Homeಸಿನಿಮಾಕ್ರೀಡೆಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ...

ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಫೀಲ್ಡಿಂಗ್ ನಿರ್ಬಂಧಗಳನ್ನು ಮೀರಿದ ಕಾರಣಕ್ಕಾಗಿಯೇ ಧೋನಿಯ ರನ್ ಔಟ್ ಆಯಿತೇ? ಇಲ್ಲಿದೆ ಸತ್ಯ

- Advertisement -
- Advertisement -

ಮಹತ್ವದ ಸೆಮಿಫೈನಲ್ ನಲ್ಲಿ ಲೀಗ್ ಹಂತದ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಭಾರತವನ್ನು ನಾಲ್ಕನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ್ದು ನಿಮಗೆಲ್ಲಾ ಗೊತ್ತಿರುವ ವಿಚಾರ. ಆ ಪಂದ್ಯದ ಸೋಲಿನಲ್ಲಿ ಮಹೇಂದ್ರ ಸಿಂಗ್ ಧೋನಿಯವರ ರನ್ ಔಟ್ ಪ್ರಮುಖ ಪಾತ್ರ ವಹಿಸಿತ್ತು. ರನ್ ಔಟ್ ಆದಾಗ ಧೋನಿ ಅಂಗಳದಲ್ಲಿಯೇ ಕಣ್ಣೀರಾಕಿದ್ದನ್ನು ಅಭಿಮಾನಿಗಳು ಮರೆತಿಲ್ಲ.

ಇದೇ ಸಂದರ್ಭದಲ್ಲಿ ಅಂಪೈರ್ ಗಳ ತಪ್ಪಿನಿಂದಾಗಿ ರನ್ ಔಟ್ ಆಗಿದೆ, 48ನೇ ಓವರ್ ನಲ್ಲಿ ಲಾಕೀ ಫರ್ಗೂಸನ್ ನ ಎಸೆತವನ್ನು ಧೋನಿ ಬಾರಿಸಿದ ಹೊಡೆತದಲ್ಲಿ ಎರಡನೇ ರನ್ ಗಾಗಿ ಧೋನಿ ಓಡುತ್ತಿದ್ದಾಗ ಮಾರ್ಟಿನ್ ಗುಪ್ಟಿಲ್ ನೇರವಾಗಿ ವಿಕೆಟ್ ಗೆ ಬಾಲ್ ಎಸೆದ ಕಾರಣ ಆದ ರನ್ ಔಟ್ ನ ಬಾಲ್ ಕ್ರಮಬದ್ಧವಾಗಿಲ್ಲ ಎಂಬ ಆರೋಪ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೂರನೇ ಪವರ್ ಪ್ಲೆ (41-50 ಓವರ್) ನಲ್ಲಿ ಐದಕ್ಕಿಂತ ಹೆಚ್ಚು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗೆ ನಿಲ್ಲುವಂತಿಲ್ಲ ಎಂಬ ಐಸಿಸಿ ನಿಯಮವಿದ್ದರೂ ಸಹ ಸೆಮಿಫೈನಲ್ ಪಂದ್ಯದಲ್ಲಿ ಧೋನಿ ಔಟಾದ 48.3ನೇ ಬಾಲ್ ನಲ್ಲಿ ಆರು ಜನ ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು ಅಂಪೈರ್ ಗಮನಿಸಿಲ್ಲ ಎಂಬ ಸ್ಕ್ರೀನ್ ಶಾಟ್ ಎಲ್ಲಾ ಕಡೆ ಹರಿದಾಡಿದೆ.

ಸಿ.ಎನ್.ಎನ್ ನ್ಯೂಸ್18ನ ನಿರೂಪಕ ಆನಂದ್ ನರಸಿಂಹನ್ ರವರು ಆ ಸ್ಕ್ರೀನ್ ಶಾಟ್ ಅನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ “ಮೂರನೇ ಪವರ್ ಪ್ಲೆ ನಲ್ಲಿ 6 ಜನ ಫೀಲ್ಡರ್ ಗಳು ಸರ್ಕಲ್ ನಿಂದ ಹೊರಗಿರುವುದು ಹೇಗೆ? ಅಂಪೈರ್ ಗಳ ಈ ಮಹಾ ಅಪರಾಧಕ್ಕೆ ಶಿಕ್ಷೆ ಇಲ್ಲವೇ? ಸೆಮಿ ಫೈನಲ್ ನಲ್ಲೇ ಹೀಗಾದರೆ ಹೇಗೆ ಎಂದು ಬರೆದಿದ್ದರು.

