Homeಅಂಕಣಗಳುಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

- Advertisement -
- Advertisement -

ಸದರಿ ಬಿಜೆಪಿ ಸರಕಾರ ರಚನೆಗೊಂಡಿದ್ದೆ ಭ್ರಷ್ಟತೆಯಿಂದ. ಭ್ರಷ್ಟತೆಯಿಂದ ರಚನೆಗೊಂಡ ಸರಕಾರ ಪ್ರಾಮಾಣಿಕವಾಗಿ ಆಡಳಿತ ನಡೆಸಬೇಕೆನ್ನುವುದೇ ಮೂರ್ಖತನ, ಆದ್ದರಿಂದ ಇದು ನಲವತ್ತು ಪರಸೆಂಟಿನ ಸರಕಾರ ಎಂದು ಮೂದಲಿಸಿದರೆ ಅಲ್ಲಿ ಯಾರಿಗೂ ಅವಮಾನವಾಗುವುದಿಲ್ಲವಂತಲ್ಲಾ. ಇದನ್ನ ತಿಳಿಯದ ಕಾಂಗ್ರೆಸ್ಸಿಗರು ಪೇಸಿಎಂ ಪೋಸ್ಟರುಗಳನ್ನು ಕಂಡಕಂಡಲ್ಲಿ ಹಚ್ಚತೊಡಗಿದ್ದಾರೆ. ಅಷ್ಟಕ್ಕೂ ಸಿಎಂಗೂ ಕೂಡ ಇಂತಹ ಅವಹೇಳನಕಾರಿಯಾದ ಪೋಸ್ಟರ್ ಬಗ್ಗೆ ಏನೂ ಅನ್ನಿಸುವುದಿಲ್ಲ, ಏಕೆಂದರೆ ಅವರಿರುವ ಪಾರ್ಟಿಯೇ ಹಾಗೆ, ಅದಕ್ಕೆ ಅವಮಾನ ಮಾಡುವಂತಹ ಪದಗಳೇಯಿಲ್ಲ. ಬಿಜೆಪಿಗಳ ವಿಷಯದಲ್ಲಿ ಅವರಿಗೆ ಸರಿಯಾಗಿ ತಾಗುವ ಕಟು ಟೀಕೆಯ ಪದ ಕನ್ನಡ ಭಾಷೆಯಲ್ಲೇ ಇಲ್ಲದಂತಾಗಿದೆಯಂತಲ್ಲಾ. ಇಂತಹ ಪಾರ್ಟಿಗೆ ಇಲ್ಲವೇ ಇಲ್ಲದ ಮಾನ ಹರಾಜಾಗಿ ಹೋಗಿದೆಯೆಂದು ನಾರಾಯಣಸ್ವಾಮಿ ಎಂಬ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿದ್ದಾರಂತಲ್ಲಾ. ಅದಕ್ಕಾಗಿ ಯಾವ ಲಾಯರ್ ಹಿಡಿಯುವುದು ಲಾಯರ್ ಫೀಜ್‌ನ ಯಾರಿಂದ ವಸೂಲು ಮಾಡಬೇಕೆಂಬ ಚಿಂತೆಗೆ ಬಿದ್ದಿದ್ದಾರಂತಲ್ಲಾ, ಥೂತ್ತೇರಿ.

