Homeಮುಖಪುಟಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ನವೆಂಬರ್ 2020ರಲ್ಲಿ ಅಂಗೀಕರಿಸಲ್ಪಟ್ಟ ಕಾನೂನುಬಾಹಿರ ಧರ್ಮ ಪರಿವರ್ತನೆಯ ನಿಷೇಧದ ಸುಗ್ರೀವಾಜ್ಞೆಯ ಅಡಿಯಲ್ಲಿ ದಾಖಲಾಗಿದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 19ರಂದು ಕೋರ್ಟ್ ಶಿಕ್ಷೆ ವಿಧಿಸಲಾಗಿದೆ. ಅಮ್ರೋಹಾ ಜಿಲ್ಲಾ ನ್ಯಾಯಾಲಯವು 25 ವರ್ಷದ ಮೊಹಮ್ಮದ್ ಅಫ್ಜಲ್‌ಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, 40,000 ರೂ. ದಂಡವನ್ನು ಪಾವತಿಸುವಂತೆ ಸೂಚಿಸಿದೆ.

ಅಫ್ಜಲ್ ತನ್ನ ಧರ್ಮದ ಬಗ್ಗೆ ಸುಳ್ಳು ಹೇಳಿ 16 ವರ್ಷದ ಹಿಂದೂ ಹುಡುಗಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲಾಯಿತು. ಸಂಭಾಲ್ ಜಿಲ್ಲೆಯ ಹಯಾತ್‌ನಗರ್ ಗ್ರಾಮದಲ್ಲಿ ವಾಸಿಸುವ 25 ವರ್ಷದ ಅಫ್ಜಲ್‌, ತಮ್ಮ ಜೀವನೋಪಾಯಕ್ಕಾಗಿ ಸಸಿಗಳನ್ನು ಮಾರಾಟ ಮಾಡುತ್ತಿದ್ದನು. ಮರಗೆಲಸದ ಕೆಲಸ ನಡೆಸುತ್ತಿದ್ದನು. ಈಗ ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಹರಣ, ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವೆ ಮತ್ತು ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಅಮ್ರೋಹಾ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಲೈಂಗಿಕ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿದ್ದಕ್ಕಾಗಿ ಆತನ ವಿರುದ್ಧ ಪೋಕ್ಸೋ ಅಡಿಯಲ್ಲೂ ಶಿಕ್ಷೆಗೆ ಗುರಿ ಮಾಡಲಾಗಿದೆ.

ಅಫ್ಜಲ್‌ ಪರ ವಾದ ಮಂಡಿಸಿದ ವಕೀಲ ಅಶೋಕ್ ಕುಮಾರ್, “ಶಿಕ್ಷೆಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಹೋಗುತ್ತೇವೆ. ತಪ್ಪು ತೀರ್ಪು ಬಂದಿದೆ. ಮತಾಂತರ ಮಾಡಲು ಯತ್ನಿಸಿದ್ದಾರೆಂಬ ಆರೋಪ ಸುಳ್ಳಿನಿಂದ ಕೂಡಿದೆ. ಅಫ್ಜಲ್‌ ಅಪ್ರಾಪ್ತ ವಯಸ್ಕಳನ್ನು ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸಿದ್ದಾನೆಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದಿದ್ದಾರೆ.

“ಅಫ್ಜಲ್ ಮತ್ತು ಹುಡುಗಿ ಸ್ನೇಹಿತರಾಗಿದ್ದರು. ಆಕೆಯ ತಂದೆಯೊಂದಿಗಿನ ಭಿನ್ನಾಭಿಪ್ರಾಯದಿಂದ ಅಫ್ಜಲ್‌ ವಿರುದ್ಧ ಪ್ರಕರಣ ದಾಖಲಿಸಲಾಯಿತು” ಎಂದು ದೂರಿದ್ದಾರೆ.

2020ರ ಸುಗ್ರೀವಾಜ್ಞೆಯನ್ನು ಜನಪ್ರಿಯವಾಗಿ “ಲವ್ ಜಿಹಾದ್ ಕಾನೂನು” ಎಂದು ಕರೆಯಲಾಗುತ್ತಿದೆ. “ಲವ್ ಜಿಹಾದ್” ಎಂಬುದು ಹಿಂದುತ್ವವಾದಿಗಳು ಪ್ರಸಾರ ಮಾಡಿದ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮದುವೆಯಾಗುತ್ತಾರೆಂದು ಬಿಂಬಿಸಲಾಗಿದೆ.

ಇಂತಹ ಕಾನೂನನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರ ಪ್ರದೇಶ. ಬಲ, ವಂಚನೆ ಅಥವಾ ಮದುವೆಯ ಮೂಲಕ ಧಾರ್ಮಿಕ ಮತಾಂತರ ಮಾಡಿದರೆ ಅಪರಾಧ ಎಂದು ಈ ಕಾನೂನು ಪರಿಗಣಿಸುತ್ತದೆ. ಮದುವೆಯನ್ನು “ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ” ನಡೆಸಿದರೆ ಅಥವಾ ಧಾರ್ಮಿಕ ಪರಿವರ್ತನೆಯು ಸುಗ್ರೀವಾಜ್ಞೆಯಲ್ಲಿ ನಿಗದಿಪಡಿಸಿದ ವಿಧಾನವನ್ನು ಅನುಸರಿಸದಿದ್ದರೆ ಅದನ್ನು ಅನೂರ್ಜಿತ ಎಂದು ಘೋಷಿಸಬಹುದು. ಅಪರಾಧಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಉತ್ತರ ಪ್ರದೇಶದ ನಂತರ ಹತ್ತು ರಾಜ್ಯಗಳು ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದಿವೆ.

