Homeಕರ್ನಾಟಕಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

- Advertisement -
- Advertisement -

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಂತರ ಕೆಲವು ರಾಜಕೀಯ ನೆಲೆಯನ್ನು ಉಳಿಸಲು ಕಾಂಗ್ರೆಸ್ ಮುಂದಾಗಿದೆ. ಉತ್ತರ ಪ್ರದೇಶದ ಆರು ವಲಯ ಮುಖ್ಯಸ್ಥರ ನೇಮಕದ ಜೊತೆಗೆ ದಲಿತ ನಾಯಕ ಬ್ರಿಜ್‌ಲಾಲ್ ಖಬ್ರಿ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ದಲಿತ ಸಮುದಾಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದಲ್ಲಿ ಪಕ್ಷದ ನೇತೃತ್ವ ವಹಿಸುವ ಸಾಧ್ಯತೆ ಹೆಚ್ಚಿದೆ. ಆ ಮೂಲಕ ಮೇಲ್ಜಾತಿ ಪಕ್ಷ ಎಂಬ ತನ್ನ ಇಮೇಜ್ ಅನ್ನು ಕಳಚಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಅಭಿಪ್ರಾಯಗಳು ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದಲ್ಲಿ ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ದಿನೇ ದಿನೇ ತನ್ನ ಪ್ರಭಾವವನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಿರುವ ಕಾಂಗ್ರೆಸ್ ದಲಿತ ಮತಗಳ ಮೇಲೆ ತನ್ನ ದೃಷ್ಟಿ ಇರಿಸಿದೆ.

ಚುನಾವಣೆಗೂ ಮುನ್ನ ದಲಿತ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರನ್ನು ಪಂಜಾಬ್‌ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಚುನಾವಣೆ ಹೊಸ್ತಿಲಲ್ಲಿನ ಈ ಪ್ರಯೋಗ ವಿಫಲವಾಗಿತ್ತು. ಅಮರಿಂದರ್ ಸಿಂಗ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕೆಟ್ಟ ಆಡಳಿತವನ್ನು ನೀಡಿತ್ತು. ಇದು ದೊಡ್ಡ ಆಡಳಿತ ವಿರೋಧಿ ಅಲೆಯನ್ನು ಸೃಷ್ಟಿಸಿತು. ಚುನಾವಣೆಗೆ ಕೇವಲ ಮೂರು ತಿಂಗಳ ಮೊದಲು ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿಸಿದ್ದು ದಲಿತರನ್ನು ಮೂರ್ಖರನ್ನಾಗಿಸುವ ಯೋಜನೆಯಂತೆ ಕಂಡಿತು. ಆದರೆ ಇದೆಲ್ಲದರಿಂದ ಎಚ್ಚೆತ್ತುಕೊಂಡಂತೆ ಕಾಣುತ್ತಿರುವ ಕಾಂಗ್ರೆಸ್, ದಲಿತ ವೋಟ್‌ಬ್ಯಾಂಕ್‌ ಮೇಲೆ ದೃಷ್ಟಿ ಹಾಯಿಸಿರುವುದು ಸ್ಪಷ್ಟವಾಗುತ್ತಿದೆ.

ಖರ್ಗೆ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮತ್ತು ಖಬ್ರಿ ಅವರನ್ನು ದೇಶದ ಅತಿದೊಡ್ಡ ರಾಜ್ಯದ ಕಾಂಗ್ರೆಸ್‌ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡುವ ಮೂಲಕ ಸಮಾಜದ ದುರ್ಬಲ ವರ್ಗಗಳನ್ನು ಧ್ರುವೀಕರಣ ಮಾಡುವ ತನ್ನ ಯೋಜನೆಯನ್ನು ರೂಪಿಸಿದೆ.

ಖಬ್ರಿ ಮತ್ತು ಅವರ ಪತ್ನಿ ಊರ್ಮಿಳಾ ಸೋಂಕರ್ ಇಬ್ಬರೂ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವಿನ ತೀವ್ರ ಧ್ರುವೀಕರಣದ ಸ್ಪರ್ಧೆಯಲ್ಲಿ ಕಾಂಗ್ರೆಸ್ ಈ ಸೋಲುಗಳನ್ನು ಲೆಕ್ಕ ಹಾಕಿಲ್ಲ ಎಂದು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ನರೇಂದ್ರ ಮೋದಿ ಸರ್ಕಾರದ ಒತ್ತಡಕ್ಕೆ ಮಣಿದು ಮಾಯಾವತಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಗಳು ಇರುವುದರಿಂದ ದಲಿತ ಮತಗಳನ್ನು ಕ್ರೂಢೀಕರಿಸಿದರೆ ಕಾಂಗ್ರೆಸ್‌ ಬಲವಾಗಬಹುದು ಎಂಬ ಲೆಕ್ಕಾಚಾರಗಳಿವೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬಿಎಸ್‌ಪಿಯ ಹೆಚ್ಚಿನ ಮತಗಳು ಒಲ್ಲದ ಮನಸ್ಸಿನಿಂದ ಬಿಜೆಪಿಗೆ ಹೋಗಿವೆ ಎಂದು ಕಾಂಗ್ರೆಸ್‌ ನಂಬಿದೆ.

