Homeಮುಖಪುಟಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

ಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

- Advertisement -
- Advertisement -

ದಕ್ಷಿಣ ಕೋಲ್ಕತ್ತಾದಲ್ಲಿ ಹಿಂದೂ ಮಹಾಸಭಾ ಆಯೋಜಿಸಿರುವ ದುರ್ಗಾ ಪೂಜೆಯಲ್ಲಿ ಮಹಿಷಾಸುರನ ಬದಲಿಗೆ ಮಹಾತ್ಮಗಾಂಧಿಯ ಮೂರ್ತಿಯನ್ನು ರಚಿಸಿ ಅವರನ್ನು ರಾಕ್ಷಸ ಎಂಬಂತೆ ಹೋಲಿಸಿರುವ ಘಟನೆ ನಡೆದಿದೆ. ದೇವಿಯು ಮಹಿಷಾಸುರನ ಬದಲಿಗೆ ಮಹಾತ್ಮಾಗಾಂಧಿಯನ್ನು ವಧಿಸುತ್ತಿರುವಂತೆ ಮೂರ್ತಿಯನ್ನು ರಚಿಸಲಾಗಿದೆ. ಆದರೆ ಸಂಘಟನೆಯು ಈ ಸಾಮ್ಯತೆ ಕಾಕತಾಳೀಯ ಎಂದು ಹೇಳಿಕೊಂಡಿದೆ.

ಸಾಂಪ್ರದಾಯಿಕವಾಗಿ ದುರ್ಗಾಪೂಜಾ ಪೆಂಡಾಲ್‌ಗಳಲ್ಲಿನ ವಿಗ್ರಹಗಳಲ್ಲಿ ದೇವಿಯ ಈಟಿಯು ಮಹಿಷಾಸುರನಿಗೆ ಚುಚ್ಚುತ್ತಿರುವಂತೆ ಇರುತ್ತವೆ. ಜೊತೆಗೆ ಮಹಿಷಾಸುರನನ್ನು ಸಾಮಾನ್ಯವಾಗಿ ದಪ್ಪ ಕೂದಲು, ದೊಡ್ಡ ಕಣ್ಣುಗಳು ಮತ್ತು ಸ್ನಾಯುಗಳ ರಚನೆಯೊಂದಿಗೆ ತೋರಿಸಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಮಹಾಸಭಾದ ಈ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಲಾಗಿದೆ. ಚಿತ್ರವನ್ನು ಮೊದಲಿಗೆ ಪತ್ರಕರ್ತ ಇಂದ್ರದೀಪ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದರು. ಇದರ ನಂತರ ಅವರು ಅದನ್ನು ಡಿಲೀಟ್ ಮಾಡಿದ್ದರು. ಚಿತ್ರವು ಹಬ್ಬದ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಬಹುದು ಎಂದು ಕೋಲ್ಕತ್ತಾ ಪೊಲೀಸರು ಅದನ್ನು ಡಿಲೀಟ್ ಮಾಡಲು ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದಾದ ಕೆಲವೇ ದಿನಗಳಲ್ಲಿ, ಬಂಗಾಳಿ ಸುದ್ದಿ ವಾಹಿನಿಗಳು ಪೆಂಡಾಲ್ ಮತ್ತು ವಿಗ್ರಹವನ್ನು ತೋರಿಸಲಾರಂಭಿಸಿವೆ. ಕೊನೆಗೆ ಹಿಂದೂ ಮಹಾಸಭಾ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ಶ್ರದ್ಧಾಂಜಲಿ; ಗಾಂಧಿವಾದಿಗಳ ಬಗ್ಗೆ ಇದ್ದ ತಕರಾರುಗಳಿಗೆ ಉತ್ತರ ನೀಡುತ್ತಿದ್ದ ದೊರೆಸ್ವಾಮಿಯವರು..

“ಇಲ್ಲಿ ಪೂಜಿಸಲ್ಪಟ್ಟ ದುರ್ಗಾ ವಿಗ್ರಹದ ಪಕ್ಕದಲ್ಲಿ ಇರುವ ಮುಖವು ಮಹಾತ್ಮ ಗಾಂಧಿಯವರಂತೆಯೇ ಕಾಣುತ್ತದೆ. ಆದರೆ ಸಾಮ್ಯತೆಗಳು ಕೇವಲ ಕಾಕತಾಳೀಯ. ಅದರ ಫೋಟೋಗಳು ವೈರಲ್ ಆದ ನಂತರ, ಪೊಲೀಸ್ ತಂಡವು ಭೇಟಿ ನೀಡಿ ಮುಖವನ್ನು ಬದಲಾಯಿಸುವಂತೆ ನಮ್ಮನ್ನು ಕೇಳಿದೆ” ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಕಾರ್ಯಾಧ್ಯಕ್ಷ ಚಂದ್ರಚೂರ್ ಗೋಸ್ವಾಮಿ ಹೇಳಿದ್ದಾರೆ.

ಪೊಲೀಸರು ಅದನ್ನು ಬದಲಾಯಿಸಲು ಕೇಳಿದ ನಂತರ ಅವರು ಮಹಿಷಾಸುರನ ವಿಗ್ರಹಕ್ಕೆ ಮೀಸೆ ಮತ್ತು ಕೂದಲು ಹಾಕಿದ್ದಾಗಿ ಅವರು ಹೇಳಿದ್ದು, ಜೊತಗೆ “ಗಾಂಧಿಯನ್ನು ಟೀಕಿಸುವ ಅಗತ್ಯವಿದೆ” ಎಂದೂ ಹೇಳಿದ್ದಾರೆ.

ಬಿಜೆಪಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಮತ್ತು ಹಿಂದೂ ಮಹಾಸಭಾದ ಬಂಗಾಳ ವಿಭಾಗವು ಘಟನೆಯನ್ನು ಖಂಡಿಸಿವೆ.

“ಅಖಿಲ ಭಾರತೀಯ ಹಿಂದೂ ಮಹಾಸಭಾ ಮಾಡಿದ್ದನ್ನು ನಾವು ಬೆಂಬಲಿಸುವುದಿಲ್ಲ. ನಾವು ಅದನ್ನು ಖಂಡಿಸುತ್ತೇವೆ. ಗಾಂಧೀಜಿಯವರ ಅಭಿಪ್ರಾಯಗಳೊಂದಿಗೆ ನಮಗೂ ಭಿನ್ನಾಭಿಪ್ರಾಯಗಳಿವೆ, ಆದರೆ ಇದು ಅದರ ವಿರುದ್ಧ ಪ್ರತಿಭಟಿಸುವ ಮಾರ್ಗವಲ್ಲ” ಎಂದು ಬಂಗಾಳ ಪರಿಷತ್ ಹಿಂದೂ ಮಹಾಸಭಾದ ಅಧ್ಯಕ್ಷ ಸಂದೀಪ್ ಮುಖರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಗಾಂಧಿ ಸ್ಮರಣೆಯ ಕೆಲವು ವೈರುಧ್ಯಗಳು

ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ರಾಜ್ಯ ವಕ್ತಾರ ಕುನಾಲ್ ಘೋಷ್, “ಇದನ್ನು ನಿಜವಾಗಿಯೂ ಮಾಡಿದ್ದರೆ, ಅದು ಅಪರಾಧವಲ್ಲದೇ ಬೇರೇನೂ ಅಲ್ಲ. ಇದು ರಾಷ್ಟ್ರಪಿತನಿಗೆ ಮಾಡಿದ ಅವಮಾನ. ಇದು ದೇಶದ ಪ್ರತಿಯೊಬ್ಬ ಪ್ರಜೆಗೂ ಮಾಡಿದ ಅವಮಾನ. ಇಂತಹ ಅವಮಾನದ ಬಗ್ಗೆ ಬಿಜೆಪಿ ಏನು ಹೇಳುತ್ತದೆ? ಗಾಂಧೀಜಿಯ ಹಂತಕ ಯಾವ ಸೈದ್ಧಾಂತಿಕ ಸಂಘಕ್ಕೆ ಸೇರಿದವನು ಎಂದು ನಮಗೆ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

“ಇದು ದುರದೃಷ್ಟಕರ ನಡೆ. ನಾವು ಅದನ್ನು ಖಂಡಿಸುತ್ತೇವೆ. ಇದು ಕಳಪೆ ಅಭಿರುಚಿಯಲ್ಲಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಸುದ್ದಿಗಾರರಿಗೆ ತಿಳಿಸಿದರು.

“ಇದಾಗಿದೆ ಬಿಜೆಪಿ ಮತ್ತು ಸಂಘಪರಿವಾರ. ಅವರಿಗೆ ರಾಷ್ಟ್ರವನ್ನು ವಿಭಜಿಸುವುದು ಮಾತ್ರ ಗೊತ್ತು. ಅವರು ಬ್ರಿಟಿಷ್ ವಿರೋಧಿ ಶಕ್ತಿಗಳನ್ನು ‘ಅಸುರ’ ಮತ್ತು ಬ್ರಿಟಿಷರನ್ನು (ಸ್ವಾತಂತ್ರ್ಯ ಪೂರ್ವದ ಅವಧಿಯಲ್ಲಿ ವಸಾಹತುಶಾಹಿ ಬ್ರಿಟಿಷರು) ದುರ್ಗೆ ಎಂದು ಪರಿಗಣಿಸುತ್ತಾರೆ” ಎಂದು ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯ ಸಮಿಕ್ ಲಾಹಿರಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಈ ವರ್ಷ, ಜನವರಿ 31 ರಂದು, ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು, ಹಿಂದೂ ಮಹಾಸಭಾವು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅವರ ಹಂತಕ ನಾಥೂರಾಂ ಗೋಡ್ಸೆ ಮತ್ತು ಗಾಂಧಿ ಹತ್ಯೆಯ ಪ್ರಕರಣದ ಸಹ ಆರೋಪಿ ನಾರಾಯಣ ಆಪ್ಟೆಗೆ ಶ್ರದ್ಧಾಂಜಲಿ ಸಲ್ಲಿಸಿ “ಸ್ಮೃತಿ ದಿವಸ್” ಆಚರಿಸಿತ್ತು.

ಇದನ್ನೂ ಓದಿ: ಗೋಡ್ಸೆ ವಿಜೃಂಭಿಸುವ ಕಾಲದಲ್ಲಿ ಗಾಂಧಿವಾದದ ಕನವರಿಕೆ..

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿ, ಅವರ ಗೌರವವಾಗಿ ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸಲು ಎಲ್ಲರಿಗೂ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ‘‘ಗಾಂಧಿ ಅವರನ್ನು ಕೊಂದ ಸಿದ್ಧಾಂತವು ಕಳೆದ ಎಂಟು ವರ್ಷಗಳಲ್ಲಿ ಅಸಮಾನತೆ, ವಿಭಜನೆ ಮತ್ತು ಕಷ್ಟಪಟ್ಟು ಗೆದ್ದ ಸ್ವಾತಂತ್ರ್ಯವನ್ನು ಮಣ್ಣುಪಾಲು ಮಾಡಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...