Homeಕರ್ನಾಟಕವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

- Advertisement -
- Advertisement -

ಭಾರತ ಐಕ್ಯತೆ ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿಯವರು ಸುರಿವ ಮಳೆಯ ನಡುವೆಯೇ ಮೈಸೂರಿನಲ್ಲಿ ಭಾಷಣ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ರಾಹುಲ್‌ ಗಾಂಧಿಯವರ ಬದ್ಧತೆ ಇದು ಎಂದು ಹೊಗಳುತ್ತಿದ್ದಾರೆ.

ರಾಜ್ಯದಲ್ಲಿ ಮೂರನೇ ದಿನದ ಭಾರತ್‌ ಜೋಡೋ ಯಾತ್ರೆ ಮೈಸೂರು ಬಂಡಿಪಾಳ್ಯ ಸರ್ಕಲ್ ತಲುಪುತ್ತಿದ್ದಂತೆ ರಭಸವಾಗಿ ಮಳೆ ಸುರಿಯತೊಡಗಿತು. ಮಳೆ ಲೆಕ್ಕಿಸದೇ ರಾಹುಲ್‌ ಗಾಂಧಿ ಅವರು ಸಾರ್ವಜನಿಕ ಸಮಾವೇಶದಲ್ಲಿ ನೆರಿದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿ, ಭಾನುವಾರದ ಯಾತ್ರೆಗೆ ವಿರಾಮ ನೀಡಿದರು.

ಆಗಮಿಸಿದ್ದ ಸಾವಿರಾರು ಜನ ಮಳೆಯಲ್ಲೇ ತೋಯಿಸಿಕೊಂಡು ರಾಹುಲ್‌ ಭಾಷಣಕ್ಕೆ ಕಿವಿಗೊಟ್ಟರು. ಕಾಂಗ್ರೆಸ್‌ ನಾಯಕರು ಕೂಡ ರಾಹುಲ್‌ ಜೊತೆಯಲ್ಲೇ ಮಳೆಯಲ್ಲಿ ಭಾಷಣ ಕೇಳಿದರು. ಸದ್ಯ ರಾಹುಲ್‌ ಗಾಂಧಿ ಅವರ ಮಳೆಯ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮಳೆ ನಡುವೆಯೇ ಮಾತು ಆರಂಭಿಸಿದ ರಾಹುಲ್‌, “ರಾಷ್ಟ್ರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಜನರ ನಡುವೆ ದ್ವೇಷವನ್ನು‌ ಹೆಚ್ಚಿಸುತ್ತಿದೆ. ದೇಶದಲ್ಲಿ ಪ್ರೀತಿ, ಸಹನೆ ಮೂಡಿಸಲು ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಕುರಿತು ಪ್ರಧಾನಿ ಮೋದಿ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ. ಅನೇಕ ಶಾಲಾ ಸಂಘಟನೆಗಳು 40 ಪರ್ಸೆಂಟ್‌ ಕಮಿಷನ್‌ ಕುರಿತು ಸರ್ಕಾರದ ಬಗ್ಗೆ ಆರೋಪ ಮಾಡಿವೆ. ಮೋದಿಯವರು ಮಾತ್ರ ಈ ಬಗ್ಗೆ ತುಟಿ ಬಿಚ್ಚಿಲ್ಲ” ಎಂದು ಟೀಕಿಸಿದರು.

ಪ್ರತಿ ದಿನ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಬೆಲೆ ಏರಿಕೆ ಸಮಸ್ಯೆ ಬಡಜನರನ್ನು ಕಾಡುತ್ತಿದೆ. ದೇಶದ ಸಮಸ್ಯೆಗಳಿಗೆ ಕಿವಿಯಾಗಲು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ಯಾತ್ರೆ ನಡೆಯಲಿದೆ. ಬಿಜೆಪಿಯವರು ಎಷ್ಟೇ ಕುತಂತ್ರ ಮಾಡಿದರೂ ಯಾವುದೇ ಕಾರಣಕ್ಕೂ ಯಾತ್ರೆ ಮಧ್ಯದಲ್ಲಿ ನಿಲ್ಲುವುದಿಲ್ಲ” ಎಂದರು.

ಮೆಚ್ಚುಗೆಯ ಮಳೆ ಸುರಿಸಿದ ಜನತೆ

“ಜನ ನಾಯಕನಿಗಿರಬೇಕಾದ ಬದ್ದತೆ ಇದು. ಇದೇ ನಿಮ್ಮನ್ನು ಮತ್ತಷ್ಟು ಹತ್ತಿರಕ್ಕೆ ಸೆಳೆಯುತ್ತದೆ” ಎಂದು ಪದ್ಮಾ ರೇಖಾ ಎನ್ನುವವರು ಪೋಸ್ಟ್ ಮಾಡಿದ್ದಾರೆ.

