Homeಮುಖಪುಟಗೋವು ದತ್ತು ಪಡೆವ ಪುಣ್ಯಕೋಟಿ ಯೋಜನೆ: ಪ್ರತಿ ಸರ್ಕಾರಿ ನೌಕರರಿಂದ 11,000 ರೂ ದೇಣಿಗೆ ವಸೂಲಿಗೆ...

ಗೋವು ದತ್ತು ಪಡೆವ ಪುಣ್ಯಕೋಟಿ ಯೋಜನೆ: ಪ್ರತಿ ಸರ್ಕಾರಿ ನೌಕರರಿಂದ 11,000 ರೂ ದೇಣಿಗೆ ವಸೂಲಿಗೆ ವಿರೋಧ

ಗೋವುಗಳ ಬದಲಿಗೆ ಮಕ್ಕಳಲ್ಲಿರುವ ಅಪೌಷ್ಠಿಕತೆ ಹೋಗಲಾಡಿಸಲು ದೇಣಿಗೆ ಕೇಳಿದರೆ ಸಂತೋಷದಿಂದ ಕೊಡುತ್ತೇವೆ ಎಂದು ಪ.ಜಾ ಮತ್ತು ಪ.ಪಂಗಡ ನೌಕರರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

- Advertisement -
- Advertisement -

ಗೋವುಗಳನ್ನು ದತ್ತು ಪಡೆಯುವ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗಾಗಿ ಪ್ರತಿ ಸರ್ಕಾರಿ ನೌಕರರು ವಾರ್ಷಿಕ 11,000 ರೂ ದೇಣಿಗೆ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರು ತಿಳಿಸಿದ್ದಾರೆ. ಆದರೆ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಪ.ಜಾ ಮತ್ತು ಪ.ಪಂಗಡ ನೌಕರರ ಸಂಘವು ದೇಣಿಗೆ ನೀಡಬೇಕೆಂಬ ಪ್ರಸ್ತಾಪವನ್ನು ತಿರಸ್ಕರಿಸಿದೆ.

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಅಲ್ಲದೆ ವಯಸ್ಸಾದ, ಖಾಯಿಲೆಗೊಳಗಾದ, ತಪ್ಪಿಸಿಕೊಂಡ ಹಾಗೂ ಅಕ್ರಮ ಸಾಗಾಟದಲ್ಲಿ ವಶಕ್ಕೆ ಪಡೆದ ಗೋವುಗಳನ್ನು ಸಾಕುವುದಕ್ಕಾಗಿ ಕರ್ನಾಟಕ ಸರ್ಕಾರವು ಪುಣ್ಯಕೋಟಿ ದತ್ತು ಯೋಜನೆಯನ್ನು ಜಾರಿಗೆ ತಂದಿದೆ. ಚಿತ್ರನಟ ಸುದೀಪ್‌ರವರನ್ನು ರಾಯಭಾರಿಯನ್ನಾಗಿ ನೇಮಿಸಿದೆ. ಆದರೆ ಈ ಯೋಜನೆ ಜಾರಿಗೆ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟಕ್ಕೆ ಪತ್ರ ಬರೆದು ಎ ಮತ್ತು ಬಿ ದರ್ಜೆಯ ನೌಕರರು ಪ್ರತಿ ವರ್ಷ 11,000 ರೂಗಳನ್ನು ದೇಣಿಗೆ ನೀಡಬೇಕೆಂದು ಮನವಿ ಮಾಡಿದ್ದರು.

ಸಿಎಂರವರ ಮನವಿ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರಾದ ಸಿ.ಎಸ್ ಷಡಕ್ಷರಿಯವರು, “ನಾವು ಒಂದು ಲಕ್ಷ ಗೋವುಗಳನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಬಹುತೇಕ ಎಲ್ಲಾ ನೌಕರರು ದೇಣಿಗೆ ನೀಡಲು ಒಪ್ಪಿದ್ದಾರೆ. ಕೆಲವು ಮಾನ್ಯತೆ ಪಡೆಯದ ಸಂಸ್ಥೆಗಳು ಮಾತ್ರ ವಿರೋಧಿಸುತ್ತಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸರ್ಕಾರಿ ನೌಕರರು 11,000 ರೂ ದೇಣಿಗೆ ನೀಡಬೇಕೆಂಬ ಪ್ರಸ್ತಾಪವನ್ನು ಪ.ಜಾ ಮತ್ತು ಪ.ಪಂಗಡ ನೌಕರರ ಸಂಘದ ಅಧ್ಯಕ್ಷರಾದ ಡಿ.ಶಿವಕುಮಾರ್‌ರವರು ತೀವ್ರವಾಗಿ ವಿರೋಧಿಸಿದ್ದಾರೆ. “ಯಾವುದೇ ದರ್ಜೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಇದುವರೆಗೂ ಸರ್ಕಾರದ ಜೊತೆಗೆ ನಿಂತಿದ್ದೇವೆ. ನೈಸರ್ಗಿಕ ವಿಪತ್ತುಗಳು ಎದುರಾದಾಗ ಎಲ್ಲರೂ ದೇಣಿಗೆ ನೀಡಿದ್ದೇವೆ. ಆದರೆ ಈ ಪುಣ್ಯಕೋಟಿ ದತ್ತು ಯೋಜನೆ ಸರ್ಕಾರದ್ದಾಗಿರುವುದರಿಂದ ಅದಕ್ಕೆ ಹಣ ಮೀಸಲಿಡಬೇಕಾದುದ್ದು ಸರ್ಕಾರದ ಜವಾಬ್ದಾರಿ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಇಲ್ಲದಿರುವಾಗ ಎಲ್ಲ ನೌಕರರು ಕಡ್ಡಾಯವಾಗಿ ದೇಣಿಗೆ ನೀಡಬೇಕೆಂಬುದನ್ನು ಒಪ್ಪಲಾಗುವುದಿಲ್ಲ” ಎಂದಿದ್ದಾರೆ.

“ದೇಣಿಗೆ ನೀಡಿ ಗೋವುಗಳನ್ನು ದತ್ತು ಪಡೆಯುವುದು ಸರ್ಕಾರಿ ನೌಕರರ ಕೆಲಸವಲ್ಲ. ಅದರ ಬದಲಿಗೆ ಮಕ್ಕಳಲ್ಲಿರುವ ಅಪೌಷ್ಠಿಕತೆ ಹೋಗಲಾಡಿಸಲು ದೇಣಿಗೆ ಕೇಳಿದರೆ ಸಂತೋಷದಿಂದ ಕೊಡುತ್ತೇವೆ. ಅದು ನಿಜವಾದ ರಾಷ್ಟ್ರನಿರ್ಮಾಣದ ಕೆಲಸ” ಎಂದು ಶಿವಕುಮಾರ್ ತಿಳಿಸಿದ್ದಾರೆ.

ಇಂದು ಈ ಕುರಿತು ಸರ್ಕಾರಿ ನೌಕರರ ಸಭೆ ನಡೆಯುತ್ತಿದ್ದು, ದೇಣಿಗೆ ನೀಡಬೇಕೊ ಬೇಡವೊ ಎಂದು ತೀರ್ಮಾನವಾಗಲಿದೆ. ಪ.ಜಾ ಮತ್ತು ಪ.ಪಂಗಡ ನೌಕರರ ಸಂಘವು ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...