Homeಸಿನಿಮಾಕ್ರೀಡೆಅಕ್ಟೋಬರ್ 23 ರಂದು ಭಾರತ-ಪಾಕ್ ಹಣಾಹಣಿ: ಟಿ20 ವಿಶ್ವಕಪ್‌ನಿಂದ ಜಸ್ಪ್ರಿತ್ ಬೂಮ್ರ ಹೊರಕ್ಕೆ

ಅಕ್ಟೋಬರ್ 23 ರಂದು ಭಾರತ-ಪಾಕ್ ಹಣಾಹಣಿ: ಟಿ20 ವಿಶ್ವಕಪ್‌ನಿಂದ ಜಸ್ಪ್ರಿತ್ ಬೂಮ್ರ ಹೊರಕ್ಕೆ

- Advertisement -
- Advertisement -

ಅಕ್ಟೋಬರ್ 16ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 23ರಂದು ಎದುರಿಸಲಿದೆ. ಈ ಸಂದರ್ಭದಲ್ಲಿಯೇ ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆಯ ಸುದ್ದಿಯೊಂದು ಅಪ್ಪಳಿಸಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ವೇಗದ ಬೌಲರ್ ಜಸ್ಪ್ರಿತ್ ಬೂಮ್ರ ಇಡೀ ಟಿ20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಸದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿಪಕ್ಷೀಯ ಸರಣಿಯಲ್ಲಿಯೂ ಸಹ ಬೂಮ್ರ ಕಣಕ್ಕಿಳಿಯಲಿಲ್ಲ. ಸೆಪ್ಟಂಬರ್ 28 ರಂದು ತಿರುವನಂತಪುರಂನಲ್ಲಿ ನಡೆದ ಮೊದಲ ಪಂದ್ಯದ ಟಾಸ್ ಮುನ್ನವೆ ಅವರು ಬೂಮ್ರ ಅವರ ಗಾಯದ ಕುರಿತು ಬಿಸಿಸಿಐ ಮಾಹಿತಿ ನೀಡಿತ್ತು.

ಬೂಮ್ರ ಗಾಯದ ಕಾರಣದಿಂದಾಗಿ ಏಷ್ಯಾಕಪ್‌ನಲ್ಲಿಯೂ ಕಣಕ್ಕಿಳಿದಿರಲಿಲ್ಲ. ಏಷ್ಯಾ ಕಪ್‌ನಲ್ಲಿ ಭಾರತದ ಬೌಲಿಂಗ್ ಕೊರತೆಯಿಂದಾಗಿಯೇ ಭಾರತವು ಫೈನಲ್‌ ತಲುಪಲು ಸಾಧ್ಯವಾಗಿರಲಿಲ್ಲ. ಆನಂತರ ಆಸ್ಟ್ರೇಲಿಯಾ ವಿರುದ್ಧ 2 ಪಂದ್ಯಗಳನ್ನು ಬೂಮ್ರ ಆಡಿದ್ದರು. ಯಾರ್ಕರ್‌ಗಳಿಗೆ ಖ್ಯಾತಿಯಾಗಿರುವ ಬೂಮ್ರ ಭಾರತದ ಬೌಲಿಂಗ್ ಬೆನ್ನೆಲುಬು ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫಿಂಚ್‌ ಅವರನ್ನು ಯಾರ್ಕರ್‌ ಬೌಲ್ ಹಾಕಿ ಬೌಲ್ಡ್ ಮಾಡಿದಾಗ ಸ್ವತಃ ಫಿಂಚ್ ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದ್ದರು.

ಸದ್ಯ ಬೂಮ್ರ ಹೊರಗುಳಿಯುತ್ತಿರುವುದರಿಂದ ಅವರ ಸ್ಥಾನವನ್ನು ಮೊಹಮ್ಮದ್ ಶಮಿ ಅಥವಾ ದೀಪಕ್ ಚಹರ್ ತುಂಬುವ ಸಾಧ್ಯತೆ ಇದೆ. ದೀಪಕ್ ಚಹರ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ 2 ಮಹತ್ವದ ವಿಕೆಟ್ ಪಡೆದಿದ್ದರು. ಅಲ್ಲದೆ ಬ್ಯಾಟ್ ಮಾಡುವ ಸಾಮರ್ಥ್ಯವು ಅವರಿಗಿರುವುದರಿಂದ ಅವರೆ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ.

ಅಂತಿಮ ಓವರ್‌ಗಳಲ್ಲಿ ಕಳಪೆ ಬೌಲಿಂಗ್ ಪ್ರದರ್ಶನವು ಭಾರತ ತಂಡವನ್ನು ಕಾಡುತ್ತಿದೆ. ಭುವನೇಶ್ವರ್ ಕುಮಾರ್ ಅಂತಿಮ ಓವರ್‌ಗಳಲ್ಲಿ ವಿಫಲರಾಗಿದ್ದಾರೆ. ಕೆಲವೊಮ್ಮೆ ಹರ್ಷಲ್ ಪಟೇಲ್ ಸಹ ದುಬಾರಿಯೆನಿಸಿದ್ದಾರೆ. ಇದು ತಂಡದ ನಾಯಕ ರೋಹಿತ್ ಶರ್ಮಾರನ್ನು ಚಿಂತೆಗೀಡುಮಾಡಿದೆ. ಕಳೆದ ವಿಶ್ವಕಪ್‌ನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ವಿಫಲವಾಗಿದ್ದರೆ ಈಗ ಸದ್ಯ ಅಂತಿಮ ಓವರ್‌ಗಳ ಬೌಲಿಂಗ್ ಸಮಸ್ಯೆಯಾಗಿ ಪರಿಣಮಿಸಿದೆ.

ಈಗಾಗಲೇ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಸಹ ಮಂಡಿ ನೋವಿನ ಸಮಸ್ಯೆಯಿಂದಾಗಿ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಅವರೊಡನೆ ಬೂಮ್ರ ಸಹ ಸೇರಿಕೊಂಡಿದ್ದಾರೆ. ಈ ಒತ್ತಡವನ್ನು ಭಾರತ ತಂಡ ಹೇಗೆ ನಿಭಾಯಿಸುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...