Homeಕರ್ನಾಟಕಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ.

- Advertisement -
- Advertisement -

ಯಾವ ರೀತಿಯಿಂದ ನೋಡಿದರೂ ಇಂದು ರಾಜೀನಾಮೆ ಕೊಟ್ಟಿರುವ ಶಾಸಕರ ಕಾಂಬಿನೇಷನ್ ಬಹಳ ಆಶ್ಚರ್ಯಕರವಾಗಿ ಕಾಣುತ್ತದೆ.

ಅತೃಪ್ತಿಯೇ ಕಾರಣ ಎನ್ನುವುದಾದರೆ, ಬೈರತಿ ಬಸವರಾಜ್ ಎಂದೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್‍ಡಿಕೆ ಮತ್ತು ಡಿಕೆಶಿ ಇಬ್ಬರಿಗೂ ಮುನಿರತ್ನ ಆಪ್ತರು.

ಅಧಿಕಾರ ಸಿಕ್ಕಿಲ್ಲದಿರುವುದು ಎನ್ನುವುದಾದರೆ ಎಂ.ಟಿ.ಬಿ.ನಾಗರಾಜ್‍ರನ್ನು ಸಚಿವರನ್ನಾಗಿಸಲಾಗಿದೆ. ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ. ರಾಕೇಶ್ ಸಿಂಗ್ ಬಿಡಿಎ ಆಯುಕ್ತರಾಗಿ ಮುಂದುವರೆದರೆ ತನಗೆ ಅಡ್ಡಗಾಲು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರಿಂದ ಅವರನ್ನೂ ಬದಲಿಸಲಾಗಿದೆ.

ಜಾತಿಯೇ ಕಾರಣ, ಲಿಂಗಾಯಿತರು ಮತ್ತು ವಾಲ್ಮೀಕಿ ಸಮುದಾಯದ ಶಾಸಕರು ಹೆಚ್ಚಾಗಿ ಆ ಕಡೆಗೆ ಹೋಗಿದ್ದಾರೆ ಎನ್ನುವ ಹಾಗೂ ಇಲ್ಲ. ಎಂ.ಟಿ.ಬಿ ನಾಗರಾಜ್ ಮತ್ತು ಬೈರತಿ ಬಸವರಾಜ್ ಇಬ್ಬರೂ ಕುರುಬರು. ಉಳಿದ ಕಾಂಬಿನೇಷನ್ ಸಹಾ ಹಾಗಿಲ್ಲ. ಇನ್ನು ರೋಷನ್‍ಬೇಗ್ ಸ್ಪರ್ಧಿಸುತ್ತಿರುವುದು ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಿಂದ. ಸ್ವತಃ ಬೇಗ್ ವಿರೋಧಿಸಿದರೂ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‍ರಿಗೇ ಬಹುಮತ ಸಿಕ್ಕಿದೆ.

ಇನ್ನು ಗೋಪಾಲಯ್ಯನವರು ಹಿಂದಿನ ಸಾಲಿನಲ್ಲೇ ಚೆಲುವರಾಯಸ್ವಾಮಿ ಮತ್ತಿತರರ ಜೊತೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದರು. ನಂತರ ಮತ್ತೆ ಪಕ್ಷದಲ್ಲೇ ಉಳಿದು ಜೆಡಿಎಸ್‍ನಿಂದಲೇ ಟಿಕೆಟ್ ಪಡೆದು ಪುನರಾಯ್ಕೆಯಾಗಿದ್ದಾರೆ.

