Homeಮುಖಪುಟಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ತಿರುವಳ್ಳುವರ್‌ಗೆ ಕೇಸರಿ ಹೊದಿಸಿ, ರಾಜರಾಜ ಚೋಳನ್‌ಗೆ ಹಿಂದೂ ಎಂದು ನಮ್ಮ ಅಸ್ಮಿತೆಗಳನ್ನು ಸಿನಿಮಾಗಳಲ್ಲಿ ಅಳಿಸಲಾಗುತ್ತಿದೆ ಎಂದು ಖ್ಯಾತ ನಿರ್ದೇಶಕ ವೆಟ್ರಿಮಾರನ್‌ ಹೇಳಿದ್ದಾರೆ.

- Advertisement -
- Advertisement -

ರಾಜಕೀಯ ಜ್ಞಾನವನ್ನು ಪ್ರಸಾರ ಮಾಡುವ ಸಾಧನವಾಗಿ ಸಿನಿಮಾ ಕಲೆಯನ್ನು ರೂಪಿಸುವ ಮಹತ್ವವನ್ನು ತಮಿಳು ಚಲನಚಿತ್ರದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಇತ್ತೀಚೆಗೆ ಒತ್ತಿ ಹೇಳಿದ್ದಾರೆ.

“ಸಿನಿಮಾದಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ” ಎಂದು ಪ್ರಸ್ತಾಪಿಸಿರುವ ಅವರು, “ತಿರುವಳ್ಳುವರ್‌ಗೆ ಕೇಸರಿ ಹೊದಿಸುತ್ತಿರುವುದು, ರಾಜರಾಜ ಚೋಳನ್‌ರನ್ನು ಹಿಂದೂ ಎಂದು ಬಿಂಬಿಸುವುದು ನಡೆಯುತ್ತಲೇ ಇದೆ” ಎಂದಿದ್ದಾರೆ.

ಸಂಸದ ಹಾಗೂ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷದ ನಾಯಕ ತೊಲ್ ತಿರುಮಾವಲವನ್ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸುರನ್ (2019) ಚಿತ್ರ ಮಾಡಲು ಬಯಸಿದಾಗ, ರಾಜಕೀಯವಾಗಿ ತಮ್ಮ ಚಿತ್ರವು ತಪ್ಪಾಗದಂತೆ ನೋಡಿಕೊಳ್ಳಲು ಸಲಹೆಗಳನ್ನು ಪಡೆಯಲು ತಿರುಮಾವಳವನ್ ಅವರನ್ನು ಮೊದಲು ಭೇಟಿಯಾಗಿದ್ದೆ ಎಂದು ವೆಟ್ರಿಮಾರನ್‌ ತಿಳಿಸಿದ್ದಾರೆ.

“ಸಿನಿಮಾದಲ್ಲಿ ನಾವು ಅಂತಹ ವಿಷಯವನ್ನು ತರುವಾಗ ಆದ್ಯತೆ ಏನು ಎಂದು ನಾನು ಕೇಳಿದಾಗ, ಒಬ್ಬ ವ್ಯಕ್ತಿ ಸಮಾಜದಲ್ಲಿ ಬದಲಾವಣೆಗಳನ್ನು ತರಬಹುದು ಎಂದು ಹೇಳುವ ತಪ್ಪು ಮಾಡಬೇಡಿ ಎಂದಿದಿದ್ದರು. ಎಲ್ಲರೂ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಬದಲಾವಣೆಗಳು ಆಂದೋಲನದ ಮೂಲಕ ಘಟಿಸುತ್ತವೆ ಎಂಬುದನ್ನು ತೋರಿಸಿ ಎಂದಿದ್ದರು” ಎಂದು ವೆಟ್ರಿಮಾರನ್ ನೆನೆದಿದ್ದಾರೆ.

ತಮಿಳು ಚಿತ್ರರಂಗ ಕೆಲಕಾಲ ರಾಜಕೀಯ ಸಂಬಂಧಿತ ಸಿನಿಮಾಗಳನ್ನು ಮಾಡುವುದನ್ನು ನಿಲ್ಲಿಸಿದೆ ಎಂದಿರುವ ಅವರು, ರಾಜಕೀಯ ಚಿಂತನೆಗಳನ್ನು ಸಿನಿಮಾಗಳಲ್ಲಿ ತರುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

“ಕಲೆಯು ಅಂತರ್ಗತವಾಗಿ ರಾಜಕೀಯವನ್ನು ಹೊಂದಿದೆ. ಆದರೆ, ತಿರುಮಾವಳವನ್ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಅಸ್ತಿತ್ವವೇ ರಾಜಕೀಯ ಎಂದಿದ್ದರು. ತಿಳಿದೋ ತಿಳಿಯದೆಯೋ ನಾವು ಒಂದು ನಿರ್ದಿಷ್ಟ ರಾಜಕೀಯ ಜಾಗವನ್ನು ಆಕ್ರಮಿಸಿಕೊಳ್ಳುತ್ತೇವೆ. ನಾವು ಧರಿಸುವ, ಮಾತನಾಡುವ ಮತ್ತು ನಮ್ಮ ಬಗೆಗಿನ ಎಲ್ಲವೂ ನಾವು ಅಳವಡಿಸಿಕೊಂಡಿರುವ ರಾಜಕೀಯ ಸಿದ್ಧಾಂತದ ಪ್ರತಿಬಿಂಬವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ರಾವಿಡ ಚಳವಳಿಯು ತಮಿಳು ಚಿತ್ರರಂಗವನ್ನು ಒಳಗೊಂಡ ಕಾರಣ, ತಮಿಳುನಾಡು ಜಾತ್ಯತೀತ ರಾಜ್ಯವಾಗಿ ಉಳಿದಿದೆ. ವಿವಿಧ ಬಾಹ್ಯ ಅಂಶಗಳ ಪ್ರಭಾವವನ್ನು ವಿರೋಧಿಸುವ ಪ್ರಬುದ್ಧತೆಯನ್ನು ನಮಗೆ ನೀಡಿದೆ. ಸಿನಿಮಾ ಎನ್ನುವುದು ಸಾಮಾನ್ಯ ಜನರನ್ನು ಸುಲಭವಾಗಿ ತಲುಪುವ ಒಂದು ಕಲಾ ಪ್ರಕಾರವಾಗಿದೆ. ಅದನ್ನು ರಾಜಕೀಯಗೊಳಿಸುವುದು ಮುಖ್ಯವಾಗಿದೆ” ಎಂದು ಆಶಿಸಿದ್ದಾರೆ.

