Homeಮುಖಪುಟಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ತಿರುವಳ್ಳುವರ್‌ಗೆ ಕೇಸರಿ ಹೊದಿಸಿ, ರಾಜರಾಜ ಚೋಳನ್‌ಗೆ ಹಿಂದೂ ಎಂದು ನಮ್ಮ ಅಸ್ಮಿತೆಗಳನ್ನು ಸಿನಿಮಾಗಳಲ್ಲಿ ಅಳಿಸಲಾಗುತ್ತಿದೆ ಎಂದು ಖ್ಯಾತ ನಿರ್ದೇಶಕ ವೆಟ್ರಿಮಾರನ್‌ ಹೇಳಿದ್ದಾರೆ.

- Advertisement -
- Advertisement -

ರಾಜಕೀಯ ಜ್ಞಾನವನ್ನು ಪ್ರಸಾರ ಮಾಡುವ ಸಾಧನವಾಗಿ ಸಿನಿಮಾ ಕಲೆಯನ್ನು ರೂಪಿಸುವ ಮಹತ್ವವನ್ನು ತಮಿಳು ಚಲನಚಿತ್ರದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಇತ್ತೀಚೆಗೆ ಒತ್ತಿ ಹೇಳಿದ್ದಾರೆ.

“ಸಿನಿಮಾದಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ” ಎಂದು ಪ್ರಸ್ತಾಪಿಸಿರುವ ಅವರು, “ತಿರುವಳ್ಳುವರ್‌ಗೆ ಕೇಸರಿ ಹೊದಿಸುತ್ತಿರುವುದು, ರಾಜರಾಜ ಚೋಳನ್‌ರನ್ನು ಹಿಂದೂ ಎಂದು ಬಿಂಬಿಸುವುದು ನಡೆಯುತ್ತಲೇ ಇದೆ” ಎಂದಿದ್ದಾರೆ.

ಸಂಸದ ಹಾಗೂ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷದ ನಾಯಕ ತೊಲ್ ತಿರುಮಾವಲವನ್ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಸುರನ್ (2019) ಚಿತ್ರ ಮಾಡಲು ಬಯಸಿದಾಗ, ರಾಜಕೀಯವಾಗಿ ತಮ್ಮ ಚಿತ್ರವು ತಪ್ಪಾಗದಂತೆ ನೋಡಿಕೊಳ್ಳಲು ಸಲಹೆಗಳನ್ನು ಪಡೆಯಲು ತಿರುಮಾವಳವನ್ ಅವರನ್ನು ಮೊದಲು ಭೇಟಿಯಾಗಿದ್ದೆ ಎಂದು ವೆಟ್ರಿಮಾರನ್‌ ತಿಳಿಸಿದ್ದಾರೆ.

“ಸಿನಿಮಾದಲ್ಲಿ ನಾವು ಅಂತಹ ವಿಷಯವನ್ನು ತರುವಾಗ ಆದ್ಯತೆ ಏನು ಎಂದು ನಾನು ಕೇಳಿದಾಗ, ಒಬ್ಬ ವ್ಯಕ್ತಿ ಸಮಾಜದಲ್ಲಿ ಬದಲಾವಣೆಗಳನ್ನು ತರಬಹುದು ಎಂದು ಹೇಳುವ ತಪ್ಪು ಮಾಡಬೇಡಿ ಎಂದಿದಿದ್ದರು. ಎಲ್ಲರೂ ಅದೇ ತಪ್ಪನ್ನು ಮಾಡುತ್ತಿದ್ದಾರೆ. ಬದಲಾವಣೆಗಳು ಆಂದೋಲನದ ಮೂಲಕ ಘಟಿಸುತ್ತವೆ ಎಂಬುದನ್ನು ತೋರಿಸಿ ಎಂದಿದ್ದರು” ಎಂದು ವೆಟ್ರಿಮಾರನ್ ನೆನೆದಿದ್ದಾರೆ.

