Homeಮುಖಪುಟಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ತಿರುವಳ್ಳುವರ್‌ಗೆ ಕೇಸರಿ ಹೊದಿಸಿ, ರಾಜರಾಜ ಚೋಳನ್‌ಗೆ ಹಿಂದೂ ಎಂದು ನಮ್ಮ ಅಸ್ಮಿತೆಗಳನ್ನು ಸಿನಿಮಾಗಳಲ್ಲಿ ಅಳಿಸಲಾಗುತ್ತಿದೆ ಎಂದು ಖ್ಯಾತ ನಿರ್ದೇಶಕ ವೆಟ್ರಿಮಾರನ್‌ ಹೇಳಿದ್ದಾರೆ.

- Advertisement -
- Advertisement -

ರಾಜಕೀಯ ಜ್ಞಾನವನ್ನು ಪ್ರಸಾರ ಮಾಡುವ ಸಾಧನವಾಗಿ ಸಿನಿಮಾ ಕಲೆಯನ್ನು ರೂಪಿಸುವ ಮಹತ್ವವನ್ನು ತಮಿಳು ಚಲನಚಿತ್ರದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಇತ್ತೀಚೆಗೆ ಒತ್ತಿ ಹೇಳಿದ್ದಾರೆ.

“ಸಿನಿಮಾದಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ” ಎಂದು ಪ್ರಸ್ತಾಪಿಸಿರುವ ಅವರು, “ತಿರುವಳ್ಳುವರ್‌ಗೆ ಕೇಸರಿ ಹೊದಿಸುತ್ತಿರುವುದು, ರಾಜರಾಜ ಚೋಳನ್‌ರನ್ನು ಹಿಂದೂ ಎಂದು ಬಿಂಬಿಸುವುದು ನಡೆಯುತ್ತಲೇ ಇದೆ” ಎಂದಿದ್ದಾರೆ.

ಸಂಸದ ಹಾಗೂ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷದ ನಾಯಕ ತೊಲ್ ತಿರುಮಾವಲವನ್ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸುರನ್ (2019) ಚಿತ್ರ ಮಾಡಲು ಬಯಸಿದಾಗ, ರಾಜಕೀಯವಾಗಿ ತಮ್ಮ ಚಿತ್ರವು ತಪ್ಪಾಗದಂತೆ ನೋಡಿಕೊಳ್ಳಲು ಸಲಹೆಗಳನ್ನು ಪಡೆಯಲು ತಿರುಮಾವಳವನ್ ಅವರನ್ನು ಮೊದಲು ಭೇಟಿಯಾಗಿದ್ದೆ ಎಂದು ವೆಟ್ರಿಮಾರನ್‌ ತಿಳಿಸಿದ್ದಾರೆ.

“ಸಿನಿಮಾದಲ್ಲಿ ನಾವು ಅಂತಹ ವಿಷಯವನ್ನು ತರುವಾಗ ಆದ್ಯತೆ ಏನು ಎಂದು ನಾನು ಕೇಳಿದಾಗ, ಒಬ್ಬ ವ್ಯಕ್ತಿ ಸಮಾಜದಲ್ಲಿ ಬದಲಾವಣೆಗಳನ್ನು ತರಬಹುದು ಎಂದು ಹೇಳುವ ತಪ್ಪು ಮಾಡಬೇಡಿ ಎಂದಿದಿದ್ದರು. ಎಲ್ಲರೂ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಬದಲಾವಣೆಗಳು ಆಂದೋಲನದ ಮೂಲಕ ಘಟಿಸುತ್ತವೆ ಎಂಬುದನ್ನು ತೋರಿಸಿ ಎಂದಿದ್ದರು” ಎಂದು ವೆಟ್ರಿಮಾರನ್ ನೆನೆದಿದ್ದಾರೆ.

ತಮಿಳು ಚಿತ್ರರಂಗ ಕೆಲಕಾಲ ರಾಜಕೀಯ ಸಂಬಂಧಿತ ಸಿನಿಮಾಗಳನ್ನು ಮಾಡುವುದನ್ನು ನಿಲ್ಲಿಸಿದೆ ಎಂದಿರುವ ಅವರು, ರಾಜಕೀಯ ಚಿಂತನೆಗಳನ್ನು ಸಿನಿಮಾಗಳಲ್ಲಿ ತರುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

“ಕಲೆಯು ಅಂತರ್ಗತವಾಗಿ ರಾಜಕೀಯವನ್ನು ಹೊಂದಿದೆ. ಆದರೆ, ತಿರುಮಾವಳವನ್ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಅಸ್ತಿತ್ವವೇ ರಾಜಕೀಯ ಎಂದಿದ್ದರು. ತಿಳಿದೋ ತಿಳಿಯದೆಯೋ ನಾವು ಒಂದು ನಿರ್ದಿಷ್ಟ ರಾಜಕೀಯ ಜಾಗವನ್ನು ಆಕ್ರಮಿಸಿಕೊಳ್ಳುತ್ತೇವೆ. ನಾವು ಧರಿಸುವ, ಮಾತನಾಡುವ ಮತ್ತು ನಮ್ಮ ಬಗೆಗಿನ ಎಲ್ಲವೂ ನಾವು ಅಳವಡಿಸಿಕೊಂಡಿರುವ ರಾಜಕೀಯ ಸಿದ್ಧಾಂತದ ಪ್ರತಿಬಿಂಬವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ರಾವಿಡ ಚಳವಳಿಯು ತಮಿಳು ಚಿತ್ರರಂಗವನ್ನು ಒಳಗೊಂಡ ಕಾರಣ, ತಮಿಳುನಾಡು ಜಾತ್ಯತೀತ ರಾಜ್ಯವಾಗಿ ಉಳಿದಿದೆ. ವಿವಿಧ ಬಾಹ್ಯ ಅಂಶಗಳ ಪ್ರಭಾವವನ್ನು ವಿರೋಧಿಸುವ ಪ್ರಬುದ್ಧತೆಯನ್ನು ನಮಗೆ ನೀಡಿದೆ. ಸಿನಿಮಾ ಎನ್ನುವುದು ಸಾಮಾನ್ಯ ಜನರನ್ನು ಸುಲಭವಾಗಿ ತಲುಪುವ ಒಂದು ಕಲಾ ಪ್ರಕಾರವಾಗಿದೆ. ಅದನ್ನು ರಾಜಕೀಯಗೊಳಿಸುವುದು ಮುಖ್ಯವಾಗಿದೆ” ಎಂದು ಆಶಿಸಿದ್ದಾರೆ.