ವೆಟ್ರಿಮಾರನ್ ಅವರು ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಅವರ ಎಲ್ಲಾ ಚಲನಚಿತ್ರಗಳು ಒಂದು ಪ್ರಮುಖ ಸಾಮಾಜಿಕ ಸಮಸ್ಯೆಯೊಂದಿಗೆ ಬೆಸೆದುಕೊಂಡಿರುತ್ತದೆ. ವಿಸಾರಣೈನಲ್ಲಿ ಪೋಲೀಸ್ ದೌರ್ಜನ್ಯ ಮತ್ತು ಕಸ್ಟಡಿ ಚಿತ್ರಹಿಂಸೆಯ ಭಯಾನಕತೆ ಕುರಿತು ತೋರಿಸಲಾಯಿತು. ಅಸುರನ್‌ನಲ್ಲಿನ ಜಾತಿವಾದಿ ಸಮಾಜ ಹಾಗೂ ದಲಿತ ಪ್ರತಿರೋಧವನ್ನು ದಾಖಲಿಸಲಾಯಿತು. ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದನ್ನು ಮುಂದುವರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ದ್ರಾವಿಡ ಚಳವಳಿಯು ಸಿನಿಮಾವನ್ನು ಕೈಗೆತ್ತಿಕೊಂಡಾಗ, ಕಲೆಗಾಗಿ ಕಲೆ ಇರಬೇಕು ಜನಸಾಮಾನ್ಯರಿಗಾಗಿ ಅಲ್ಲ ಎಂಬ ವಾದಗಳು ಇದ್ದವು. ಅವರು ಸಿನಿಮಾ ಸೌಂದರ್ಯದ ಬಗ್ಗೆ ಸಾಕಷ್ಟು ಮಾತನಾಡಿದರು. ಹೌದು, ಅದು ಕೂಡ ಮುಖ್ಯ, ಆದರೆ ಯಾವುದೇ ಕಲೆಯು ಜನರ ಜೀವನವನ್ನು ಮುಟ್ಟದಿದ್ದರೆ ಅದು ಪೂರ್ಣಗೊಳ್ಳುವುದಿಲ್ಲ ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ಚಿತ್ರರಂಗದಿಂದ ಅನೇಕ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ ಎಂದು ವೆಟ್ರಿಮಾರನ್ ಆರೋಪಿಸಿದ್ದಾರೆ. “ಕಲೆ ಜನರಿಗಾಗಿ, ಮತ್ತು ಜನರನ್ನು ಪ್ರತಿಬಿಂಬಿಸುವುದು ಕಲೆ. ಆದ್ದರಿಂದ ನಾವು ಈ ಕಲಾ ಪ್ರಕಾರವನ್ನು ಸರಿಯಾಗಿ ನಿರ್ವಹಿಸದಿದ್ದರೆ… ಈಗಾಗಲೇ ನಮ್ಮ ಅನೇಕ ಗುರುತುಗಳನ್ನು ಅಳಿಸಲಾಗುತ್ತಿದೆ. ತಿರುವಳ್ಳುವರ್‌ಗೆ ಕೇಸರಿ ಹೊದಿಸುವುದಿರಲಿ, ಅಥವಾ ರಾಜರಾಜ ಚೋಳನ್‌ನನ್ನು ಹಿಂದೂ ರಾಜನೆಂದು ಬಿಂಬಿಸುವುದಿರಲಿ, ಇಂತಹ ಸಂಗತಿಗಳು (ನಮ್ಮ ಸಮಾಜದಲ್ಲಿ) ನಡೆಯುತ್ತಲೇ ಇರುತ್ತವೆ. ಇದು ಸಿನಿಮಾದಲ್ಲಿ ಘಟಿಸುತ್ತಿದೆ ಮತ್ತು ಸಿನಿಮಾದಿಂದ (ಈಗಾಗಲೇ) ಅನೇಕ ಗುರುತುಗಳನ್ನು ತೆಗೆದುಹಾಕಲಾಗಿದೆ. ನಾವು ನಮ್ಮ ಗುರುತನ್ನು ರಕ್ಷಿಸಿಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

ರಾಜರಾಜ ಚೋಳನ್‌ನಿಂದ ಸ್ಫೂರ್ತಿ ಪಡೆದ ಕಲ್ಕಿಯವರ ಕಾಲ್ಪನಿಕ ಕಾದಂಬರಿಯನ್ನು ಆಧರಿಸಿದ ಪೊನ್ನಿಯಿನ್ ಸೆಲ್ವನ್: 1 ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಈ ಸಿನಿಮಾ ಬಿಡುಗಡೆಯಾಗಿರುವ ಹೊತ್ತಿನಲ್ಲಿ ವೆಟ್ರಿಮಾರನ್‌ ಅವರ ಈ ಅಭಿಪ್ರಾಯಗಳು ಹೊರಬಿದ್ದಿರುವುದು ಕುತೂಹಲ ಹುಟ್ಟಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...