ನೂರಾರು ಜನರು ಅಂಪೈರ್ ಗಳ ತಪ್ಪು ಎಂದು  ಈ ಸ್ಕ್ರೀನ್ ಶಾಟ್ ಅನ್ನು ಷೇರ್ ಮಾಡಿದ್ದರು. ಎಂ.ಎಸ್ ಧೋನಿ ಫ್ಯಾನ್ಸ್ ಅಫೀಶಿಯಲ್ ಎನ್ನು 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಟ್ವಿಟ್ಟರ್ ಖಾತೆಯಿಂದಲೂ ಪೋಸ್ಟ ಆಗಿದ್ದಲ್ಲದೇ, ಧೋನಿ ನಾಟ್ ಔಟ್ ಆಗಿದ್ದರೆಂಬ ಯೂಟ್ಯೂಬ್ ವಿಡಿಯೋವೊಂದು ಪೋಸ್ಟ್ ಆಗಿದ್ದು ಅದನ್ನು ಬರೋಬ್ಬರಿ 1 ಕೋಟಿ 30 ಲಕ್ಷ ಜನ ವೀಕ್ಷಿಸಿದ್ದಾರೆ.

ಬಹುಮುಖ್ಯ ಮಾಧ್ಯಮ ಸಂಸ್ಥೆಗಳಾದ ದಿ ಇಂಡಿಯನ್ ಎಕ್ಸ್ ಪ್ರೆಸ್, ಇಂಡಿಯಾ ಟುಡೆ, ಆಜ್ ತಕ್ ಮುಂತಾದವುಗಳು ಸಹ ಫೀಲ್ಡಿಂಗ್ ನಿರ್ಬಂಧದ ಅಂಪೈರ್ ಗಳ ತಪ್ಪಿನಿಂದಾಗಿ ಧೋನಿ ಔಟಾಗಿರುವ ಸಾಧ್ಯತೆಯಿದೆ ಎಂಬ ವರದಿಗಳನ್ನು ಪ್ರಕಟಿಸಿದ್ದವು.

ಹಾಗಾದರೆ ಆ 48ನೇ ಓವರ್ ನಲ್ಲಿ ಆಗಿದ್ದಾದರೂ ಏನು?

ಈ ಕುರಿತು ಸ್ವತಂತ್ರ ಮಾಧ್ಯಮ ಸಂಸ್ಥೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದೆ. ಸ್ಕ್ರೀನ್ ಶಾಟ್ ನಲ್ಲಿ ಕಾಣುತ್ತಿರುವ ಫೀಲ್ಡರ್ ಗಳ ಗ್ರಾಫಿಕ್ ನಲ್ಲಿ ತಪ್ಪಾಗಿದೆಯೇ ಹೊರತು ಅಂಪೈರ್ ನಿಂದಲ್ಲ ಎಂದು ಕಂಡಬಂದಿದೆ. ಆ ಓವರ್ ನ ಮೂರು ಬಾಲ್ ಗಳಲ್ಲಿ ಏನಾಯಿತು, ಫೀಲ್ಡರ್ ಗಳು ಯಾವ ಯಾವ ಜಾಗದಲ್ಲಿ ನಿಂತಿದ್ದರು ಎಂಬುದನ್ನು ಒಂದೊಂದಾಗಿ ನೋಡೋಣ

ಮೊದಲ ಬಾಲ್ (48.1 ಓವರ್ಸ್)

ಈ ಎಸೆತದಲ್ಲಿ ಐದು ಫೀಲ್ಡರ್ ಗಳು 30 ಯಾರ್ಡ್ ಸರ್ಕಲ್ ನಿಂದ ಹೊರಗಿದ್ದರು. ಅಂದರೆ ಥರ್ಡ್ ಮ್ಯಾನ್, ಡೀಪ್ ಫೈನ್ ಲೆಗ್, ಡೀಪ್ ಪಾಯಿಂಟ್, ಡೀಪ್ ಸ್ಕೇರ್ ಲೆಗ್ ಮತ್ತು ಲಾಂಗ್ ಆನ್ ನಲ್ಲಿ ನಿಂತಿದ್ದರು. ಫರ್ಗೂಸನ್ ಎಸೆದ ಆ ಬಾಲ್ ಅನ್ನು ಧೋನಿ ಸಿಕ್ಸ್ ಸಿಡಿಸಿದ್ದರು.