ವೆಟ್ರಿಮಾರನ್ ಅವರು ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಅವರ ಎಲ್ಲಾ ಚಲನಚಿತ್ರಗಳು ಒಂದು ಪ್ರಮುಖ ಸಾಮಾಜಿಕ ಸಮಸ್ಯೆಯೊಂದಿಗೆ ಬೆಸೆದುಕೊಂಡಿರುತ್ತದೆ. ವಿಸಾರಣೈನಲ್ಲಿ ಪೋಲೀಸ್ ದೌರ್ಜನ್ಯ ಮತ್ತು ಕಸ್ಟಡಿ ಚಿತ್ರಹಿಂಸೆಯ ಭಯಾನಕತೆ ಕುರಿತು ತೋರಿಸಲಾಯಿತು. ಅಸುರನ್‌ನಲ್ಲಿನ ಜಾತಿವಾದಿ ಸಮಾಜ ಹಾಗೂ ದಲಿತ ಪ್ರತಿರೋಧವನ್ನು ದಾಖಲಿಸಲಾಯಿತು. ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದನ್ನು ಮುಂದುವರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ದ್ರಾವಿಡ ಚಳವಳಿಯು ಸಿನಿಮಾವನ್ನು ಕೈಗೆತ್ತಿಕೊಂಡಾಗ, ಕಲೆಗಾಗಿ ಕಲೆ ಇರಬೇಕು ಜನಸಾಮಾನ್ಯರಿಗಾಗಿ ಅಲ್ಲ ಎಂಬ ವಾದಗಳು ಇದ್ದವು. ಅವರು ಸಿನಿಮಾ ಸೌಂದರ್ಯದ ಬಗ್ಗೆ ಸಾಕಷ್ಟು ಮಾತನಾಡಿದರು. ಹೌದು, ಅದು ಕೂಡ ಮುಖ್ಯ, ಆದರೆ ಯಾವುದೇ ಕಲೆಯು ಜನರ ಜೀವನವನ್ನು ಮುಟ್ಟದಿದ್ದರೆ ಅದು ಪೂರ್ಣಗೊಳ್ಳುವುದಿಲ್ಲ ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ಚಿತ್ರರಂಗದಿಂದ ಅನೇಕ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ ಎಂದು ವೆಟ್ರಿಮಾರನ್ ಆರೋಪಿಸಿದ್ದಾರೆ. “ಕಲೆ ಜನರಿಗಾಗಿ, ಮತ್ತು ಜನರನ್ನು ಪ್ರತಿಬಿಂಬಿಸುವುದು ಕಲೆ. ಆದ್ದರಿಂದ ನಾವು ಈ ಕಲಾ ಪ್ರಕಾರವನ್ನು ಸರಿಯಾಗಿ ನಿರ್ವಹಿಸದಿದ್ದರೆ… ಈಗಾಗಲೇ ನಮ್ಮ ಅನೇಕ ಗುರುತುಗಳನ್ನು ಅಳಿಸಲಾಗುತ್ತಿದೆ. ತಿರುವಳ್ಳುವರ್‌ಗೆ ಕೇಸರಿ ಹೊದಿಸುವುದಿರಲಿ, ಅಥವಾ ರಾಜರಾಜ ಚೋಳನ್‌ನನ್ನು ಹಿಂದೂ ರಾಜನೆಂದು ಬಿಂಬಿಸುವುದಿರಲಿ, ಇಂತಹ ಸಂಗತಿಗಳು (ನಮ್ಮ ಸಮಾಜದಲ್ಲಿ) ನಡೆಯುತ್ತಲೇ ಇರುತ್ತವೆ. ಇದು ಸಿನಿಮಾದಲ್ಲಿ ಘಟಿಸುತ್ತಿದೆ ಮತ್ತು ಸಿನಿಮಾದಿಂದ (ಈಗಾಗಲೇ) ಅನೇಕ ಗುರುತುಗಳನ್ನು ತೆಗೆದುಹಾಕಲಾಗಿದೆ. ನಾವು ನಮ್ಮ ಗುರುತನ್ನು ರಕ್ಷಿಸಿಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

ರಾಜರಾಜ ಚೋಳನ್‌ನಿಂದ ಸ್ಫೂರ್ತಿ ಪಡೆದ ಕಲ್ಕಿಯವರ ಕಾಲ್ಪನಿಕ ಕಾದಂಬರಿಯನ್ನು ಆಧರಿಸಿದ ಪೊನ್ನಿಯಿನ್ ಸೆಲ್ವನ್: 1 ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಈ ಸಿನಿಮಾ ಬಿಡುಗಡೆಯಾಗಿರುವ ಹೊತ್ತಿನಲ್ಲಿ ವೆಟ್ರಿಮಾರನ್‌ ಅವರ ಈ ಅಭಿಪ್ರಾಯಗಳು ಹೊರಬಿದ್ದಿರುವುದು ಕುತೂಹಲ ಹುಟ್ಟಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...