Homeಕರ್ನಾಟಕ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ನಡೆಸುವ ಚರ್ಚೆ ಹೀಗಿದೆ...

- Advertisement -
- Advertisement -

‘ಪೇಸಿಎಂ’ ಪೋಸ್ಟರ್‌ ಮೂಲಕ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌, ಮತ್ತೊಂದು ಸೃಜನಶೀಲ ಪ್ರಯೋಗವನ್ನು ಮಾಡಿದೆ. ‘ಪೇಸಿಎಂ ಆಕ್ಷನ್‌ ಕಮಿಟಿ’ (PayCM Action Committee) ಎಂಬ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ಚರ್ಚಿಸುತ್ತಿರುವಂತೆ ವಿಡಿಯೊ ರಚಿಸಲಾಗಿದೆ.

ಈ ವಿಡಿಯೊವನ್ನು ‘40% ಸರ್ಕಾರ’ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ಗ್ರೂಪ್‌ನಲ್ಲಿ ಆಗುವ ಚರ್ಚೆಗಳು ಸ್ವಾರಸ್ಯಕರವಾಗಿವೆ. ಬಿಜೆಪಿಯವರು ಹೀಗೆ ಚರ್ಚೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಅಣಕ ಮಾಡಿದೆ.

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ ಹೀಗಿದೆ…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಅವರು ಗ್ರೂಪ್ ರಚಿಸಿದ್ದಾರೆ. ಅದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಡಾ.ಕೆ.ಸುಧಾಕರ್‌, ಅಶ್ವತ್ಥ್ ನಾರಾಯಣ್, ವಿಜಯೇಂದ್ರ, ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ ಇದ್ದಾರೆ.

ಬೊಮ್ಮಾಯಿ ಮಾತು ಆರಂಭಿಸುತ್ತಾರೆ.

ಬೊಮ್ಮಾಯಿ: ಎಲ್ಲಿಗೆ ಬಂತಪ್ಪ? ಅಪ್‌ಡೇಟ್ ಏನು?

ಆರಗ: ತನಿಖೆ ನಡೆಯುತ್ತಿದೆ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಟಾಬ್ಲೇಟ್ ತಗೊಂಡ್ರು ನಿದ್ದೆ ಬರುತ್ತಿಲ್ಲ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಜನ ಬಿಜೆಪಿಯವರು ಪೇಸಿಎಂ ಕಾಪಿ ಮಾಡಿರೋದು ಮಜಾ ಬರುತ್ತಿಲ್ಲ ಅಂತಿದ್ದಾರೆ.

ಸುಧಾಕರ್‌: ಲೆಸ್ಟ್ ಬ್ರಿಂಗ್‌ ಔಟ್ ಲಿಂಗಾಯತ್ ಕಾರ್ಡ್ (ಲಿಂಗಾಯತ ಕಾರ್ಡ್ ಹಾಕೋಣ)

ಬೊಮ್ಮಾಯಿ: ಮಾಸ್ಟರ್‌ ಸ್ಟ್ರೋಕ್‌ ಸುಧಾಕರ್‌, ಯೂ ಡು ಇಟ್‌

ಸುಧಾಕರ್‌: ಓಕೆ (ಇಮೋಜಿ ಬಳಸಿದ್ದಾರೆ.)

(ವಿಜಯೇಂದ್ರ ಲೆಫ್ಟ್‌)

ಬೊಮ್ಮಾಯಿ: ಛೇ ಇವ್ನು ಇರೋದು ಮರೆತುಬಿಟ್ಟೆ.

ಬೊಮ್ಮಾಯಿ: (‘ಸುಧಾಕರ್‌ ಮೋಸ್ಟ್‌ಲಿ ಮೂರ್ಖ ಅನಿಸುತ್ತೆ: ಸಿದ್ದರಾಮಯ್ಯ’ ಎಂದಿರುವ ಸುದ್ದಿ ಶೇರ್‌ ಮಾಡುತ್ತಾರೆ)

ಬೊಮ್ಮಾಯಿ: ಇವಾಗ ಏನ್ ಮಾಡೋಣ.

ಈಶ್ವರಪ್ಪ: ನನಗೆ ಮಂತ್ರಿ ಸ್ಥಾನ ಕೊಟ್ಟರೆ ಐಡಿಯಾ ಕೊಡ್ತೀನಿ.

(ಬೊಮ್ಮಾರಿ ರಿಮೂವ್ಡ್‌ ಈಶ್ವರಪ್ಪ)

ಬೊಮ್ಮಾಯಿ: ಕಟೀಲ್‌ ಮೋದೀಜಿ ಹತ್ತಿರ ಮಾತಾಡಿ, ಏನಾದರೂ ಐಡಿಯಾ ಕೊಡ್ತಾರೆ.

