Homeಮುಖಪುಟಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ತಿರುವಳ್ಳುವರ್‌ಗೆ ಕೇಸರಿ ಹೊದಿಸಿ, ರಾಜರಾಜ ಚೋಳನ್‌ಗೆ ಹಿಂದೂ ಎಂದು ನಮ್ಮ ಅಸ್ಮಿತೆಗಳನ್ನು ಸಿನಿಮಾಗಳಲ್ಲಿ ಅಳಿಸಲಾಗುತ್ತಿದೆ ಎಂದು ಖ್ಯಾತ ನಿರ್ದೇಶಕ ವೆಟ್ರಿಮಾರನ್‌ ಹೇಳಿದ್ದಾರೆ.

- Advertisement -
- Advertisement -

ರಾಜಕೀಯ ಜ್ಞಾನವನ್ನು ಪ್ರಸಾರ ಮಾಡುವ ಸಾಧನವಾಗಿ ಸಿನಿಮಾ ಕಲೆಯನ್ನು ರೂಪಿಸುವ ಮಹತ್ವವನ್ನು ತಮಿಳು ಚಲನಚಿತ್ರದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಇತ್ತೀಚೆಗೆ ಒತ್ತಿ ಹೇಳಿದ್ದಾರೆ.

“ಸಿನಿಮಾದಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ” ಎಂದು ಪ್ರಸ್ತಾಪಿಸಿರುವ ಅವರು, “ತಿರುವಳ್ಳುವರ್‌ಗೆ ಕೇಸರಿ ಹೊದಿಸುತ್ತಿರುವುದು, ರಾಜರಾಜ ಚೋಳನ್‌ರನ್ನು ಹಿಂದೂ ಎಂದು ಬಿಂಬಿಸುವುದು ನಡೆಯುತ್ತಲೇ ಇದೆ” ಎಂದಿದ್ದಾರೆ.

ಸಂಸದ ಹಾಗೂ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷದ ನಾಯಕ ತೊಲ್ ತಿರುಮಾವಲವನ್ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸುರನ್ (2019) ಚಿತ್ರ ಮಾಡಲು ಬಯಸಿದಾಗ, ರಾಜಕೀಯವಾಗಿ ತಮ್ಮ ಚಿತ್ರವು ತಪ್ಪಾಗದಂತೆ ನೋಡಿಕೊಳ್ಳಲು ಸಲಹೆಗಳನ್ನು ಪಡೆಯಲು ತಿರುಮಾವಳವನ್ ಅವರನ್ನು ಮೊದಲು ಭೇಟಿಯಾಗಿದ್ದೆ ಎಂದು ವೆಟ್ರಿಮಾರನ್‌ ತಿಳಿಸಿದ್ದಾರೆ.

“ಸಿನಿಮಾದಲ್ಲಿ ನಾವು ಅಂತಹ ವಿಷಯವನ್ನು ತರುವಾಗ ಆದ್ಯತೆ ಏನು ಎಂದು ನಾನು ಕೇಳಿದಾಗ, ಒಬ್ಬ ವ್ಯಕ್ತಿ ಸಮಾಜದಲ್ಲಿ ಬದಲಾವಣೆಗಳನ್ನು ತರಬಹುದು ಎಂದು ಹೇಳುವ ತಪ್ಪು ಮಾಡಬೇಡಿ ಎಂದಿದಿದ್ದರು. ಎಲ್ಲರೂ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಬದಲಾವಣೆಗಳು ಆಂದೋಲನದ ಮೂಲಕ ಘಟಿಸುತ್ತವೆ ಎಂಬುದನ್ನು ತೋರಿಸಿ ಎಂದಿದ್ದರು” ಎಂದು ವೆಟ್ರಿಮಾರನ್ ನೆನೆದಿದ್ದಾರೆ.

ತಮಿಳು ಚಿತ್ರರಂಗ ಕೆಲಕಾಲ ರಾಜಕೀಯ ಸಂಬಂಧಿತ ಸಿನಿಮಾಗಳನ್ನು ಮಾಡುವುದನ್ನು ನಿಲ್ಲಿಸಿದೆ ಎಂದಿರುವ ಅವರು, ರಾಜಕೀಯ ಚಿಂತನೆಗಳನ್ನು ಸಿನಿಮಾಗಳಲ್ಲಿ ತರುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

“ಕಲೆಯು ಅಂತರ್ಗತವಾಗಿ ರಾಜಕೀಯವನ್ನು ಹೊಂದಿದೆ. ಆದರೆ, ತಿರುಮಾವಳವನ್ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಅಸ್ತಿತ್ವವೇ ರಾಜಕೀಯ ಎಂದಿದ್ದರು. ತಿಳಿದೋ ತಿಳಿಯದೆಯೋ ನಾವು ಒಂದು ನಿರ್ದಿಷ್ಟ ರಾಜಕೀಯ ಜಾಗವನ್ನು ಆಕ್ರಮಿಸಿಕೊಳ್ಳುತ್ತೇವೆ. ನಾವು ಧರಿಸುವ, ಮಾತನಾಡುವ ಮತ್ತು ನಮ್ಮ ಬಗೆಗಿನ ಎಲ್ಲವೂ ನಾವು ಅಳವಡಿಸಿಕೊಂಡಿರುವ ರಾಜಕೀಯ ಸಿದ್ಧಾಂತದ ಪ್ರತಿಬಿಂಬವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ರಾವಿಡ ಚಳವಳಿಯು ತಮಿಳು ಚಿತ್ರರಂಗವನ್ನು ಒಳಗೊಂಡ ಕಾರಣ, ತಮಿಳುನಾಡು ಜಾತ್ಯತೀತ ರಾಜ್ಯವಾಗಿ ಉಳಿದಿದೆ. ವಿವಿಧ ಬಾಹ್ಯ ಅಂಶಗಳ ಪ್ರಭಾವವನ್ನು ವಿರೋಧಿಸುವ ಪ್ರಬುದ್ಧತೆಯನ್ನು ನಮಗೆ ನೀಡಿದೆ. ಸಿನಿಮಾ ಎನ್ನುವುದು ಸಾಮಾನ್ಯ ಜನರನ್ನು ಸುಲಭವಾಗಿ ತಲುಪುವ ಒಂದು ಕಲಾ ಪ್ರಕಾರವಾಗಿದೆ. ಅದನ್ನು ರಾಜಕೀಯಗೊಳಿಸುವುದು ಮುಖ್ಯವಾಗಿದೆ” ಎಂದು ಆಶಿಸಿದ್ದಾರೆ.

