Homeಕರ್ನಾಟಕಜಾಮೀನು ಮೇಲೆ ಹೊರಗಿರುವವರಿಂದ ನೈತಿಕತೆಯ ಪಾಠ ಕಲಿಯಬೇಕಿಲ್ಲ: ಬೊಮ್ಮಾಯಿ

ಜಾಮೀನು ಮೇಲೆ ಹೊರಗಿರುವವರಿಂದ ನೈತಿಕತೆಯ ಪಾಠ ಕಲಿಯಬೇಕಿಲ್ಲ: ಬೊಮ್ಮಾಯಿ

- Advertisement -
- Advertisement -

ಜಾಮೀನು ಮೇಲೆ ಹೊರಗಿರುವವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿ ಬಸಬರಾಜ ಬೊಮ್ಮಾಯಿಯವರು ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ರಾಜ್ಯದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್‌‌ನವರು ಮಾತನಾಡುತ್ತಾರೆ. ರಾಹುಲ್ ಗಾಂಧಿ, ಅವರ ರಾಷ್ಟ್ರೀಯ ಅಧ್ಯಕ್ಷರು ಸೋನಿಯಾ ಗಾಂಧಿಯವರು ಬೇಲ್ ಮೇಲೆ ಹೊರಗಿದ್ದಾರೆ. ಇಲ್ಲಿನ ಅಧ್ಯಕ್ಷರು ಕೂಡ ಬೇಲ್ ಮೇಲೆ ಹೊರಗಿದ್ದಾರೆ. ಇಂತಹವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಮತ್ತು ಭಾರತದ ಜನತೆ ಈಗಾಗಲೇ ತಿರಸ್ಕಾರ ಮಾಡಿದ್ದಾರೆ. ಮುಂಬರುವ 2023ರ ಚುನಾವಣೆಯಲ್ಲಿಯೂ ಕೂಡ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ನಿನ್ನೆ ಸಿದ್ದರಾಮಯ್ಯ ಅವರು ಆರು ತಿಂಗಳಾದ ಮೇಲೆ ನಮ್ಮ ಸರ್ಕಾರ ಬರುತ್ತದೆ ಅಂತ ಹೇಳಿರುವುದು ಕನಸು. ಅವರ ಕನಸಾಗಿಯೇ ಉಳಿಯುತ್ತದೆ. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಅನ್ನುವುದು ಕನಸಿನ ಮಾತು ಎಂದು ತಿಳಿಸಿದ್ದಾರೆ.

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಜತೆ ಜತೆಯಾಗಿಯೇ ಪಾದಯಾತ್ರೆ ಮಾಡಬೇಕು. ನಾವು ಅದಕ್ಕೆ ಬೇಡ ಅಂದಿಲ್ಲ‌. ಅವರು ಜೊತೆ ಜೊತೆಯಾಗಿ ಬಂದಾಗಲೇ ರಾಜಕಾರಣ ಸರಿ ಅಗುತ್ತದೆ. ಒಬ್ಬರು ಮುಂದೆ ಹೋಗಿ ಇನ್ನೊಬ್ಬರು ಹಿಂದೆ ಇರಬಾರದು. ಅವರಿಬ್ಬರೂ ಒಟ್ಟಿಗೆ ಇದ್ದಷ್ಟು ನಮಗೆ ಒಳ್ಳೆಯದ್ದು ಎಂದು ಹೇಳಿದ್ದಾರೆ.

ಭಾರತ ಜೋಡೋ ಯಾತ್ರೆಗೆ ಜನಸಾಮಾನ್ಯರಿಂದ ಪ್ರತಿಕ್ರಿಯೆ ಬರುತ್ತಿಲ್ಲ. ಕಷ್ಟಪಟ್ಟು ಬೇರೆ ಬೇರೆ ತಾಲ್ಲೂಕಿನಿಂದ ಜನರನ್ನು ಕರೆದುಕೊಂಡು ಬಂದು ಪ್ರದರ್ಶನ ಮಾಡುತ್ತಿದ್ದಾರೆ. ಅವರ ಜೊತೆಗೆ ಪಾದೆಯಾತ್ರೆ ಮಾಡುವವರ ಜನಸಂಖ್ಯೆ ಕಡಿಮೆಯಿದೆ. ಅಲ್ಲಲ್ಲಿ ಅಷ್ಟೇ ಜನರಿದ್ದಾರೆ, ಇಂದೊಂದು ತರಹ ಶೋ. ಕಾಂಗ್ರೆಸ್ ನವರು, ರಾಹುಲ್ ಗಾಂಧಿ ತಮ್ಮ ರಾಜಕೀಯ ಆಸ್ತಿತ್ವ ಉಳಿಸಿಕೊಳ್ಳಲು ಈ ಶೋ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ಮತ್ತು ಇವತ್ತು ರಾಜ್ಯದ ಬಗ್ಗೆ ಮಾತನಾಡಿದ್ದಾರೆ. ನಾನು ಅದನ್ನು ಗಮನಿಸಿದ್ದು, ಇಷ್ಟು ಸಣ್ಣಮಟ್ಟದ ರಾಜಕಾರಣವನ್ನು ಮಾಡುವುದಕ್ಕೆ ನಾವು ಬಯಸುವುದಿಲ್ಲ. ಅವರು ಪಾದಯಾತ್ರೆ ಮಾಡಿಕೊಂಡು ಹೋಗಲಿ. ಜನರು ತೀರ್ಮಾನ ಮಾಡುತ್ತಾರೆ. ಕೀಳು ಮಟ್ಟದ ಮಾತುಗಳು, ಅಧಿಕಾರಿಗಳಿಗೆ ಹೆದರಿಸುವುದು ನಡೆಯುವುದಿಲ್ಲ. ಇದನ್ನು ನಾನು ಸ್ಪಷ್ಟಪಡಿಸುತ್ತೇನೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

