Homeಮುಖಪುಟ2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿ, ರೈಲಿನಲ್ಲಿ ಪ್ರಯಾಣಿಸಿದರು. ಆದರೆ 2019ರಲ್ಲಿಯೇ ಈ ಯೋಜನೆಯನ್ನು ಉದ್ಘಾಟಿಸಲಾಗಿತ್ತು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ವ್ಯಂಗ್ಯವಾಡುತ್ತಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ 2019ರ ಮಾರ್ಚ್‌ನಲ್ಲಿ ಮೋದಿಯವರು ಅಹಮದಾಬಾದ್‌ ಮೆಟ್ರೋ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಈಗ ಗುಜರಾತ್‌ ವಿಧಾನಸಭಾ ಚುನಾವಣೆಗೂ ಮುನ್ನ ಮತ್ತೊಮ್ಮೆ ಉದ್ಘಾಟಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಬಂದಾಗ ಮತ್ತೊಮ್ಮೆ ಚಾಲನೆ ನೀಡಲಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ.

ಮೊದಲ ಹಂತದ ಮೆಟ್ರೋ ಯೋಜನೆಯನ್ನು ಎರಡು ಬಾರಿ ಉದ್ಘಾಟನೆ ಮಾಡಿರುವುದು ನಿಜ. ಆದರೆ ಇಲ್ಲೊಂದು ಸಣ್ಣ ವ್ಯತ್ಯಾಸವನ್ನು ಗುರುತಿಸಬಹುದು.

2022, ಸೆಪ್ಟೆಂಬರ್‌ 30ರ ಸುದ್ದಿ

ಮೆಟ್ರೋ ಯೋಜನೆಯ ಪೂರ್ವ-ಪಶ್ಚಿಮ ಕಾರಿಡಾರ್‌ನ ಕಲುಪುರ ನಿಲ್ದಾಣದಲ್ಲಿ ಶುಕ್ರವಾರ ನರೇಂದ್ರ ಮೋದಿಯವರು ಯೋಜನೆಗೆ ಚಾಲನೆ ನೀಡಿದರು. ಗಾಂಧಿನಗರ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಗಮಿಸಿದ ಅವರು, ಕಲುಪುರ ನಿಲ್ದಾಣದಲ್ಲಿ ಮೆಟ್ರೋ ರೈಲಿಗೆ ಪ್ರಧಾನಿ ಚಾಲನೆ ನೀಡಿದರು.

ನಂತರ ಅಲ್ಲಿಯೇ ರೈಲು ಹತ್ತಿ ತಲ್ತೇಜ್ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಪ್ರಯಾಣದ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಪಕ್ಷದ ಸಂಸದರಾದ ಸಿ.ಆರ್.ಪಾಟೀಲ್, ಕಿರಿತ್ ಸೋಲಂಕಿ ಜೊತೆಗಿದ್ದರು.

ಈ ಮೂಲಕ 17 ನಿಲ್ದಾಣಗಳ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಯೋಜನೆಯ 21-ಕಿಮೀ ಕಾರಿಡಾರ್ ಕಾರ್ಯಾರಂಭ ಮಾಡಿತು. ಈ ಕಾರಿಡಾರ್‌ನಲ್ಲಿ ಸುಮಾರು 6.6 ಕಿಮೀ ಮಾರ್ಗವು ಭೂಮಿಯ ಒಳಗೆ ನಿರ್ಮಾಣವಾಗಿದೆ ಎಂದು ಗುಜರಾತ್ ಮೆಟ್ರೋ ರೈಲು ನಿಗಮ (ಜಿಎಂಆರ್‌ಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಮೆಟ್ರೋ ರೈಲು ಟಿಕೆಟ್‌ಗಳ ಬೆಲೆ 5 ರಿಂದ 15 ರೂಪಾಯಿಗಳವರೆಗೆ ಇರುತ್ತದೆ ಎಂದು ಜಿಎಂಆರ್‌ಸಿ ತಿಳಿಸಿದೆ. ಯೋಜನೆಯ ಎರಡನೇ ಹಂತವು ರಾಜ್ಯದ ರಾಜಧಾನಿ ಗಾಂಧಿನಗರ ಹಾಗೂ ಅಹಮದಾಬಾದ್‌ ನಡುವೆ ಸಂಪರ್ಕ ಕಲ್ಪಿಸುತ್ತದೆ. ಇದು ಮೂಲಭೂತವಾಗಿ ಮೊದಲ ಹಂತದ ವಿಸ್ತರಣೆ ಎಂದು ಹೇಳಲಾಗುತ್ತಿದೆ.