ತಮಿಳು ಚಿತ್ರರಂಗ ಕೆಲಕಾಲ ರಾಜಕೀಯ ಸಂಬಂಧಿತ ಸಿನಿಮಾಗಳನ್ನು ಮಾಡುವುದನ್ನು ನಿಲ್ಲಿಸಿದೆ ಎಂದಿರುವ ಅವರು, ರಾಜಕೀಯ ಚಿಂತನೆಗಳನ್ನು ಸಿನಿಮಾಗಳಲ್ಲಿ ತರುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

“ಕಲೆಯು ಅಂತರ್ಗತವಾಗಿ ರಾಜಕೀಯವನ್ನು ಹೊಂದಿದೆ. ಆದರೆ, ತಿರುಮಾವಳವನ್ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಅಸ್ತಿತ್ವವೇ ರಾಜಕೀಯ ಎಂದಿದ್ದರು. ತಿಳಿದೋ ತಿಳಿಯದೆಯೋ ನಾವು ಒಂದು ನಿರ್ದಿಷ್ಟ ರಾಜಕೀಯ ಜಾಗವನ್ನು ಆಕ್ರಮಿಸಿಕೊಳ್ಳುತ್ತೇವೆ. ನಾವು ಧರಿಸುವ, ಮಾತನಾಡುವ ಮತ್ತು ನಮ್ಮ ಬಗೆಗಿನ ಎಲ್ಲವೂ ನಾವು ಅಳವಡಿಸಿಕೊಂಡಿರುವ ರಾಜಕೀಯ ಸಿದ್ಧಾಂತದ ಪ್ರತಿಬಿಂಬವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ದ್ರಾವಿಡ ಚಳವಳಿಯು ತಮಿಳು ಚಿತ್ರರಂಗವನ್ನು ಒಳಗೊಂಡ ಕಾರಣ, ತಮಿಳುನಾಡು ಜಾತ್ಯತೀತ ರಾಜ್ಯವಾಗಿ ಉಳಿದಿದೆ. ವಿವಿಧ ಬಾಹ್ಯ ಅಂಶಗಳ ಪ್ರಭಾವವನ್ನು ವಿರೋಧಿಸುವ ಪ್ರಬುದ್ಧತೆಯನ್ನು ನಮಗೆ ನೀಡಿದೆ. ಸಿನಿಮಾ ಎನ್ನುವುದು ಸಾಮಾನ್ಯ ಜನರನ್ನು ಸುಲಭವಾಗಿ ತಲುಪುವ ಒಂದು ಕಲಾ ಪ್ರಕಾರವಾಗಿದೆ. ಅದನ್ನು ರಾಜಕೀಯಗೊಳಿಸುವುದು ಮುಖ್ಯವಾಗಿದೆ” ಎಂದು ಆಶಿಸಿದ್ದಾರೆ.