******

ಭ್ರಷ್ಟನ ಅಥವಾ ಲಫಂಗನ ಕೊನೆಯ ಅಸ್ತ್ರ ಜಾತಿಯಂತಲ್ಲಾ. ನಮ್ಮ ಎಲ್ಲಾ ಸರಕಾರಿ ಮತ್ತು ಖಾಸಗಿ ಸಂಸ್ಥೆಯಲ್ಲಿ ಸೇರಿಕೊಂಡಿರುವ ಲಫಂಗರು ತಾವು ಮಾಡುವ ಭ್ರಷ್ಟ ಕೆಲಸ ಅಥವಾ ವ್ಯಭಿಚಾರದ ಕೆಲಸ- ಇಂತಹ ಯಾವುದೇ ಕೃತ್ಯ ಬಯಲಾದಾಗ ಆತ ಬಳಸುವ ಕಟ್ಟಕಡೆಯ ಅಸ್ತ್ರ ಜಾತಿಯಾಗಿರುತ್ತದೆ. ಏಕೆಂದರೆ ಭಾರತದಲ್ಲಿ ಅದು ಹುಟ್ಟಿನಾಗಿನಿಂದ ಜಾತಿ ಒಂದು ಶಾಪವಾಗಿ ಪರಿಣಮಿಸಿದೆ. ಭ್ರಷ್ಟ ಅಥವಾ ಲಫಂಗನ ಕೃತ್ಯ ಬಯಲಿಗೆಳೆದಾಗ ಆತ ಕೂಗಿಕೊಳ್ಳುವುದೇ “ನೋಡ್ರಪ್ಪ ನಾನು ಇಂಥ ಜಾತಿಲುಟ್ಟಿದ್ದೆ ತಪ್ಪಾ, ನನಿಗೇನಾದ್ರು ಅನ್ಲಿ ನಮ್ಮ ಜಾತಿನೆ ಹಿಡಿದು ಬೈತ ಕುಂತವುರಲ್ಲಾ” ಎಂಬ ಆಕ್ರಂದನ ಅಪರಾಧಿಯ ಬಾಯಲ್ಲಿ ಬರತ್ತಂತಲ್ಲಾ. ಆ ಆಕ್ರಂದನ ಬಂದಿದ್ದೇ ತಡ ಜಾತಿ ಮನಸ್ಸುಗಳು ಮುತ್ತಿಗೊಳ್ಳುತ್ತವೆ. ತಮ್ಮವನನ್ನ ರಕ್ಷಿಸುತ್ತವೆ. ಈಗ ಕರ್ನಾಟಕದಲ್ಲಿ ಆಗುತ್ತಿರುವುದೂ ಅದೆ. ನಲವತ್ತು ಪರಸೆಂಟಿನ ಆರೋಪವೆದುರಿಸುತ್ತಿರುವ ಸರ್ಕಾರದ ಮುಂದಾಳಾದ ಬೊಮ್ಮಾಯಿ ಕುರಿತ ಪೋಸ್ಟರುಗಳು ರಾರಾಜಿಸಿದ ಕೂಡಲೇ ಅನಾದಿಕಾಲದಿಂದಲೂ ನರಿ ಬುದ್ಧಿಯಲ್ಲೇ ಬದುಕುತ್ತಿರುವ ಜನ ಬೇರೆ ದಾರಿಕಾಣದೆ, ನೋಡಿ ಲಿಂಗಾಯಿತ ಮುಖ್ಯಮಂತ್ರಿಗಳನ್ನು ಕಂಡರಾಗದ ಕಾಂಗೈಗಳು ಹೇಗೆ ಭ್ರಷ್ಟತೆಯ ಆಪಾದನೆ ಮಾಡಿ ಅಪಮಾನ ಮಾಡುತ್ತಿವೆ. ಇದು ನಿಜ್ಕಕೂ ಸಾದ ಲಿಂಗಾಯಿತರಿಗೆ ಮಾಡುತ್ತಿರುವ ಅವಮಾನವೆಂದು ಬೊಬ್ಬೆಹೊಡೆದವಂತಲ್ಲಾ, ಥೂತ್ತೇರಿ.

