Homeಮುಖಪುಟಅಯೋಧ್ಯೆ: ಮಕ್ಕಳಿಗೆ ಅನ್ನ, ಉಪ್ಪು ತಿನ್ನಿಸಿದ ಶಾಲೆ; ವಿಡಿಯೊ ವೈರಲ್‌

ಅಯೋಧ್ಯೆ: ಮಕ್ಕಳಿಗೆ ಅನ್ನ, ಉಪ್ಪು ತಿನ್ನಿಸಿದ ಶಾಲೆ; ವಿಡಿಯೊ ವೈರಲ್‌

- Advertisement -
- Advertisement -

ಉತ್ತರಪ್ರದೇಶದ ಅಯೋಧ್ಯೆಯ ಕೌನ್ಸಿಲ್ ಶಾಲೆಯೊಂದರಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವಾಗಿ ಅನ್ನ ಹಾಗೂ ಉಪ್ಪನ್ನು ನೀಡಲಾಗಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮಕ್ಕಳು ಅನ್ನ ಮತ್ತು ಉಪ್ಪನ್ನು ತಿನ್ನುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಬಿಕಾಪುರ ಬ್ಲಾಕ್‌ನಲ್ಲಿರುವ ಬೈಂತಿ ಚೌರೆ ಬಜಾರ್‌ನ ಪಾಂಡೆ ಪ್ರಾಥಮಿಕ ಶಾಲೆಯ ವಿಡಿಯೊ ಇದಾಗಿದೆ ವರದಿಯಾಗಿದೆ. ಮಕ್ಕಳಿಗೆ ಮಂಗಳವಾರ ಮಧ್ಯಾಹ್ನದ ಊಟದ ವೇಳೆ ಸಾದಾ ಅನ್ನ ಮತ್ತು ಉಪ್ಪು ನೀಡಲಾಯಿತು ಎಂದು ಗ್ರಾಮಸ್ಥರು ದೂರಿದ್ದಾರೆ. ಇದೇ ರೀತಿಯ ಕೃತ್ಯ ಹಲವಾರು ದಿನಗಳಿಂದ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರಾಥಮಿಕ ಶಿಕ್ಷಣಾಧಿಕಾರಿ (ಬಿಎಸ್‌ಎ) ಸಂತೋಷ್‌ಕುಮಾರ್ ರೈ ಮಾತನಾಡಿ, “ವಿಷಯ ಗಮನಕ್ಕೆ ಬಂದ ತಕ್ಷಣ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ವರದಿ ತರಿಸಿಕೊಳ್ಳಲಾಗಿದೆ, ತಪ್ಪಿತಸ್ಥರು ಹಾಗೂ ಕಾರಣರಾದ ಶಿಕ್ಷಕರ ವಿರುದ್ಧ ಇಲಾಖೆ ಕ್ರಮ ಜರುಗಿಸುತ್ತದೆ” ಎಂದಿರುವುದಾಗಿ ‘ದೈನಿಕ್ ಭಾಸ್ಕರ್‌’ ವರದಿ ಮಾಡಿದೆ.

“ವಿಡಿಯೋ ನೋಡಿದ ಅಯೋಧ್ಯೆಯ ಶಿಕ್ಷಣಾಧಿಕಾರಿ ಶಾಲೆಯ ಪ್ರಾಂಶುಪಾಲರನ್ನು, ಶಾಲೆಯ ಪ್ರಧಾನರನ್ನು ಅಮಾನತುಗೊಳಿಸಿದ್ದಾರೆ” ಎಂದು ಪತ್ರಕರ್ತ ಪಿಶೂರ್ ರೈ ಟ್ವೀಟ್ ಮಾಡಿದ್ದಾರೆ.

