ್ನು ಯಾವ ಆಧಾರದಲ್ಲಿ ಮಾಡಲಾಗಿದೆ? ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ನೀಡಿ ವಂಚಿಸಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಕೆರೆಯನ್ನು ಮಣ್ಣಿನಿಂದ ಮುಚ್ಚಿ ಅದರ ಮೇಲೆ ಮನೆ ಕಟ್ಟಲು ಹೊರಟಿರುವ ಕೆ.ಎಚ್.ಬಿ!

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಕೆ.ಹೆಚ್.ಬಿ. ಸಹಾಯಕ ಕಾರ್ಯಪಾಲಕ ಅಭಿಯಂತರ ಲಾರೆನ್ಸ್, ಮತ್ತೊಬ್ಬ ಅಧಿಕಾರಿ ವೇಣುಗೋಪಾಲ್ ಭೇಟಿ ನೀಡಿ ಹಕ್ಕೊತ್ತಾಯ ಪತ್ರ ಸ್ವೀಕರಿಸಿದ್ದಾರೆ. ಆದರೆ ಭೂ ಸ್ವಾಧೀನ ಕೈಬಿಡುವುದರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಲದಿಗೆ ಜೆಸಿಬಿ ಯಂತ್ರಗಳನ್ನು ತಂದು ಕಾಮಗಾರಿ ಆರಂಭಿಸಲಾಗುತ್ತಿದೆ. ಆದರೆ ಅದಕ್ಕೆ ನಾವು ಅವಕಾಶ ಕೊಟ್ಟಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಗ್ರಾಮದ ಮುಖಂಡರಾದ ವೈ.ಜೆ ಸ್ವಾಮಿ, ದಿನೇಶ್, ಗವಿ, ಬೋರಯ್ಯ, ಜವರಯ್ಯ, ಸಾಗರ್ ಮತ್ತಿತರರು ಹೋರಾಟದ ನೇತೃತ್ವ ವಹಿಸಿದ್ದಾರೆ.

ಇದನ್ನೂ ಓದಿ; ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...