ಹೀಗಿರುವಾಗ ಇವರೆಲ್ಲರನ್ನೂ ಬೆಸೆದ ಕಾರಣವೇನು? ಕೆಲವರಿಗೆ ಅತೃಪ್ತಿಯು ಅವಕಾಶವಾದವಾಗಿ ಪರಿವರ್ತನೆಯಾಗಿರುವುದು ವಾಸ್ತವ. ಅವರಲ್ಲಿ ಎಚ್.ವಿಶ್ವನಾಥ್, ರಾಮಲಿಂಗಾರೆಡ್ಡಿ ಮತ್ತು ಕೆ.ಸಿ.ನಾರಾಯಣಗೌಡರಿದ್ದಾರೆ. ಕುಮಟಳ್ಳಿಯವರು ಜಾರಕಿಹೊಳಿಯವರ ಹಿಂದೆ ಹೋಗುವವರು. ಬಿ.ಸಿ.ಪಾಟೀಲ್ ನಿಜಕ್ಕೂ ಅತೃಪ್ತರೇ. ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಏಕೈಕ ಕಾಂಗ್ರೆಸ್ ಶಾಸಕನಾದ ತನಗೆ ಬಿಜೆಪಿಯಿಂದ ಬಂದ ಆಫರ್ ತಿರಸ್ಕರಿಸಿ ಇಲ್ಲಿ ಉಳಿದರೂ ಅಧಿಕಾರ ಸಿಕ್ಕಿಲ್ಲ ಎಂಬ ಕೊರಗು ಅವರದ್ದು. ಪ್ರತಾಪ್‍ಗೌಡ ಮತ್ತು ಶಿವರಾಮ ಹೆಬ್ಬಾರ್ ಅವರು ಮಾರಿಕೊಳ್ಳಲು ನಿಂತಿರುವುದು ಬಿಟ್ಟರೆ ಹೆಚ್ಚೇನೂ ಕಾಣುತ್ತಿಲ್ಲ. ಇಷ್ಟು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಅಕ್ರಮ ದಂಧೆಯ ಕಾರಣಕ್ಕೇ ಬಿಜೆಪಿಯಿಂದ ಬೆದರಿಕೆಗೆ ಒಳಗಾಗಿದ್ದಾರೆ ಎಂಬುದು ಹಲವು ರಾಜಕಾರಣಿಗಳ ಆಡಿಟಿಂಗ್ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಅನಿಸಿಕೆ.

ಇದನ್ನೂ ಓದಿ: ಮಾನಗೇಡಿ ಶಾಸಕರು, ಹೊಣೆಗೇಡಿ ನಾಯಕರು

ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಅವರ ಪ್ರಕಾರ ಎಂಟಿಬಿ ನಾಗರಾಜು, ಸೋಮಶೇಖರ್, ಭೈರತಿ ಮೂರೂ ಜನರೂ ರಿಯಲ್ ಎಸ್ಟೇಟ್ ಕುಳಗಳು. ಮುನಿರತ್ನರಿಗೆ ಸಕ್ರಮ ಮತ್ತು ಅಕ್ರಮ ದಂಧೆಗಳೆರಡೂ ಇವೆ. ರಮೇಶ್ ಜಾರಕಿಹೊಳಿ ಹಲವು ವ್ಯವಹಾರಗಳನ್ನು ನಡೆಸುತ್ತಾ, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿರುವ ‘ಸಾಹುಕಾರ’. ಆನಂದ್‍ಸಿಂಗ್ ಈಗಾಗಲೇ ಒಮ್ಮೆ ಜೈಲಿಗೆ ಹೋಗಿ ಬಂದಿರುವ ಉದ್ಯಮಿ. ಇನ್ನು ಸುಧಾಕರ್ ಅವರ ದಿಢೀರ್ ಶ್ರೀಮಂತಿಕೆಯ ಹಿನ್ನೆಲೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ರೋಷನ್‍ಬೇಗ್ ಐಎಂಎ ಕೇಸಿನಲ್ಲಿ ಯಾವಾಗ ಜೈಲಿಗೆ ಹೋಗಬೇಕಾಗಿ ಬರುತ್ತದೋ ಹೇಳಲಾಗದು.