ವೆಟ್ರಿಮಾರನ್ ಅವರು ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಅವರ ಎಲ್ಲಾ ಚಲನಚಿತ್ರಗಳು ಒಂದು ಪ್ರಮುಖ ಸಾಮಾಜಿಕ ಸಮಸ್ಯೆಯೊಂದಿಗೆ ಬೆಸೆದುಕೊಂಡಿರುತ್ತದೆ. ವಿಸಾರಣೈನಲ್ಲಿ ಪೋಲೀಸ್ ದೌರ್ಜನ್ಯ ಮತ್ತು ಕಸ್ಟಡಿ ಚಿತ್ರಹಿಂಸೆಯ ಭಯಾನಕತೆ ಕುರಿತು ತೋರಿಸಲಾಯಿತು. ಅಸುರನ್‌ನಲ್ಲಿನ ಜಾತಿವಾದಿ ಸಮಾಜ ಹಾಗೂ ದಲಿತ ಪ್ರತಿರೋಧವನ್ನು ದಾಖಲಿಸಲಾಯಿತು. ತಮ್ಮ ಸಿನಿಮಾಗಳಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದನ್ನು ಮುಂದುವರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ದ್ರಾವಿಡ ಚಳವಳಿಯು ಸಿನಿಮಾವನ್ನು ಕೈಗೆತ್ತಿಕೊಂಡಾಗ, ಕಲೆಗಾಗಿ ಕಲೆ ಇರಬೇಕು ಜನಸಾಮಾನ್ಯರಿಗಾಗಿ ಅಲ್ಲ ಎಂಬ ವಾದಗಳು ಇದ್ದವು. ಅವರು ಸಿನಿಮಾ ಸೌಂದರ್ಯದ ಬಗ್ಗೆ ಸಾಕಷ್ಟು ಮಾತನಾಡಿದರು. ಹೌದು, ಅದು ಕೂಡ ಮುಖ್ಯ, ಆದರೆ ಯಾವುದೇ ಕಲೆಯು ಜನರ ಜೀವನವನ್ನು ಮುಟ್ಟದಿದ್ದರೆ ಅದು ಪೂರ್ಣಗೊಳ್ಳುವುದಿಲ್ಲ ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ಚಿತ್ರರಂಗದಿಂದ ಅನೇಕ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ ಎಂದು ವೆಟ್ರಿಮಾರನ್ ಆರೋಪಿಸಿದ್ದಾರೆ. “ಕಲೆ ಜನರಿಗಾಗಿ, ಮತ್ತು ಜನರನ್ನು ಪ್ರತಿಬಿಂಬಿಸುವುದು ಕಲೆ. ಆದ್ದರಿಂದ ನಾವು ಈ ಕಲಾ ಪ್ರಕಾರವನ್ನು ಸರಿಯಾಗಿ ನಿರ್ವಹಿಸದಿದ್ದರೆ… ಈಗಾಗಲೇ ನಮ್ಮ ಅನೇಕ ಗುರುತುಗಳನ್ನು ಅಳಿಸಲಾಗುತ್ತಿದೆ. ತಿರುವಳ್ಳುವರ್‌ಗೆ ಕೇಸರಿ ಹೊದಿಸುವುದಿರಲಿ, ಅಥವಾ ರಾಜರಾಜ ಚೋಳನ್‌ನನ್ನು ಹಿಂದೂ ರಾಜನೆಂದು ಬಿಂಬಿಸುವುದಿರಲಿ, ಇಂತಹ ಸಂಗತಿಗಳು (ನಮ್ಮ ಸಮಾಜದಲ್ಲಿ) ನಡೆಯುತ್ತಲೇ ಇರುತ್ತವೆ. ಇದು ಸಿನಿಮಾದಲ್ಲಿ ಘಟಿಸುತ್ತಿದೆ ಮತ್ತು ಸಿನಿಮಾದಿಂದ (ಈಗಾಗಲೇ) ಅನೇಕ ಗುರುತುಗಳನ್ನು ತೆಗೆದುಹಾಕಲಾಗಿದೆ. ನಾವು ನಮ್ಮ ಗುರುತನ್ನು ರಕ್ಷಿಸಿಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

ರಾಜರಾಜ ಚೋಳನ್‌ನಿಂದ ಸ್ಫೂರ್ತಿ ಪಡೆದ ಕಲ್ಕಿಯವರ ಕಾಲ್ಪನಿಕ ಕಾದಂಬರಿಯನ್ನು ಆಧರಿಸಿದ ಪೊನ್ನಿಯಿನ್ ಸೆಲ್ವನ್: 1 ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಈ ಸಿನಿಮಾ ಬಿಡುಗಡೆಯಾಗಿರುವ ಹೊತ್ತಿನಲ್ಲಿ ವೆಟ್ರಿಮಾರನ್‌ ಅವರ ಈ ಅಭಿಪ್ರಾಯಗಳು ಹೊರಬಿದ್ದಿರುವುದು ಕುತೂಹಲ ಹುಟ್ಟಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....