Homeಕರ್ನಾಟಕ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ನಡೆಸುವ ಚರ್ಚೆ ಹೀಗಿದೆ...

- Advertisement -
- Advertisement -

‘ಪೇಸಿಎಂ’ ಪೋಸ್ಟರ್‌ ಮೂಲಕ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌, ಮತ್ತೊಂದು ಸೃಜನಶೀಲ ಪ್ರಯೋಗವನ್ನು ಮಾಡಿದೆ. ‘ಪೇಸಿಎಂ ಆಕ್ಷನ್‌ ಕಮಿಟಿ’ (PayCM Action Committee) ಎಂಬ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ಚರ್ಚಿಸುತ್ತಿರುವಂತೆ ವಿಡಿಯೊ ರಚಿಸಲಾಗಿದೆ.

ಈ ವಿಡಿಯೊವನ್ನು ‘40% ಸರ್ಕಾರ’ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ಗ್ರೂಪ್‌ನಲ್ಲಿ ಆಗುವ ಚರ್ಚೆಗಳು ಸ್ವಾರಸ್ಯಕರವಾಗಿವೆ. ಬಿಜೆಪಿಯವರು ಹೀಗೆ ಚರ್ಚೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಅಣಕ ಮಾಡಿದೆ.

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ ಹೀಗಿದೆ…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಅವರು ಗ್ರೂಪ್ ರಚಿಸಿದ್ದಾರೆ. ಅದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಡಾ.ಕೆ.ಸುಧಾಕರ್‌, ಅಶ್ವತ್ಥ್ ನಾರಾಯಣ್, ವಿಜಯೇಂದ್ರ, ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ ಇದ್ದಾರೆ.

ಬೊಮ್ಮಾಯಿ ಮಾತು ಆರಂಭಿಸುತ್ತಾರೆ.

ಬೊಮ್ಮಾಯಿ: ಎಲ್ಲಿಗೆ ಬಂತಪ್ಪ? ಅಪ್‌ಡೇಟ್ ಏನು?

ಆರಗ: ತನಿಖೆ ನಡೆಯುತ್ತಿದೆ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಟಾಬ್ಲೇಟ್ ತಗೊಂಡ್ರು ನಿದ್ದೆ ಬರುತ್ತಿಲ್ಲ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಜನ ಬಿಜೆಪಿಯವರು ಪೇಸಿಎಂ ಕಾಪಿ ಮಾಡಿರೋದು ಮಜಾ ಬರುತ್ತಿಲ್ಲ ಅಂತಿದ್ದಾರೆ.

ಸುಧಾಕರ್‌: ಲೆಸ್ಟ್ ಬ್ರಿಂಗ್‌ ಔಟ್ ಲಿಂಗಾಯತ್ ಕಾರ್ಡ್ (ಲಿಂಗಾಯತ ಕಾರ್ಡ್ ಹಾಕೋಣ)

ಬೊಮ್ಮಾಯಿ: ಮಾಸ್ಟರ್‌ ಸ್ಟ್ರೋಕ್‌ ಸುಧಾಕರ್‌, ಯೂ ಡು ಇಟ್‌

ಸುಧಾಕರ್‌: ಓಕೆ (ಇಮೋಜಿ ಬಳಸಿದ್ದಾರೆ.)

(ವಿಜಯೇಂದ್ರ ಲೆಫ್ಟ್‌)

ಬೊಮ್ಮಾಯಿ: ಛೇ ಇವ್ನು ಇರೋದು ಮರೆತುಬಿಟ್ಟೆ.

ಬೊಮ್ಮಾಯಿ: (‘ಸುಧಾಕರ್‌ ಮೋಸ್ಟ್‌ಲಿ ಮೂರ್ಖ ಅನಿಸುತ್ತೆ: ಸಿದ್ದರಾಮಯ್ಯ’ ಎಂದಿರುವ ಸುದ್ದಿ ಶೇರ್‌ ಮಾಡುತ್ತಾರೆ)

ಬೊಮ್ಮಾಯಿ: ಇವಾಗ ಏನ್ ಮಾಡೋಣ.

ಈಶ್ವರಪ್ಪ: ನನಗೆ ಮಂತ್ರಿ ಸ್ಥಾನ ಕೊಟ್ಟರೆ ಐಡಿಯಾ ಕೊಡ್ತೀನಿ.

(ಬೊಮ್ಮಾರಿ ರಿಮೂವ್ಡ್‌ ಈಶ್ವರಪ್ಪ)

ಬೊಮ್ಮಾಯಿ: ಕಟೀಲ್‌ ಮೋದೀಜಿ ಹತ್ತಿರ ಮಾತಾಡಿ, ಏನಾದರೂ ಐಡಿಯಾ ಕೊಡ್ತಾರೆ.