ಹೀಗಾಗಿ ಮೂರ್ನಾಲ್ಕು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಕನಿಷ್ಠ ನೂರು ಕೋಟಿ ಕುಳಗಳು. ಒಂದಲ್ಲಾ ಒಂದು ಬಗೆಯ ಅಕ್ರಮ ದಂಧೆಗಳು ಇವರ ಹಿಂದೆ ಇದೆ ಎಂಬುದು ಆಡಿಟರ್‍ಅವರ ಅನಿಸಿಕೆ. ಹಾಗಾಗಿಯೇ ಉತ್ತರ ಕರ್ನಾಟಕದ ಅಥವಾ ಬಳ್ಳಾರಿಯ ಶಾಸಕರು ಪಕ್ಷ ಬದಲಿಸುತ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು, ಅದರಲ್ಲೂ ಲಿಂಗಾಯಿತ ಶಾಸಕರ ದಂಡೇ ಹೊರಹೋಗುತ್ತದೆ ಎಂಬ ನಿರೀಕ್ಷೆಗೆ ವಿರುದ್ಧವಾಗಿ ದಕ್ಷಿಣ ಕರ್ನಾಟಕದ ಶಾಸಕರು ರಾಜೀನಾಮೆ ನೀಡಿದರು. ಅದರಲ್ಲೂ ಬೆಂಗಳೂರಿನ ನಾಲ್ವರು! ಇದನ್ನು ಯಾರೂ ಊಹಿಸಿರಲಿಲ್ಲ. ಇದು ರಾಜೀನಾಮೆಯ ಅಸಲೀ ಕಾರಣ ಅತೃಪ್ತಿಯಲ್ಲ, ಅಕ್ರಮ ದಂಧೆ ಎಂಬ ಆಡಿಟರ್‍ರ ಅಭಿಪ್ರಾಯಕ್ಕೆ ಪುಷ್ಟಿ ಕೊಡುತ್ತದೆ.

ಇದನ್ನೂ ಓದಿ: ಆನಂದ್ ಸಿಂಗ್ ರಾಜೀನಾಮೆ

‘ಆಂಧ್ರದ ಮಲ್ಯರು’ ಎಂದು ಬಿಜೆಪಿಯೇ ಮೂದಲಿಸುತ್ತಿದ್ದ ಟಿಡಿಪಿಯ ರಾಜ್ಯಸಭಾ ಸದಸ್ಯರನ್ನು ಬಿಜೆಪಿಯು ಸೆಳೆದದ್ದು ಅವರ ಅಕ್ರಮ ದಂಧೆಗಳನ್ನು ಮುಂದಿಟ್ಟು ಹೆದರಿಸಿದ್ದರಿಂದ ಎಂಬುದು ದೇಶಕ್ಕೇ ಗೊತ್ತಿದೆ. 2008ರಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿದ್ದೂ ಅಕ್ರಮ ಹಣದ ಮೂಲಕವೇ ಆಗಿತ್ತು. ಅಂದರೆ ತಮ್ಮ ಜೊತೆ ಇದ್ದರೆ ಎಲ್ಲಾ ಅಕ್ರಮಗಳೂ ಮಾಫ್ ಎಂಬುದು ಬಿಜೆಪಿ ಪಕ್ಷದ ನೀತಿಯಾಗಿದೆ.

ಹೀಗಾಗಿ ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಶಾಸಕರು ಯಾವ ಪಕ್ಷದಲ್ಲೇ ಇದ್ದರೂ, ಇವರ ಆಸ್ತಿಪಾಸ್ತಿಗಳ ತನಿಖೆಯು ನಡೆದಾಗ ಮಾತ್ರ ಅಸಲೀ ಕಾರಣ ಬಹಿರಂಗಕ್ಕೆ ಬರುತ್ತದೆ. ಅಲ್ಲಿಯವರೆಗೆ ಇಂತಹ ಕಣ್ಣಾಮುಚ್ಚಾಲೆ ನಡೆಯುತ್ತಲೇ ಇರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...