*****

ಕಾಂಗ್ರೆಸ್ ಪಕ್ಷದ ಸಮಸ್ಯೆಗಳು, ಸ್ಫೋಟಗಳು ಯಾವುದನ್ನು ತಲೆಗೆ ಹಚ್ಚಿಕೊಳ್ಳದ ರಾಹುಲಗಾಂಧಿ ಕೇರಳದ ಮುಖಾಂತರ ಕರ್ನಾಟಕವನ್ನು ಪ್ರವೇಶಿಸಲಿದ್ದಾರೆ. ಈ ನಡಿಗೆ ಕಾಂಗ್ರೆಸ್ ರಾಜಕಾರಣದಲ್ಲಿ ಹಿಂದೆಂದೂ ಕಾಣದಿದ್ದ ಸಂತೋಷವನ್ನು ಕೊಟ್ಟಿದೆಯಂತಲ್ಲಾ. ನಡೆಯುವ ಮಾರ್ಗದ ಊರುಗಳ ಮಾಹಿತಿ ಪಡೆಯುತ್ತ, ಅಲ್ಲಿನ ಸಾಹಿತಿಗಳು, ಕಲಾವಿದರು, ಜಾನಪದ ವಿದ್ವಾಂಸರು, ಸ್ವಾತಂತ್ರ್ಯ ಹೋರಾಟಗಾರರ ವಿವರಗಳನ್ನು ರಾಹುಲಗಾಂಧಿ ಪಡೆಯುತ್ತ ಹೋಗುತ್ತಿರಬೇಕಾದರೆ ಈ ಬಗ್ಗೆ ಕಾಂಗ್ರೆಸ್ಸಿನ ರಾಜಕಾರಣಿಗಳನ್ನ ಅವರು ಕೇಳುತ್ತಿಲ್ಲವಂತಲ್ಲಾ. ರಾಹುಲಗಾಂಧಿ ಏನಾದರೂ ಪಾರ್ಟಿ ಸದಸ್ಯರಿಗೆ ಈ ಕೆಲಸ ವಹಿಸಿದ್ದಾದರೆ ಕಲೆ, ಸಾಹಿತ್ಯ, ಸಂಗೀತ, ಜಾನಪದದ ವಿಷಯದಲ್ಲಿ ಗಂಧಗಾಳಿಯಿಲ್ಲದ ಅವರು ತಮ್ಮ ಹತ್ತಿರದ ದೂರದ ಸಂಬಂಧಿಗಳನ್ನ ಕರೆಸಿ ರಾಹುಲಗಾಂಧಿ ಎದುರು ನಿಲ್ಲಿಸಿ ಫೋಟೊ ತೆಗೆಸಿಕೊಳ್ಳಬಲ್ಲರು ಎಂದು ಊಹಿಸಿದ್ದಾರಲ್ಲಾ. ಈ ಊಹೆ ರಾಹುಲಗಾಂಧಿಗೆ ಮೊದಲೇ ಹೊಳೆದು ಕಾಂಗೈ ರಾಜಕಾರಣದ ಆವರಣದಿಂದ ಹೊರಗಿರುವ ನಿಷ್ಠಾವಂತ ವ್ಯಕ್ತಿಗಳನ್ನು ನೇಮಿಸಿದ್ದಾರಂತಲ್ಲಾ. ಈ ನಡುವೆ ಮುಂದಿನ ಚುನಾವಣೆಗೆ ಹೇಳಿಕೊಂಡು ಹೋಗಲು ಯಾವ ಸಾಧನೆಯೂ ಇಲ್ಲದ ಬಿಜೆಪಿಯ ರಾಷ್ಟ್ರೀಯ ನಾಯಕರು ಭಾರತ ಜೋಡೋ ಯಾತ್ರೆ ವಿಫಲಗೊಳಿಸಲು ಪರಿಕರಗಳನ್ನು ತಯಾರಿಸುತ್ತಿದ್ದಾರಂತಲ್ಲಾ, ಥೂತ್ತೇರಿ.

