Homeಕರ್ನಾಟಕ‘ಅಮಾನತು ಮಾಡುವಂತಹ ದೊಡ್ಡ ತಪ್ಪು ಮಾಡಿಲ್ಲ’: ಗದಗ ಶಾಲಾ ಪ್ರಕರಣದ ಕುರಿತು ಶಿಕ್ಷಣ ತಜ್ಞ ಡಾ.ವಿ.ಪಿ....

‘ಅಮಾನತು ಮಾಡುವಂತಹ ದೊಡ್ಡ ತಪ್ಪು ಮಾಡಿಲ್ಲ’: ಗದಗ ಶಾಲಾ ಪ್ರಕರಣದ ಕುರಿತು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ

ಹೀಗೆ ಮಾಡುವುದಾದರೆ ಹೊರಗಿನ ಎಲ್ಲಾ ಸಂಸ್ಥೆಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿಷೇಧ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು

- Advertisement -
- Advertisement -

ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಗದಗದ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಿರುವ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ ಅವರು ವಿರೋಧಿಸಿದ್ದು, “ಅಮಾನತು ರೀತಿಯ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಗುರುವಾರ ಮಾತನಾಡಿದ ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನಾರಾಧ್ಯ,“ಸರ್ವ ಧರ್ಮ ಸಮನ್ವಯತೆ ಎಂಬಂತೆ ಮಕ್ಕಳು ಎಲ್ಲರ ಬಗ್ಗೆಯೂ ತಿಳಿದುಕೊಳ್ಳುವುದರಲ್ಲಿ ತಪ್ಪೇನಿಲ್ಲ. ಆದರೆ ಈಗ ಅದನ್ನು ವ್ಯಾಖ್ಯಾನಿಸುವ ರೀತಿಯಲ್ಲಿ ತಪ್ಪುಗಳಾಗುತ್ತಿವೆ. ಎಲ್ಲವನ್ನೂ ತಮ್ಮದೆ ದೃಷ್ಟಿಕೋನದಿಂದ ನೋಡುತ್ತಿರುವುದರಿಂದ ಎಲ್ಲವೂ ತಪ್ಪಾಗಿ ಕಾಣುತ್ತದೆ. ಶಿಕ್ಷಣದ ಎಲ್ಲವನ್ನೂ ಕೋಮುವಾದೀಕರಣ ಮಾಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಧರ್ಮವನ್ನು ಪ್ರಚಾರ ಮಾಡುವ ಯಾವುದೆ ಆಲೋಚನೆ ನನಗೆ ಇಲ್ಲ ಎಂದು ಮುಖ್ಯೋಪಾಧ್ಯಾಯರು ಈಗಾಗಲೆ ಸ್ಪಷ್ಟವಾಗಿ ಹೇಳಿದ್ದಾರೆ. ಒಂದು ಪುಸ್ತಕ ಕೊಟ್ಟ ಕೂಡಲೇ ಇಸ್ಲಾಂ ಪ್ರಚಾರ ಆಗುತ್ತದೆಯೆ?” ಎಂದು ಅವರು ಕೇಳಿದರು.

ಇದನ್ನೂ ಓದಿ: ಗದಗ: ಪ್ರವಾದಿ ಬಗ್ಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ಧ ಮುಖ್ಯ ಶಿಕ್ಷಕ ಅಮಾನತು

“ಮುಂದಕ್ಕೆ ಶಾಲೆಯಲ್ಲಿ ಭಗವದ್ಗೀತೆ ಕೊಟ್ಟರೆ ಅದರ ಅರ್ಥ ಹಿಂದೂ ಧರ್ಮಕ್ಕೆ ಮಕ್ಕಳನ್ನು ಮತಾಂತರ ಮಾಡುತ್ತಿದ್ದೇವೆ ಎಂದೇ? ಲಕ್ಷಾಂತರ ವಿದ್ಯಾರ್ಥಿಗಳು ಕ್ರಿಶ್ಚಿಯನ್ ಕಾನ್ವೆಂಟ್‌ಗಳಲ್ಲಿ ಕಲಿಯುತ್ತಾ ಇದ್ದಾರೆ. ಅವರೆಲ್ಲರೂ ಮತಾಂತರವಾದರೆ?” ಎಂದು ಅವರು ಪ್ರಶ್ನಿಸಿದರು.

