Homeಕರ್ನಾಟಕಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ...

ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

9 ಸಾವಿರ ಎಕರೆಗೂ ಹೆಚ್ಚು ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫೈ ಆಗಿದೆಯೆಂದು ಆರೋಪ

- Advertisement -
- Advertisement -

2015-2017ರ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ 9,934.02 ಎಕರೆ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಿದ್ದಕ್ಕಾಗಿ ಮಾಜಿ ಐಎಎಸ್ ಅಧಿಕಾರಿಗಳಾದ ಮದನ್ ಗೋಪಾಲ್ ಮತ್ತು ಟಿಎಂ ವಿಜಯ ಭಾಸ್ಕರ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಗಿರೀಶ್ ಆಚಾರ್ ಅವರು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (MoEF&CC) ದಕ್ಷಿಣ ವಲಯಕ್ಕೆ ದೂರು ಸಲ್ಲಿಸಿದ್ದಾರೆ.

ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಅರಣ್ಯ ಪ್ರದೇಶಗಳನ್ನು ಡಿ-ನೋಟಿಫೈ ಮಾಡುವ ಮೊದಲು ಒಕ್ಕೂಟ ಸರ್ಕಾರದ ಅನುಮೋದನೆ ಪಡೆಯುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದ್ದರೂ, ಈ ಪ್ರಕರಣದಲ್ಲಿ ಆ ರೀತಿ ಆಗಲಿಲ್ಲ ಎಂದು ಶಿವಮೊಗ್ಗ ಮೂಲದ ಹೋರಾಟಗಾರ ಸೆಪ್ಟೆಂಬರ್ 29 ರಂದು ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲಾ ಡಿ-ನೋಟಿಫಿಕೇಶನ್ ಆದೇಶಗಳನ್ನು ಹಿಂಪಡೆಯಲು ಮತ್ತು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ತನಿಖೆಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಗಿರೀಶ್‌ ಆಚಾರ್ ಅವರು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮೈಸೂರು: ಅಲೆಮಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆಯೇ ವ್ಯವಸ್ಥೆ?

ಸೆಪ್ಟೆಂಬರ್ 1 ರಂದು ಗಿರೀಶ್‌ ಆಚಾರ್ ಅವರು ಕರ್ನಾಟಕ ಲೋಕಾಯುಕ್ತರ ಮುಂದೆ ಈ ವಿಷಯ ಪ್ರಸ್ತಾಪಿಸಿ ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದರು.

ಮದನ್ ಗೋಪಾಲ್ ಪ್ರಸ್ತುತ ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿಯ ಅಧ್ಯಕ್ಷರಾಗಿದ್ದರೆ, ವಿಜಯ ಭಾಸ್ಕರ್‌ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿದ್ದಾರೆ.

ಮದನ್ ಗೋಪಾಲ್ ಮತ್ತು ಟಿಎಂ ವಿಜಯ ಭಾಸ್ಕರ್ ಅವರು ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 28 ರ ಅಡಿಯಲ್ಲಿ 56 ಡಿ-ನೋಟಿಫಿಕೇಶನ್‌ಗಳನ್ನು ಹೊರಡಿಸಿದ್ದಾರೆ ಎಂದು ಗಿರೀಶ್‌‌ ಆಚಾರ್ ಪರ ವಕೀಲ ವೀರೇಂದ್ರ ಪಾಟೀಲ್ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

“ಡಿ-ನೋಟಿಫಿಕೇಶನ್‌ಗಳನ್ನು ನೀಡಲು ಕೇಂದ್ರ ಸರ್ಕಾರದಿಂದ ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಇಬ್ಬರೂ ವಾದಿಸುತ್ತಾರೆ. ಆದಾಗ್ಯೂ, ಅರಣ್ಯ ಸಂರಕ್ಷಣಾ ಕಾಯಿದೆ, 1980, ಸೆಕ್ಷನ್ 2 ‘ಅರಣ್ಯವನ್ನು ಮೀಸಲಿಡುವ ನಿರ್ಬಂಧ ಅಥವಾ ಅರಣ್ಯೇತರ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ಬಳಸುವುದು’ ಕುರಿತು ಸ್ಪಷ್ಟವಾಗಿ ಹೇಳುತ್ತದೆ. ಒಕ್ಕೂಟ ಸರ್ಕಾರದ ಪೂರ್ವಾನುಮತಿ ಹೊರತುಪಡಿಸಿ ಯಾವುದೇ ರಾಜ್ಯ ಸರ್ಕಾರ ಅಥವಾ ಇತರ ಯಾವುದೆ ಪ್ರಾಧಿಕಾರವು ಯಾವುದೇ ಬದಲಾವಣೆಯನ್ನು ಮಾಡಬಾರದು ಎಂದು ಹೇಳುತ್ತದೆ” ಎಂದು ವೀರೇಂದ್ರ ಪಾಟೀಲ್ ಹೇಳಿದ್ದಾರೆ.

ಶರಾವತಿ ಜಲಾಶಯ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪುನರ್ವಸತಿ ಕಲ್ಪಿಸಲು ಶಿವಮೊಗ್ಗ ಜಿಲ್ಲೆಯ ಸಾಗರ ಅರಣ್ಯ ವಿಭಾಗದಲ್ಲಿ 14,848.83 ಹೆಕ್ಟೇರ್ ಅರಣ್ಯ ಭೂಮಿಯನ್ನು 1996 ಮೇ 5 ರಂದು ಒಕ್ಕೂಟ ಸರ್ಕಾರವು ಮಂಜೂರು ಮಾಡಿದೆ ಎಂದು ಪಾಟೀಲ್ ವಿವರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

“1978 ರ ಮೊದಲು ಮಾಡಿದ ಅತಿಕ್ರಮಣಗಳನ್ನು ಒಕ್ಕೂಟ ಸರ್ಕಾರವು ಸಕ್ರಮಗೊಳಿಸಿದೆ. ಅರಣ್ಯ ಸಂರಕ್ಷಣಾ ಕಾಯ್ದೆಯನ್ನು 1980 ರಲ್ಲಿ ಜಾರಿಗೊಳಿಸಲಾಯಿತು ಮತ್ತು ನಂತರ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲು ಒಕ್ಕೂಟ ಸರ್ಕಾರದ ಪೂರ್ವಾನುಮತಿ ಅಗತ್ಯ ಎಂದು ಕಡ್ಡಾಯಗೊಳಿಸಲಾಯಿತು. ಹಾಗಾಗಿ 2015-2017ರ ಅವಧಿಯಲ್ಲಿ ಮಾಜಿ ಐಎಎಸ್ ಅಧಿಕಾರಿಗಳು ಮಾಡಿದ ಡಿ-ನೋಟಿಫಿಕೇಶನ್‌ಗಳು ಕಾನೂನುಬಾಹಿರ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸುತ್ತವೆ” ಎಂದು ವೀರೇಂದ್ರ ಪಾಟೀಲ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...