ಬಿಜೆಪಿಯ ಮೇಲಿನ ಅಸಮಾಧಾನದಿಂದ ದಲಿತರು ಕಾಂಗ್ರೆಸ್‌ನತ್ತ ನೋಡುತ್ತಿದ್ದಾರೆ ಎಂದು ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರು ಆಲೋಚಿಸಿದ್ದಾರೆ.

2016ರಲ್ಲಿ ಕಾಂಗ್ರೆಸ್ ಸೇರಿದ ಖಬ್ರಿ ಅವರು ಕಾನ್ಶಿರಾಮ್ ಮತ್ತು ಮಾಯಾವತಿ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು. ಸಂಘಟನಾ ಕೌಶಲ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಖಬ್ರಿಯವರಿಗೆ ಆರು ವಲಯಗಳ ಮುಖ್ಯಸ್ಥರಾದ ನಸೀಮುದ್ದೀನ್ ಸಿದ್ದಿಕಿ, ಅಜಯ್ ರೈ, ವೀರೇಂದ್ರ ಚೌಧರಿ, ನಕುಲ್ ದುಬೆ, ಅನಿಲ್ ಯಾದವ್ ಮತ್ತು ಯೋಗೇಶ್ ದೀಕ್ಷಿತ್ ಬಲ ತುಂಬಲಿದ್ದಾರೆ. ಸಿದ್ದಿಕಿ ಮತ್ತು ದುಬೆ ಕೂಡ ಬಿಎಸ್‌ಪಿಯಿಂದ ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ನಾಯಕರಾಗಿದ್ದಾರೆ.

ಇದನ್ನೂ ಓದಿರಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

ವಲಯ ಮುಖ್ಯಸ್ಥರು ತಮ್ಮ ಪ್ರದೇಶಗಳಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಈ ವಲಯದ ಮುಖ್ಯಸ್ಥರ ಆಯ್ಕೆಯಲ್ಲಿ ಜಾತಿ ಲೆಕ್ಕಾಚಾರಗಳು ಮುಖ್ಯವಾಗಿವೆ. ದಲಿತ ನಾಯಕರಾದ ಖಬ್ರಿ ಅವರು ರಾಜ್ಯ ಮುಖ್ಯಸ್ಥರಾಗಿ ಕೆಲಸ ಮಾಡಿದರೆ, ಫರೆಂಡಾ ಶಾಸಕ ವೀರೇಂದ್ರ ಚೌಧರಿ ಅವರು ಪೂರ್ವಾಂಚಲ ಜಿಲ್ಲೆಗಳಾದ ಫೈಜಾಬಾದ್, ಅಂಬೇಡ್ಕರ್ ನಗರ, ಬಸ್ತಿ, ಮಹಾರಾಜ್‌ಗಂಜ್, ಸಿದ್ಧಾರ್ಥನಗರ ಮತ್ತು ಕುಶಿನಗರದ ಉಸ್ತುವಾರಿ ವಹಿಸಲಿದ್ದಾರೆ.

ಭೂಮಿಹಾರ್ ಆಗಿರುವ ಅಜಯ್ ರೈ ಅವರು ಪ್ರಯಾಗವನ್ನು ನೋಡಿಕೊಳ್ಳುತ್ತಾರೆ. ನಕುಲ್ ದುಬೆ ಅವಧ್‌ನ ಉಸ್ತುವಾರಿ ವಹಿಸಲಿದ್ದಾರೆ. ಯೋಗೇಶ್ ದೀಕ್ಷಿತ್ ಅವರಿಗೆ ಬುಂದೇಲ್‌ಖಂಡ್ ಜವಾಬ್ದಾರಿ ನೀಡಲಾಗಿದೆ. ಪಶ್ಚಿಮ ಉತ್ತರ ಪ್ರದೇಶವನ್ನು ಸಿದ್ದಿಕಿ ನೋಡಿಕೊಳ್ಳಲಿದ್ದಾರೆ. ಅನಿಲ್ ಯಾದವ್ ಅವರು ಯಾದವ್ ಪ್ರಾಬಲ್ಯ ಹೊಂದಿರುವ ಬ್ರಜ್‌ನಲ್ಲಿ ಕೆಲಸ ಮಾಡಲಿದ್ದಾರೆ.

ಕೃಪೆ: ಟೆಲಿಗ್ರಾಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...