ದೇಶದ ಬಹುತ್ವವನ್ನು ಒಡೆದು ರಾಜಕೀಯ ಮಾಡುತ್ತಿರುವ ಕೋಮುಶಕ್ತಿಗಳ ವಿರುದ್ಧ ಜನರನ್ನು ಒಟ್ಟುಗೂಡಿಸಿ, ದೇಶದ ಏಕತೆಯನ್ನು ಸ್ಥಾಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್‌ ಗಾಂಧಿ ಕುರಿತು ಕರ್ನಾಟಕ ಬಿಜೆಪಿ ಕೀಳು ಅಭಿರುಚಿಯ ಜಾಹೀರಾತು ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.

‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಒಂದು ಪುಟದ ಜಾಹೀರಾತು ಅತ್ಯಂತ ಅಸಹನೀಯವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿದೆ. ಇಂತಹ ಜಾಹೀರಾತನ್ನು ಪ್ರಕಟಿಸಿದ ಪತ್ರಿಕೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಗಿದೆ. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಇಲ್ಲಿ ಬಳಸಲಾಗಿದೆ. ಕಾಂಗ್ರೆಸ್‌ ಪಕ್ಷದ ಹಸ್ತದ ಗುರುತನ್ನು ಮುದ್ರಿಸಲಾಗಿದೆ.

ಇದನ್ನೂ ಓದಿರಿ: ಭಗವದ್ಗೀತೆಯಲ್ಲಿ ಅದ್ಯಾವ ನೈತಿಕ ಶಿಕ್ಷಣವಿದೆ?

“ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ‘ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಕರ್ನಾಟಕ ಬಿಜೆಪಿ ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ್‌ ಜೋಡೋ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಈ ಜಾಹೀರಾತಿನಲ್ಲಿ ಬರೆದದ್ದು ನಿಜವೇ ಆಗಿದ್ದರೆ, ನೆಹರೂ ಜಯಂತಿ ದಿನ ಪ್ರಧಾನಿ ಮೋದಿ ನೆಹರೂ ಭಾವಚಿತ್ರಕ್ಕೆ ಹಾರ ಹಾಕಿ ಗೌರವಿಸಿದ್ದೇಕೆ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರ ಕೊಡುಗೆಯನ್ನು ಹಾಡಿ ಹೊಗಳಿದ್ದೇಕೆ? ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಕೆಲಸ ಇದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಜಾಹೀರಾತಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಕಾಯ್ದೆ ಪರಿಣಿತರನ್ನು ವಿಚಾರಿಸಬೇಕು. ಇದು ಕನ್ನಡಪ್ರಭ ಪತ್ರಿಕೆಯ ದುರಂತಕ್ಕೆ ಒಂದು ಉದಾಹರಣೆ ಕೂಡ. ದುಡ್ಡು ಹಾಕಿಕೊಂಡ ಮಾಲೀಕ ಪತ್ರಿಕೆಯನ್ನು ಕಾಲೊರೆಸುವ ಮ್ಯಾಟನ್ನಾಗಿ ಇದನ್ನು ಮಾಡಿಕೊಂಡಿದ್ದಾನೆ” ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. (ವಿವರಗಳನ್ನು ‘ಇಲ್ಲಿ’ ಓದಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 40% ಕೇಸುಗಳು,ಖಾಸಾಗಿ ಶಾಲೆಗಳ ದೂರು, ಪಿಎಸ್ಐ ಕೇಸಲ್ಲಿ ಮುಕ್ಕಿದ್ದು,ಕೋವಿಡ್ ಟೈಮ್ ಅರ್ನಿಂಗ್, ಬಿಟ್ ಕಾಯಿನ್ ಹಗರಣಗಳೆಲ್ಲಾ ವಿಚಾರಣೆಗೊಳಪಡಿಸಿದ್ರೆ ನಿಮ್ಮ ಇಡೀ ಮಂತ್ರಿಮಂಡಲ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲೋಗ್ಯ bumಮಾಯಿಯವರೆ. ನಿಮ್ಮ ನೈ’ತಿಕ’
    ಮಟ್ಟ ಅತ್ಯಂತ ಶ್ರೇಷ್ಠವಾದುದು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...