Homeಕರ್ನಾಟಕಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜೈಲಿನಿಂದಲೇ ಚೆಕ್‌ಗಳಿಗೆ ಸಹಿ ಹಾಕಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಸೆಪ್ಟೆಂಬರ್ 1 ರಿಂದ ಮರುಘಾ ಮಠಾಧೀಶರು ಬಂಧನದಲ್ಲಿದ್ದಾರೆ. ಮಠ ಮತ್ತು ಶಿಕ್ಷಣ ಸಂಸ್ಥೆಗಳ ನೌಕರರಿಗೆ ಮಾಸಿಕ ವೇತನ ಪಾವತಿಗಾಗಿ ಚೆಕ್‌ಗಳಿಗೆ ಸಹಿ ಹಾಕಲು ಅನುಮತಿ ಕೋರಲಾಗಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ್ದಾರೆ. ಅಕ್ಟೋಬರ್ 3, 6 ಮತ್ತು 10 ರಂದು ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡುವಂತೆ ಆದೇಶಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೆಕ್‌ಗಳನ್ನು ತೆಗೆದುಕೊಂಡು ಹೋಗುವವರು ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಪ್ರಕರಣದ ತನಿಖಾಧಿಕಾರಿ ಮತ್ತು ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಚೆಕ್‌ಗಳಿಗೆ ಸಹಿ ಮಾಡಬೇಕು. ಹೀಗೆ ಸಹಿ ಮಾಡಿದ ಚೆಕ್‌ಗಳ ನಕಲು ಪ್ರತಿಗಳನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಅಕ್ಟೋಬರ್ ತಿಂಗಳವರೆಗೆ ಮಾತ್ರ ಚೆಕ್‌ಗಳಿಗೆ ಸಹಿ ಹಾಕಲು ಅವಕಾಶ ನೀಡಲಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ವಿಚಾರಣಾ ನ್ಯಾಯಾಲಯಕ್ಕೆ ಈ ಕುರಿತು ಅರ್ಜಿ ಸಲ್ಲಿಸಬೇಕು. ವಿಚಾರಣಾ ನ್ಯಾಯಾಲಯವು ಈ ಮನವಿಯನ್ನು ಪರಿಗಣಿಸಿ ಆದೇಶಗಳನ್ನು ಹೊರಡಿಸುತ್ತದೆ. ‘ಮಠದ ಟ್ರಸ್ಟ್‌ನ ಏಕೈಕ ಟ್ರಸ್ಟಿಯಾಗಿದ್ದೇನೆ. ಟ್ರಸ್ಟ್‌ನ 150ಕ್ಕೂ ಹೆಚ್ಚು ಸಂಸ್ಥೆಗಳ 3,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಂಬಳವನ್ನು ಪಾವತಿಸಬೇಕಾಗಿದೆ’ ಎಂದು ಮನವಿಯಲ್ಲಿ ಮುರುಘಾ ಶರಣರು ತಿಳಿಸಿದ್ದಾರೆ.

ಸುಮಾರು 200 ಚೆಕ್‌ಗಳಿಗೆ ಕಾರಾಗೃಹದಿಂದ ಸಹಿ ಹಾಕಲು ಅನುಮತಿ ಕೋರಿ ಸಲ್ಲಿಸಲಾಗಿರುವ ಮನವಿಯಲ್ಲಿ ಸ್ಪಷ್ಟತೆಯ ಕೊರತೆಯಿದೆ ಎಂದು ಹೈಕೋರ್ಟ್ ಹೇಳಿತ್ತು. ಏಕೆಂದರೆ ಎಲ್ಲಾ ಚೆಕ್‌ ವಿವರದಲ್ಲಿ ಸೆಲ್ಫ್ ಆರ್‌ಟಿಜಿಎಸ್ (ರಿಯಲ್‌ ಟೈಮ್‌ ಗ್ರಾಸ್‌ ಸೆಟಲ್‌ಮೆಂಟ್‌) ಎಂದು ನಮೂದಿಸಲಾಗಿದೆ ಎನ್ನಲಾಗಿತ್ತು.

ಪಬ್ಲಿಕ್ ಪ್ರಾಸಿಕ್ಯೂಟರ್‌‌ ಕಿರಣ್ ಜವಳಿ ಅವರು ವಾದಿಸಿ, “ಆರೋಪಿಗಳು ಸಲ್ಲಿಸಿರುವ ಸಲ್ಲಿಕೆಗಳು ಮೇಲ್ನೋಟಕ್ಕೆ ಸತ್ಯವೆಂದು ತೋರುತ್ತಿಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದು, ಅರ್ಜಿಯನ್ನು ಅರ್ಹತೆಯ ಆಧಾರದ ಮೇಲೆ ಚಿತ್ರದುರ್ಗದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಜೈಲಿನಲ್ಲಿರುವ ಆರೋಪಿಗಳು ಸ್ವಯಂ ವಿಳಾಸವಿರುವ ಚೆಕ್‌ಗಳಿಗೆ ಸಹಿ ಹಾಕುವಂತೆ ಮನವಿ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿತ್ತು. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರ ಮುಂದೆ ಸ್ವಾಮೀಜಿ ಇದೇ ರೀತಿಯ ಮನವಿಯನ್ನು ಸಲ್ಲಿಸಿದ್ದರು. ನ್ಯಾಯಾಧೀಶರು ಮನವಿಯನ್ನು ತಿರಸ್ಕರಿಸಿದರು. ಹಾಗಾಗಿ, ಅದೇ ಅರ್ಜಿಯೊಂದಿಗೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿರಿ: ಪೋಕ್ಸೋ ಪ್ರಕರಣ: ಮುರುಘಾ ಶರಣರಿಗೆ ಜಾಮೀನು ನಿರಾಕರಣೆ

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...