Homeಮುಖಪುಟಅಯೋಧ್ಯೆ: ಮಕ್ಕಳಿಗೆ ಅನ್ನ, ಉಪ್ಪು ತಿನ್ನಿಸಿದ ಶಾಲೆ; ವಿಡಿಯೊ ವೈರಲ್‌

ಅಯೋಧ್ಯೆ: ಮಕ್ಕಳಿಗೆ ಅನ್ನ, ಉಪ್ಪು ತಿನ್ನಿಸಿದ ಶಾಲೆ; ವಿಡಿಯೊ ವೈರಲ್‌

- Advertisement -
- Advertisement -

ಉತ್ತರಪ್ರದೇಶದ ಅಯೋಧ್ಯೆಯ ಕೌನ್ಸಿಲ್ ಶಾಲೆಯೊಂದರಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವಾಗಿ ಅನ್ನ ಹಾಗೂ ಉಪ್ಪನ್ನು ನೀಡಲಾಗಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮಕ್ಕಳು ಅನ್ನ ಮತ್ತು ಉಪ್ಪನ್ನು ತಿನ್ನುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಬಿಕಾಪುರ ಬ್ಲಾಕ್‌ನಲ್ಲಿರುವ ಬೈಂತಿ ಚೌರೆ ಬಜಾರ್‌ನ ಪಾಂಡೆ ಪ್ರಾಥಮಿಕ ಶಾಲೆಯ ವಿಡಿಯೊ ಇದಾಗಿದೆ ವರದಿಯಾಗಿದೆ. ಮಕ್ಕಳಿಗೆ ಮಂಗಳವಾರ ಮಧ್ಯಾಹ್ನದ ಊಟದ ವೇಳೆ ಸಾದಾ ಅನ್ನ ಮತ್ತು ಉಪ್ಪು ನೀಡಲಾಯಿತು ಎಂದು ಗ್ರಾಮಸ್ಥರು ದೂರಿದ್ದಾರೆ. ಇದೇ ರೀತಿಯ ಕೃತ್ಯ ಹಲವಾರು ದಿನಗಳಿಂದ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರಾಥಮಿಕ ಶಿಕ್ಷಣಾಧಿಕಾರಿ (ಬಿಎಸ್‌ಎ) ಸಂತೋಷ್‌ಕುಮಾರ್ ರೈ ಮಾತನಾಡಿ, “ವಿಷಯ ಗಮನಕ್ಕೆ ಬಂದ ತಕ್ಷಣ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ವರದಿ ತರಿಸಿಕೊಳ್ಳಲಾಗಿದೆ, ತಪ್ಪಿತಸ್ಥರು ಹಾಗೂ ಕಾರಣರಾದ ಶಿಕ್ಷಕರ ವಿರುದ್ಧ ಇಲಾಖೆ ಕ್ರಮ ಜರುಗಿಸುತ್ತದೆ” ಎಂದಿರುವುದಾಗಿ ‘ದೈನಿಕ್ ಭಾಸ್ಕರ್‌’ ವರದಿ ಮಾಡಿದೆ.

“ವಿಡಿಯೋ ನೋಡಿದ ಅಯೋಧ್ಯೆಯ ಶಿಕ್ಷಣಾಧಿಕಾರಿ ಶಾಲೆಯ ಪ್ರಾಂಶುಪಾಲರನ್ನು, ಶಾಲೆಯ ಪ್ರಧಾನರನ್ನು ಅಮಾನತುಗೊಳಿಸಿದ್ದಾರೆ” ಎಂದು ಪತ್ರಕರ್ತ ಪಿಶೂರ್ ರೈ ಟ್ವೀಟ್ ಮಾಡಿದ್ದಾರೆ.

