Homeಮುಖಪುಟಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

ಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

- Advertisement -
- Advertisement -

ದಕ್ಷಿಣ ಕೋಲ್ಕತ್ತಾದಲ್ಲಿ ಹಿಂದೂ ಮಹಾಸಭಾ ಆಯೋಜಿಸಿರುವ ದುರ್ಗಾ ಪೂಜೆಯಲ್ಲಿ ಮಹಿಷಾಸುರನ ಬದಲಿಗೆ ಮಹಾತ್ಮಗಾಂಧಿಯ ಮೂರ್ತಿಯನ್ನು ರಚಿಸಿ ಅವರನ್ನು ರಾಕ್ಷಸ ಎಂಬಂತೆ ಹೋಲಿಸಿರುವ ಘಟನೆ ನಡೆದಿದೆ. ದೇವಿಯು ಮಹಿಷಾಸುರನ ಬದಲಿಗೆ ಮಹಾತ್ಮಾಗಾಂಧಿಯನ್ನು ವಧಿಸುತ್ತಿರುವಂತೆ ಮೂರ್ತಿಯನ್ನು ರಚಿಸಲಾಗಿದೆ. ಆದರೆ ಸಂಘಟನೆಯು ಈ ಸಾಮ್ಯತೆ ಕಾಕತಾಳೀಯ ಎಂದು ಹೇಳಿಕೊಂಡಿದೆ.

ಸಾಂಪ್ರದಾಯಿಕವಾಗಿ ದುರ್ಗಾಪೂಜಾ ಪೆಂಡಾಲ್‌ಗಳಲ್ಲಿನ ವಿಗ್ರಹಗಳಲ್ಲಿ ದೇವಿಯ ಈಟಿಯು ಮಹಿಷಾಸುರನಿಗೆ ಚುಚ್ಚುತ್ತಿರುವಂತೆ ಇರುತ್ತವೆ. ಜೊತೆಗೆ ಮಹಿಷಾಸುರನನ್ನು ಸಾಮಾನ್ಯವಾಗಿ ದಪ್ಪ ಕೂದಲು, ದೊಡ್ಡ ಕಣ್ಣುಗಳು ಮತ್ತು ಸ್ನಾಯುಗಳ ರಚನೆಯೊಂದಿಗೆ ತೋರಿಸಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಮಹಾಸಭಾದ ಈ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಲಾಗಿದೆ. ಚಿತ್ರವನ್ನು ಮೊದಲಿಗೆ ಪತ್ರಕರ್ತ ಇಂದ್ರದೀಪ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದರು. ಇದರ ನಂತರ ಅವರು ಅದನ್ನು ಡಿಲೀಟ್ ಮಾಡಿದ್ದರು. ಚಿತ್ರವು ಹಬ್ಬದ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಬಹುದು ಎಂದು ಕೋಲ್ಕತ್ತಾ ಪೊಲೀಸರು ಅದನ್ನು ಡಿಲೀಟ್ ಮಾಡಲು ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದಾದ ಕೆಲವೇ ದಿನಗಳಲ್ಲಿ, ಬಂಗಾಳಿ ಸುದ್ದಿ ವಾಹಿನಿಗಳು ಪೆಂಡಾಲ್ ಮತ್ತು ವಿಗ್ರಹವನ್ನು ತೋರಿಸಲಾರಂಭಿಸಿವೆ. ಕೊನೆಗೆ ಹಿಂದೂ ಮಹಾಸಭಾ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ಶ್ರದ್ಧಾಂಜಲಿ; ಗಾಂಧಿವಾದಿಗಳ ಬಗ್ಗೆ ಇದ್ದ ತಕರಾರುಗಳಿಗೆ ಉತ್ತರ ನೀಡುತ್ತಿದ್ದ ದೊರೆಸ್ವಾಮಿಯವರು..

“ಇಲ್ಲಿ ಪೂಜಿಸಲ್ಪಟ್ಟ ದುರ್ಗಾ ವಿಗ್ರಹದ ಪಕ್ಕದಲ್ಲಿ ಇರುವ ಮುಖವು ಮಹಾತ್ಮ ಗಾಂಧಿಯವರಂತೆಯೇ ಕಾಣುತ್ತದೆ. ಆದರೆ ಸಾಮ್ಯತೆಗಳು ಕೇವಲ ಕಾಕತಾಳೀಯ. ಅದರ ಫೋಟೋಗಳು ವೈರಲ್ ಆದ ನಂತರ, ಪೊಲೀಸ್ ತಂಡವು ಭೇಟಿ ನೀಡಿ ಮುಖವನ್ನು ಬದಲಾಯಿಸುವಂತೆ ನಮ್ಮನ್ನು ಕೇಳಿದೆ” ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಕಾರ್ಯಾಧ್ಯಕ್ಷ ಚಂದ್ರಚೂರ್ ಗೋಸ್ವಾಮಿ ಹೇಳಿದ್ದಾರೆ.

ಪೊಲೀಸರು ಅದನ್ನು ಬದಲಾಯಿಸಲು ಕೇಳಿದ ನಂತರ ಅವರು ಮಹಿಷಾಸುರನ ವಿಗ್ರಹಕ್ಕೆ ಮೀಸೆ ಮತ್ತು ಕೂದಲು ಹಾಕಿದ್ದಾಗಿ ಅವರು ಹೇಳಿದ್ದು, ಜೊತಗೆ “ಗಾಂಧಿಯನ್ನು ಟೀಕಿಸುವ ಅಗತ್ಯವಿದೆ” ಎಂದೂ ಹೇಳಿದ್ದಾರೆ.

ಬಿಜೆಪಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಮತ್ತು ಹಿಂದೂ ಮಹಾಸಭಾದ ಬಂಗಾಳ ವಿಭಾಗವು ಘಟನೆಯನ್ನು ಖಂಡಿಸಿವೆ.

“ಅಖಿಲ ಭಾರತೀಯ ಹಿಂದೂ ಮಹಾಸಭಾ ಮಾಡಿದ್ದನ್ನು ನಾವು ಬೆಂಬಲಿಸುವುದಿಲ್ಲ. ನಾವು ಅದನ್ನು ಖಂಡಿಸುತ್ತೇವೆ. ಗಾಂಧೀಜಿಯವರ ಅಭಿಪ್ರಾಯಗಳೊಂದಿಗೆ ನಮಗೂ ಭಿನ್ನಾಭಿಪ್ರಾಯಗಳಿವೆ, ಆದರೆ ಇದು ಅದರ ವಿರುದ್ಧ ಪ್ರತಿಭಟಿಸುವ ಮಾರ್ಗವಲ್ಲ” ಎಂದು ಬಂಗಾಳ ಪರಿಷತ್ ಹಿಂದೂ ಮಹಾಸಭಾದ ಅಧ್ಯಕ್ಷ ಸಂದೀಪ್ ಮುಖರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿ ಸ್ಮರಣೆಯ ಕೆಲವು ವೈರುಧ್ಯಗಳು

ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ರಾಜ್ಯ ವಕ್ತಾರ ಕುನಾಲ್ ಘೋಷ್, “ಇದನ್ನು ನಿಜವಾಗಿಯೂ ಮಾಡಿದ್ದರೆ, ಅದು ಅಪರಾಧವಲ್ಲದೇ ಬೇರೇನೂ ಅಲ್ಲ. ಇದು ರಾಷ್ಟ್ರಪಿತನಿಗೆ ಮಾಡಿದ ಅವಮಾನ. ಇದು ದೇಶದ ಪ್ರತಿಯೊಬ್ಬ ಪ್ರಜೆಗೂ ಮಾಡಿದ ಅವಮಾನ. ಇಂತಹ ಅವಮಾನದ ಬಗ್ಗೆ ಬಿಜೆಪಿ ಏನು ಹೇಳುತ್ತದೆ? ಗಾಂಧೀಜಿಯ ಹಂತಕ ಯಾವ ಸೈದ್ಧಾಂತಿಕ ಸಂಘಕ್ಕೆ ಸೇರಿದವನು ಎಂದು ನಮಗೆ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

“ಇದು ದುರದೃಷ್ಟಕರ ನಡೆ. ನಾವು ಅದನ್ನು ಖಂಡಿಸುತ್ತೇವೆ. ಇದು ಕಳಪೆ ಅಭಿರುಚಿಯಲ್ಲಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಸುದ್ದಿಗಾರರಿಗೆ ತಿಳಿಸಿದರು.

“ಇದಾಗಿದೆ ಬಿಜೆಪಿ ಮತ್ತು ಸಂಘಪರಿವಾರ. ಅವರಿಗೆ ರಾಷ್ಟ್ರವನ್ನು ವಿಭಜಿಸುವುದು ಮಾತ್ರ ಗೊತ್ತು. ಅವರು ಬ್ರಿಟಿಷ್ ವಿರೋಧಿ ಶಕ್ತಿಗಳನ್ನು ‘ಅಸುರ’ ಮತ್ತು ಬ್ರಿಟಿಷರನ್ನು (ಸ್ವಾತಂತ್ರ್ಯ ಪೂರ್ವದ ಅವಧಿಯಲ್ಲಿ ವಸಾಹತುಶಾಹಿ ಬ್ರಿಟಿಷರು) ದುರ್ಗೆ ಎಂದು ಪರಿಗಣಿಸುತ್ತಾರೆ” ಎಂದು ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯ ಸಮಿಕ್ ಲಾಹಿರಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಈ ವರ್ಷ, ಜನವರಿ 31 ರಂದು, ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು, ಹಿಂದೂ ಮಹಾಸಭಾವು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅವರ ಹಂತಕ ನಾಥೂರಾಂ ಗೋಡ್ಸೆ ಮತ್ತು ಗಾಂಧಿ ಹತ್ಯೆಯ ಪ್ರಕರಣದ ಸಹ ಆರೋಪಿ ನಾರಾಯಣ ಆಪ್ಟೆಗೆ ಶ್ರದ್ಧಾಂಜಲಿ ಸಲ್ಲಿಸಿ “ಸ್ಮೃತಿ ದಿವಸ್” ಆಚರಿಸಿತ್ತು.

ಇದನ್ನೂ ಓದಿ: ಗೋಡ್ಸೆ ವಿಜೃಂಭಿಸುವ ಕಾಲದಲ್ಲಿ ಗಾಂಧಿವಾದದ ಕನವರಿಕೆ..

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿ, ಅವರ ಗೌರವವಾಗಿ ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸಲು ಎಲ್ಲರಿಗೂ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ‘‘ಗಾಂಧಿ ಅವರನ್ನು ಕೊಂದ ಸಿದ್ಧಾಂತವು ಕಳೆದ ಎಂಟು ವರ್ಷಗಳಲ್ಲಿ ಅಸಮಾನತೆ, ವಿಭಜನೆ ಮತ್ತು ಕಷ್ಟಪಟ್ಟು ಗೆದ್ದ ಸ್ವಾತಂತ್ರ್ಯವನ್ನು ಮಣ್ಣುಪಾಲು ಮಾಡಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...