“ರಾಜಕೀಯ ಏನಾಗುತ್ತೊ ಏನಾಗಲ್ವೊ ಗೊತ್ತಿಲ್ಲ. I’m sure, ಈ ರಾಹುಲ್ ಗಾಂಧಿ ಐಕ್ಯತಾ ಯಾತ್ರೆ ಮುಗಿಸುವುದರೊಳಗೆ ಕಿಂದರಿಜೋಗಿಯಂತೆ ದೇಶದುದ್ದಗಲಕ್ಕೂ ಕೋಟ್ಯಾಂತರ ಅಭಿಮಾನಿಗಳನ್ನು, ನಿಜವಾದ ದೇಶಪ್ರೇಮಿಗಳನ್ನು ಜೊತೆಯಲ್ಲಿ ಸೇರಿಸಿಕೊಳ್ಳುತ್ತಾರೆ! ಮನುಷ್ಯನಿಗೆ ಏನಾದರೂ ಸಾಧಿಸಲು ಬೇಕಿರುವುದು true commitment. ಅದು ಇವರಿಗಿದೆ. ಸ್ಪಷ್ಟತೆಯಿದೆ. ಬರೆದಿಟ್ಟುಕೊಳ್ಳಿ, ದೇಶವನ್ನು ಕಟ್ಟಿಯೇ ಕಟ್ಟುತ್ತಾರೆ” ಎಂದು ಲೇಖಕಿ ಪಲ್ಲವಿ ಇಡೂರು ಪೋಸ್ಟ್‌ ಮಾಡಿದ್ದಾರೆ.

“ಮಳೆ, ಚಳಿ, ಬಿಸಿಲು ಗಾಳಿ… ಯಾವುದಕ್ಕೂ ನಿಲ್ಲದು ಈ ಚೈತ್ರಯಾತ್ರೆ. ಮೈಸೂರಿನಲ್ಲಿ ಮಳೆಯಲ್ಲೂ ರಾಹುಲ್ ಗಾಂಧಿ ಅವರ ಭಾಷಣ” ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೊಗಳಿದ್ದಾರೆ.

“ಕಾಲ ಬದಲಾಗಲಿದೆ, ಬರವಳಿದು ಪ್ರೀತಿಯ ಮಳೆ ಸುರಿಯಲಿದೆ. ನಳನಳಿಸಲಿದೆ ಭಾರತ. ಸೃಷ್ಟಿಯಾಗಲಿದೆ ಇತಿಹಾಸ” ಎಂದು ಬರಹಗಾರ ರಾ.ಚಿಂತನ್ ಅಭಿಪ್ರಾಯಪಟ್ಟಿದ್ದಾರೆ.

“ಮೂರನೇ ದಿನದ ಭಾರತ ಐಕ್ಯತಾ ಯಾತ್ರೆ ಅಭೂತಪೂರ್ವ ಜನಬೆಂಬಲದೊಂದಿಗೆ ಮಳೆ ಗಾಳಿ ಚಳಿ ಅಂಜದೆ ಮುರಿದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸವನ್ನು ರಾಹುಲ್ ಗಾಂಧಿಯವರು ಮುನ್ನಡೆಸುತ್ತಿದ್ದಾರೆ” ಎಂದು ಅಭಿಲಾಷ್ ರೆಡ್ಡಿ ಬರೆದುಕೊಂಡಿದ್ದಾರೆ.

“ಇಚ್ಚಾಶಕ್ತಿ ಇರುವ ನಾಯಕ ಯಾವ ಅಡ್ಡಿಗೂ ಅಂಜಿ ಓಡುವುದಿಲ್ಲ. ಭಾರತ್‌ ಜೋಡೋ ಯಾತ್ರೆ ವೇದಿಕೆ ಕಾರ್ಯಕ್ರಮದ ನಡುವೆ ಧಾರಾಕಾರ ಮಳೆ, ಜನರಿರುವ ಮಳೆ ನನಗೂ ಇರಲಿ ಎಂಬ ಧೀಮಂತಿಕೆಯ ಗುಣ ರಾಹುಲ್‌ಗಾಂಧಿ ಅವರದ್ದು. ಮಳೆಗೆ ಅಂಜದೆ ಕುರ್ಚಿಗಳನ್ನೇ ಛತ್ರಿಗಳನ್ನಾಗಿಸಿ ಭಾಷಣ ಆಲಿಸಿದ ಜನರ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವೆ ಇಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಜಾತಿ ಧರ್ಮಗಳಿಂದ ಬೇರ್ಪಡಿಸಿರುವ ಕೋಮುವಾದಿಗಳಿಂದ ರಕ್ಷಿಸಲು ಮಳೆ ಬಿಸಿಲು ಗಾಳಿ ಎನ್ನದೆ ದೇಶಕ್ಕಾಗಿ ಹೋರಾಟ ಮಾಡುತ್ತಿರುವ ರಾಹುಲ್ ಗಾಂಧಿಯವರ ಹೋರಾಟಕ್ಕೆ ಜಯವಾಗಲಿ” ಎಂದು ನಾರಾಯಣಸ್ವಾಮಿ ಎಂ. ಎಂಬವರು ಟ್ವೀಟ್ ಮಾಡಿದ್ದಾರೆ.

“ಜೀವ ಭಯ ಇದೆ ಅಂತ ಕಾರ್ಯಕ್ರಮ ರದ್ದು ಮಾಡಿ ಓಡಿ ಹೋದ ವ್ಯಕ್ತಿಗೂ ಜೀವದ ಭಯವನ್ನೇ ತೊರೆದು ಬಿಸಿಲು ಮಳೆ ಎನ್ನದೆ ಜನರೆಡೆಗೆ ದೇಶದ ಐಕ್ಯತೆಗೆ ಯಾತ್ರಿಸುತ್ತಿರುವ ಈ ವ್ಯಕ್ತಿಗೂ ಅಜಗಜಾಂತರ” ಎಂದು ಸುನಿಲ್ ಕುಬೇರ ಎಂಬವರು ಟ್ವೀಟ್ ಮಾಡಿದ್ದಾರೆ.

ಹೀಗೆ ಹಲವಾರು ಜನರು ಮೆಚ್ಚುಗೆ ಸೂಚಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....