“ಉತ್ತರಪ್ರದೇಶ ಸರ್ಕಾರ ಪ್ರಾಥಮಿಕ ಶಾಲೆಯ ಪ್ರತಿ ವಿದ್ಯಾರ್ಥಿಯ ಮಧ್ಯಾಹ್ನದ ಊಟಕ್ಕೆ ದಿನವೊಂದಕ್ಕೆ 4.97 ರೂ.ಗಳನ್ನು ನೀಡುತ್ತದೆ. ಈ ಹಣದಲ್ಲಿ ಆರೋಗ್ಯಕರವಾದ ಊಟವನ್ನು ನೀಡಲು ಸಾಧ್ಯವಿಲ್ಲ ಎಂದು ಹಲವಾರು ಸಂದರ್ಭಗಳಲ್ಲಿ, ಪ್ರಾಂಶುಪಾಲರು ಮತ್ತು ಪ್ರಧಾನರು ದೂರಿದ್ದಾರೆ. ಅನುದಾನವನ್ನು ಹೆಚ್ಚಿಸುವ ಬಗ್ಗೆ ಸರಕಾರ ಚಿಂತನೆ ನಡೆಸಬೇಕು” ಎಂದು ಪಿಶೂಯ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.

“ಗ್ರಾಮದ ಸಮೀಪವೇ ಶಾಲೆ ಇರುವುದರಿಂದ ಅನೇಕ ಮಕ್ಕಳು ಮಧ್ಯಾಹ್ನದ ಊಟಕ್ಕಾಗಿ ಮನೆಗೆ ಹೋಗುತ್ತಿದ್ದಾರೆ. ಊಟ ಮುಗಿಸಿಕೊಂಡು ಮತ್ತೆ ಶಾಲೆಗೆ ಹಿಂತಿರುಗುತ್ತಾರೆ. ಉಪ್ಪು, ಅನ್ನ ನೀಡುತ್ತಿರುವ ವಿಚಾರವನ್ನು ಮಕ್ಕಳು ಪೋಷಕರಿಗೆ ತಿಳಿಸಿದಾಗ ಶಾಲೆಯಲ್ಲಿ ಊಟ ಮಾಡದಂತೆ ಪೋಷಕರು ತಿಳಿಸಿದ್ದಾರೆ” ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಮಂಗಳವಾರವೂ ಇದೇ ರೀತಿಯ ಆಹಾರ ಕಂಡುಬಂದಾಗ ಗ್ರಾಮದ ಅನೇಕ ಪುರುಷರು ಮತ್ತು ಮಹಿಳೆಯರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ದೂರು ನೀಡಿದರೂ ಶಿಕ್ಷಕರು ಪಾಲಕರ ಮಾತನ್ನು ನಿರ್ಲಕ್ಷಿಸಿದ್ದಾರೆ.

ಈ ಘಟನೆಯನ್ನು ಗ್ರಾಮಸ್ಥರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಅಮಿತ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ ಎಂದು ‘ದೈನಿಕ್ ಭಾಸ್ಕರ್‌’ ವರದಿ ಮಾಡಿದೆ.

ಬಿಎಸ್‌ಎ ಸಂತೋಷ್‌ಕುಮಾರ್ ರೈ ಮಾತನಾಡಿ, ಈ ಸಂಬಂಧ ಸಂಜೆ ವೇಳೆಗೆ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ವರದಿ ಕೇಳಲಾಗಿದ್ದು, ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಉಪ್ಪು ನೀಡಿದ ಘಟನೆ ಇದೇ ಮೊದಲಲ್ಲ

ಉತ್ತರ ಪ್ರದೇಶದ ಶಾಲೆಯಲ್ಲಿ ಮಕ್ಕಳಿಗೆ ಉಪ್ಪು ಬಡಿಸಿದ್ದು ಇದೇ ಮೊದಲೇನೂ ಅಲ್ಲ. 2019ರಲ್ಲಿ ಫ್ರೀಲ್ಯಾನ್ಸ್‌ ಪತ್ರಕರ್ತ ಪವನ್‌ ಜೈಸ್ವಾಲ್‌ ವಿಡಿಯೊವನ್ನು ಹಂಚಿಕೊಂಡಿದ್ದರು. ಘಟನೆಯನ್ನು ಬೆಳಕಿಗೆ ತಂದಿದ್ದಕ್ಕೆ ಅವರ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿತ್ತು.

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಕ್ಯಾನ್ಸರ್‌ನಿಂದ ಬಳಸುತ್ತಿದ್ದ ಪತ್ರಕರ್ತ ಜೈಸ್ವಾಲ್‌ ಕಳೆದ ಮೇ ತಿಂಗಳಿನಲ್ಲಿ ನಿಧನರಾದರು. ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....