******

ಮೋದಿಯವರು ಎಪ್ಪತ್ತು ವರ್ಷಗಳ ಹಿಂದೆಯೇ ಭಾರತದಿಂದ ಕಾಲ್ತೆಗೆದ ಚೀತಾಗಳನ್ನು ತರಿಸಿ ಅವುಗಳನ್ನು ಬೋನಿನಿಂದ ಹೊರಬಿಟ್ಟು ಕ್ಲಾಪ್ ತೆಗೆಯದೆ ಕ್ಯಾಮರಾ ಕ್ಲಿಕ್ಕಿಸಿದ್ದು ಭಾರತದಾದ್ಯಂತ ಸುದ್ದಿಯಾಗಿದ್ದು ಹಳೆ ವಿಷಯ. ಸಂಘಿಗಳ ಪ್ರಕಾರ ಮೋದಿ ಕ್ಯಾಮರ ಕ್ಲಿಕ್ಕಿಸಿಲ್ಲ ಚಿರತೆಗಳ ಫೋಟೊ ತೆಗೆಯುವ ಫೋಟೊಗಾಗಿ ಕ್ಯಾಮರ ಹಿಡಿದು ನಿಂತಿದ್ದರು. ಮಾಧ್ಯಮದವರು ಫೋಟೊ ತೆಗೆಯಲು ಪೋಸು ಕೊಡುವಾಗ ತಾವೇ ಫೋಟೊ ತೆಗೆವ ಅಗತ್ಯವಿಲ್ಲ ಎಂಬುದು ಅಜ್ಞಾನಿಗಳಿಗೆ ಅರಿವಾಗಬೇಕೆಂದು ಹೇಳಿರುವ ಬಿಜೆಪಿಗಳು ಈ ಬಗ್ಗೆ ದೇಶದ್ರೋಹದ ಕೇಸು ಹಾಕಲು ಇನ್ನೂ ರೆಡಿಯಾಗಿಲ್ಲವಂತಲ್ಲಾ. ಇದೇನಾದರಾಗಲಿ ನಮಗೆ ಕಿವಿ ಮತ್ತು ಕಣ್ಣು ಸರಿಯಾಗಿದ್ದು, ಅವನ್ನು ಸರಿಯಾಗಿ ತೆರೆದುಕೊಂಡರೆ, ನಮ್ಮ ನಡುವೆ ಹಿಂಡುಹಿಂಡಾಗಿ ಬದುಕಿದ್ದ ಕಾಗೆಯೇ ಕಣ್ಮರೆಯಾಗುತ್ತಿವೆಯಲ್ಲಾ. ಕೆಲವು ಊರುಗಳಲ್ಲಂತೂ ಇಲ್ಲವೇ ಇಲ್ಲ. ಸತ್ತವನಿಗೆ ಕೂಳು ಹಾಕುವಾಗ ಅದನ್ನು ತಿನ್ನಲು ಬರುತ್ತಿದ್ದ ಈ ಕಾಗೆಗಳು ಕಾಣೆಯಾಗುತ್ತಿರುವ ಬಗ್ಗೆ ಯಾವ ಪಕ್ಷಿ ತಜ್ಞನೂ ಬಾಯಿಬಿಟ್ಟಿಲ್ಲ. ಹೊಲದಲ್ಲಿ ಮನೆ ಮೇಲೆ ಎದುರಿನ ಮರದ ಮೇಲೆ ಕುಳಿತು ಕಾಕಾ ಎನ್ನುತ್ತಿದ್ದ ಕಾಗೆ ನಿರ್ನಾಮವಾದರೆ ಗತಿಯೇನು. ಪಕ್ಷಿ ತಜ್ಞರು ನಿಜವಾದ ಕಾರಣ ಹೇಳಿ ಎಚ್ಚರಿಸಬಲ್ಲರೆ? ಅದಕ್ಕಿಂತ ಕಾಗೆ ಕಣ್ಮರೆಯಾದರೆ ಕೋಗಿಲೆಯೂ ನಿರ್ನಾಮವಾಗುತ್ತವಲ್ಲಾ ಎನ್ನಲು ನೋವಾಗುತ್ತದೆಯಲ್ಲಾ, ಥೂತ್ತೇರಿ.


ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...