Homeಸಿನಿಮಾಕ್ರೀಡೆಅಕ್ಟೋಬರ್ 23 ರಂದು ಭಾರತ-ಪಾಕ್ ಹಣಾಹಣಿ: ಟಿ20 ವಿಶ್ವಕಪ್‌ನಿಂದ ಜಸ್ಪ್ರಿತ್ ಬೂಮ್ರ ಹೊರಕ್ಕೆ

ಅಕ್ಟೋಬರ್ 23 ರಂದು ಭಾರತ-ಪಾಕ್ ಹಣಾಹಣಿ: ಟಿ20 ವಿಶ್ವಕಪ್‌ನಿಂದ ಜಸ್ಪ್ರಿತ್ ಬೂಮ್ರ ಹೊರಕ್ಕೆ

- Advertisement -
- Advertisement -

ಅಕ್ಟೋಬರ್ 16ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 23ರಂದು ಎದುರಿಸಲಿದೆ. ಈ ಸಂದರ್ಭದಲ್ಲಿಯೇ ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆಯ ಸುದ್ದಿಯೊಂದು ಅಪ್ಪಳಿಸಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ವೇಗದ ಬೌಲರ್ ಜಸ್ಪ್ರಿತ್ ಬೂಮ್ರ ಇಡೀ ಟಿ20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಸದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿಪಕ್ಷೀಯ ಸರಣಿಯಲ್ಲಿಯೂ ಸಹ ಬೂಮ್ರ ಕಣಕ್ಕಿಳಿಯಲಿಲ್ಲ. ಸೆಪ್ಟಂಬರ್ 28 ರಂದು ತಿರುವನಂತಪುರಂನಲ್ಲಿ ನಡೆದ ಮೊದಲ ಪಂದ್ಯದ ಟಾಸ್ ಮುನ್ನವೆ ಅವರು ಬೂಮ್ರ ಅವರ ಗಾಯದ ಕುರಿತು ಬಿಸಿಸಿಐ ಮಾಹಿತಿ ನೀಡಿತ್ತು.

ಬೂಮ್ರ ಗಾಯದ ಕಾರಣದಿಂದಾಗಿ ಏಷ್ಯಾಕಪ್‌ನಲ್ಲಿಯೂ ಕಣಕ್ಕಿಳಿದಿರಲಿಲ್ಲ. ಏಷ್ಯಾ ಕಪ್‌ನಲ್ಲಿ ಭಾರತದ ಬೌಲಿಂಗ್ ಕೊರತೆಯಿಂದಾಗಿಯೇ ಭಾರತವು ಫೈನಲ್‌ ತಲುಪಲು ಸಾಧ್ಯವಾಗಿರಲಿಲ್ಲ. ಆನಂತರ ಆಸ್ಟ್ರೇಲಿಯಾ ವಿರುದ್ಧ 2 ಪಂದ್ಯಗಳನ್ನು ಬೂಮ್ರ ಆಡಿದ್ದರು. ಯಾರ್ಕರ್‌ಗಳಿಗೆ ಖ್ಯಾತಿಯಾಗಿರುವ ಬೂಮ್ರ ಭಾರತದ ಬೌಲಿಂಗ್ ಬೆನ್ನೆಲುಬು ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫಿಂಚ್‌ ಅವರನ್ನು ಯಾರ್ಕರ್‌ ಬೌಲ್ ಹಾಕಿ ಬೌಲ್ಡ್ ಮಾಡಿದಾಗ ಸ್ವತಃ ಫಿಂಚ್ ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದ್ದರು.

ಸದ್ಯ ಬೂಮ್ರ ಹೊರಗುಳಿಯುತ್ತಿರುವುದರಿಂದ ಅವರ ಸ್ಥಾನವನ್ನು ಮೊಹಮ್ಮದ್ ಶಮಿ ಅಥವಾ ದೀಪಕ್ ಚಹರ್ ತುಂಬುವ ಸಾಧ್ಯತೆ ಇದೆ. ದೀಪಕ್ ಚಹರ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ 2 ಮಹತ್ವದ ವಿಕೆಟ್ ಪಡೆದಿದ್ದರು. ಅಲ್ಲದೆ ಬ್ಯಾಟ್ ಮಾಡುವ ಸಾಮರ್ಥ್ಯವು ಅವರಿಗಿರುವುದರಿಂದ ಅವರೆ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ.

ಅಂತಿಮ ಓವರ್‌ಗಳಲ್ಲಿ ಕಳಪೆ ಬೌಲಿಂಗ್ ಪ್ರದರ್ಶನವು ಭಾರತ ತಂಡವನ್ನು ಕಾಡುತ್ತಿದೆ. ಭುವನೇಶ್ವರ್ ಕುಮಾರ್ ಅಂತಿಮ ಓವರ್‌ಗಳಲ್ಲಿ ವಿಫಲರಾಗಿದ್ದಾರೆ. ಕೆಲವೊಮ್ಮೆ ಹರ್ಷಲ್ ಪಟೇಲ್ ಸಹ ದುಬಾರಿಯೆನಿಸಿದ್ದಾರೆ. ಇದು ತಂಡದ ನಾಯಕ ರೋಹಿತ್ ಶರ್ಮಾರನ್ನು ಚಿಂತೆಗೀಡುಮಾಡಿದೆ. ಕಳೆದ ವಿಶ್ವಕಪ್‌ನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ವಿಫಲವಾಗಿದ್ದರೆ ಈಗ ಸದ್ಯ ಅಂತಿಮ ಓವರ್‌ಗಳ ಬೌಲಿಂಗ್ ಸಮಸ್ಯೆಯಾಗಿ ಪರಿಣಮಿಸಿದೆ.

ಈಗಾಗಲೇ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಸಹ ಮಂಡಿ ನೋವಿನ ಸಮಸ್ಯೆಯಿಂದಾಗಿ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಅವರೊಡನೆ ಬೂಮ್ರ ಸಹ ಸೇರಿಕೊಂಡಿದ್ದಾರೆ. ಈ ಒತ್ತಡವನ್ನು ಭಾರತ ತಂಡ ಹೇಗೆ ನಿಭಾಯಿಸುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...