“ಇದು ಬಹಳ ವ್ಯವಸ್ಥಿತವಾಗಿ ಒಂದು ಧರ್ಮದ ಶಿಕ್ಷಕರನ್ನು ಗುರಿ ಮಾಡುತ್ತಿರುವ ತಂತ್ರ. ಅಲ್ಲದೆ ಈ ಪೊಲೀಸ್‌ಗಿರಿ ಬಹಳ ಅಪಾಯಕಾರಿಯಾಗಿದ್ದು, ಭಯದ ವಾತಾವರಣ ನಿರ್ಮಾಣ ಮಾಡುವ ಸ್ಥಿತಿ ಇದು. ಇದರ ಪರಿಣಾಮ ನಮ್ಮ ಮಕ್ಕಳು ಅನುಭವಿಸಬೇಕಾಗುತ್ತದೆ. ಶಿಕ್ಷಣದ ವಿಚಾರಗಳಲ್ಲಿ ಸರಿ ತಪ್ಪುಗಳನ್ನು ಶಾಲೆಗೆ ಬಿಟ್ಟು ಬಿಡಬೇಕು” ಎಂದು ಅವರು ಹೇಳಿದರು.

“ಅಕಸ್ಮಾತ್ ಶಿಕ್ಷಕ ಮಾಡಿದ್ದು ತಪ್ಪು ಎಂದಾದರೂ, ಅವರನ್ನು ಅಮಾನತು ರೀತಿ ಕಠಿಣ ಶಿಕ್ಷೆ ನೀಡುವ ಅಗತ್ಯವಿರಲಿಲ್ಲ. ಶಿಕ್ಷಕರನ್ನು ಅಮಾನತ್ತಿನಲ್ಲಿ ಇಡುವಂತಹ ದೊಡ್ಡ ತಪ್ಪು ಅವರೇನು ಮಾಡಿಲ್ಲ” ಎಂದು ನಿರಂಜನಾರಾಧ್ಯ ಅವರು ತಿಳಿದರು.

ಇದನ್ನೂ ಓದಿ: ಡಿಸೆಂಬರ್‌ನಿಂದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ತರಗತಿ: ಶಿಕ್ಷಣ ಸಚಿವ ಬಿಸಿ ನಾಗೇಶ್‌

“ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ ಈ ಹಿಂದಿನಿಂದಲೂ ಬೇರೆ ಬೇರೆ ಸಂಸ್ಥೆಗಳಿಂದ ಪುಸ್ತಕಗಳನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಬೇರೆ ಬೇರೆ ಚಟುವಟಿಕೆಗಳನ್ನು ಮಾಡಿಸಿ ಅವರ ಸರ್ವಾಂಗೀಣ ಅಭಿವೃದ್ಧಿ ಆಗಲಿ ಎಂದು ನಾವು ಹೇಳುತ್ತೇವೆ. ಎಷ್ಟೊ ಸಂದರ್ಭದಲ್ಲಿ ಎಷ್ಟೊ ಹಿಂದೂ ಸಂಘಟನೆಗಳು ಶಾಲೆಯಲ್ಲಿ ಮಕ್ಕಳಿಗೆ ಸ್ಪರ್ಧೆ ಏರ್ಪಡಿಸಿ, ಅವರಿಗೆ ಬಹುಮಾನ ನೀಡಿವೆ ಅಲ್ಲವೆ? ಹೀಗಿರುವಾಗ ಪ್ರವಾದಿ ಬಗ್ಗೆ ಪ್ರಬಂಧ ಬರೆದಿದ್ದನ್ನ ಮಾತ್ರ ಪ್ರತ್ಯೇಕವಾಗಿ ನೋಡುವಂತಹ ಅವಶ್ಯಕತೆ ಇರಲಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಒಂದು ಧರ್ಮಿಯರನ್ನು ನಿರ್ಧಿಷ್ಟವಾಗಿ ಗುರಿ ಮಾಡಿರುವುದರಿಂದ ಇದು ತಪ್ಪು ಎಂದು ಕಾಣುತ್ತದೆ. ಶಿಕ್ಷಣದಲ್ಲಿ ಈ ತರದ ಹಸ್ತಕ್ಷೇಪಗಳು ಸರಿಯಲ್ಲ. ಹೀಗೆ ಮಾಡುವುದಾದರೆ ಎಲ್ಲಾ ಹೊರಗಿನ ಸಂಸ್ಥೆಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿಷೇಧ ಮಾಡಬೇಕಾಗುತ್ತದೆ” ಎಂದು ಡಾ.ವಿ.ಪಿ. ನಿರಂಜನಾರಾಧ್ಯ ಅವರು ಹೇಳಿದರು.