ಎರಡನೇ ಬಾಲ್ (48.2 ಓವರ್ಸ್)

ಈ ಎಸೆತದಲ್ಲಿ ಮಿಡ್ ವಿಕೆಟ್ ನಲ್ಲಿದ್ದ ಫೀಲ್ಡರ್ ಹಿಂದಕ್ಕೆ ಚಲಿಸಿದ್ದಾರೆ ಮತ್ತು ಡೀಪ್ ಫೈನ್ ಲೆಗ್ ನಲ್ಲಿದ್ದ ಫೀಲ್ಡರ್ ಸರ್ಕಲ್ ನ ಒಳಗೆ ಬಂದಿದ್ದಾರೆ. ಈ ಬಾಲ್ ನಲ್ಲಿ ಯಾವುದೇ ರನ್ ಬಂದಿಲ್ಲ.

ಮೂರನೇ ಬಾಲ್ (48.3 ಓವರ್ಸ್)

ಈ ಎಸೆತದಲ್ಲಿಯೇ ಆರು ಜನ ಹೊರಗಿರುವಂತೆ ಮೇಲಿನ ಸ್ಕ್ರೀನ್ ಶಾಟ್ ನಲ್ಲಿ ಆರೋಪಿಸಲಾಗಿದೆ. ಡೀಪ್ ಪಾಯಿಂಟ್, ಡೀಪ್ ಫೈನ್ ಲೆಗ್, ಡೀಪ್ ಸ್ಕ್ವೇರ್ ಲೆಗ್, ಡೀಪ್ ಮಿಡ್ ವಿಕೆಟ್, ಲಾಂಗ್ ಮತ್ತು ಥರ್ಡ್ ಮ್ಯಾನ್ ಎನ್ನಲಾಗಿದೆ.  ಆದರೆ ಆನಂತರ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿದ್ದಾರೆ.

ಆದರೆ ಗ್ರಾಫಿಕ್ ನಲ್ಲಿ ಇದು ಅಪ್ ಡೇಟ್ ಆಗಿಲ್ಲ. ಹಾಗಾಗಿ ಇದು ಗ್ರಾಫಿಕ್ ಬ್ರಾಡ್ ಕಾಸ್ಟ್ ನ ಸಮಸ್ಯೆಯೇ ಹೊರತು ಅಂಪೈರ್ ದಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಚಿತ್ರದ ಎಡಭಾಗದ ಮೇಲುಭಾಗದಲ್ಲಿ ಶಾರ್ಟ್ ಥರ್ಡ್ ಮ್ಯಾನ್ ಜಾಗದಲ್ಲಿ ಸರ್ಕಲ್ ನ ಒಳಗೆ ಫೀಲ್ಡರ್ ಬಂದು ನಿಂತಿರುವುದನ್ನು ನೀವು ನೋಡಬಹದು. ಹಾಗಾಗಿ ಥರ್ಡ್ ಮ್ಯಾನ್ ಸರ್ಕಲ್ ಒಳಗೆ ಬಂದು ಶಾರ್ಟ್ ಥರ್ಡ್ ಮ್ಯಾನ್ ಜಾಗಕ್ಕೆ ನಿಂತಿರುವುದನ್ನು ಗ್ರಾಫಿಕ್ ಬ್ರಾಡ್ ಕಾಸ್ಟ್ ತೋರಿಸದಿರುವುದೇ ಇಷ್ಟೆಲ್ಲಾ ಅವಾಂತರಗಳಿಗೆ ಕಾರಣವಾಗಿದೆ ಅಷ್ಟೇ. ಸರ್ಕಲ್ ನಿಂದ ಹೊರಗೆ 5 ಜನರು ಮಾತ್ರ ಇರುವುದು ಖಾತ್ರಿಯಾಗಿದೆ. ಆನಂತರ ಆನಂದ್ ನರಸಿಂಹನ್ ರವರು ಇನ್ನೊಂದು ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

ಒಟ್ಟಿನಲ್ಲಿ ಲಕ್ಷಾಂತರ ಜನ ಸತ್ಯ ಗೊತ್ತಿಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ಮನಸ್ಸಿಗೆ ಬಂದ ವಾಗ್ವಾದಗಳನ್ನು ನಡೆಸಿದ್ದರು ಎನ್ನುವುದು ಮಾತ್ರ ಸತ್ಯು. ಹಾಗಾಗಿ ಯಾವುದನ್ನು ಫ್ಯಾಕ್ಟ್ ಚೆಕ್ ಮಾಡದೇ ನಂಬಬಾರದು ಎಂಬುದು ಮತ್ತೆ ಸಾಬೀತಾಗಿದೆ.

ಕೃಪೆ: ಆಲ್ಟ್ ನ್ಯೂಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...