Homeಮುಖಪುಟಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದು ಬದಲಿಗೆ ತಮ್ಮ ಹಿರಿಯ ಸಹೋದ್ಯೋಗಿ ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆಯನ್ನು ಪ್ರಸ್ತಾಪಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ತಾನು ಜೀವನದುದ್ದಕ್ಕೂ ಕಾಂಗ್ರೆಸ್‌ಗಾಗಿ ದುಡಿದಿದ್ದು, ಅದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹೊರ ಸರಿಯುವುದರೊಂದಿಗೆ ಕೇರಳ ಸಂಸದ ಶಶಿ ತರೂರ್‌ ಮತ್ತು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜು ಖರ್ಗೆ ಅವರು ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಖಾಮುಖಿಯಾಗಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರಾಗಿದ್ದು, ನನ್ನ ಸೀನಿಯರ್‌ ಆಗಿದ್ದಾರೆ. ನೀವು ಸ್ಪರ್ಧಿಸಲು ಬಯಸುತ್ತೀರಾ ಎಂದು ನಿನ್ನೆಯೇ ಕೇಳಿದ್ದೆ. ಇಲ್ಲ ಎಂದರು. ನಾನು ಇಂದು ಅವರನ್ನು ಮತ್ತೆ ಭೇಟಿಯಾದೆ. ನೀವು ಸ್ಪರ್ಧಿಸುವುದಾದರೆ ನಾನು ಸಂಪೂರ್ಣವಾಗಿ ನಿಮ್ಮೊಂದಿಗಿದ್ದೇನೆ ಎಂದು ತಿಳಿಸಿದ್ದೇನೆ” ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೊನೆಯ ಕ್ಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ!

“ನಾನು ಅವರ ವಿರುದ್ಧ ಸ್ಪರ್ಧಿಸುವ ಬಗ್ಗೆ ಯೋಚಿಸಲು ಸಾಧ್ಯವಿಲ್ಲ. ಅವರು ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ನಾನು ಅವರ ಉಮೇದುವಾರಿಕೆಯನ್ನು ಪ್ರಸ್ತಾಪಿಸುತ್ತೇನೆ” ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

“ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ನಾನು ರಾಜಿ ಮಾಡಿಕೊಳ್ಳುವುದಿಲ್ಲ; ಕೋಮು ಸೌಹಾರ್ದವನ್ನು ಹಾಳು ಮಾಡುವವರೊಂದಿಗೆ ನಾನು ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಗಾಂಧಿ ಕುಟುಂಬಕ್ಕೆ ನನ್ನ ಬದ್ಧತೆಯನ್ನು ನಾನು ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿದ ನಂತರ ದಿಗ್ವಿಜಯ್ ಸಿಂಗ್ ಅವರು ಪಕ್ಷದ ಉನ್ನತ ಹುದ್ದೆಗೆ ಸ್ಪರ್ಧಿಸುವ ಒಲವನ್ನು ವ್ಯಕ್ತಪಡಿಸಿದ್ದರು.

ಶುಕ್ರವಾರ ತಿರುವನಂತಪುರಂ ಸಂಸದ ಶಶಿ ತರೂರ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ತರೂರ್ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. “21 ನೇ ಶತಮಾನಕ್ಕೆ ಭಾರತದ ಸೇತುವೆಯನ್ನು ನಿರ್ಮಿಸಿದ ವ್ಯಕ್ತಿಗೆ ಇಂದು ಬೆಳಿಗ್ಗೆ ಗೌರವ ಸಲ್ಲಿಸಿದೆ” ಎಂದು ತರೂರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

ರಾಜ್ಯಸಭಾದ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಕೂಡ ಮಧ್ಯಾಹ್ನದ ಸುಮಾರಿಗೆ ಪಕ್ಷದ ಉನ್ನತ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಖರ್ಗೆ ಅವರನ್ನು ಕಣಕ್ಕಿಳಿಸಲು ಪಕ್ಷದ ನಾಯಕಿ ಸೋನಿಯಾ ಗಾಂಧಿ ಉತ್ಸುಕರಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

2019 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆಯ ನೈತಿಕ ಹೊಣೆಗಾರಿಕೆಯನ್ನು ಒಪ್ಪಿಕೊಂಡ ನಂತರ ರಾಹುಲ್ ಗಾಂಧಿ ಪಕ್ಷ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ನಂತರ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಅವರ ಹೆಸರು ಕೇಳಿಬರುತ್ತಲೆ ಇತ್ತು.

ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...