ಕಟೀಲ್: ಮೋದೀಜಿ ನವಿಲಿನೊಟ್ಟಿಗೆ ಫೋಟೋಶೂಟ್ ಮಾಡ್ತಾ ಇದ್ದಾರಂತೆ.  ಮೆಸೇಜ್ ಮಾಡಿದ್ದೇನೆ.

ಬೊಮ್ಮಾಯಿ: ಓಕೆ, ಅಶ್ವತ್ಥ್ ಎನಿ ಐಡಿಯಾ?

ಅಶ್ವತ್ಥ್‌: ವೀ ಕೆನ್‌ ಮೇಕ್ ಎ ಮೂವಿ. ಯೂವರ್‌ ಬಯೋಗ್ರಫಿ.

ಮಾಧುಸ್ವಾಮಿ: ಪೂರ್ತಿ ಮೂವಿ ಟ್ರೇಲರ್‌ರಷ್ಟು ಉದ್ದ ಕೂಡ ಬರಲ್ಲ.

ಬೊಮ್ಮಾಯಿ: ಕಟೀಲ್, ಸಮ್‌ಥಿಂಗ್ ಬಿಗ್ ವೀ ಶುಡ್ ಡೂ.

ನಳೀನ್‌: ಹಿಂದುತ್ವ ತರೋಣ.

ಬೊಮ್ಮಾಯಿ: ಹೌ? (ಹೇಗೆ)

ನಳೀನ್: ಸೇಮ್‌ ಆಸ್ ಆಲ್ವೇಸ್‌ (ನಗುವ ಇಮೋಜಿ.)

ಆರಗ: ನೋ. ಆಮೇಲೆ ನಾನು ತನಿಖೆ ಮಾಡಿಸಬೇಕು.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ಸಿ.ಟಿ.ರವಿ: ಯೆಸ್ ಟಿಪ್ಪು ಸುಲ್ತಾನ್ ತರೋಣ.

ಬೊಮ್ಮಾಯಿ: (ಹಣೆಚಚ್ಚಿಕೊಳ್ಳುತ್ತಿರುವ ಇಮೋಜಿ ಹಾಕಿದ್ದಾರೆ.)

ಕಟೀಲ್: ಮೋದೀಜಿ ಮೆಸೇಜ್ ಮಾಡಿದ್ದಾರೆ. (ಬ್ಯುಸಿ ಎಂಬ ಆಡಿಯೋ ಸಂದೇಶ ಬಂದಿದೆ.)

ಸಿಟಿ ರವಿ: ಪಿಎಫ್‌ಐನವರು ದೇವಸ್ಥಾನದಲ್ಲಿ ಪಾಕಿಸ್ತಾನ್ ಬಾವುಟ ಹಾರಿಸಲಿ. ಬೊಮ್ಮಾಯಿ ಸರ್‌ ಅದಕ್ಕೆ ಬೆಂಗಳೂರಿಂದ ಪಾದಯಾತ್ರೆ ಹೋಗಿ ಹಿಂದುತ್ವ ಫ್ಲಾಗ್ ಹಾರಿಸಬೇಕು.

ಕಟೀಲ್: ಗುಡ್ ಐಡಿಯಾ

ಬೊಮ್ಮಾಯಿ: ನೋ. ನನಗೆ ಪಾದೆಯಾತ್ರೆ ಆಗಲ್ಲ, ಕಾಲ್ ನೋವು.

ಕಟೀಲ್: ಶಾ ಟೆಕ್ಸ್ಟ್‌ ಮಾಡಿದ್ದಾರೆ.

ಬೊಮ್ಮಾಯಿ: ವಾಟ್ ಡಿಡ್ ಶಾ ಟೆಲ್?

(ನಳೀನ್‌ ಕುಮಾರ್ ಕಟೀಲ್‌ ಬೊಮ್ಮಾಯಿಯವರನ್ನು ರಿಮೂವ್ ಮಾಡುತ್ತಾರೆ.)

– ಈ ರೀತಿಯಲ್ಲಿ ಸಂಭಾಷಣೆ ನಡೆದಿರುವಂತೆ ಟ್ರೋಲ್ ಮಾಡಲಾಗಿದೆ.

40 % ಕಮಿಷನ್ ಸರ್ಕಾರ ಎಂಬ ಅಸ್ತ್ರವನ್ನು ಕಾಂಗ್ರೆಸ್ ಬಲವಾಗಿ ಪ್ರಯೋಗಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...