ಮಾರ್ಚ್ 4, 2019ರಲ್ಲಿ ಉದ್ಘಾಟನೆಯಾಗಿದ್ದೆಷ್ಟು?

ಮಾರ್ಚ್ 4, 2019ರಂದು ಪ್ರಧಾನಿ ನರೇಂದ್ರ ಮೋದಿಯವರು 6.5 ಕಿಮೀಯಷ್ಟು ಮಾರ್ಗವನ್ನು ಮಾತ್ರ ಉದ್ಘಾಟಿಸಿದ್ದರು. ವಸ್ತ್ರಾಲ್‌ನಿಂದ ಅಪೆರೆಲ್ ಪಾರ್ಕ್‌ಗೆ ಸಂಪರ್ಕಿಸುವ ಮಾರ್ಗವನ್ನು ಯೋಜನೆಯ ಮೊದಲ ಹಂತದ ಭಾಗವಾಗಿ ಉದ್ಘಾಟಿಸಿದ್ದರು. ಜೊತೆಗೆ ರೈಲಿನಲ್ಲಿ ಮೋದಿ ಪ್ರಯಾಣಿಸಿದ್ದರು. 2014ರಲ್ಲಿ ಯೋಜನೆಗೆ ಮಂಜೂರಾತಿ ದೊರೆತ್ತಿತ್ತು.

ಅಂದು ವಸ್ತ್ರಲ್ ಗಾಮ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರು ಮೊದಲ ಹಂತದ ಉದ್ಘಾಟನೆಯನ್ನು ಮಾಡಿದ್ದರು. ಫಲಕ ಅನಾವರಣಗೊಳಿಸಿ ಮೆಟ್ರೋ ರೈಲಿಗೆ ಹಸಿರು ಬಾವುಟ ತೋರಿಸಿ ಸ್ವಲ್ಪ ದೂರ ಪ್ರಯಾಣಿಸಿದ್ದರು.

ಇದನ್ನೂ ಓದಿರಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಅಹಮದಾಬಾದ್ ಮೆಟ್ರೋ ಮೊದಲ ಹಂತವು 40 ಕಿಲೋಮೀಟರ್ ಉದ್ದವಿರುತ್ತದೆ. ಅದರಲ್ಲಿ 6.5 ಕಿಮೀ ಭೂಮಿಯೊಳಗೆ ಸಾಗುತ್ತದೆ. ಇದು ಎರಡು ಕಾರಿಡಾರ್‌ಗಳನ್ನು ಹೊಂದಿದೆ (ಒಂದು: ವಸ್ತ್ರಾಲ್‌ನಿಂದ ಥಲ್ತೇಜ್ ಗಾಮ್. ಎರಡು: ಗ್ಯಾಸ್‌ಪುರ್ ಡಿಪೋದಿಂದ ಮೊಟೆರಾ ಕ್ರೀಡಾಂಗಣ).

ಫೆಬ್ರವರಿ 2019ರಲ್ಲಿ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಹಂತ-2 ಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಎರಡನೇ ಹಂತದ ಯೋಜನೆಯು ಕೇವಲ 28-ಕಿಮೀ ಉದ್ದವಿರುತ್ತದೆ. ಎರಡನೇ ಹಂತವು ಮೊಟೆರಾ ಕ್ರಿಕೆಟ್ ಸ್ಟೇಡಿಯಂನಿಂದ ಗಾಂಧಿನಗರದ ಮಹಾತ್ಮ ಮಂದಿರದವರೆಗೆ ಇರಲಿದೆ.

ಮೋದಿಯವರು 2019ರಲ್ಲಿ 6.6 ಕಿಮೀ ಮಾರ್ಗವನ್ನು ಉದ್ಘಾಟಿಸಿದ್ದರೆ, ಈಗ 21-ಕಿಮೀ ಕಾರಿಡಾರ್‌ಗೆ ಚಾಲನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...