“ಉತ್ತರಪ್ರದೇಶ ಸರ್ಕಾರ ಪ್ರಾಥಮಿಕ ಶಾಲೆಯ ಪ್ರತಿ ವಿದ್ಯಾರ್ಥಿಯ ಮಧ್ಯಾಹ್ನದ ಊಟಕ್ಕೆ ದಿನವೊಂದಕ್ಕೆ 4.97 ರೂ.ಗಳನ್ನು ನೀಡುತ್ತದೆ. ಈ ಹಣದಲ್ಲಿ ಆರೋಗ್ಯಕರವಾದ ಊಟವನ್ನು ನೀಡಲು ಸಾಧ್ಯವಿಲ್ಲ ಎಂದು ಹಲವಾರು ಸಂದರ್ಭಗಳಲ್ಲಿ, ಪ್ರಾಂಶುಪಾಲರು ಮತ್ತು ಪ್ರಧಾನರು ದೂರಿದ್ದಾರೆ. ಅನುದಾನವನ್ನು ಹೆಚ್ಚಿಸುವ ಬಗ್ಗೆ ಸರಕಾರ ಚಿಂತನೆ ನಡೆಸಬೇಕು” ಎಂದು ಪಿಶೂಯ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.

“ಗ್ರಾಮದ ಸಮೀಪವೇ ಶಾಲೆ ಇರುವುದರಿಂದ ಅನೇಕ ಮಕ್ಕಳು ಮಧ್ಯಾಹ್ನದ ಊಟಕ್ಕಾಗಿ ಮನೆಗೆ ಹೋಗುತ್ತಿದ್ದಾರೆ. ಊಟ ಮುಗಿಸಿಕೊಂಡು ಮತ್ತೆ ಶಾಲೆಗೆ ಹಿಂತಿರುಗುತ್ತಾರೆ. ಉಪ್ಪು, ಅನ್ನ ನೀಡುತ್ತಿರುವ ವಿಚಾರವನ್ನು ಮಕ್ಕಳು ಪೋಷಕರಿಗೆ ತಿಳಿಸಿದಾಗ ಶಾಲೆಯಲ್ಲಿ ಊಟ ಮಾಡದಂತೆ ಪೋಷಕರು ತಿಳಿಸಿದ್ದಾರೆ” ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಮಂಗಳವಾರವೂ ಇದೇ ರೀತಿಯ ಆಹಾರ ಕಂಡುಬಂದಾಗ ಗ್ರಾಮದ ಅನೇಕ ಪುರುಷರು ಮತ್ತು ಮಹಿಳೆಯರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ದೂರು ನೀಡಿದರೂ ಶಿಕ್ಷಕರು ಪಾಲಕರ ಮಾತನ್ನು ನಿರ್ಲಕ್ಷಿಸಿದ್ದಾರೆ.

ಈ ಘಟನೆಯನ್ನು ಗ್ರಾಮಸ್ಥರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಅಮಿತ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ ಎಂದು ‘ದೈನಿಕ್ ಭಾಸ್ಕರ್‌’ ವರದಿ ಮಾಡಿದೆ.

ಬಿಎಸ್‌ಎ ಸಂತೋಷ್‌ಕುಮಾರ್ ರೈ ಮಾತನಾಡಿ, ಈ ಸಂಬಂಧ ಸಂಜೆ ವೇಳೆಗೆ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ವರದಿ ಕೇಳಲಾಗಿದ್ದು, ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಉಪ್ಪು ನೀಡಿದ ಘಟನೆ ಇದೇ ಮೊದಲಲ್ಲ

ಉತ್ತರ ಪ್ರದೇಶದ ಶಾಲೆಯಲ್ಲಿ ಮಕ್ಕಳಿಗೆ ಉಪ್ಪು ಬಡಿಸಿದ್ದು ಇದೇ ಮೊದಲೇನೂ ಅಲ್ಲ. 2019ರಲ್ಲಿ ಫ್ರೀಲ್ಯಾನ್ಸ್‌ ಪತ್ರಕರ್ತ ಪವನ್‌ ಜೈಸ್ವಾಲ್‌ ವಿಡಿಯೊವನ್ನು ಹಂಚಿಕೊಂಡಿದ್ದರು. ಘಟನೆಯನ್ನು ಬೆಳಕಿಗೆ ತಂದಿದ್ದಕ್ಕೆ ಅವರ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿತ್ತು.

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಕ್ಯಾನ್ಸರ್‌ನಿಂದ ಬಳಸುತ್ತಿದ್ದ ಪತ್ರಕರ್ತ ಜೈಸ್ವಾಲ್‌ ಕಳೆದ ಮೇ ತಿಂಗಳಿನಲ್ಲಿ ನಿಧನರಾದರು. ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...