ವೆಟ್ರಿಮಾರನ್ ಅವರು ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಅವರ ಎಲ್ಲಾ ಚಲನಚಿತ್ರಗಳು ಒಂದು ಪ್ರಮುಖ ಸಾಮಾಜಿಕ ಸಮಸ್ಯೆಯೊಂದಿಗೆ ಬೆಸೆದುಕೊಂಡಿರುತ್ತದೆ. ವಿಸಾರಣೈನಲ್ಲಿ ಪೋಲೀಸ್ ದೌರ್ಜನ್ಯ ಮತ್ತು ಕಸ್ಟಡಿ ಚಿತ್ರಹಿಂಸೆಯ ಭಯಾನಕತೆ ಕುರಿತು ತೋರಿಸಲಾಯಿತು. ಅಸುರನ್‌ನಲ್ಲಿನ ಜಾತಿವಾದಿ ಸಮಾಜ ಹಾಗೂ ದಲಿತ ಪ್ರತಿರೋಧವನ್ನು ದಾಖಲಿಸಲಾಯಿತು. ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದನ್ನು ಮುಂದುವರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ದ್ರಾವಿಡ ಚಳವಳಿಯು ಸಿನಿಮಾವನ್ನು ಕೈಗೆತ್ತಿಕೊಂಡಾಗ, ಕಲೆಗಾಗಿ ಕಲೆ ಇರಬೇಕು ಜನಸಾಮಾನ್ಯರಿಗಾಗಿ ಅಲ್ಲ ಎಂಬ ವಾದಗಳು ಇದ್ದವು. ಅವರು ಸಿನಿಮಾ ಸೌಂದರ್ಯದ ಬಗ್ಗೆ ಸಾಕಷ್ಟು ಮಾತನಾಡಿದರು. ಹೌದು, ಅದು ಕೂಡ ಮುಖ್ಯ, ಆದರೆ ಯಾವುದೇ ಕಲೆಯು ಜನರ ಜೀವನವನ್ನು ಮುಟ್ಟದಿದ್ದರೆ ಅದು ಪೂರ್ಣಗೊಳ್ಳುವುದಿಲ್ಲ ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ಚಿತ್ರರಂಗದಿಂದ ಅನೇಕ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ ಎಂದು ವೆಟ್ರಿಮಾರನ್ ಆರೋಪಿಸಿದ್ದಾರೆ. “ಕಲೆ ಜನರಿಗಾಗಿ, ಮತ್ತು ಜನರನ್ನು ಪ್ರತಿಬಿಂಬಿಸುವುದು ಕಲೆ. ಆದ್ದರಿಂದ ನಾವು ಈ ಕಲಾ ಪ್ರಕಾರವನ್ನು ಸರಿಯಾಗಿ ನಿರ್ವಹಿಸದಿದ್ದರೆ… ಈಗಾಗಲೇ ನಮ್ಮ ಅನೇಕ ಗುರುತುಗಳನ್ನು ಅಳಿಸಲಾಗುತ್ತಿದೆ. ತಿರುವಳ್ಳುವರ್‌ಗೆ ಕೇಸರಿ ಹೊದಿಸುವುದಿರಲಿ, ಅಥವಾ ರಾಜರಾಜ ಚೋಳನ್‌ನನ್ನು ಹಿಂದೂ ರಾಜನೆಂದು ಬಿಂಬಿಸುವುದಿರಲಿ, ಇಂತಹ ಸಂಗತಿಗಳು (ನಮ್ಮ ಸಮಾಜದಲ್ಲಿ) ನಡೆಯುತ್ತಲೇ ಇರುತ್ತವೆ. ಇದು ಸಿನಿಮಾದಲ್ಲಿ ಘಟಿಸುತ್ತಿದೆ ಮತ್ತು ಸಿನಿಮಾದಿಂದ (ಈಗಾಗಲೇ) ಅನೇಕ ಗುರುತುಗಳನ್ನು ತೆಗೆದುಹಾಕಲಾಗಿದೆ. ನಾವು ನಮ್ಮ ಗುರುತನ್ನು ರಕ್ಷಿಸಿಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

ರಾಜರಾಜ ಚೋಳನ್‌ನಿಂದ ಸ್ಫೂರ್ತಿ ಪಡೆದ ಕಲ್ಕಿಯವರ ಕಾಲ್ಪನಿಕ ಕಾದಂಬರಿಯನ್ನು ಆಧರಿಸಿದ ಪೊನ್ನಿಯಿನ್ ಸೆಲ್ವನ್: 1 ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಈ ಸಿನಿಮಾ ಬಿಡುಗಡೆಯಾಗಿರುವ ಹೊತ್ತಿನಲ್ಲಿ ವೆಟ್ರಿಮಾರನ್‌ ಅವರ ಈ ಅಭಿಪ್ರಾಯಗಳು ಹೊರಬಿದ್ದಿರುವುದು ಕುತೂಹಲ ಹುಟ್ಟಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...