ಇಸ್ಲಾಂನ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗದಗ ಜಿಲ್ಲೆಯ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ, ಬಲಪಂಥೀಯ ಸಂಘಟನೆಯಾದ ಶ್ರೀರಾಮಸೇನೆಯ ಕಾರ್ಯಕರ್ತರು 172 ವಿದ್ಯಾರ್ಥಿಗಳಿರುವ ಶಾಲೆಗೆ ಅಕ್ರಮವಾಗಿ ನುಗ್ಗಿ ಮುಖ್ಯೋಪಾಧ್ಯಾಯ ಅಬ್ದುಲ್ ಮುನಾಫರ್ ಅವರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆಯು ಮುಖ್ಯೋಪಾಧ್ಯರನ್ನು ಅಮಾನತುಗೊಳಿಸಿ ಆದೇಶಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

“ವಿದ್ಯಾರ್ಥಿಗಳ ಕೈಬರಹವನ್ನು ಸುಧಾರಿಸುವ ಸಲುವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದೆ. ಪ್ರತಿ ತಿಂಗಳು ಕನಿಷ್ಠ ಒಂದೆರಡು ಸ್ಪರ್ಧೆಗಳನ್ನು ಶಾಲೆಗಳಲ್ಲಿ ಆಯೋಜಿಸಲಾಗುತ್ತಿದೆ. ಈ ಹಿಂದೆಯೂ ಕನಕದಾಸ, ಪುರಂದರ ದಾಸ ಮತ್ತಿತರ ವ್ಯಕ್ತಿಗಳ ಕುರಿತು ಪ್ರಬಂಧ ಸ್ಪರ್ಧೆಗಳನ್ನು ನಡೆಸಿದ್ದೇವೆ. ಇಸ್ಲಾಂ ಪ್ರಚಾರ ಮಾಡುತ್ತಿದ್ದೇನೆ ಎನ್ನುವುದು ಸುಳ್ಳು ಆರೋಪ” ಎಂದು ಅಬ್ದುಲ್ ಅವರು ತಿಳಿಸಿದ್ದಾರೆ.

“ಶಿಕ್ಷಕ ವೃತ್ತಿಯಲ್ಲಿ 28 ವರ್ಷಗಳ ಅನುಭವ ಹೊಂದಿರುವ ನಾನು ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿಂದೂ ವ್ಯಕ್ತಿಗಳು ಮತ್ತು ಇತರರಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಎಲ್ಲ ದಾಖಲೆಗಳನ್ನು ನಾನು ನಿರ್ವಹಿಸಿದ್ದೇನೆ. ನನ್ನೊಂದಿಗೆ ಕೆಲಸ ಮಾಡುವ ಏಳು ಶಿಕ್ಷಕರಿದ್ದು, ಅದೃಷ್ಟವಶಾತ್ ಅವರು ನನ್ನ ರಕ್ಷಣೆಗೆ ಬಂದರು” ಎಂದು ದಾಳಿಗೆ ಒಳಗಾಗಿರುವ ಅಬ್ದುಲ್ ಮುನಾಫರ್ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...