ಕಟೀಲ್: ಮೋದೀಜಿ ನವಿಲಿನೊಟ್ಟಿಗೆ ಫೋಟೋಶೂಟ್ ಮಾಡ್ತಾ ಇದ್ದಾರಂತೆ.  ಮೆಸೇಜ್ ಮಾಡಿದ್ದೇನೆ.

ಬೊಮ್ಮಾಯಿ: ಓಕೆ, ಅಶ್ವತ್ಥ್ ಎನಿ ಐಡಿಯಾ?

ಅಶ್ವತ್ಥ್‌: ವೀ ಕೆನ್‌ ಮೇಕ್ ಎ ಮೂವಿ. ಯೂವರ್‌ ಬಯೋಗ್ರಫಿ.

ಮಾಧುಸ್ವಾಮಿ: ಪೂರ್ತಿ ಮೂವಿ ಟ್ರೇಲರ್‌ರಷ್ಟು ಉದ್ದ ಕೂಡ ಬರಲ್ಲ.

ಬೊಮ್ಮಾಯಿ: ಕಟೀಲ್, ಸಮ್‌ಥಿಂಗ್ ಬಿಗ್ ವೀ ಶುಡ್ ಡೂ.

ನಳೀನ್‌: ಹಿಂದುತ್ವ ತರೋಣ.

ಬೊಮ್ಮಾಯಿ: ಹೌ? (ಹೇಗೆ)

ನಳೀನ್: ಸೇಮ್‌ ಆಸ್ ಆಲ್ವೇಸ್‌ (ನಗುವ ಇಮೋಜಿ.)

ಆರಗ: ನೋ. ಆಮೇಲೆ ನಾನು ತನಿಖೆ ಮಾಡಿಸಬೇಕು.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ಸಿ.ಟಿ.ರವಿ: ಯೆಸ್ ಟಿಪ್ಪು ಸುಲ್ತಾನ್ ತರೋಣ.

ಬೊಮ್ಮಾಯಿ: (ಹಣೆಚಚ್ಚಿಕೊಳ್ಳುತ್ತಿರುವ ಇಮೋಜಿ ಹಾಕಿದ್ದಾರೆ.)

ಕಟೀಲ್: ಮೋದೀಜಿ ಮೆಸೇಜ್ ಮಾಡಿದ್ದಾರೆ. (ಬ್ಯುಸಿ ಎಂಬ ಆಡಿಯೋ ಸಂದೇಶ ಬಂದಿದೆ.)

ಸಿಟಿ ರವಿ: ಪಿಎಫ್‌ಐನವರು ದೇವಸ್ಥಾನದಲ್ಲಿ ಪಾಕಿಸ್ತಾನ್ ಬಾವುಟ ಹಾರಿಸಲಿ. ಬೊಮ್ಮಾಯಿ ಸರ್‌ ಅದಕ್ಕೆ ಬೆಂಗಳೂರಿಂದ ಪಾದಯಾತ್ರೆ ಹೋಗಿ ಹಿಂದುತ್ವ ಫ್ಲಾಗ್ ಹಾರಿಸಬೇಕು.

ಕಟೀಲ್: ಗುಡ್ ಐಡಿಯಾ

ಬೊಮ್ಮಾಯಿ: ನೋ. ನನಗೆ ಪಾದೆಯಾತ್ರೆ ಆಗಲ್ಲ, ಕಾಲ್ ನೋವು.

ಕಟೀಲ್: ಶಾ ಟೆಕ್ಸ್ಟ್‌ ಮಾಡಿದ್ದಾರೆ.

ಬೊಮ್ಮಾಯಿ: ವಾಟ್ ಡಿಡ್ ಶಾ ಟೆಲ್?

(ನಳೀನ್‌ ಕುಮಾರ್ ಕಟೀಲ್‌ ಬೊಮ್ಮಾಯಿಯವರನ್ನು ರಿಮೂವ್ ಮಾಡುತ್ತಾರೆ.)

– ಈ ರೀತಿಯಲ್ಲಿ ಸಂಭಾಷಣೆ ನಡೆದಿರುವಂತೆ ಟ್ರೋಲ್ ಮಾಡಲಾಗಿದೆ.

40 % ಕಮಿಷನ್ ಸರ್ಕಾರ ಎಂಬ ಅಸ್ತ್ರವನ್ನು ಕಾಂಗ್ರೆಸ್ ಬಲವಾಗಿ ಪ್ರಯೋಗಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...