ಅಫ್ಜಲ್ ವಿರುದ್ಧದ ಆರೋಪಗಳು ಮಾರ್ಚ್ 2021ರ ವೇಳೆಯಲ್ಲಿ ಕೇಳಿಬಂದವು. ನ್ಯಾಯಾಲಯದ 21 ಪುಟಗಳ ಆದೇಶದ ಪ್ರಕಾರ, “ಅಫ್ಜಲ್ ಕೆಲವು ಸಸಿಗಳನ್ನು ತೆಗೆದುಕೊಳ್ಳಲು ಹುಡುಗಿಯ ತಂದೆ ನಡೆಸುತ್ತಿದ್ದ ನರ್ಸರಿಗೆ ಹೋಗಿದ್ದನು. ಒಂದು ತಿಂಗಳ ನಂತರ ಏಪ್ರಿಲ್ 2ರಂದು ಬೆಳಿಗ್ಗೆ ಹುಡುಗಿ ನಾಪತ್ತೆಯಾಗಿದ್ದಳು.”

ಆಕೆಯನ್ನು ಪತ್ತೆಹಚ್ಚಲು ವಿಫಲವಾದ ನಂತರ, ಕುಟುಂಬವು ಏಪ್ರಿಲ್ 2 ರಂದು ಎಫ್‌ಐಆರ್‌ ದಾಖಲಿಸಿದೆ. ಏಪ್ರಿಲ್ 4 ರಂದು ದೆಹಲಿಯ ಉಸ್ಮಾನ್‌ಪುರದಲ್ಲಿ ಇವರನ್ನು ಪತ್ತೆ ಹಚ್ಚಲಾಗಿತ್ತು.

ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದಾಗ, “ಅಫ್ಜಲ್ ತನ್ನ ಹೆಸರನ್ನು ಅರ್ಮಾನ್ ಕೊಹ್ಲಿ ಎಂದು ಹೇಳಿದ್ದಾನೆ. ಮಾರ್ಚ್‌ನಲ್ಲಿ ನರ್ಸರಿಗೆ ಮೊದಲ ಬಾರಿಗೆ ಭೇಟಿ ನೀಡಿದಾಗ ತನ್ನನ್ನು ಶಿವನ ಭಕ್ತ ಎಂದು ಪರಿಚಯಿಸಿಕೊಂಡಿದ್ದ. ನನ್ನೊಂದಿಗೆ ನಿಯಮಿತವಾಗಿ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದನು” ಎಂದು ಹೇಳಿದ್ದಳು.

“ಆತನೊಂದಿಗೆ ದೆಹಲಿಗೆ ಹೋದ ನಂತರವಷ್ಟೇ ಆತ ಮುಸ್ಲಿಂ ಎಂದು ತಿಳಿಯಿತು. ಮದುವೆ ಮತ್ತು ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದು ಬಾಲಕಿ ಆರೋಪಿಸಿರುವುದಾಗಿ ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬಲವಂತದ ಮತಾಂತರಕ್ಕೆ ತೋರಿಸಲು ‘ಸಾಕ್ಷ್ಯವಿಲ್ಲ’

ಅಫ್ಜಲ್ ಬಾಲಕಿಯನ್ನು ಮತಾಂತರಗೊಳಿಸಲು ಯತ್ನಿಸಿದ್ದನ್ನು ಸಾಬೀತುಪಡಿಸಲು ತನಿಖೆ ಅಥವಾ ವಿಚಾರಣೆಯ ಸಮಯದಲ್ಲಿ ಯಾವುದೇ ಸಾಕ್ಷ್ಯವನ್ನು ನೀಡಲಾಗಿಲ್ಲ ಎಂದು ವಕೀಲರು ಪುನರುಚ್ಚರಿಸಿದ್ದಾರೆ. “ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಿದ ಯಾವುದೇ ಪೇಪರ್‌ಗಳು ಅಥವಾ ಅಫಿಡವಿಟ್ ಮತಾಂತರವನ್ನು ದೃಢೀಕರಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ

ಅಫ್ಜಲ್ ಕುಟುಂಬ ಮಾಧ್ಯಮಗಳೊಂದಿಗೆ ಮಾತನಾಡಿಲ್ಲ. ಆದರೆ, ವೈಯಕ್ತಿಕ ದ್ವೇಷದಿಂದ ಪ್ರಕರಣ ನಡೆದಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ.

“ಅಫ್ಜಲ್ ಸಂತ್ರಸ್ತೆಯ ತಂದೆಯ ಒಡೆತನದ ನರ್ಸರಿಯಿಂದ ಕೆಲವು ಸಸಿಗಳನ್ನು ತೆಗೆದುಕೊಂಡಿದ್ದನು, ಅದಕ್ಕಾಗಿ ಅವನು ಹಣ ನೀಡಬೇಕಾಗಿತ್ತು. ಇದು ಅವರ ನಡುವೆ ಸಮಸ್ಯೆಗಳಿಗೆ ಕಾರಣವಾಯಿತು. ವಾಸ್ತವವಾಗಿ, ಸಂತ್ರಸ್ತೆ ಹಾಗೂ ಅಫ್ಜಲ್‌ ಸ್ನೇಹಿತರಾಗಿದ್ದರು” ಎಂದು ವಿವರಿಸಿದ್ದಾರೆ.

ನ್ಯಾಯಾಲಯದ ತನ್ನ ಆದೇಶದಲ್ಲಿ, “ಸಂತ್ರಸ್ತರ ಹೇಳಿಕೆಯು ಸಹಜ ಮತ್ತು ವಿಶ್ವಾಸಾರ್ಹವಾಗಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...